ETV Bharat / state

ಕಾರವಾರದ ಸುರಂಗ ಮಾರ್ಗದಲ್ಲಿ‌ ಮತ್ತೆ ಗುಡ್ಡ ಕುಸಿತ: ಒಂದು ಬದಿ ಮಾರ್ಗದ ಸಂಚಾರ ಬಂದ್ - Hill Collapsed

author img

By ETV Bharat Karnataka Team

Published : Aug 3, 2024, 1:50 PM IST

ಕಾರವಾರದ ಸುರಂಗ ಮಾರ್ಗದಲ್ಲಿ‌ ಮತ್ತೆ ಗುಡ್ಡ ಕುಸಿತವಾಗಿದ್ದರಿಂದ ಒಂದು ಬದಿ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ.

One side traffic is blocked due to hill collapse again in Karwar tunnel
ಕಾರವಾರದ ಸುರಂಗ ಮಾರ್ಗ (ETV Bharat)
ಸುರಂಗ ಮಾರ್ಗದಲ್ಲಿ‌ ಮತ್ತೆ ಗುಡ್ಡ ಕುಸಿತ (ETV Bharat)

ಕಾರವಾರ: ನಗರದ ಲಂಡನ್ ಬ್ರೀಡ್ಜ್​​ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಸುರಂಗ ಮಾರ್ಗದ ಬಳಿ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ಮುಂಜಾಗೃತಾ ಕ್ರಮವಾಗಿ ಒಂದು ಸುರಂಗ ಮಾರ್ಗದಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಗುಡ್ಡ ಕುಸಿತದಿಂದ ಈ ಹಿಂದೆ ಕೆಲ‌ವು ದಿನ ಬಂದ್ ಆಗಿದ್ದ ಸುರಂಗ‌ ಮಾರ್ಗದ ಇನ್ನೊಂದು ಬದಿಯಲ್ಲಿ ಶನಿವಾರ ಬೆಳಗ್ಗೆ ಮತ್ತೆ ಬಂಡೆ‌ಕಲ್ಲು ಹಾಗೂ‌ ಮಣ್ಣು ಕುಸಿದಿದೆ. ಇದರಿಂದ ಅಂಕೋಲಾದಿಂದ‌ ಕಾರವಾರ ನಗರಕ್ಕೆ ಸಂಪರ್ಕ‌ ಕಲ್ಪಿಸುವ ಸುರಂಗದ ಒಂದು ಬದಿಯ ಸಂಚಾರ ಬಂದ್ ಮಾಡಲಾಗಿದೆ.

ಸದ್ಯ ಐಆರ್​ಬಿ ಕಂಪನಿಯಿಂದ ಮಣ್ಣು, ಕಲ್ಲುಗಳ ತೆರವು ಮಾಡಿದ್ದು ಮುಂಜಾಗೃತಾ ಕ್ರಮವಾಗಿ ಈ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ಹಿಂದಿನ ಹಳೆಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

''ಐಆರ್​ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಂಗದ ಬಳಿ ಪದೆ ಪದೇ ಗುಡ್ಡ ಕುಸಿತವಾಗುತ್ತಿದೆ. ಮಣ್ಣು, ಕಲ್ಲು ಸಡಿಲಗೊಂಡು ಮಳೆಗಾಲದಲ್ಲಿ ಹೆದ್ದಾರಿಗೆ ಬೀಳುವುದರಿಂದ ನಿತ್ಯ ಸಂಚಾರ ಮಾಡುವ ಸವಾರರಿಗೆ ಜೀವ ಭಯ ಕಾಡುವಂತಾಗಿದೆ. ಕೂಡಲೇ ಈ ಭಾಗದಲ್ಲಿ ಗುಡ್ಡ ಕುಸಿಯುವುದನ್ನು ಗುತ್ತಿಗೆ ಪಡೆದ ಕಂಪನಿ ತಡೆಗಟ್ಟಲು ಅಗತ್ಯ ಕ್ರಮ‌ಕೈಗೊಳ್ಳುವಂತೆ ನಗರಸಭೆ ಮಾಜಿ‌ ಉಪಾಧ್ಯಕ್ಷ ಪಿ.ಪಿ ನಾಯ್ಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಾಂಬರ್​ ರಸ್ತೆ ಕಣ್ಮರೆ, ಮನೆ ಮೇಲೆ ಅಪ್ಪಳಿಸಿದ ಗುಡ್ಡ: ಕಳಸ, ಸಂಸೆಯಲ್ಲಿ ಮಳೆ ಸಂಬಂಧಿ ಅವಘಡಗಳು - Chikkamagaluru Rain

ಸುರಂಗ ಮಾರ್ಗದಲ್ಲಿ‌ ಮತ್ತೆ ಗುಡ್ಡ ಕುಸಿತ (ETV Bharat)

ಕಾರವಾರ: ನಗರದ ಲಂಡನ್ ಬ್ರೀಡ್ಜ್​​ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಸುರಂಗ ಮಾರ್ಗದ ಬಳಿ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ಮುಂಜಾಗೃತಾ ಕ್ರಮವಾಗಿ ಒಂದು ಸುರಂಗ ಮಾರ್ಗದಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಗುಡ್ಡ ಕುಸಿತದಿಂದ ಈ ಹಿಂದೆ ಕೆಲ‌ವು ದಿನ ಬಂದ್ ಆಗಿದ್ದ ಸುರಂಗ‌ ಮಾರ್ಗದ ಇನ್ನೊಂದು ಬದಿಯಲ್ಲಿ ಶನಿವಾರ ಬೆಳಗ್ಗೆ ಮತ್ತೆ ಬಂಡೆ‌ಕಲ್ಲು ಹಾಗೂ‌ ಮಣ್ಣು ಕುಸಿದಿದೆ. ಇದರಿಂದ ಅಂಕೋಲಾದಿಂದ‌ ಕಾರವಾರ ನಗರಕ್ಕೆ ಸಂಪರ್ಕ‌ ಕಲ್ಪಿಸುವ ಸುರಂಗದ ಒಂದು ಬದಿಯ ಸಂಚಾರ ಬಂದ್ ಮಾಡಲಾಗಿದೆ.

ಸದ್ಯ ಐಆರ್​ಬಿ ಕಂಪನಿಯಿಂದ ಮಣ್ಣು, ಕಲ್ಲುಗಳ ತೆರವು ಮಾಡಿದ್ದು ಮುಂಜಾಗೃತಾ ಕ್ರಮವಾಗಿ ಈ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ಹಿಂದಿನ ಹಳೆಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

''ಐಆರ್​ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಂಗದ ಬಳಿ ಪದೆ ಪದೇ ಗುಡ್ಡ ಕುಸಿತವಾಗುತ್ತಿದೆ. ಮಣ್ಣು, ಕಲ್ಲು ಸಡಿಲಗೊಂಡು ಮಳೆಗಾಲದಲ್ಲಿ ಹೆದ್ದಾರಿಗೆ ಬೀಳುವುದರಿಂದ ನಿತ್ಯ ಸಂಚಾರ ಮಾಡುವ ಸವಾರರಿಗೆ ಜೀವ ಭಯ ಕಾಡುವಂತಾಗಿದೆ. ಕೂಡಲೇ ಈ ಭಾಗದಲ್ಲಿ ಗುಡ್ಡ ಕುಸಿಯುವುದನ್ನು ಗುತ್ತಿಗೆ ಪಡೆದ ಕಂಪನಿ ತಡೆಗಟ್ಟಲು ಅಗತ್ಯ ಕ್ರಮ‌ಕೈಗೊಳ್ಳುವಂತೆ ನಗರಸಭೆ ಮಾಜಿ‌ ಉಪಾಧ್ಯಕ್ಷ ಪಿ.ಪಿ ನಾಯ್ಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಾಂಬರ್​ ರಸ್ತೆ ಕಣ್ಮರೆ, ಮನೆ ಮೇಲೆ ಅಪ್ಪಳಿಸಿದ ಗುಡ್ಡ: ಕಳಸ, ಸಂಸೆಯಲ್ಲಿ ಮಳೆ ಸಂಬಂಧಿ ಅವಘಡಗಳು - Chikkamagaluru Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.