ETV Bharat / state

ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಜನರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು: ಜಲಮಂಡಳಿ ಅಧ್ಯಕ್ಷ

ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಜನರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

author img

By ETV Bharat Karnataka Team

Published : Mar 9, 2024, 8:40 PM IST

Bengaluru water crisis  Cauvery water supply to Bengaluru  Bengaluru water news
ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿಕೆ
ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿಕೆ

ಬೆಂಗಳೂರು: ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್‍ಡಿ ಕಾವೇರಿ ನೀರನ್ನು ನಿತ್ಯ ಸರಬರಾಜು ಮಾಡಲಾಗುತ್ತಿದೆ. ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಿಲ್ಲ. ಬೆಂಗಳೂರು ನಗರಕ್ಕೆ ಬರುವ ನೀರು ಬರುತ್ತಿದೆ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮನವಿ ಮಾಡಿದರು.

ಕಾವೇರಿಯಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ: ಮಂಡಳಿಯ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ 1.54ಟಿಎಂಸಿ ನೀರು ತಿಂಗಳಿಗೆ ಅಗತ್ಯವಾಗಿದ್ದು, ಮಾರ್ಚ್ ತಿಂಗಳಿಂದ ಜುಲೈ ಅಂತ್ಯದವರೆಗೆ 8 ಟಿಎಂಸಿ ಅಗತ್ಯವಿದೆ. ಬೆಂಗಳೂರು ಸೇರಿದಂತೆ ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರುವ ನಗರಗಳಿಗೆ ಜುಲೈ ಅಂತ್ಯದವರೆಗೆ 17 ಟಿಎಂಸಿ ನೀರು ಬೇಕಾಗಿದ್ದು, ಕಾವೇರಿ ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಬೇಡಿಕೆಗಿಂತ ಎರಡುಪಟ್ಟು ನೀರು ಸಂಗ್ರಹವಿದ್ದು, ಯಾವುದೇ ರೀತಿಯ ಆತಂಕ ಬೇಡ. ಈ ನೀರನ್ನು ನಗರಕ್ಕೆ ಸಮರ್ಪಕವಾಗಿ ಸರಬರಾಜು ಮಾಡಲು ಬದ್ಧವಾಗಿದ್ದೇವೆ ಎಂದರು.

ಕಾವೇರಿಯಿಂದ ನಿತ್ಯ 1450 ಎಂಎಲ್​ಡಿ ನೀರು ಬರುತ್ತಿದೆ: ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, ನಿತ್ಯ 2100 ಎಂಎಲ್‍ಡಿ ನೀರು ಅಗತ್ಯವಿದೆ (ಓರ್ವ ಮನುಷ್ಯನಿಗೆ ನಿತ್ಯದ ಸರಾಸರಿ 150 ಲೀಟರ್ ನೀರು). 1450 ಎಂಎಲ್‍ಡಿ ಕಾವೇರಿ ನೀರು ನಿತ್ಯ ಬರುತ್ತಿದ್ದು, ಅದನ್ನು ಸಮರ್ಪಕವಾಗಿ ಸರಬರಾಜು ಮಾಡಲಾಗುತ್ತಿದೆ. ಬೆಂಗಳೂರು ಹೊರವಲಯದ 110 ಹಳ್ಳಿಗಳಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಉಳಿದ 650 ಎಂಎಲ್‍ಡಿ ನೀರಿನ ಸಮಸ್ಯೆ ಉಂಟಾಗಿದೆ. ಅಂತರ್ಜಲ ಮಟ್ಟ ಕುಸಿತಕ್ಕೆ ಎಲ್ಲರೂ ಕಾರಣರಾಗಿದ್ದೇವೆ. ನಗರದ ಹೊರವಲಯದ ಅಪಾರ್ಟ್‍ಮೆಂಟ್‍ಗಳು ಬೆಳೆದಿದ್ದು, ಇವರು ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರಲಿಲ್ಲ. ಬಹುತೇಕರು ಬೋರ್​ವೆಲ್​ಗಳನ್ನು ನೆಚ್ಚಿಕೊಂಡಿದ್ದಾರೆ. ಈಗ ಅಂತರ್ಜಲದ ಮಟ್ಟ ಕುಸಿತದಿಂದ ಅವರಿಗೆ ಸಮಸ್ಯೆ ಉಂಟಾಗಿದೆ. ಬೋರ್​​ವೆಲ್‍ಗಳ ಮೇಲೆ ಅವಲಂಬಿಸಿರುವವರ ಸಮಸ್ಯೆ ಬಗೆಹರಿಸಲು ಮಂಡಳಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಐಐಎಸ್‍ಸಿ ಸಹಯೋಗದಲ್ಲಿ ಅಂತರ್ಜಲಮಟ್ಟ ಹೆಚ್ಚಳಕ್ಕೆ ಮಂಡಳಿ ಒತ್ತು: ಬೆಂಗಳೂರು ನಗರದಲ್ಲಿ ಕುಸಿದಿರುವ ಅಂತರ್ಜಲಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮಂಡಳಿಯು 1300 ಎಂಎಲ್‍ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ನಗರದಲ್ಲಿ ನೀರಿಲ್ಲದೇ ಒಣಗಿರುವ ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಹಯೋಗದೊಂದಿಗೆ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ನಾಯಂಡಹಳ್ಳಿ ಕೆರೆ, ಚಿಕ್ಕಬಾಣವಾರ ಕೆರೆ, ವರ್ತೂರು ಕೆರೆ, ಆಗರ ಕೆರೆ ಸೇರಿದಂತೆ ನಗರದಲ್ಲಿ ನೀರಿಲ್ಲದೇ ಬತ್ತಿರುವ 6 ಕೆರೆಗಳನ್ನು ತುಂಬಿಸಲಾಗುವುದು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು, ಸುತ್ತಮುತ್ತಲಿನ ಬಡಾವಣೆಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಆ ಕೆರೆಗಳ ಪಕ್ಕದಲ್ಲಿಯೇ ಫಿಲ್ಟರ್ ಬೋರ್ ಗಳನ್ನು ಅಳವಡಿಸಲಾಗಲಿದೆ ಮತ್ತು ವಾಟರ್ ಪ್ಲಾಂಟ್ ಅಳವಡಿಸಿ ಪರಿಶೀಲಿಸಿ ಯೋಗ್ಯವಾದ ನೀರನ್ನು ಜನರಿಗೆ ಒದಗಿಸಲು ಕ್ರಮವಹಿಸಲಾಗಲಿದೆ. ದೇವನಹಳ್ಳಿಯ ಕೋಟೆ ಬಳಿಯ ಕೆರೆ ಬಳಿ ಇದೇ ರೀತಿ ನೀರು ಸಂಸ್ಕರಿಸಿ ಯೋಗ್ಯವಾದ ನೀರನ್ನು ದೇವನಹಳ್ಳಿ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

582 ಕಡೆ ಸಿಂಟೆಕ್ಸ್ ಟ್ಯಾಂಕ್‍ಗಳ ಅಳವಡಿಕೆ: ಬೆಂಗಳೂರು ನಗರದ ಕೊಳಗೇರಿ ಪ್ರದೇಶ, ಜನನಿಬೀಡ ಪ್ರದೇಶ, ತಗ್ಗು ಮತ್ತು ಎತ್ತರದ ಪ್ರದೇಶಗಳಲ್ಲಿ 1 ಸಾವಿರದಿಂದ 3 ಸಾವಿರ ಲೀಟರ್ ಸಾಮರ್ಥ್ಯದ 582 ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಮಂಡಳಿಯಿಂದ ಅಳವಡಿಸಲಾಗಿದ್ದು, ನಿತ್ಯ ಎರಡು ಬಾರಿ ಟ್ಯಾಂಕ್‍ಗಳನ್ನು ಭರ್ತಿ ಮಾಡಲಾಗುತ್ತಿದೆ. ಬೇಡಿಕೆ ಪರಿಶೀಲಿಸಿ ಹೆಚ್ಚು ಬಾರಿಯೂ ತುಂಬಿಸಲು ಕ್ರಮವಹಿಸಲಾಗಿದೆ. ಈ ಪ್ರದೇಶದಲ್ಲಿ ವಾಸವಾಗಿರುವ ಜನರು ಸಿಂಟೆಕ್ಸ್ ಟ್ಯಾಂಕ್‍ಗಳ ಮೂಲಕ ಕುಡಿಯುವ ನೀರನ್ನು ಉಚಿತವಾಗಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಸಂಸ್ಕರಿಸಿದ ನೀರನ್ನು ಬಳಸುವಂತೆ ಸೂಚನೆ: ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಪ್ರಮುಖ ಗ್ರಾಹಕರುಗಳೊಂದಿಗೆ ಸಭೆ ನಡೆಸಿ ಅವರುಗಳಿಗೆ ಕಾವೇರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ಹಾಗೂ ಸಂಸ್ಕರಿಸಿದ ನೀರನ್ನು ಇತರ ಉದ್ದೇಶಗಳಿಗೆ ಬಳಸುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.

ಕಾವೇರಿ 5ನೇ ಹಂತದ ಯೋಜನೆ ಮೇ 15ಕ್ಕೆ ಪೂರ್ಣ: ಕಾವೇರಿ 5ನೇ ಹಂತದ ಕಾಮಗಾರಿ ಕ್ಷೀಪ್ರಗತಿಯಲ್ಲಿ ಸಾಗುತ್ತಿದ್ದು, ಮೇ 15ರೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಯೋಜನೆಯ ಮೂಲಕ 110 ಹಳ್ಳಿಗಳ ವ್ಯಾಪ್ತಿಗೆ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.

110 ಹಳ್ಳಿಗಳಿಗೆ ಯಶಸ್ವಿ ನೀರು ಸರಬರಾಜು: ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಜಲಮಂಡಳಿ ವತಿಯಿಂದ 6 ಸಾವಿರ ಲೀಟರ್​ನ 79 ಖಾಸಗಿ ಟ್ಯಾಂಕರ್​ಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಇದಕ್ಕೆ ಬೆಂಗಳೂರು ಜಲಮಂಡಳಿಯ ಫಿಲ್ಲಿಂಗ್ ಪಾಯಿಂಟ್ ಮುಖಾಂತರ ಕುಡಿಯುವ ನೀರು ಒದಗಿಸುತ್ತಿದೆ. ಇನ್ನೂ ಅವಶ್ಯವಿದ್ದರೆ ಹೆಚ್ಚು ಟ್ಯಾಂಕರ್​ಗಳನ್ನು ಒದಗಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ತಾಂತ್ರಿಕ ಸಮಿತಿ ಸದಸ್ಯ ಹಾಗೂ ಐಐಎಸ್‍ಸಿ ತಜ್ಞ ಪ್ರೊ.ವಿಶ್ವನಾಥ, ಚೀಫ್ ಎಂಜನಿಯರ್ ಜಯಪ್ರಕಾಶ್ ಮತ್ತಿತರರು ಇದ್ದರು.

ಓದಿ: ಬೆಂಗಳೂರಿನಲ್ಲಿ ತಾರಕಕ್ಕೇರಿದ ನೀರಿನ ಅಭಾವ: ಅರ್ಧಕ್ಕೆ ಕುಸಿದ ಕಾವೇರಿ ನೀರಿನ ಪೂರೈಕೆ

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿಕೆ

ಬೆಂಗಳೂರು: ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್‍ಡಿ ಕಾವೇರಿ ನೀರನ್ನು ನಿತ್ಯ ಸರಬರಾಜು ಮಾಡಲಾಗುತ್ತಿದೆ. ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಿಲ್ಲ. ಬೆಂಗಳೂರು ನಗರಕ್ಕೆ ಬರುವ ನೀರು ಬರುತ್ತಿದೆ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮನವಿ ಮಾಡಿದರು.

ಕಾವೇರಿಯಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ: ಮಂಡಳಿಯ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ 1.54ಟಿಎಂಸಿ ನೀರು ತಿಂಗಳಿಗೆ ಅಗತ್ಯವಾಗಿದ್ದು, ಮಾರ್ಚ್ ತಿಂಗಳಿಂದ ಜುಲೈ ಅಂತ್ಯದವರೆಗೆ 8 ಟಿಎಂಸಿ ಅಗತ್ಯವಿದೆ. ಬೆಂಗಳೂರು ಸೇರಿದಂತೆ ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರುವ ನಗರಗಳಿಗೆ ಜುಲೈ ಅಂತ್ಯದವರೆಗೆ 17 ಟಿಎಂಸಿ ನೀರು ಬೇಕಾಗಿದ್ದು, ಕಾವೇರಿ ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಬೇಡಿಕೆಗಿಂತ ಎರಡುಪಟ್ಟು ನೀರು ಸಂಗ್ರಹವಿದ್ದು, ಯಾವುದೇ ರೀತಿಯ ಆತಂಕ ಬೇಡ. ಈ ನೀರನ್ನು ನಗರಕ್ಕೆ ಸಮರ್ಪಕವಾಗಿ ಸರಬರಾಜು ಮಾಡಲು ಬದ್ಧವಾಗಿದ್ದೇವೆ ಎಂದರು.

ಕಾವೇರಿಯಿಂದ ನಿತ್ಯ 1450 ಎಂಎಲ್​ಡಿ ನೀರು ಬರುತ್ತಿದೆ: ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, ನಿತ್ಯ 2100 ಎಂಎಲ್‍ಡಿ ನೀರು ಅಗತ್ಯವಿದೆ (ಓರ್ವ ಮನುಷ್ಯನಿಗೆ ನಿತ್ಯದ ಸರಾಸರಿ 150 ಲೀಟರ್ ನೀರು). 1450 ಎಂಎಲ್‍ಡಿ ಕಾವೇರಿ ನೀರು ನಿತ್ಯ ಬರುತ್ತಿದ್ದು, ಅದನ್ನು ಸಮರ್ಪಕವಾಗಿ ಸರಬರಾಜು ಮಾಡಲಾಗುತ್ತಿದೆ. ಬೆಂಗಳೂರು ಹೊರವಲಯದ 110 ಹಳ್ಳಿಗಳಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಉಳಿದ 650 ಎಂಎಲ್‍ಡಿ ನೀರಿನ ಸಮಸ್ಯೆ ಉಂಟಾಗಿದೆ. ಅಂತರ್ಜಲ ಮಟ್ಟ ಕುಸಿತಕ್ಕೆ ಎಲ್ಲರೂ ಕಾರಣರಾಗಿದ್ದೇವೆ. ನಗರದ ಹೊರವಲಯದ ಅಪಾರ್ಟ್‍ಮೆಂಟ್‍ಗಳು ಬೆಳೆದಿದ್ದು, ಇವರು ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರಲಿಲ್ಲ. ಬಹುತೇಕರು ಬೋರ್​ವೆಲ್​ಗಳನ್ನು ನೆಚ್ಚಿಕೊಂಡಿದ್ದಾರೆ. ಈಗ ಅಂತರ್ಜಲದ ಮಟ್ಟ ಕುಸಿತದಿಂದ ಅವರಿಗೆ ಸಮಸ್ಯೆ ಉಂಟಾಗಿದೆ. ಬೋರ್​​ವೆಲ್‍ಗಳ ಮೇಲೆ ಅವಲಂಬಿಸಿರುವವರ ಸಮಸ್ಯೆ ಬಗೆಹರಿಸಲು ಮಂಡಳಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಐಐಎಸ್‍ಸಿ ಸಹಯೋಗದಲ್ಲಿ ಅಂತರ್ಜಲಮಟ್ಟ ಹೆಚ್ಚಳಕ್ಕೆ ಮಂಡಳಿ ಒತ್ತು: ಬೆಂಗಳೂರು ನಗರದಲ್ಲಿ ಕುಸಿದಿರುವ ಅಂತರ್ಜಲಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮಂಡಳಿಯು 1300 ಎಂಎಲ್‍ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ನಗರದಲ್ಲಿ ನೀರಿಲ್ಲದೇ ಒಣಗಿರುವ ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಹಯೋಗದೊಂದಿಗೆ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ನಾಯಂಡಹಳ್ಳಿ ಕೆರೆ, ಚಿಕ್ಕಬಾಣವಾರ ಕೆರೆ, ವರ್ತೂರು ಕೆರೆ, ಆಗರ ಕೆರೆ ಸೇರಿದಂತೆ ನಗರದಲ್ಲಿ ನೀರಿಲ್ಲದೇ ಬತ್ತಿರುವ 6 ಕೆರೆಗಳನ್ನು ತುಂಬಿಸಲಾಗುವುದು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು, ಸುತ್ತಮುತ್ತಲಿನ ಬಡಾವಣೆಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಆ ಕೆರೆಗಳ ಪಕ್ಕದಲ್ಲಿಯೇ ಫಿಲ್ಟರ್ ಬೋರ್ ಗಳನ್ನು ಅಳವಡಿಸಲಾಗಲಿದೆ ಮತ್ತು ವಾಟರ್ ಪ್ಲಾಂಟ್ ಅಳವಡಿಸಿ ಪರಿಶೀಲಿಸಿ ಯೋಗ್ಯವಾದ ನೀರನ್ನು ಜನರಿಗೆ ಒದಗಿಸಲು ಕ್ರಮವಹಿಸಲಾಗಲಿದೆ. ದೇವನಹಳ್ಳಿಯ ಕೋಟೆ ಬಳಿಯ ಕೆರೆ ಬಳಿ ಇದೇ ರೀತಿ ನೀರು ಸಂಸ್ಕರಿಸಿ ಯೋಗ್ಯವಾದ ನೀರನ್ನು ದೇವನಹಳ್ಳಿ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

582 ಕಡೆ ಸಿಂಟೆಕ್ಸ್ ಟ್ಯಾಂಕ್‍ಗಳ ಅಳವಡಿಕೆ: ಬೆಂಗಳೂರು ನಗರದ ಕೊಳಗೇರಿ ಪ್ರದೇಶ, ಜನನಿಬೀಡ ಪ್ರದೇಶ, ತಗ್ಗು ಮತ್ತು ಎತ್ತರದ ಪ್ರದೇಶಗಳಲ್ಲಿ 1 ಸಾವಿರದಿಂದ 3 ಸಾವಿರ ಲೀಟರ್ ಸಾಮರ್ಥ್ಯದ 582 ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಮಂಡಳಿಯಿಂದ ಅಳವಡಿಸಲಾಗಿದ್ದು, ನಿತ್ಯ ಎರಡು ಬಾರಿ ಟ್ಯಾಂಕ್‍ಗಳನ್ನು ಭರ್ತಿ ಮಾಡಲಾಗುತ್ತಿದೆ. ಬೇಡಿಕೆ ಪರಿಶೀಲಿಸಿ ಹೆಚ್ಚು ಬಾರಿಯೂ ತುಂಬಿಸಲು ಕ್ರಮವಹಿಸಲಾಗಿದೆ. ಈ ಪ್ರದೇಶದಲ್ಲಿ ವಾಸವಾಗಿರುವ ಜನರು ಸಿಂಟೆಕ್ಸ್ ಟ್ಯಾಂಕ್‍ಗಳ ಮೂಲಕ ಕುಡಿಯುವ ನೀರನ್ನು ಉಚಿತವಾಗಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಸಂಸ್ಕರಿಸಿದ ನೀರನ್ನು ಬಳಸುವಂತೆ ಸೂಚನೆ: ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಪ್ರಮುಖ ಗ್ರಾಹಕರುಗಳೊಂದಿಗೆ ಸಭೆ ನಡೆಸಿ ಅವರುಗಳಿಗೆ ಕಾವೇರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ಹಾಗೂ ಸಂಸ್ಕರಿಸಿದ ನೀರನ್ನು ಇತರ ಉದ್ದೇಶಗಳಿಗೆ ಬಳಸುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.

ಕಾವೇರಿ 5ನೇ ಹಂತದ ಯೋಜನೆ ಮೇ 15ಕ್ಕೆ ಪೂರ್ಣ: ಕಾವೇರಿ 5ನೇ ಹಂತದ ಕಾಮಗಾರಿ ಕ್ಷೀಪ್ರಗತಿಯಲ್ಲಿ ಸಾಗುತ್ತಿದ್ದು, ಮೇ 15ರೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಯೋಜನೆಯ ಮೂಲಕ 110 ಹಳ್ಳಿಗಳ ವ್ಯಾಪ್ತಿಗೆ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.

110 ಹಳ್ಳಿಗಳಿಗೆ ಯಶಸ್ವಿ ನೀರು ಸರಬರಾಜು: ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಜಲಮಂಡಳಿ ವತಿಯಿಂದ 6 ಸಾವಿರ ಲೀಟರ್​ನ 79 ಖಾಸಗಿ ಟ್ಯಾಂಕರ್​ಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಇದಕ್ಕೆ ಬೆಂಗಳೂರು ಜಲಮಂಡಳಿಯ ಫಿಲ್ಲಿಂಗ್ ಪಾಯಿಂಟ್ ಮುಖಾಂತರ ಕುಡಿಯುವ ನೀರು ಒದಗಿಸುತ್ತಿದೆ. ಇನ್ನೂ ಅವಶ್ಯವಿದ್ದರೆ ಹೆಚ್ಚು ಟ್ಯಾಂಕರ್​ಗಳನ್ನು ಒದಗಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ತಾಂತ್ರಿಕ ಸಮಿತಿ ಸದಸ್ಯ ಹಾಗೂ ಐಐಎಸ್‍ಸಿ ತಜ್ಞ ಪ್ರೊ.ವಿಶ್ವನಾಥ, ಚೀಫ್ ಎಂಜನಿಯರ್ ಜಯಪ್ರಕಾಶ್ ಮತ್ತಿತರರು ಇದ್ದರು.

ಓದಿ: ಬೆಂಗಳೂರಿನಲ್ಲಿ ತಾರಕಕ್ಕೇರಿದ ನೀರಿನ ಅಭಾವ: ಅರ್ಧಕ್ಕೆ ಕುಸಿದ ಕಾವೇರಿ ನೀರಿನ ಪೂರೈಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.