ETV Bharat / state

ಬಸ್ಸಿನಲ್ಲಿ ಹಣ, ಒಡವೆ ಬ್ಯಾಗ್ ಬಿಟ್ಟಿದ್ದ ಪ್ರಯಾಣಿಕರು: ಮರಳಿಸಿ ಪ್ರಾಮಾಣಿಕತೆ ಮೆರೆದ NWKRTC ಸಿಬ್ಬಂದಿ - NWKRTC Honesty

author img

By ETV Bharat Karnataka Team

Published : 1 hours ago

ಬಸ್ಸಿನಲ್ಲಿ ಬಿಟ್ಟು ಹೋದ ಹಣ, ಒಡವೆ ಇದ್ದ ಬ್ಯಾಗ್​ಅನ್ನು ಪ್ರಯಾಣಿಕರಿಗೆ ಮರಳಿಸಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪ್ರಯಾಣಿಕರಿಗೆ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ NWKRTC ಸಿಬ್ಬಂದಿ
ಪ್ರಯಾಣಿಕರಿಗೆ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ NWKRTC ಸಿಬ್ಬಂದಿ (ETV Bharat)

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಕಮ್ ನಿರ್ವಾಹಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋದ ಒಡವೆ, ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಗೋಂದಿ ಚಟ್ನಹಳ್ಳಿ ನಿವಾಸಿ ಸಾವಿತ್ರಮ್ಮ ಎಂಬುವರು ಶುಕ್ರವಾರ ಮಧ್ಯಾಹ್ನ ತಮ್ಮ ಮಗಳು ಹಾಗೂ ಮೊಮ್ಮಗಳೊಂದಿಗೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಗ್ರಾಮಾಂತರ 3ನೇ ಘಟಕದ ಕೆ ಎ 25 ಎಫ್ 3127 ಬಸ್ಸಿನಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿದ್ದರು. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಕೈಯಲ್ಲಿದ್ದ ಬ್ಯಾಗನ್ನು ಬಸ್ಸಿನಲ್ಲಿ ಮರೆತು, ನಂತರ ಮತ್ತೊಂದು ಬಸ್ಸಿನಲ್ಲಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದರು.

ಈ ಬಸ್ಸಿನಲ್ಲಿ ಬಿಟ್ಟಿದ್ದ ಬ್ಯಾಕ್​ಅನ್ನು ಪ್ರಯಾಣಿಕರೊಬ್ಬರು ತೆಗೆದುಕೊಂಡು ಹೋಗುತ್ತಿರುವುದನ್ನು ಚಾಲಕ ಕಂ ನಿರ್ವಾಹಕ ಸಿರಿಯಮ್ಮನವರ ಗಮನಿಸಿ, ಬಳಿಕ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ನಂತರ ಬಸ್ ಘಟಕಕ್ಕೆ ತೆರಳಿ ಮೇಲಾಧಿಕಾರಿಗಳ ಸಮಕ್ಷಮದಲ್ಲಿ ಬ್ಯಾಗು ತೆಗೆದು ನೋಡಿದಾಗ ಅದರಲ್ಲಿ 25,000 ನಗದು ಹಣ, ಎರಡು ಜೊತೆ ಬೆಳ್ಳಿಯ ಕಾಲು ಚೈನು, ಎಟಿಎಂ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇರುವುದು ಕಂಡುಬಂದಿದೆ. ಆಧಾರ್ ಕಾರ್ಡ್​ನಲ್ಲಿರುವ ದೂರವಾಣಿ ಸಂಖ್ಯೆಯ ಮೂಲಕ ವಾರಸುದಾರರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ನಂತರ ವಿಭಾಗಿಯ ನಿಯಂತ್ರಣಾಧಿಕಾರಿ, ವಿಭಾಗಿಯ ಸಂಚಾರ ಅಧಿಕಾರಿ ಹಾಗೂ ಘಟಕ ವ್ಯವಸ್ಥಾಪಕರ ಸಮಕ್ಷಮದಲ್ಲಿ ನಿರ್ವಾಹಕರ ಮೂಲಕ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಬ್ಯಾಗ್​ ಮರಳಿ ಪಡೆದ ಪ್ರಯಾಣಿಕರಾದ ಸಾವಿತ್ರಮ್ಮ ಮಾತನಾಡಿ, ನಾವು ಮೂರು ಜನರಲ್ಲಿ ಯಾರಾದರೂ ಒಬ್ಬರು ಬ್ಯಾಗು ತೆಗೆದುಕೊಂಡು ಇಳಿದಿರಬಹುದು ಎಂದು ತಿಳಿದುಕೊಂಡು ಸುಮ್ಮನಾಗಿದ್ದೆವು. ಸಾರಿಗೆ ಸಿಬ್ಬಂದಿಯಿಂದ ದೂರವಾಣಿ ಕರೆ ಬಂದಾಗ ಬ್ಯಾಗ್ ಬಿಟ್ಟು ಬಂದ ವಿಷಯ ಗೊತ್ತಾಗಿ ಗಾಬರಿಯಾಗಿತ್ತು. ಹಣ ಹಾಗೂ ಒಡವೆ ಸಹಿತ ಸುರಕ್ಷಿತವಾಗಿ ಬ್ಯಾಗನ್ನು ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿಗೆ ಎಷ್ಟು ಕೃತಜ್ಞತೆ ಹೇಳಿದರು ಸಾಲದು ಎಂದಿದ್ದಾರೆ.

ಪ್ರಾಮಾಣಿಕತೆ ಮೆರೆದ ಸಿಬ್ಬಂದಿಯನ್ನು ಅಭಿನಂದಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ಮಾತನಾಡಿ, ಚಾಲಕ ಕಮ್ ನಿರ್ವಾಹಕ ಸಿ.ಎಸ್. ಸಿರಿಯಮ್ಮನವರ ಅವರ ಕರ್ತವ್ಯಪರತೆ ಸಾರ್ವಜನಿಕ ವಲಯದಲ್ಲಿ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗೂ ಇತರೆ ನೌಕರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಗುಡೆಣ್ಣವರ, ಡಿಪೋ ಮ್ಯಾನೇಜರ ಟಿ.ಹೆಚ್. ಮುನ್ನಾಸಾಬ್, ಸಾರಿಗೆ ಸಿಬ್ಬಂದಿ ಮತ್ತಿತರರು ಇದ್ದರು.

ಇದನ್ನೂ ಓದಿ: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಸೀತಾರಾಮನ್ ವಿರುದ್ಧ FIR​ ದಾಖಲಿಸುವಂತೆ ಕೋರ್ಟ್​ ಆದೇಶ - case against Nirmala Sitharaman

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಕಮ್ ನಿರ್ವಾಹಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋದ ಒಡವೆ, ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಗೋಂದಿ ಚಟ್ನಹಳ್ಳಿ ನಿವಾಸಿ ಸಾವಿತ್ರಮ್ಮ ಎಂಬುವರು ಶುಕ್ರವಾರ ಮಧ್ಯಾಹ್ನ ತಮ್ಮ ಮಗಳು ಹಾಗೂ ಮೊಮ್ಮಗಳೊಂದಿಗೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಗ್ರಾಮಾಂತರ 3ನೇ ಘಟಕದ ಕೆ ಎ 25 ಎಫ್ 3127 ಬಸ್ಸಿನಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿದ್ದರು. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಕೈಯಲ್ಲಿದ್ದ ಬ್ಯಾಗನ್ನು ಬಸ್ಸಿನಲ್ಲಿ ಮರೆತು, ನಂತರ ಮತ್ತೊಂದು ಬಸ್ಸಿನಲ್ಲಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದರು.

ಈ ಬಸ್ಸಿನಲ್ಲಿ ಬಿಟ್ಟಿದ್ದ ಬ್ಯಾಕ್​ಅನ್ನು ಪ್ರಯಾಣಿಕರೊಬ್ಬರು ತೆಗೆದುಕೊಂಡು ಹೋಗುತ್ತಿರುವುದನ್ನು ಚಾಲಕ ಕಂ ನಿರ್ವಾಹಕ ಸಿರಿಯಮ್ಮನವರ ಗಮನಿಸಿ, ಬಳಿಕ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ನಂತರ ಬಸ್ ಘಟಕಕ್ಕೆ ತೆರಳಿ ಮೇಲಾಧಿಕಾರಿಗಳ ಸಮಕ್ಷಮದಲ್ಲಿ ಬ್ಯಾಗು ತೆಗೆದು ನೋಡಿದಾಗ ಅದರಲ್ಲಿ 25,000 ನಗದು ಹಣ, ಎರಡು ಜೊತೆ ಬೆಳ್ಳಿಯ ಕಾಲು ಚೈನು, ಎಟಿಎಂ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇರುವುದು ಕಂಡುಬಂದಿದೆ. ಆಧಾರ್ ಕಾರ್ಡ್​ನಲ್ಲಿರುವ ದೂರವಾಣಿ ಸಂಖ್ಯೆಯ ಮೂಲಕ ವಾರಸುದಾರರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ನಂತರ ವಿಭಾಗಿಯ ನಿಯಂತ್ರಣಾಧಿಕಾರಿ, ವಿಭಾಗಿಯ ಸಂಚಾರ ಅಧಿಕಾರಿ ಹಾಗೂ ಘಟಕ ವ್ಯವಸ್ಥಾಪಕರ ಸಮಕ್ಷಮದಲ್ಲಿ ನಿರ್ವಾಹಕರ ಮೂಲಕ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಬ್ಯಾಗ್​ ಮರಳಿ ಪಡೆದ ಪ್ರಯಾಣಿಕರಾದ ಸಾವಿತ್ರಮ್ಮ ಮಾತನಾಡಿ, ನಾವು ಮೂರು ಜನರಲ್ಲಿ ಯಾರಾದರೂ ಒಬ್ಬರು ಬ್ಯಾಗು ತೆಗೆದುಕೊಂಡು ಇಳಿದಿರಬಹುದು ಎಂದು ತಿಳಿದುಕೊಂಡು ಸುಮ್ಮನಾಗಿದ್ದೆವು. ಸಾರಿಗೆ ಸಿಬ್ಬಂದಿಯಿಂದ ದೂರವಾಣಿ ಕರೆ ಬಂದಾಗ ಬ್ಯಾಗ್ ಬಿಟ್ಟು ಬಂದ ವಿಷಯ ಗೊತ್ತಾಗಿ ಗಾಬರಿಯಾಗಿತ್ತು. ಹಣ ಹಾಗೂ ಒಡವೆ ಸಹಿತ ಸುರಕ್ಷಿತವಾಗಿ ಬ್ಯಾಗನ್ನು ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿಗೆ ಎಷ್ಟು ಕೃತಜ್ಞತೆ ಹೇಳಿದರು ಸಾಲದು ಎಂದಿದ್ದಾರೆ.

ಪ್ರಾಮಾಣಿಕತೆ ಮೆರೆದ ಸಿಬ್ಬಂದಿಯನ್ನು ಅಭಿನಂದಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ಮಾತನಾಡಿ, ಚಾಲಕ ಕಮ್ ನಿರ್ವಾಹಕ ಸಿ.ಎಸ್. ಸಿರಿಯಮ್ಮನವರ ಅವರ ಕರ್ತವ್ಯಪರತೆ ಸಾರ್ವಜನಿಕ ವಲಯದಲ್ಲಿ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗೂ ಇತರೆ ನೌಕರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಗುಡೆಣ್ಣವರ, ಡಿಪೋ ಮ್ಯಾನೇಜರ ಟಿ.ಹೆಚ್. ಮುನ್ನಾಸಾಬ್, ಸಾರಿಗೆ ಸಿಬ್ಬಂದಿ ಮತ್ತಿತರರು ಇದ್ದರು.

ಇದನ್ನೂ ಓದಿ: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಸೀತಾರಾಮನ್ ವಿರುದ್ಧ FIR​ ದಾಖಲಿಸುವಂತೆ ಕೋರ್ಟ್​ ಆದೇಶ - case against Nirmala Sitharaman

ETV Bharat Logo

Copyright © 2024 Ushodaya Enterprises Pvt. Ltd., All Rights Reserved.