ETV Bharat / state

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ‌ಸೇರ್ಪಡೆ ಆಶ್ಚರ್ಯ ತಂದಿಲ್ಲ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದಷ್ಟೇ ಹೇಳಿದರು.

ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು : ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ‌ಸೇರ್ಪಡೆ ಆಶ್ಚರ್ಯವನ್ನೇನು ತಂದಿಲ್ಲ. ಅವರು ವಿಧಾನ ಪರಿಷತ್​ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ನಿರೀಕ್ಷೆ ಇತ್ತು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತಮಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭೇಟಿ ಮಾಡುವಂತೆ ತಿಳಿಸಿದ್ದಾರೆ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಸದ್ಯದ ರಾಜಕಾರಣ ಗಮನಿಸಿದರೆ ಕಾಂಗ್ರೆಸ್​ಗೆ ಕುಮಾರಸ್ವಾಮಿಯವರೇ ಟಾರ್ಗೆಟ್ ಎಂದರು.

ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಸಿ, ಯಾರು ಅಂತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಎನ್​ಡಿಎ ಕೂಟದಿಂದಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದಷ್ಟೇ ಹೇಳಿದರು.

ದೇವೇಗೌಡರ ನಿವಾಸದಲ್ಲಿ ಚರ್ಚೆ : ಪದ್ಮನಾಭನಗರ ನಿವಾಸಕ್ಕೆ ಬರುವಂತೆ ನಿಖಿಲ್​ಗೆ ದೇವೇಗೌಡರು ಸಂದೇಶ ಕೊಟ್ಟಿದ್ದು, ಹಾಗಾಗಿ, ಅವರ ನಿವಾಸಕ್ಕೆ ತೆರಳಿ ಅಲ್ಲಿ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್; ಸಿಪಿವೈ ಹೇಳಿದ್ದೇನು? ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ!

ಬೆಂಗಳೂರು : ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ‌ಸೇರ್ಪಡೆ ಆಶ್ಚರ್ಯವನ್ನೇನು ತಂದಿಲ್ಲ. ಅವರು ವಿಧಾನ ಪರಿಷತ್​ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ನಿರೀಕ್ಷೆ ಇತ್ತು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತಮಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭೇಟಿ ಮಾಡುವಂತೆ ತಿಳಿಸಿದ್ದಾರೆ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಸದ್ಯದ ರಾಜಕಾರಣ ಗಮನಿಸಿದರೆ ಕಾಂಗ್ರೆಸ್​ಗೆ ಕುಮಾರಸ್ವಾಮಿಯವರೇ ಟಾರ್ಗೆಟ್ ಎಂದರು.

ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಸಿ, ಯಾರು ಅಂತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಎನ್​ಡಿಎ ಕೂಟದಿಂದಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದಷ್ಟೇ ಹೇಳಿದರು.

ದೇವೇಗೌಡರ ನಿವಾಸದಲ್ಲಿ ಚರ್ಚೆ : ಪದ್ಮನಾಭನಗರ ನಿವಾಸಕ್ಕೆ ಬರುವಂತೆ ನಿಖಿಲ್​ಗೆ ದೇವೇಗೌಡರು ಸಂದೇಶ ಕೊಟ್ಟಿದ್ದು, ಹಾಗಾಗಿ, ಅವರ ನಿವಾಸಕ್ಕೆ ತೆರಳಿ ಅಲ್ಲಿ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್; ಸಿಪಿವೈ ಹೇಳಿದ್ದೇನು? ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.