ETV Bharat / state

ನಮ್ಮ ಮೆಟ್ರೋ ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ: ಶೀಘ್ರದಲ್ಲೇ ಸಂಚಾರ ಪ್ರಾರಂಭ - Namma Metro Green Line

ನಮ್ಮ ಮೆಟ್ರೋದ ನಾಗಸಂದ್ರದಿಂದ ಮಾದಾವರ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಹೊಸ ಮಾರ್ಗದಲ್ಲಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ (ದಕ್ಷಿಣ ವೃತ್ತ) ಮತ್ತು ತಂಡದಿಂದ ಸುರಕ್ಷತಾ ತಪಾಸಣೆ ಕಾರ್ಯ ನಡೆಯಿತು.

author img

By ETV Bharat Karnataka Team

Published : 3 hours ago

Etv Bharat
ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ (Etv Bharat)

ಬೆಂಗಳೂರು: ನಮ್ಮ ಮೆಟ್ರೋ ಗ್ರೀನ್ ಲೈನ್ ವಿಸ್ತೃತ ನಾಗಸಂದ್ರ - ಮಾದವಾರ (3.7ಕಿಮೀ) ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಪೂರ್ಣಗೊಳಿಸಿದೆ. ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದೆ. ಶೀಘ್ರದಲ್ಲಿಯೇ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ.

ಮೋಟಾರ್‌ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್‌ಎಸ್‌ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್‌ ಸಿಸ್ಟಂ ಹಾಗೂ ವಿದ್ಯುತ್‌ ಪೂರೈಕೆ ಸೇರಿ ಇತರ ಅಂಕಿ - ಅಂಶಗಳ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿದರು. ಸಿಎಂಆರ್‌ಎಸ್ ತಂಡ 15 ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು ಸೂಚಿಸುವ ಕೆಲ ಬದಲಾವಣೆಗಳ ಅನ್ವಯ ರೈಲು ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದರು.

namma metro
ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ (BMRCL)

ಇದನ್ನೂ ಓದಿ: ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

2017ರಲ್ಲಿ ಹಸಿರು ಮಾರ್ಗದ ವಿಸ್ತರಿತ ಕಾಮಗಾರಿ ಆರಂಭವಾಗಿದ್ದರೂ ಕೋವಿಡ್‌, ಭೂಸ್ವಾದೀನ ಸೇರಿ ಹಲವು ಕಾರಣದಿಂದ ಏಳು ವರ್ಷ ವಿಳಂಬವಾಗಿದೆ. ಇದೀಗ ಮಾದವಾರದವರೆಗೆ ವಾಣಿಜ್ಯ ಸೇವೆ ಲಭ್ಯವಾಗಲಿದ್ದು, ಇದರಿಂದ ನೆಲಮಂಗಲ ಸೇರಿ ಸುತ್ತಮುತ್ತಲ ಜನತೆಗೆ ಅನುಕೂಲವಾಗಲಿದೆ. ಸಿಎಂಆರ್‌ಎಸ್‌ ತಪಾಸಣೆ ಹಿನ್ನೆಲೆಯಲ್ಲಿ ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ರೈಲ್ವೆ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ, ಈ ಭಾಗದ ಪ್ರಯಾಣಿಕರು ತೊಂದರೆಗೆ ಒಳಗಾಗುವಂತಾಯಿತು.

namma metro
ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ (BMRCL)

ಇದನ್ನೂ ಓದಿ: ಚಾಮರಾಜನಗರ: 2,500 ಸಾವಿರ ವರ್ಷಗಳ ಹಿಂದಿನ ಸಮಾಧಿಗಳ ಉತ್ಖನನ ಶುರು - Excavation Of Tombs

ಬೆಂಗಳೂರು: ನಮ್ಮ ಮೆಟ್ರೋ ಗ್ರೀನ್ ಲೈನ್ ವಿಸ್ತೃತ ನಾಗಸಂದ್ರ - ಮಾದವಾರ (3.7ಕಿಮೀ) ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಪೂರ್ಣಗೊಳಿಸಿದೆ. ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದೆ. ಶೀಘ್ರದಲ್ಲಿಯೇ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ.

ಮೋಟಾರ್‌ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್‌ಎಸ್‌ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್‌ ಸಿಸ್ಟಂ ಹಾಗೂ ವಿದ್ಯುತ್‌ ಪೂರೈಕೆ ಸೇರಿ ಇತರ ಅಂಕಿ - ಅಂಶಗಳ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿದರು. ಸಿಎಂಆರ್‌ಎಸ್ ತಂಡ 15 ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು ಸೂಚಿಸುವ ಕೆಲ ಬದಲಾವಣೆಗಳ ಅನ್ವಯ ರೈಲು ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದರು.

namma metro
ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ (BMRCL)

ಇದನ್ನೂ ಓದಿ: ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

2017ರಲ್ಲಿ ಹಸಿರು ಮಾರ್ಗದ ವಿಸ್ತರಿತ ಕಾಮಗಾರಿ ಆರಂಭವಾಗಿದ್ದರೂ ಕೋವಿಡ್‌, ಭೂಸ್ವಾದೀನ ಸೇರಿ ಹಲವು ಕಾರಣದಿಂದ ಏಳು ವರ್ಷ ವಿಳಂಬವಾಗಿದೆ. ಇದೀಗ ಮಾದವಾರದವರೆಗೆ ವಾಣಿಜ್ಯ ಸೇವೆ ಲಭ್ಯವಾಗಲಿದ್ದು, ಇದರಿಂದ ನೆಲಮಂಗಲ ಸೇರಿ ಸುತ್ತಮುತ್ತಲ ಜನತೆಗೆ ಅನುಕೂಲವಾಗಲಿದೆ. ಸಿಎಂಆರ್‌ಎಸ್‌ ತಪಾಸಣೆ ಹಿನ್ನೆಲೆಯಲ್ಲಿ ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ರೈಲ್ವೆ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ, ಈ ಭಾಗದ ಪ್ರಯಾಣಿಕರು ತೊಂದರೆಗೆ ಒಳಗಾಗುವಂತಾಯಿತು.

namma metro
ಗ್ರೀನ್ ಲೈನ್ ವಿಸ್ತೃತ ಮಾರ್ಗ ತಪಾಸಣೆ (BMRCL)

ಇದನ್ನೂ ಓದಿ: ಚಾಮರಾಜನಗರ: 2,500 ಸಾವಿರ ವರ್ಷಗಳ ಹಿಂದಿನ ಸಮಾಧಿಗಳ ಉತ್ಖನನ ಶುರು - Excavation Of Tombs

ETV Bharat Logo

Copyright © 2024 Ushodaya Enterprises Pvt. Ltd., All Rights Reserved.