ETV Bharat / state

ಸಿಎಂ ವಿರುದ್ಧದ ಆರೋಪಕ್ಕೆ ಪುರಾವೆಗಳಿಲ್ಲ, ಕೋರ್ಟ್​ ಪ್ರಕರಣವನ್ನ ಪರಿಗಣಿಸುವುದಿಲ್ಲ ಎಂಬ ನಂಬಿಕೆಯಿದೆ: ಗೃಹ ಸಚಿವ ಜಿ.ಪರಮೇಶ್ವರ - Home Minister G Parameshwar

author img

By ETV Bharat Karnataka Team

Published : Aug 28, 2024, 12:39 PM IST

Updated : Aug 28, 2024, 1:17 PM IST

ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಪುರಾವೆಗಳಿಲ್ಲ, ಆದ ಕಾರಣ ನ್ಯಾಯಾಲಯ ಇದನ್ನು ಪರಿಗಣಿಸುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್​ ಸಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Home Minister Dr. G Parameshwar
ಗೃಹಸಚಿವ ಡಾ. ಜಿ.ಪರಮೇಶ್ವರ್​ (ETV Bharat)

ಬೆಂಗಳೂರು: "ಬಿಜೆಪಿಯವರು ಮುಡಾ ವಿಚಾರವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದಾದರೆ, ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾದರೆ, ನಾವೂ ಸಹ ರಾಷ್ಟ್ರಮಟ್ಟದಲ್ಲಿಯೇ ಹೋರಾಟ ಮಾಡಲಿದ್ದೇವೆ. ಸ್ವತಂತ್ರವಾಗಿ ಅಥವಾ ಇಂಡಿಯಾ ಮೈತ್ರಿಕೂಟದೊಂದಿಗೆ ಸೇರಿ ಹೋರಾಟ ಮಾಡಬೇಕಾ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಗೃಹಸಚಿವ ಡಾ. ಜಿ.ಪರಮೇಶ್ವರ್​ (ETV Bharat)

ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಪ್ರತಿಕ್ರಿಯಿಸಿದ ಅವರು, "ರಾಜ್ಯಪಾಲರ ನಡೆಯ ಕುರಿತು ನಾವು ಚರ್ಚಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಪ್ರತಿಭಟನೆಯ ನಂತರ ಅಥವಾ ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಶಾಸಕರು, ಪರಿಷತ್ತಿನ ಸದಸ್ಯರು, ಸಂಸದರು ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಪ್ರತಿಭಟನೆಗೆ ಮಣಿಯುವುದು ಬಿಡುವುದು ನಂತರದ ವಿಚಾರ. 'ಆದರೆ, ಶಾಸಕರೆಲ್ಲಾ ಬಂದು ಹೇಳಿದ್ದರೆ ನಿರ್ಧಾರ ಮಾಡುತ್ತಿದ್ದೆ' ಎಂದು ನಾಳೆಯ ದಿವಸ ಹೇಳಬಹುದು. ಆದ್ದರಿಂದ ಆ ಪ್ರಯತ್ನವನ್ನೂ ಸಹ ಮಾಡಲಿದ್ದೇವೆ" ಎಂದರು.

"ಮುಡಾ ಹಗರಣದ ಆರೋಪದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಕುರಿತು ಯಾವುದೇ ಪುರಾವೆಗಳಿಲ್ಲ, ಸಹಿಯಿಲ್ಲ, ಅವರ ಆದೇಶವಿಲ್ಲ, ನೊಂದಣಿಯಲ್ಲಿ ಸಹ ಅವರ ಹೆಸರಿಲ್ಲ. ಆದ್ದರಿಂದ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ನಾಳೆ ನ್ಯಾಯಾಲಯ ಇದನ್ನು ಪರಿಗಣಿಸುವುದಿಲ್ಲ ಎಂದು ಕೊಂಡಿದ್ದೇವೆ." ಎಂದು ಹೇಳಿದರು.

ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್​ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದುಕೊಳ್ಳುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, "ರಾಜ್ಯಪಾಲರು ಅದನ್ನು ಪರಿಶೀಲನೆ ಮಾಡಲಿ. ನಿಯಮಬಾಹಿರವಾಗಿದ್ದರೆ ಕ್ರಮ ಕೈಗೊಳ್ಳುವುದಕ್ಕೆ ಅವರು ಸ್ವತಂತ್ರರಿದ್ದಾರೆ. ಆದರೆ, ಕೆಐಡಿಬಿ ನಿಯಮಾನುಸಾರವಾಗಿ, ನಿಗದಿಯಾದ ಬೆಲೆಗೆ ಯಾರು ಬೇಕಾದರೂ ಜಾಗ ಪಡೆಯಬಹುದು" ಎಂದರು.

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕಾರಾಗೃಹ ಇಲಾಖೆ ನೋಡಿಕೊಳ್ಳಲಿದೆ: ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುತ್ತಿರುವ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಅಲ್ಲಿಯೂ ಸಹ ವಿಶೇಷ ಆತಿಥ್ಯ ಸಿಗಬಹುದಾ ಎಂಬ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವರು ನಿರಾಕರಿಸಿದರು.

ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹಾಗೂ ದರ್ಶನ್ ಮೊದಲಿನಿಂದಲೂ ಆಪ್ತರು, ಆದ್ದರಿಂದ ದರ್ಶನ್‌ಗೆ ಅಲ್ಲಿನ ಕಾರಾಗೃಹದಲ್ಲಿಯೂ ರಾಜಾತಿಥ್ಯ ಸಿಗಲಿದೆ ಎಂಬ ಚರ್ಚೆಯಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಗೃಹ ಸಚಿವರು "ದರ್ಶನ್ ವಿಚಾರವನ್ನು ಹೊರತುಪಡಿಸಿ ಬೇರೆ ಇದ್ದರೆ ಕೇಳಿ, ಸ್ಥಳಾಂತರದ ಜವಾಬ್ದಾರಿಯನ್ನು ಕಾರಾಗೃಹ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ" ಎಂದರು.

ನಿರ್ಮಾಪಕ ಇಂದ್ರಜಿತ್ ಲಂಕೇಶ್ ಭೇಟಿ ಕುರಿತು ಪ್ರತಿಕ್ರಿಯಿಸಿ, "ಇಂದ್ರಜಿತ್ ಲಂಕೇಶ್ ಮೊದಲಿನಿಂದಲೂ ಸ್ನೇಹಿತರು, ಆಗಾಗ ಭೇಟಿಯಾಗುತ್ತಿರುತ್ತಾರೆ" ಎಂದರು.

ಇದನ್ನೂ ಓದಿ: ಮುಡಾದಲ್ಲಿ ಸಿಎಂ ಸಿದ್ದರಾಮಯ್ಯರದ್ದು ಕೇವಲ 14 ಸೈಟಲ್ಲ, ನಾಲ್ಕು ಸಾವಿರ ಕೋಟಿ ರೂ. ವಂಚನೆ: ಗಾಲಿ ಜನಾರ್ದನ ರೆಡ್ಡಿ - MUDA SCAM ISSUE

ಬೆಂಗಳೂರು: "ಬಿಜೆಪಿಯವರು ಮುಡಾ ವಿಚಾರವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದಾದರೆ, ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾದರೆ, ನಾವೂ ಸಹ ರಾಷ್ಟ್ರಮಟ್ಟದಲ್ಲಿಯೇ ಹೋರಾಟ ಮಾಡಲಿದ್ದೇವೆ. ಸ್ವತಂತ್ರವಾಗಿ ಅಥವಾ ಇಂಡಿಯಾ ಮೈತ್ರಿಕೂಟದೊಂದಿಗೆ ಸೇರಿ ಹೋರಾಟ ಮಾಡಬೇಕಾ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಗೃಹಸಚಿವ ಡಾ. ಜಿ.ಪರಮೇಶ್ವರ್​ (ETV Bharat)

ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಪ್ರತಿಕ್ರಿಯಿಸಿದ ಅವರು, "ರಾಜ್ಯಪಾಲರ ನಡೆಯ ಕುರಿತು ನಾವು ಚರ್ಚಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಪ್ರತಿಭಟನೆಯ ನಂತರ ಅಥವಾ ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಶಾಸಕರು, ಪರಿಷತ್ತಿನ ಸದಸ್ಯರು, ಸಂಸದರು ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಪ್ರತಿಭಟನೆಗೆ ಮಣಿಯುವುದು ಬಿಡುವುದು ನಂತರದ ವಿಚಾರ. 'ಆದರೆ, ಶಾಸಕರೆಲ್ಲಾ ಬಂದು ಹೇಳಿದ್ದರೆ ನಿರ್ಧಾರ ಮಾಡುತ್ತಿದ್ದೆ' ಎಂದು ನಾಳೆಯ ದಿವಸ ಹೇಳಬಹುದು. ಆದ್ದರಿಂದ ಆ ಪ್ರಯತ್ನವನ್ನೂ ಸಹ ಮಾಡಲಿದ್ದೇವೆ" ಎಂದರು.

"ಮುಡಾ ಹಗರಣದ ಆರೋಪದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಕುರಿತು ಯಾವುದೇ ಪುರಾವೆಗಳಿಲ್ಲ, ಸಹಿಯಿಲ್ಲ, ಅವರ ಆದೇಶವಿಲ್ಲ, ನೊಂದಣಿಯಲ್ಲಿ ಸಹ ಅವರ ಹೆಸರಿಲ್ಲ. ಆದ್ದರಿಂದ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ನಾಳೆ ನ್ಯಾಯಾಲಯ ಇದನ್ನು ಪರಿಗಣಿಸುವುದಿಲ್ಲ ಎಂದು ಕೊಂಡಿದ್ದೇವೆ." ಎಂದು ಹೇಳಿದರು.

ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್​ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದುಕೊಳ್ಳುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, "ರಾಜ್ಯಪಾಲರು ಅದನ್ನು ಪರಿಶೀಲನೆ ಮಾಡಲಿ. ನಿಯಮಬಾಹಿರವಾಗಿದ್ದರೆ ಕ್ರಮ ಕೈಗೊಳ್ಳುವುದಕ್ಕೆ ಅವರು ಸ್ವತಂತ್ರರಿದ್ದಾರೆ. ಆದರೆ, ಕೆಐಡಿಬಿ ನಿಯಮಾನುಸಾರವಾಗಿ, ನಿಗದಿಯಾದ ಬೆಲೆಗೆ ಯಾರು ಬೇಕಾದರೂ ಜಾಗ ಪಡೆಯಬಹುದು" ಎಂದರು.

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕಾರಾಗೃಹ ಇಲಾಖೆ ನೋಡಿಕೊಳ್ಳಲಿದೆ: ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುತ್ತಿರುವ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಅಲ್ಲಿಯೂ ಸಹ ವಿಶೇಷ ಆತಿಥ್ಯ ಸಿಗಬಹುದಾ ಎಂಬ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವರು ನಿರಾಕರಿಸಿದರು.

ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹಾಗೂ ದರ್ಶನ್ ಮೊದಲಿನಿಂದಲೂ ಆಪ್ತರು, ಆದ್ದರಿಂದ ದರ್ಶನ್‌ಗೆ ಅಲ್ಲಿನ ಕಾರಾಗೃಹದಲ್ಲಿಯೂ ರಾಜಾತಿಥ್ಯ ಸಿಗಲಿದೆ ಎಂಬ ಚರ್ಚೆಯಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಗೃಹ ಸಚಿವರು "ದರ್ಶನ್ ವಿಚಾರವನ್ನು ಹೊರತುಪಡಿಸಿ ಬೇರೆ ಇದ್ದರೆ ಕೇಳಿ, ಸ್ಥಳಾಂತರದ ಜವಾಬ್ದಾರಿಯನ್ನು ಕಾರಾಗೃಹ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ" ಎಂದರು.

ನಿರ್ಮಾಪಕ ಇಂದ್ರಜಿತ್ ಲಂಕೇಶ್ ಭೇಟಿ ಕುರಿತು ಪ್ರತಿಕ್ರಿಯಿಸಿ, "ಇಂದ್ರಜಿತ್ ಲಂಕೇಶ್ ಮೊದಲಿನಿಂದಲೂ ಸ್ನೇಹಿತರು, ಆಗಾಗ ಭೇಟಿಯಾಗುತ್ತಿರುತ್ತಾರೆ" ಎಂದರು.

ಇದನ್ನೂ ಓದಿ: ಮುಡಾದಲ್ಲಿ ಸಿಎಂ ಸಿದ್ದರಾಮಯ್ಯರದ್ದು ಕೇವಲ 14 ಸೈಟಲ್ಲ, ನಾಲ್ಕು ಸಾವಿರ ಕೋಟಿ ರೂ. ವಂಚನೆ: ಗಾಲಿ ಜನಾರ್ದನ ರೆಡ್ಡಿ - MUDA SCAM ISSUE

Last Updated : Aug 28, 2024, 1:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.