ETV Bharat / state

ವಿಪಕ್ಷ ನಾಯಕ ಆರ್.ಅಶೋಕ್ ಕೂಡ ಈ ಹಿಂದೆ ಬಿಡಿಎ ಜಾಗ ಮರಳಿಸಿದ್ದರು, ರಾಜೀನಾಮೆ ಕೊಡ್ತಾರಾ: ಸಚಿವರುಗಳ ಸವಾಲು - MUDA Case

author img

By ETV Bharat Karnataka Team

Published : 3 hours ago

ಹೆಜ್ಜೆ ಹೆಜ್ಜೆಗೂ ಅಕ್ರಮ ಮಾಡಿರುವ ವಿಪಕ್ಷ ನಾಯಕ ಅಶೋಕ್ ಅವರು ಇಂದು ಆಡುತ್ತಿರುವ ಮಾತುಗಳು ನೋಡಿದರೆ ಅಚ್ಚರಿಯಾಗುತ್ತದೆ. ಯಾವುದೇ ತಪ್ಪು ಮಾಡಿಲ್ಲದಿದ್ದರೂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿ, ಬಿಜೆಪಿಯ ಅಸ್ತ್ರದಂತೆ ಇರುವ ಇಡಿ ಸಂಸ್ಥೆಯನ್ನು ಪ್ರಯೋಗಿಸುತ್ತಾರೆ. ಹೀಗಾಗಿ ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿಪಕ್ಷ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಕಾಂಗ್ರೆಸ್​ನ ಸಚಿವರು ಸವಾಲು ಹಾಕಿದರು.

ಸಚಿವ ಜಿ.ಪರಮೇಶ್ವರ್
ಸಚಿವ ಜಿ.ಪರಮೇಶ್ವರ್ (ETV Bharat)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ನಿವೇಶನ ಮರಳಿಸಿರುವುದನ್ನು ಟೀಕಿಸುತ್ತಿರುವ ವಿಪಕ್ಷ ನಾಯಕ ಆರ್.ಅಶೋಕ್ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ಜಮೀನನ್ನು 2011ರಲ್ಲಿ ಅದೇ ರೀತಿ ವಾಪಸು ಮಾಡಿದ್ದರು ಎಂದು ಕಾಂಗ್ರೆಸ್ ಸಚಿವರುಗಳು ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಡತ ಸಮೇತವಾಗಿ ಈ ಸಂಬಂಧ ಸಚಿವರುಗಳಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ಸಂಬಂಧ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಸಿಎಂ ಪತ್ನಿ ನಿವೇಶನವನ್ನು ಮುಡಾಗೆ ವಾಪಸು ಕೊಟ್ಟಿದ್ದಾರೆ. ವಾಪಸ್​ ಕೊಟ್ಟ ಮೇಲೆ ವಿಪಕ್ಷಗಳು ಆರೋಪ ಮಾಡುತ್ತಿವೆ. ಆ ಮೂಲಕ ಸಿಎಂ ತಪ್ಪು ಒಪ್ಪಿದ ಹಾಗೆ ಎಂದು ಆರೋಪಿಸುತ್ತಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ ಸಿಎಂ ಮಾಡಿರುವುದು ತಪ್ಪು, ನಿವೇಶನ ವಾಪಸ್​ ಮಾಡಿ ತಪ್ಪು ಒಪ್ಪಿಕೊಂಡ ಹಾಗೆ ಆಯಿತು ಎಂದಿದ್ದಾರೆ. ಆದರೆ, ಆರ್.ಅಶೋಕ್ ಲೊಟ್ಟೆಗೊಲ್ಲಹಳ್ಳಿಯಲ್ಲಿ 2011ರಲ್ಲಿ ಇದೇ ರೀತಿ ಬಿಡಿಎ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ ಬಳಿಕ ಹೈಕೋರ್ಟ್​ನಲ್ಲಿ ಪ್ರಶ್ನಿಸಿದಾಗ ಆ ಜಾಗವನ್ನು ಮರಳಿಸಿದ್ದರು ಎಂದು ಆರೋಪಿಸಿದ್ದಾರೆ.‌

ಲೊಟ್ಟೆಗೊಲ್ಲಹಳ್ಳಿಯ ಸರ್ವೇ ನಂಬರ್ 10/1, 10/11 F1 ಹಾಗೂ 10/11 F2 ಜಾಗದಲ್ಲಿ 32 ಗುಂಟೆ ಜಮೀನನ್ನು ಬಿಡಿಎ 24-02-1977 ರಲ್ಲಿ ಬಿಡಿಎ ನೋಟಿಫಿಕೇಶನ್ ಮಾಡುತ್ತದೆ. 27-2-1977 ರಲ್ಲಿ ಮತ್ತೊಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುತ್ತದೆ. 31-8-1978 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ. ನಂತರ 26-02-2003 ಹಾಗೂ 2007 ರಲ್ಲಿ ಜಮೀನಿನ ಮೂಲ ಮಾಲೀಕರಾದ ರಾಮಸ್ವಾಮಿ ಅವರಿಂದ ಆರ್.ಅಶೋಕ್ ಅವರು ಈ ಜಮೀನನ್ನ ಶುದ್ಧ ಕ್ರಯದ ಮೂಲಕ ಖರೀದಿ ಮಾಡುತ್ತಾರೆ. ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಈ ಅರ್ಜಿಯ ಮೇಲೆ ಕೂಡಲೇ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಕಡತ ಮಂಡನೆಯಾದ ಎರಡು ತಿಂಗಳಲ್ಲಿ ಭೂಸ್ವಾಧೀನ ಕೈಬಿಡಲಾಗುತ್ತದೆ ಎಂದು ವಿವರಿಸಿದರು.

ಡಿನೋಟಿಫಿಕೇಷನ್ ನಂತರ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ ಅತ್ರಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡುತ್ತಾರೆ. ನಂತರ ಇದು ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ನಂತರ ಆರ್. ಅಶೋಕ್ ಅವರು ಈ ಜಮೀನು ಹಿಂತಿರುಗಿಸಲು ತೀರ್ಮಾನಿಸುತ್ತಾರೆ. 27-08-2011ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ನೀಡುತ್ತಾರೆ. ನಂತರ ಹೈಕೋರ್ಟ್ ಮೆಟ್ಟಿಲೇರಿ ನಂತರ ನ್ಯಾಯಾಧೀಶರಾದ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಅರವಿಂದ್ ಕುಮಾರ್ ಅವರು ವಿಚಾರಣೆ ಮಾಡಿ ತೀರ್ಪು ನೀಡುತ್ತಾರೆ. ಈ ತೀರ್ಪಿನಲ್ಲಿ ಈ ಭೂಮಿಯು ಬಿಡಿಎ ಅಧೀನದಲ್ಲಿರುವ ಕಾರಣ ಕ್ರಿಮಿನಲ್ ಮೊಕದ್ದಮೆ ಹೂಡುವ ಅಗತ್ಯವಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗುತ್ತದೆ ಎಂದರು.

ಸಿದ್ದರಾಮಯ್ಯ ಅವರ ಪತ್ನಿ ತಮಗೆ ಪರಿಹಾರವಾಗಿ ಬಂದ ನಿವೇಶನ ವಾಪಸ್ ನೀಡಿರುವುದಕ್ಕೆ ನೀವು ಆಡುತ್ತಿರುವ ಮಾತುಗಳು ಹಾಗೂ ಈ ತೀರ್ಪನ್ನು ನೀವು ಯಾವ ರೀತಿ ಅರ್ಥೈಸುತ್ತೀರಿ? ಇದರ ಬಗ್ಗೆ ಜನರಿಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.

ನೀವು ಮಾಡಿದರೆ ಸರಿ, ಸಿಎಂ ಮಾಡಿದರೆ ತಪ್ಪಾ?: ಇದೇ ವೇಳೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಆರ್.ಅಶೋಕ್ ಅವರ ಹೇಳಿಕೆ ಗಮನಿಸಿದರೆ ಆಶ್ಚರ್ಯವಾಗುತ್ತದೆ. ಬಿಡಿಎ ಜಮೀನು ತಮ್ಮ ಹೆಸರಿಗೆ ಮಾಡಿಕೊಂಡು ನಂತರ ಬಿಡಿಎಗೆ ವಾಪಸ್ ನೀಡಿರುವವರು ತಮ್ಮ ಅನುಭವದ ಮಾತನ್ನು ಈಗ ಆಡುತ್ತಿದ್ದಾರೆ. ನೀವು ಮಾಡಿದ್ದು ಸರಿಯಾದರೆ, ಪಾರ್ವತಮ್ಮ ಅವರು ಮಾಡಿದ್ದರಲ್ಲಿ ತಪ್ಪು ಹೇಗಾಗುತ್ತದೆ?. ಅನವಶ್ಯಕವಾಗಿ ತಪ್ಪು ಹೇರಿ, ಜನರ ಮನಸ್ಸಿನಲ್ಲಿ ಸಂಶಯ ಸೃಷ್ಟಿ ಮಾಡುವುದನ್ನು ನಿಲ್ಲಿಸಬೇಕು. ನೀವು ನಿಮ್ಮದಲ್ಲದ ಭೂಮಿಯನ್ನು ಬಿಡಿಎಗೆ ಹಿಂಪಡೆಯುತ್ತೀರಿ, ಮೂಡಾ ಸಂಸ್ಥೆಯಿಂದ ಪರಿಹಾರವಾಗಿ ಬಂದ ಶ್ರೀಮತಿ ಪಾರ್ವತಿಯವರು ಹಿಂದಿರುಗಿಸಿದರೆ ಅದನ್ನು ತಪ್ಪು ಎನ್ನುತ್ತೀರಾ ಎಂದು ತಿರುಗೇಟು ನೀಡಿದರು.

ಆರ್.ಅಶೋಕ್ ರಾಜೀನಾಮೆ ನೀಡುತ್ತೀರಾ?: ಇದೇ ವೇಳೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಈ ಜಾಗ ಡಾಲರ್ಸ್ ಕಾಲೋನಿ 2ನೆ ಹಂತದ ಆರ್​ಎಂವಿ ಬಡಾವಣೆ ಹಾಗೂ ವರ್ತುಲ ರಸ್ತೆ ಬಳಿ ಇದೆ. ಈ ಪ್ರದೇಶವನ್ನು ಬಿಡಿಎ 1977 ಹಾಗೂ 1978ರಲ್ಲಿ ವಶಕ್ಕೆ ಪಡೆದಿತ್ತು. ಈ ಜಾಗ ವರ್ತುಲ ರಸ್ತೆಗೆ ಮುಖವಾಗಿದೆ. ಹೀಗಾಗಿ ಈ ಜಮೀನಿನ ಮೌಲ್ಯ ಕೋಟ್ಯಂತರ ರೂಪಾಯಿಯಾಗಿದೆ. 2003ರಲ್ಲಿ ಆರ್. ಅಶೋಕ್ ಅವರು ಶುದ್ಧ ಕ್ರಯ ಹೇಗೆ ಮಾಡಿಕೊಂಡರು. ಇಷ್ಟು ದಿನ ಅಕ್ರಮವಾಗಿ ಜಿಪಿಎ ಮಾಡಿಕೊಂಡಿರುವುದನ್ನು ಕೇಳಿದ್ದೆ, ಆದರೆ ಮೊದಲ ಬಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನನ್ನು ಶುದ್ಧ ಕ್ರಯ ಮಾಡಿಕೊಂಡಿರುವ ಪ್ರಕರಣ ನೋಡುತ್ತಿದ್ದೇನೆ. ಬಿಡಿಎ ಸ್ವತ್ತನ್ನು ಖಾಸಗಿ ಅವರಿಂದ ಹೇಗೆ ಖರೀದಿ ಮಾಡಿದರು? ಬಿಡಿಎ ಬಳಿ ಖಾತಾ ಇರುವಾಗ ಗುಳ್ಳಮ್ಮ ಅವರ ವಾರಸುದಾರರಿಂದ ಹೇಗೆ ಖರೀದಿ ಮಾಡಿದರು ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಮಸ್ವಾಮಿ ಬಿನ್ ವೆಂಕಟಪ್ಪ ಎಂಬುವಬರ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಬೇಕು ಎಂದು ಅರ್ಜಿ ನೀಡುತ್ತಾರೆ. 18-11-2009ರಂದು ಆಗಿನ ಸಿಎಂ ಯಡಿಯೂರಪ್ಪ ಅವರು ಬಿಡಿಎ ಆಯುಕ್ತರು ಕೂಡಲೇ ಕಡತದಲ್ಲಿ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಅದೇ ವರ್ಷ ಡಿಸೆಂಬರ್ 31ಕ್ಕೆ ಅಂದರೆ ಒಂದು ತಿಂಗಳು 12 ದಿನಗಳ ಅಂತರದಲ್ಲಿ ಡಿನೋಟಿಫಿಕೇಷನ್ ಮಾಡುತ್ತಾರೆ. ಸರ್ಕಾರಿ ಜಾಗವನ್ನು 23 ವರ್ಷಗಳ ನಂತರ ಡಿನೋಟಿಫಿಕೇಷನ್ ಮಾಡಿರುವುದು ಅಕ್ರಮ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಶುದ್ಧ ಕ್ರಯ ಪತ್ರದಲ್ಲಿ ಗುಳ್ಳಮ್ಮ ಎಂಬುವವರ ವಾರಸುದಾರರು ಯಾರು ಎಂದು ನೋಡಿದರೆ, ವಾರಸುದಾರರು ಜಿ.ಶಾಮಣ್ಣ, ಜಿ.ಮುನಿರಾಜು, ಜಿ.ಗೋವಿಂದಪ್ಪ, ಜಿ.ಕಾಂತರಾಜು, ಜಿ. ಸುಬ್ರಮಣ್ಯ ಎಂದು ಇದೆ. ಇಲ್ಲಿ ರಾಮಸ್ವಾಮಿ ಹಾಗೂ ವೆಂಕಟಪ್ಪ ಎಂಬುವವರಿಗೆ ಗುಳ್ಳಮ್ಮ ಎಂಬುವವರು ಹೇಗೆ ಸಂಬಂಧ ಎಂದು ಗೊತ್ತಿಲ್ಲ. ನನ್ನ ಪ್ರಕಾರ ರಾಮಸ್ವಾಮಿ ದಾರಿಯಲ್ಲಿ ಹೋಗುವ ದಾಸಯ್ಯ ಎಂದು ನನಗೆ ಮೇಲ್ನೋಟಕ್ಕೆ ಕಾಣುತ್ತಿದೆ. ದಾರಿಯಲ್ಲಿ ಹೋಗುವವರಿಂದ ಅರ್ಜಿ ಪಡೆದು ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಡೈನೋಟಿಫೈ ಮಾಡುತ್ತೀರಿ. ಈ ಬೇನಾಮಿ ರಾಮಸ್ವಾಮಿ ಎಲ್ಲಿಂದ ಬಂದ?. ಅಲ್ಲಿಗೆ ಮೂಲ ವಾರಸುದಾರರು ಡಿನೋಟಿಫಿಕೇಷನ್ ಗೆ ಅರ್ಜಿಯನ್ನೇ ಕೊಟ್ಟಿಲ್ಲ.ಇವರ ಹೆಸರಲ್ಲಿ ಬೇನಾಮಿ ರಾಮಸ್ವಾಮಿ ಎಂಬುವವರನ್ನು ಸೃಷ್ಟಿ ಮಾಡಲಾಗಿದೆ. ಇದು ಕ್ರಮವೇ? ಅಕ್ರಮವೇ ಎಂದು ಪ್ರಶ್ನಿಸಿದ್ದಾರೆ.

ಅಂತಿಮವಾಗಿ ಡಿನೋಟಿಫಿಕೇಷನ್ ಆಗಿದ್ದು ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರಿಗೆ. ಈ ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರು ಯಾರು? ಇನ್ನು ಅಂತಿಮವಾಗಿ ಖಾತೆ ಆಗುವುದು ಆರ್.ಅಶೋಕ್ ಅವರ ಹೆಸರಿಗೆ. ಹೆಜ್ಜೆ ಹೆಜ್ಜೆಗೂ ಅಕ್ರಮ ಮಾಡಿರುವ ಅಶೋಕ್ ಅವರು ಇಂದು ಆಡುತ್ತಿರುವ ಮಾತುಗಳು ನೋಡಿದರೆ ಅಚ್ಚರಿಯಾಗುತ್ತದೆ. ಯಾವುದೇ ತಪ್ಪು ಮಾಡಿಲ್ಲದಿದ್ದರೂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿ, ಬಿಜೆಪಿಯ ಅಸ್ತ್ರದಂತೆ ಇರುವ ಇಡಿ ಸಂಸ್ಥೆಯನ್ನು ಪ್ರಯೋಗಿಸುತ್ತಾರೆ. ಹೀಗಾಗಿ ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿಪಕ್ಷ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಸವಾಲು ಹಾಕಿದರು.

ಇದನ್ನೂ ಓದಿ:

ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು: ಕೋರ್ಟ್​ ಆದೇಶದ ಉಲ್ಲಂಘನೆ ಎಂದ ಹೆಚ್​ಡಿಕೆ - H D Kumaraswamy

ಸೈಟ್ ವಾಪಸ್ ನಿರ್ಧಾರ ತಪ್ಪು ಒಪ್ಪಿಕೊಂಡಂತೆ, ಕೂಡಲೇ ಸಿಎಂ ರಾಜೀನಾಮೆ ನೀಡಬೇಕು: ವಿಜಯೇಂದ್ರ - Muda Case

ಮುಡಾ ಸೈಟ್‌ ವಾಪಸ್‌: ರಾಜಕೀಯ ತೇಜೋವಧೆ ಮನಗಂಡು ಪತ್ನಿಯಿಂದ ಸ್ವತಂತ್ರ ತೀರ್ಮಾನ- ಸಿಎಂ - CM Siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ನಿವೇಶನ ಮರಳಿಸಿರುವುದನ್ನು ಟೀಕಿಸುತ್ತಿರುವ ವಿಪಕ್ಷ ನಾಯಕ ಆರ್.ಅಶೋಕ್ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ಜಮೀನನ್ನು 2011ರಲ್ಲಿ ಅದೇ ರೀತಿ ವಾಪಸು ಮಾಡಿದ್ದರು ಎಂದು ಕಾಂಗ್ರೆಸ್ ಸಚಿವರುಗಳು ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಡತ ಸಮೇತವಾಗಿ ಈ ಸಂಬಂಧ ಸಚಿವರುಗಳಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ಸಂಬಂಧ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಸಿಎಂ ಪತ್ನಿ ನಿವೇಶನವನ್ನು ಮುಡಾಗೆ ವಾಪಸು ಕೊಟ್ಟಿದ್ದಾರೆ. ವಾಪಸ್​ ಕೊಟ್ಟ ಮೇಲೆ ವಿಪಕ್ಷಗಳು ಆರೋಪ ಮಾಡುತ್ತಿವೆ. ಆ ಮೂಲಕ ಸಿಎಂ ತಪ್ಪು ಒಪ್ಪಿದ ಹಾಗೆ ಎಂದು ಆರೋಪಿಸುತ್ತಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ ಸಿಎಂ ಮಾಡಿರುವುದು ತಪ್ಪು, ನಿವೇಶನ ವಾಪಸ್​ ಮಾಡಿ ತಪ್ಪು ಒಪ್ಪಿಕೊಂಡ ಹಾಗೆ ಆಯಿತು ಎಂದಿದ್ದಾರೆ. ಆದರೆ, ಆರ್.ಅಶೋಕ್ ಲೊಟ್ಟೆಗೊಲ್ಲಹಳ್ಳಿಯಲ್ಲಿ 2011ರಲ್ಲಿ ಇದೇ ರೀತಿ ಬಿಡಿಎ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ ಬಳಿಕ ಹೈಕೋರ್ಟ್​ನಲ್ಲಿ ಪ್ರಶ್ನಿಸಿದಾಗ ಆ ಜಾಗವನ್ನು ಮರಳಿಸಿದ್ದರು ಎಂದು ಆರೋಪಿಸಿದ್ದಾರೆ.‌

ಲೊಟ್ಟೆಗೊಲ್ಲಹಳ್ಳಿಯ ಸರ್ವೇ ನಂಬರ್ 10/1, 10/11 F1 ಹಾಗೂ 10/11 F2 ಜಾಗದಲ್ಲಿ 32 ಗುಂಟೆ ಜಮೀನನ್ನು ಬಿಡಿಎ 24-02-1977 ರಲ್ಲಿ ಬಿಡಿಎ ನೋಟಿಫಿಕೇಶನ್ ಮಾಡುತ್ತದೆ. 27-2-1977 ರಲ್ಲಿ ಮತ್ತೊಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುತ್ತದೆ. 31-8-1978 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ. ನಂತರ 26-02-2003 ಹಾಗೂ 2007 ರಲ್ಲಿ ಜಮೀನಿನ ಮೂಲ ಮಾಲೀಕರಾದ ರಾಮಸ್ವಾಮಿ ಅವರಿಂದ ಆರ್.ಅಶೋಕ್ ಅವರು ಈ ಜಮೀನನ್ನ ಶುದ್ಧ ಕ್ರಯದ ಮೂಲಕ ಖರೀದಿ ಮಾಡುತ್ತಾರೆ. ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಈ ಅರ್ಜಿಯ ಮೇಲೆ ಕೂಡಲೇ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಕಡತ ಮಂಡನೆಯಾದ ಎರಡು ತಿಂಗಳಲ್ಲಿ ಭೂಸ್ವಾಧೀನ ಕೈಬಿಡಲಾಗುತ್ತದೆ ಎಂದು ವಿವರಿಸಿದರು.

ಡಿನೋಟಿಫಿಕೇಷನ್ ನಂತರ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ ಅತ್ರಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡುತ್ತಾರೆ. ನಂತರ ಇದು ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ನಂತರ ಆರ್. ಅಶೋಕ್ ಅವರು ಈ ಜಮೀನು ಹಿಂತಿರುಗಿಸಲು ತೀರ್ಮಾನಿಸುತ್ತಾರೆ. 27-08-2011ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ನೀಡುತ್ತಾರೆ. ನಂತರ ಹೈಕೋರ್ಟ್ ಮೆಟ್ಟಿಲೇರಿ ನಂತರ ನ್ಯಾಯಾಧೀಶರಾದ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಅರವಿಂದ್ ಕುಮಾರ್ ಅವರು ವಿಚಾರಣೆ ಮಾಡಿ ತೀರ್ಪು ನೀಡುತ್ತಾರೆ. ಈ ತೀರ್ಪಿನಲ್ಲಿ ಈ ಭೂಮಿಯು ಬಿಡಿಎ ಅಧೀನದಲ್ಲಿರುವ ಕಾರಣ ಕ್ರಿಮಿನಲ್ ಮೊಕದ್ದಮೆ ಹೂಡುವ ಅಗತ್ಯವಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗುತ್ತದೆ ಎಂದರು.

ಸಿದ್ದರಾಮಯ್ಯ ಅವರ ಪತ್ನಿ ತಮಗೆ ಪರಿಹಾರವಾಗಿ ಬಂದ ನಿವೇಶನ ವಾಪಸ್ ನೀಡಿರುವುದಕ್ಕೆ ನೀವು ಆಡುತ್ತಿರುವ ಮಾತುಗಳು ಹಾಗೂ ಈ ತೀರ್ಪನ್ನು ನೀವು ಯಾವ ರೀತಿ ಅರ್ಥೈಸುತ್ತೀರಿ? ಇದರ ಬಗ್ಗೆ ಜನರಿಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.

ನೀವು ಮಾಡಿದರೆ ಸರಿ, ಸಿಎಂ ಮಾಡಿದರೆ ತಪ್ಪಾ?: ಇದೇ ವೇಳೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಆರ್.ಅಶೋಕ್ ಅವರ ಹೇಳಿಕೆ ಗಮನಿಸಿದರೆ ಆಶ್ಚರ್ಯವಾಗುತ್ತದೆ. ಬಿಡಿಎ ಜಮೀನು ತಮ್ಮ ಹೆಸರಿಗೆ ಮಾಡಿಕೊಂಡು ನಂತರ ಬಿಡಿಎಗೆ ವಾಪಸ್ ನೀಡಿರುವವರು ತಮ್ಮ ಅನುಭವದ ಮಾತನ್ನು ಈಗ ಆಡುತ್ತಿದ್ದಾರೆ. ನೀವು ಮಾಡಿದ್ದು ಸರಿಯಾದರೆ, ಪಾರ್ವತಮ್ಮ ಅವರು ಮಾಡಿದ್ದರಲ್ಲಿ ತಪ್ಪು ಹೇಗಾಗುತ್ತದೆ?. ಅನವಶ್ಯಕವಾಗಿ ತಪ್ಪು ಹೇರಿ, ಜನರ ಮನಸ್ಸಿನಲ್ಲಿ ಸಂಶಯ ಸೃಷ್ಟಿ ಮಾಡುವುದನ್ನು ನಿಲ್ಲಿಸಬೇಕು. ನೀವು ನಿಮ್ಮದಲ್ಲದ ಭೂಮಿಯನ್ನು ಬಿಡಿಎಗೆ ಹಿಂಪಡೆಯುತ್ತೀರಿ, ಮೂಡಾ ಸಂಸ್ಥೆಯಿಂದ ಪರಿಹಾರವಾಗಿ ಬಂದ ಶ್ರೀಮತಿ ಪಾರ್ವತಿಯವರು ಹಿಂದಿರುಗಿಸಿದರೆ ಅದನ್ನು ತಪ್ಪು ಎನ್ನುತ್ತೀರಾ ಎಂದು ತಿರುಗೇಟು ನೀಡಿದರು.

ಆರ್.ಅಶೋಕ್ ರಾಜೀನಾಮೆ ನೀಡುತ್ತೀರಾ?: ಇದೇ ವೇಳೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಈ ಜಾಗ ಡಾಲರ್ಸ್ ಕಾಲೋನಿ 2ನೆ ಹಂತದ ಆರ್​ಎಂವಿ ಬಡಾವಣೆ ಹಾಗೂ ವರ್ತುಲ ರಸ್ತೆ ಬಳಿ ಇದೆ. ಈ ಪ್ರದೇಶವನ್ನು ಬಿಡಿಎ 1977 ಹಾಗೂ 1978ರಲ್ಲಿ ವಶಕ್ಕೆ ಪಡೆದಿತ್ತು. ಈ ಜಾಗ ವರ್ತುಲ ರಸ್ತೆಗೆ ಮುಖವಾಗಿದೆ. ಹೀಗಾಗಿ ಈ ಜಮೀನಿನ ಮೌಲ್ಯ ಕೋಟ್ಯಂತರ ರೂಪಾಯಿಯಾಗಿದೆ. 2003ರಲ್ಲಿ ಆರ್. ಅಶೋಕ್ ಅವರು ಶುದ್ಧ ಕ್ರಯ ಹೇಗೆ ಮಾಡಿಕೊಂಡರು. ಇಷ್ಟು ದಿನ ಅಕ್ರಮವಾಗಿ ಜಿಪಿಎ ಮಾಡಿಕೊಂಡಿರುವುದನ್ನು ಕೇಳಿದ್ದೆ, ಆದರೆ ಮೊದಲ ಬಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನನ್ನು ಶುದ್ಧ ಕ್ರಯ ಮಾಡಿಕೊಂಡಿರುವ ಪ್ರಕರಣ ನೋಡುತ್ತಿದ್ದೇನೆ. ಬಿಡಿಎ ಸ್ವತ್ತನ್ನು ಖಾಸಗಿ ಅವರಿಂದ ಹೇಗೆ ಖರೀದಿ ಮಾಡಿದರು? ಬಿಡಿಎ ಬಳಿ ಖಾತಾ ಇರುವಾಗ ಗುಳ್ಳಮ್ಮ ಅವರ ವಾರಸುದಾರರಿಂದ ಹೇಗೆ ಖರೀದಿ ಮಾಡಿದರು ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಮಸ್ವಾಮಿ ಬಿನ್ ವೆಂಕಟಪ್ಪ ಎಂಬುವಬರ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಬೇಕು ಎಂದು ಅರ್ಜಿ ನೀಡುತ್ತಾರೆ. 18-11-2009ರಂದು ಆಗಿನ ಸಿಎಂ ಯಡಿಯೂರಪ್ಪ ಅವರು ಬಿಡಿಎ ಆಯುಕ್ತರು ಕೂಡಲೇ ಕಡತದಲ್ಲಿ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಅದೇ ವರ್ಷ ಡಿಸೆಂಬರ್ 31ಕ್ಕೆ ಅಂದರೆ ಒಂದು ತಿಂಗಳು 12 ದಿನಗಳ ಅಂತರದಲ್ಲಿ ಡಿನೋಟಿಫಿಕೇಷನ್ ಮಾಡುತ್ತಾರೆ. ಸರ್ಕಾರಿ ಜಾಗವನ್ನು 23 ವರ್ಷಗಳ ನಂತರ ಡಿನೋಟಿಫಿಕೇಷನ್ ಮಾಡಿರುವುದು ಅಕ್ರಮ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಶುದ್ಧ ಕ್ರಯ ಪತ್ರದಲ್ಲಿ ಗುಳ್ಳಮ್ಮ ಎಂಬುವವರ ವಾರಸುದಾರರು ಯಾರು ಎಂದು ನೋಡಿದರೆ, ವಾರಸುದಾರರು ಜಿ.ಶಾಮಣ್ಣ, ಜಿ.ಮುನಿರಾಜು, ಜಿ.ಗೋವಿಂದಪ್ಪ, ಜಿ.ಕಾಂತರಾಜು, ಜಿ. ಸುಬ್ರಮಣ್ಯ ಎಂದು ಇದೆ. ಇಲ್ಲಿ ರಾಮಸ್ವಾಮಿ ಹಾಗೂ ವೆಂಕಟಪ್ಪ ಎಂಬುವವರಿಗೆ ಗುಳ್ಳಮ್ಮ ಎಂಬುವವರು ಹೇಗೆ ಸಂಬಂಧ ಎಂದು ಗೊತ್ತಿಲ್ಲ. ನನ್ನ ಪ್ರಕಾರ ರಾಮಸ್ವಾಮಿ ದಾರಿಯಲ್ಲಿ ಹೋಗುವ ದಾಸಯ್ಯ ಎಂದು ನನಗೆ ಮೇಲ್ನೋಟಕ್ಕೆ ಕಾಣುತ್ತಿದೆ. ದಾರಿಯಲ್ಲಿ ಹೋಗುವವರಿಂದ ಅರ್ಜಿ ಪಡೆದು ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಡೈನೋಟಿಫೈ ಮಾಡುತ್ತೀರಿ. ಈ ಬೇನಾಮಿ ರಾಮಸ್ವಾಮಿ ಎಲ್ಲಿಂದ ಬಂದ?. ಅಲ್ಲಿಗೆ ಮೂಲ ವಾರಸುದಾರರು ಡಿನೋಟಿಫಿಕೇಷನ್ ಗೆ ಅರ್ಜಿಯನ್ನೇ ಕೊಟ್ಟಿಲ್ಲ.ಇವರ ಹೆಸರಲ್ಲಿ ಬೇನಾಮಿ ರಾಮಸ್ವಾಮಿ ಎಂಬುವವರನ್ನು ಸೃಷ್ಟಿ ಮಾಡಲಾಗಿದೆ. ಇದು ಕ್ರಮವೇ? ಅಕ್ರಮವೇ ಎಂದು ಪ್ರಶ್ನಿಸಿದ್ದಾರೆ.

ಅಂತಿಮವಾಗಿ ಡಿನೋಟಿಫಿಕೇಷನ್ ಆಗಿದ್ದು ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರಿಗೆ. ಈ ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರು ಯಾರು? ಇನ್ನು ಅಂತಿಮವಾಗಿ ಖಾತೆ ಆಗುವುದು ಆರ್.ಅಶೋಕ್ ಅವರ ಹೆಸರಿಗೆ. ಹೆಜ್ಜೆ ಹೆಜ್ಜೆಗೂ ಅಕ್ರಮ ಮಾಡಿರುವ ಅಶೋಕ್ ಅವರು ಇಂದು ಆಡುತ್ತಿರುವ ಮಾತುಗಳು ನೋಡಿದರೆ ಅಚ್ಚರಿಯಾಗುತ್ತದೆ. ಯಾವುದೇ ತಪ್ಪು ಮಾಡಿಲ್ಲದಿದ್ದರೂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿ, ಬಿಜೆಪಿಯ ಅಸ್ತ್ರದಂತೆ ಇರುವ ಇಡಿ ಸಂಸ್ಥೆಯನ್ನು ಪ್ರಯೋಗಿಸುತ್ತಾರೆ. ಹೀಗಾಗಿ ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿಪಕ್ಷ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಸವಾಲು ಹಾಕಿದರು.

ಇದನ್ನೂ ಓದಿ:

ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು: ಕೋರ್ಟ್​ ಆದೇಶದ ಉಲ್ಲಂಘನೆ ಎಂದ ಹೆಚ್​ಡಿಕೆ - H D Kumaraswamy

ಸೈಟ್ ವಾಪಸ್ ನಿರ್ಧಾರ ತಪ್ಪು ಒಪ್ಪಿಕೊಂಡಂತೆ, ಕೂಡಲೇ ಸಿಎಂ ರಾಜೀನಾಮೆ ನೀಡಬೇಕು: ವಿಜಯೇಂದ್ರ - Muda Case

ಮುಡಾ ಸೈಟ್‌ ವಾಪಸ್‌: ರಾಜಕೀಯ ತೇಜೋವಧೆ ಮನಗಂಡು ಪತ್ನಿಯಿಂದ ಸ್ವತಂತ್ರ ತೀರ್ಮಾನ- ಸಿಎಂ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.