ETV Bharat / state

ಬಳ್ಳಾರಿ: ದರ್ಶನ್ ಮನವಿ ಮೇರೆಗೆ ಜೈಲಿಗೆ ಬಂದ ಸರ್ಜಿಕಲ್​ ಚೇರ್!​ - SURGICAL CHAIR TO DARSHAN

author img

By ETV Bharat Karnataka Team

Published : Sep 2, 2024, 6:03 PM IST

ಅನಾರೋಗ್ಯದ ಕಾರಣದಿಂದಾಗಿ ತಮಗೆ ಜೈಲಿನಲ್ಲಿ ಸರ್ಜಿಕಲ್ ಚೇರ್ ಬೇಕೆಂದು ವಿಚಾರಣಾದೀನ ಕೈದಿ ದರ್ಶನ್ ಮನವಿ ಮಾಡಿದ್ದರು.

SURGICAL CHAIR
ಜೈಲಿಗೆ ಬಂದ ಸರ್ಜಿಕಲ್​ ಚೇರ್ (ETV Bharat)
ದರ್ಶನ್ ಮನವಿ ಮೇರೆಗೆ ಜೈಲಿಗೆ ಬಂದ ಸರ್ಜಿಕಲ್​ ಚೇರ್ (ETV Bharat)

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಮನವಿ ಮೇರೆಗೆ ಜಿಲ್ಲಾಸ್ಪತ್ರೆಯಿಂದ ಇಂದು ಬಳ್ಳಾರಿ ಸೆಂಟ್ರಲ್​ ಜೈಲಿಗೆ ಸರ್ಜಿಕಲ್ ಚೇರ್ ಬಂದಿತು. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಸರ್ಜಿಕಲ್ ಚೇರ್ ಅನ್ನು ತೆಗೆದುಕೊಂಡು ಬಂದರು.

ದರ್ಶನ್​ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ, ಕಾರಾಗೃಹಕ್ಕೆ ಶನಿವಾರ ಉತ್ತರವಲಯದ ಡಿಐಜಿ ಟಿಪಿ‌ ಶೇಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಭೇಟಿ ವೇಳೆ ದರ್ಶನ್​, ತಮಗೆ ಬೆನ್ನೆಲುಬು ಸಮಸ್ಯೆ ಇದೆ. ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಇರುವುದರಿಂದ ಶೌಚಕ್ಕೆ ಕಷ್ಟವಾಗುತ್ತದೆ. ಹಾಗಾಗಿ ಸರ್ಜಿಕಲ್ ಚೇರ್ ನೀಡುವಂತೆ​ ಡಿಐಜಿ ಬಳಿಕ ಮನವಿ ಮಾಡಿಕೊಂಡಿದ್ದರು.

ಈ ಬಗ್ಗೆ ಮೆಡಿಕಲ್​ ರೆಕಾರ್ಡ್​ ನೋಡಿ ವೆಸ್ಟ್ರನ್ ಕಮೋಡ್ ಒದಗಿಸಿಕೊಡುವ ಬಗ್ಗೆ ಪರಿಶೀಲಿಸಲಾಗುತ್ತದೆ. ಜೈಲಿನ ವೈದ್ಯರು ಪರಿಶೀಲಿಸುತ್ತಾರೆ. ಆ ನಂತರ ಅಗತ್ಯ ಸೌಲಭ್ಯ ಕೊಡಲಾಗುತ್ತದೆ. ಅವಶ್ಯಕತೆ ಇದ್ದರೆ ದರ್ಶನ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೇವೆ. ಸಾಮಾನ್ಯ ಕೈದಿಗೆ ಹೇಗೆ ಚಿಕಿತ್ಸೆ ಕೊಡಿಸುತ್ತೇವೆಯೋ ಅದರಂತೆ ದರ್ಶನ್​ಗೂ ಕೊಡಿಸುತ್ತೇವೆ ಎಂದು ಡಿಐಜಿ ಹೇಳಿದ್ದರು.

ಅದರಂತೆ ಸೆಂಟ್ರಲ್​ ಜೈಲಿಗೆ ಎಂಟ್ರಿ ಕೊಟ್ಟ ತಜ್ಞ ವೈದ್ಯರು, ದರ್ಶನ್ ಬೆನ್ನು ಹಾಗೂ ಕೈ ನೋವು ಬಗ್ಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ, ಬಳ್ಳಾರಿ ಜೈಲಿನಲ್ಲಿರುವ ಮೆಡಿಕಲ್ ವರದಿ ಮತ್ತು ಪರಪ್ಪನ ಅಗ್ರಹಾರ ಜೈಲಿನ ಮೆಡಿಕಲ್ ರಿಪೋರ್ಟ್ ತಾಳೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸರ್ಜಿಕಲ್ ಚೇರ್ ಒದಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬಳ್ಳಾರಿ ಜೈಲಿನ ಹೈಸೆಕ್ಯೂರಿಟಿ ಸೆಲ್‌ನಲ್ಲಿ ದರ್ಶನ್‌​: ಕಾರಾಗೃಹ ಪರಿಶೀಲನೆ ಬಳಿಕ ಮಾಹಿತಿ ನೀಡಿದ ಡಿಐಜಿ - DIG visited Bellary Jail

ದರ್ಶನ್ ಮನವಿ ಮೇರೆಗೆ ಜೈಲಿಗೆ ಬಂದ ಸರ್ಜಿಕಲ್​ ಚೇರ್ (ETV Bharat)

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಮನವಿ ಮೇರೆಗೆ ಜಿಲ್ಲಾಸ್ಪತ್ರೆಯಿಂದ ಇಂದು ಬಳ್ಳಾರಿ ಸೆಂಟ್ರಲ್​ ಜೈಲಿಗೆ ಸರ್ಜಿಕಲ್ ಚೇರ್ ಬಂದಿತು. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಸರ್ಜಿಕಲ್ ಚೇರ್ ಅನ್ನು ತೆಗೆದುಕೊಂಡು ಬಂದರು.

ದರ್ಶನ್​ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ, ಕಾರಾಗೃಹಕ್ಕೆ ಶನಿವಾರ ಉತ್ತರವಲಯದ ಡಿಐಜಿ ಟಿಪಿ‌ ಶೇಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಭೇಟಿ ವೇಳೆ ದರ್ಶನ್​, ತಮಗೆ ಬೆನ್ನೆಲುಬು ಸಮಸ್ಯೆ ಇದೆ. ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಇರುವುದರಿಂದ ಶೌಚಕ್ಕೆ ಕಷ್ಟವಾಗುತ್ತದೆ. ಹಾಗಾಗಿ ಸರ್ಜಿಕಲ್ ಚೇರ್ ನೀಡುವಂತೆ​ ಡಿಐಜಿ ಬಳಿಕ ಮನವಿ ಮಾಡಿಕೊಂಡಿದ್ದರು.

ಈ ಬಗ್ಗೆ ಮೆಡಿಕಲ್​ ರೆಕಾರ್ಡ್​ ನೋಡಿ ವೆಸ್ಟ್ರನ್ ಕಮೋಡ್ ಒದಗಿಸಿಕೊಡುವ ಬಗ್ಗೆ ಪರಿಶೀಲಿಸಲಾಗುತ್ತದೆ. ಜೈಲಿನ ವೈದ್ಯರು ಪರಿಶೀಲಿಸುತ್ತಾರೆ. ಆ ನಂತರ ಅಗತ್ಯ ಸೌಲಭ್ಯ ಕೊಡಲಾಗುತ್ತದೆ. ಅವಶ್ಯಕತೆ ಇದ್ದರೆ ದರ್ಶನ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೇವೆ. ಸಾಮಾನ್ಯ ಕೈದಿಗೆ ಹೇಗೆ ಚಿಕಿತ್ಸೆ ಕೊಡಿಸುತ್ತೇವೆಯೋ ಅದರಂತೆ ದರ್ಶನ್​ಗೂ ಕೊಡಿಸುತ್ತೇವೆ ಎಂದು ಡಿಐಜಿ ಹೇಳಿದ್ದರು.

ಅದರಂತೆ ಸೆಂಟ್ರಲ್​ ಜೈಲಿಗೆ ಎಂಟ್ರಿ ಕೊಟ್ಟ ತಜ್ಞ ವೈದ್ಯರು, ದರ್ಶನ್ ಬೆನ್ನು ಹಾಗೂ ಕೈ ನೋವು ಬಗ್ಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ, ಬಳ್ಳಾರಿ ಜೈಲಿನಲ್ಲಿರುವ ಮೆಡಿಕಲ್ ವರದಿ ಮತ್ತು ಪರಪ್ಪನ ಅಗ್ರಹಾರ ಜೈಲಿನ ಮೆಡಿಕಲ್ ರಿಪೋರ್ಟ್ ತಾಳೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸರ್ಜಿಕಲ್ ಚೇರ್ ಒದಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬಳ್ಳಾರಿ ಜೈಲಿನ ಹೈಸೆಕ್ಯೂರಿಟಿ ಸೆಲ್‌ನಲ್ಲಿ ದರ್ಶನ್‌​: ಕಾರಾಗೃಹ ಪರಿಶೀಲನೆ ಬಳಿಕ ಮಾಹಿತಿ ನೀಡಿದ ಡಿಐಜಿ - DIG visited Bellary Jail

ETV Bharat Logo

Copyright © 2024 Ushodaya Enterprises Pvt. Ltd., All Rights Reserved.