ETV Bharat / state

ಸಿನಿಮಾ ಬಂದ್, ನಾನು ಸಂಪೂರ್ಣ ರಾಜಕಾರಣಿಯಾಗುವೆ: ನಿಖಿಲ್ ಕುಮಾರಸ್ವಾಮಿ - Nikhil Kumaraswamy

author img

By ETV Bharat Karnataka Team

Published : Jun 7, 2024, 6:16 PM IST

ಇನ್ನು ಮುಂದೆ ಸಿನಿಮಾ ಬಂದ್. ನಾನು ಸಂಪೂರ್ಣ ರಾಜಕಾರಣಿಯಾಗುವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

nikhil-kumaraswamy
ನಿಖಿಲ್ ಕುಮಾರಸ್ವಾಮಿ (ETV Bharat)

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ETV Bharat)

ಮಂಡ್ಯ: ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನೇ ನಿಲ್ಲಿಸುತ್ತಾರಾ ಅಥವಾ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುತ್ತಾರಾ ಅನ್ನೋ ಪ್ರಶ್ನೆಗಳೆದ್ದಿರುವ ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, "ನಾನು 24/7 ರಾಜಕಾರಣಿ. ಇನ್ನು ಸಿನಿಮಾ ಸಂಪೂರ್ಣ ಬಂದ್" ಎಂದಿದ್ದಾರೆ.

ಇಂದು ಮಂಡ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದರು.

"ಕುಮಾರಸ್ವಾಮಿಯವರ ಮೇಲೆ ವಿಶ್ವಾಸವಿಟ್ಟು ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ. ಕುಮಾರಸ್ವಾಮಿಯವರು ಐದು ವರ್ಷ ಉತ್ತಮವಾಗಿ ಕೆಲಸ ಮಾಡುತ್ತಾರೆ. ಕೇಂದ್ರದಲ್ಲಿ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಲ್ಲ. ಅವರ ಹಿರಿತನದ ಆಧಾರದ ಮೇಲೆ ಉತ್ತಮ ಸ್ಥಾನ ಸಿಗಲಿದೆ" ಎಂದರು. ಇದೇ ವೇಳೆ, "ಮಾಜಿ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಗೆಲುವು ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳದೇ ಇದ್ರೂ ಅವರ ಬೆಂಬಲಿಗರಿಗೆ ಹೇಳಿದ್ದರು" ಎಂದು ತಿಳಿಸಿದರು.

ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದುಕೊಂಡೇ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಿದೆ. ಈಗಾಗಲೇ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರೋದ್ರಿಂದ ಮುಂದೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಯಾರೆಂಬುದು ಸದ್ಯದ ಪ್ರಶ್ನೆ.

ಕ್ಷೇತ್ರಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಪ್ರಬಲ ಆಕಾಕ್ಷಿ. ನಿಖಿಲ್ ಕುಮಾರಸ್ವಾಮಿ ಕೂಡಾ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳಿವೆ. ಆದರೆ ಎರಡೂ ಕಡೆ ನಾಯಕರು ಹೈಕಮಾಂಡ್ ನಿರ್ಧಾರ ಅಂತಾರೆ. ಈ ಮಧ್ಯೆ ನಿಖಿಲ್ ಕುಮಾರಸ್ವಾಮಿ, ಇನ್ನು ಮುಂದೆ ಸಿನಿಮಾ ಮಾಡಲ್ಲ. ಸಂಪೂರ್ಣ ರಾಜಕಾರಣಿ ಅಂತ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿ ಕುತೂಹಲ ಮೂಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಪಕ್ಷಗಳದ್ದು ನೈತಿಕ ಮೈತ್ರಿ, ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ: ನಿಖಿಲ್ ಕುಮಾರಸ್ವಾಮಿ - Lok Sabha Election

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ETV Bharat)

ಮಂಡ್ಯ: ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನೇ ನಿಲ್ಲಿಸುತ್ತಾರಾ ಅಥವಾ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುತ್ತಾರಾ ಅನ್ನೋ ಪ್ರಶ್ನೆಗಳೆದ್ದಿರುವ ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, "ನಾನು 24/7 ರಾಜಕಾರಣಿ. ಇನ್ನು ಸಿನಿಮಾ ಸಂಪೂರ್ಣ ಬಂದ್" ಎಂದಿದ್ದಾರೆ.

ಇಂದು ಮಂಡ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದರು.

"ಕುಮಾರಸ್ವಾಮಿಯವರ ಮೇಲೆ ವಿಶ್ವಾಸವಿಟ್ಟು ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ. ಕುಮಾರಸ್ವಾಮಿಯವರು ಐದು ವರ್ಷ ಉತ್ತಮವಾಗಿ ಕೆಲಸ ಮಾಡುತ್ತಾರೆ. ಕೇಂದ್ರದಲ್ಲಿ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಲ್ಲ. ಅವರ ಹಿರಿತನದ ಆಧಾರದ ಮೇಲೆ ಉತ್ತಮ ಸ್ಥಾನ ಸಿಗಲಿದೆ" ಎಂದರು. ಇದೇ ವೇಳೆ, "ಮಾಜಿ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಗೆಲುವು ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳದೇ ಇದ್ರೂ ಅವರ ಬೆಂಬಲಿಗರಿಗೆ ಹೇಳಿದ್ದರು" ಎಂದು ತಿಳಿಸಿದರು.

ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದುಕೊಂಡೇ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಿದೆ. ಈಗಾಗಲೇ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರೋದ್ರಿಂದ ಮುಂದೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಯಾರೆಂಬುದು ಸದ್ಯದ ಪ್ರಶ್ನೆ.

ಕ್ಷೇತ್ರಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಪ್ರಬಲ ಆಕಾಕ್ಷಿ. ನಿಖಿಲ್ ಕುಮಾರಸ್ವಾಮಿ ಕೂಡಾ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳಿವೆ. ಆದರೆ ಎರಡೂ ಕಡೆ ನಾಯಕರು ಹೈಕಮಾಂಡ್ ನಿರ್ಧಾರ ಅಂತಾರೆ. ಈ ಮಧ್ಯೆ ನಿಖಿಲ್ ಕುಮಾರಸ್ವಾಮಿ, ಇನ್ನು ಮುಂದೆ ಸಿನಿಮಾ ಮಾಡಲ್ಲ. ಸಂಪೂರ್ಣ ರಾಜಕಾರಣಿ ಅಂತ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿ ಕುತೂಹಲ ಮೂಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಪಕ್ಷಗಳದ್ದು ನೈತಿಕ ಮೈತ್ರಿ, ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ: ನಿಖಿಲ್ ಕುಮಾರಸ್ವಾಮಿ - Lok Sabha Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.