ಶಿವಮೊಗ್ಗ: ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ, ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದೆ.
ದಾಳಿ ವೇಳೆ ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿದ್ದಲ್ಲದೇ ದಂಡ ಸಹ ವಿಧಿಸಿರುತ್ತಾರೆ. ಈ ವಿಶೇಷ ಕಾರ್ಯಾಚರಣೆಯ ನೇತೃತ್ವವನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದಾರೆ. ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿಎಸ್ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ದಾಳಿ: ಬೆಳಗಾವಿ ಪಾಲಿಕೆ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು - Lokayukta Officials Raid