ETV Bharat / state

ಏನೇ ಕುತಂತ್ರ ಮಾಡಿದರೂ ಜನರು ನಿಖಿಲ್​ನನ್ನು ಗೆಲ್ಲಿಸುತ್ತಾರೆ: ಹೆಚ್​.ಡಿ. ಕುಮಾರಸ್ವಾಮಿ

ಚನ್ನಪಟ್ಟಣ ಜನರು ನಿಖಿಲ್​ಗೆ ಅಭಿಮನ್ಯು ಅಲ್ಲ, ಅರ್ಜುನನ ಪಾತ್ರ ಕೊಡ್ತಾರೆ ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಹೇಳಿದರು.

ಹೆಚ್​.ಡಿ. ಕುಮಾರಸ್ವಾಮಿ
ಹೆಚ್​.ಡಿ. ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : 3 hours ago

ಹಾಸನ: "ಚನ್ನಪಟ್ಟಣದ ಉಪಚುನಾವಣೆ ದೇಶದ ಗಮನ ಸೆಳೆದಿದೆ. ಚುನಾವಣೆ ವಿಷಯದಲ್ಲಿ ವಿರೋಧಿಗಳು ಕೊಡ್ತಿರುವ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಜನರೇ ಉತ್ತರ ಕೊಡ್ತಾರೆ, ಜನರು ನಿಖಿಲ್​ಗೆ ಅಭಿಮನ್ಯು ಅಲ್ಲ, ಅರ್ಜುನನ ಪಾತ್ರ ಕೊಡ್ತಾರೆ. ಖಂಡಿತ ಏನೇ ಕುತಂತ್ರ ಮಾಡಿದರು ಕೂಡ ಜನರು ನಿಖಿಲ್​ನನ್ನು ಗೆಲ್ಲಿಸುತ್ತಾರೆ" ಎಂದು ಕೇಂದ್ರ ಸಚಿವ ಹೆಚ್​. ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ನಗರದ ಹಾಸನಾಂಬೆ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, "ನಾವು ಪ್ರತಿ ವರ್ಷ ಹಾಸನಾಂಬೆಯ ದರ್ಶನ ಪಡೆಯುತ್ತೇವೆ. ಈ ಬಾರಿ ಜಿಲ್ಲಾಡಳಿತ ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದೆ. ಭಕ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಚಿಕ್ಕವಯಸ್ಸಿನಿಂದಲೂ ಹಾಸನಾಂಬೆಯ ಪವಾಡ ನೋಡಿದ್ದೇನೆ. ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಈ ಬಾರಿ ಅವನಿಗೆ ಗೆಲುವಾಗಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ" ಎಂದರು.

ಹೆಚ್​.ಡಿ. ಕುಮಾರಸ್ವಾಮಿ (ETV Bharat)

"ಮಹಾ ಜನತೆ ಮತ್ತು ಕಾರ್ಯಕರ್ತರು ನಿಖಿಲ್​ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಡಿಕೆ ಸಹೋದರರು ಏನೇ ಕುತಂತ್ರ ಮಾಡಲಿ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅಭ್ಯರ್ಥಿಯನ್ನು ಅವರೇ ನಿಲ್ಲಿಸಿದ್ದಾರೆ. ಕಾಂಗ್ರೆಸ್​ನ ಈಗಿನ ಅಭ್ಯರ್ಥಿ (ಸಿ.ಪಿ.ಯೋಗೇಶ್ವರ್​) ಹಾಗೂ ಡಿಕೆ ಸಹೋದರರು ಪರಸ್ಪರ ಈ ಹಿಂದಿನ ಟೀಕೆಗಳನ್ನು ಸಿಡಿ ಮೂಲಕ ಮೊದಲು ಜನರ ಮುಂದೆ ಇಡಲಿ. ಈ ಬಗ್ಗೆ ಜನ ಮುಂದೆ ತೀರ್ಮಾನ ಮಾಡುತ್ತಾರೆ" ಎಂದು ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದರು.

"ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಯುವಕರು ಆನ್​ಲೈನ್​ ಗೇಮ್, ಲಾಟರಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಡ್ರಗ್ಸ್ ಮತ್ತು ಮಾದಕ ವಸ್ತು ದಂಧೆ ಕರ್ನಾಟಕದಲ್ಲಿ ಹೆಚ್ಚಳವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ" ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಿಖಿಲ್ ಎರಡು ಬಾರಿ ಸೋತಿದ್ರು, ಆಗ ಅಭಿಮನ್ಯು ಆಗಿರಲಿಲ್ವಾ: ಹೆಚ್​ಡಿಕೆಗೆ ಸಿಎಂ ತಿರುಗೇಟು

ಹಾಸನ: "ಚನ್ನಪಟ್ಟಣದ ಉಪಚುನಾವಣೆ ದೇಶದ ಗಮನ ಸೆಳೆದಿದೆ. ಚುನಾವಣೆ ವಿಷಯದಲ್ಲಿ ವಿರೋಧಿಗಳು ಕೊಡ್ತಿರುವ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಜನರೇ ಉತ್ತರ ಕೊಡ್ತಾರೆ, ಜನರು ನಿಖಿಲ್​ಗೆ ಅಭಿಮನ್ಯು ಅಲ್ಲ, ಅರ್ಜುನನ ಪಾತ್ರ ಕೊಡ್ತಾರೆ. ಖಂಡಿತ ಏನೇ ಕುತಂತ್ರ ಮಾಡಿದರು ಕೂಡ ಜನರು ನಿಖಿಲ್​ನನ್ನು ಗೆಲ್ಲಿಸುತ್ತಾರೆ" ಎಂದು ಕೇಂದ್ರ ಸಚಿವ ಹೆಚ್​. ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ನಗರದ ಹಾಸನಾಂಬೆ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, "ನಾವು ಪ್ರತಿ ವರ್ಷ ಹಾಸನಾಂಬೆಯ ದರ್ಶನ ಪಡೆಯುತ್ತೇವೆ. ಈ ಬಾರಿ ಜಿಲ್ಲಾಡಳಿತ ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದೆ. ಭಕ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಚಿಕ್ಕವಯಸ್ಸಿನಿಂದಲೂ ಹಾಸನಾಂಬೆಯ ಪವಾಡ ನೋಡಿದ್ದೇನೆ. ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಈ ಬಾರಿ ಅವನಿಗೆ ಗೆಲುವಾಗಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ" ಎಂದರು.

ಹೆಚ್​.ಡಿ. ಕುಮಾರಸ್ವಾಮಿ (ETV Bharat)

"ಮಹಾ ಜನತೆ ಮತ್ತು ಕಾರ್ಯಕರ್ತರು ನಿಖಿಲ್​ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಡಿಕೆ ಸಹೋದರರು ಏನೇ ಕುತಂತ್ರ ಮಾಡಲಿ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅಭ್ಯರ್ಥಿಯನ್ನು ಅವರೇ ನಿಲ್ಲಿಸಿದ್ದಾರೆ. ಕಾಂಗ್ರೆಸ್​ನ ಈಗಿನ ಅಭ್ಯರ್ಥಿ (ಸಿ.ಪಿ.ಯೋಗೇಶ್ವರ್​) ಹಾಗೂ ಡಿಕೆ ಸಹೋದರರು ಪರಸ್ಪರ ಈ ಹಿಂದಿನ ಟೀಕೆಗಳನ್ನು ಸಿಡಿ ಮೂಲಕ ಮೊದಲು ಜನರ ಮುಂದೆ ಇಡಲಿ. ಈ ಬಗ್ಗೆ ಜನ ಮುಂದೆ ತೀರ್ಮಾನ ಮಾಡುತ್ತಾರೆ" ಎಂದು ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದರು.

"ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಯುವಕರು ಆನ್​ಲೈನ್​ ಗೇಮ್, ಲಾಟರಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಡ್ರಗ್ಸ್ ಮತ್ತು ಮಾದಕ ವಸ್ತು ದಂಧೆ ಕರ್ನಾಟಕದಲ್ಲಿ ಹೆಚ್ಚಳವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ" ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಿಖಿಲ್ ಎರಡು ಬಾರಿ ಸೋತಿದ್ರು, ಆಗ ಅಭಿಮನ್ಯು ಆಗಿರಲಿಲ್ವಾ: ಹೆಚ್​ಡಿಕೆಗೆ ಸಿಎಂ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.