ETV Bharat / state

ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ: ಹೆಚ್.​ಡಿ. ಕುಮಾರಸ್ವಾಮಿ - H D Kumaraswamy

ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು. ಬಳಿಕ ಮಾತನಾಡಿ, ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಸಾಮೂಹಿಕ ಜವಾಬ್ದಾರಿ ತೆಗೆದುಕೊಂಡು ಸಂಘಟನೆಗೆ ಹೆಚ್ಚು ಶಕ್ತಿ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

author img

By ETV Bharat Karnataka Team

Published : Jul 6, 2024, 6:50 PM IST

ಹೆಚ್.​ಡಿ. ಕುಮಾರಸ್ವಾಮಿ
ಹೆಚ್.​ಡಿ. ಕುಮಾರಸ್ವಾಮಿ (ETV Bharat)
ಹೆಚ್.​ಡಿ. ಕುಮಾರಸ್ವಾಮಿ (ETV Bharat)

ಬೆಂಗಳೂರು: ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಸಾಮೂಹಿಕ ಜವಾಬ್ದಾರಿ ತೆಗೆದುಕೊಂಡು ಸಂಘಟನೆಗೆ ಹೆಚ್ಚು ಶಕ್ತಿ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕಾರ್ಯಕರ್ತರ ಶ್ರಮಕ್ಕೂ ತಕ್ಕ ಪ್ರತಿಫಲ ಕೊಡಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕೇಂದ್ರದಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಜವಾಬ್ದಾರಿಯುತ ಇಲಾಖೆ ನಡೆಸುವ ಜವಾಬ್ದಾರಿ ಇದೆ. ಹಾಗಾಗಿ, ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ.‌ ಎಲ್ಲರ ಸಲಹೆ ಏನೆಂದರೆ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಅವರು ಹೆಚ್ಚಿನ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ನಮ್ಮ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಅವರು ಎಲ್ಲರ ಜೊತೆಯಲ್ಲಿ ವಿಶ್ವಾಸದಿಂದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಪಕ್ಷದ ನಾಯಕರುಗಳ ಸಲಹೆಗಳು ಪಡೆದು ವಿಶ್ವಾಸದ ಮೂಲಕ ಪಕ್ಷ ಸಂಘಟನೆ ಬಗ್ಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರು ಸೇರಿದಂತೆ ಹಲವರು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಂಪೂರ್ಣವಾಗಿ ಜವಾಬ್ದಾರಿ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆ ನಂತರ, ಶಾಸಕಾಂಗ ಪಕ್ಷದ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ‌. ಹೊಸ ಶಾಸಕಾಂಗ ಪಕ್ಷದ ಸ್ಥಾನದ ಆಯ್ಕೆ ಮಾಡಲು ಸರ್ವಾನುಮತದಿಂದ ಜವಾಬ್ದಾರಿ ಕೊಟ್ಟಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಬಗ್ಗೆ ಪದಾಧಿಕಾರಿಗಳು, ಪಕ್ಷದ ಸಾರ್ವತ್ರಿಕ ಚುನಾವಣೆ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡುವ ದೃಷ್ಟಿಯಿಂದ ಮುಂದಿನ ಎರಡ್ಮೂರು ತಿಂಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಬಗ್ಗೆ ತೀರ್ಮಾನ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ವಿಧಾನಸಭೆ ಕ್ಷೇತ್ರಗಳಿಗೆ ಉಸ್ತುವಾರಿ ಕೊಡೋದು, ಕೋರ್ ಕಮಿಟಿ ಸದಸ್ಯರಿಗೂ ಉಸ್ತುವಾರಿ ನೀಡಿ ಆ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಲು
ಕೇಡರ್ ಬೇಸ್ ಪಕ್ಷದ ರೀತಿಯಲ್ಲಿ ಪರಿವರ್ತನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಂತರ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬೆಳವಣಿಗೆಯ ಸಂದರ್ಭದಲ್ಲಿ ಕಾಂಗ್ರೆಸ್​ನ ಪ್ರಮುಖ ನಾಯಕರು ಅತ್ಯಂತ ಲಘುವಾಗಿ ಮಾತಾಡಿದರು. ಆದರೆ, ನಮ್ಮ ಪಕ್ಷದ ಕಾರ್ಯಕರ್ತರ ಪ್ರಾಮಾಣಿಕ ಪ್ರಯತ್ನ ದಿಂದ ಅತ್ಯಂತ ನಿಷ್ಟೆಯಿಂದ ಎರಡು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಗೆ ಶ್ರಮ ಪಟ್ಟಿದ್ದಾರೆ. ಇವತ್ತಿನ ಸಭೆಯಲ್ಲಿ ಅವರಿಗೆ ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಹಾಗೂ ಮೈತ್ರಿಗೆ ಸಹಕಾರ ಕೊಟ್ಟ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಚನ್ನಪಟ್ಠಣ ಉಪ ಚುನಾವಣೆಗೆ ಅಭ್ಯರ್ಥಿ ಕುರಿತು ಕಾರ್ಯಕರ್ತರ ಜೊತೆ ಚರ್ಚೆ: ಸಿ.ಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ಕ್ಷೇತ್ರದ ಉಪ ಚುನಾವಣೆ ಇದೆ. ಚನ್ನಪಟ್ಟಣದಲ್ಲಿ ನಾನೇ ಶಾಸಕ ಇದ್ದೆ, ಜೆಡಿಎಸ್ ಕ್ಷೇತ್ರ ಅದು. ನನ್ನ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಳ್ಳಬೇಕು. ಆಮೇಲೆ ಮುಂದುವರಿಬೇಕು. ನಾನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಕ್ಕೆ ಆಗಲ್ಲ. ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಾನು ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಬಿಜೆಪಿ ಹೈಕಮಾಂಡ್, ರಾಜ್ಯದ ನಾಯಕರು ನನ್ನ ಜೊತೆ ಇನ್ನೂ ಚರ್ಚೆ ಮಾಡಿಲ್ಲ. ನನ್ನ ಚನ್ನಪಟ್ಟಣದ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಂಡೇ ನಿರ್ಧಾರ ಮಾಡಲಾಗುವುದು ಎಂದರು.

ಮತದಾರರ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ.‌ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಬಹಳ ಹೆಸರು ಬರುತ್ತಿದೆ. ನಿಖಿಲ್ ಹೆಸರು ಬಂತು ನಿಖಿಲ್ ಬೈಪಾಸ್ ಆಗಿದ್ದಾರೆ. ಈಗ ಅನಸೂಯಾ ಮಂಜುನಾಥ್ ಅವರ ಹೆಸರು ಬರುತ್ತಿದೆ. ಚುನಾವಣೆ ಘೋಷಣೆ ಬಳಿಕ ಇನ್ನು ಯಾವ ಹೆಸರುಗಳು ಕೇಳಿ ಬರುತ್ತವೆಯೋ ನೋಡೋಣ. ಇನ್ನೂ ಸಮಯ ಇದೆ ಚರ್ಚೆ ಮಾಡೋಣ ಬಿಡಿ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಆಯ್ಕೆ ಚುನಾವಣೆ ನಡೆಯಬೇಕು. ಸದಸ್ಯ ನೋಂದಣಿ ಆಗಬೇಕು. ಬೈಲಾ ಪ್ರಕಾರ ಚುನಾವಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ: ಶಿಗ್ಗಾಂವ ಉಪಚುನಾವಣೆ: ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ತೀವ್ರ ಪೈಪೋಟಿ, ಸಚಿವರ ಸಭೆಯಲ್ಲಿ ಬೆಂಬಲಿಗರ ತಿಕ್ಕಾಟ - Shigaon by election

ಹೆಚ್.​ಡಿ. ಕುಮಾರಸ್ವಾಮಿ (ETV Bharat)

ಬೆಂಗಳೂರು: ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಸಾಮೂಹಿಕ ಜವಾಬ್ದಾರಿ ತೆಗೆದುಕೊಂಡು ಸಂಘಟನೆಗೆ ಹೆಚ್ಚು ಶಕ್ತಿ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕಾರ್ಯಕರ್ತರ ಶ್ರಮಕ್ಕೂ ತಕ್ಕ ಪ್ರತಿಫಲ ಕೊಡಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕೇಂದ್ರದಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಜವಾಬ್ದಾರಿಯುತ ಇಲಾಖೆ ನಡೆಸುವ ಜವಾಬ್ದಾರಿ ಇದೆ. ಹಾಗಾಗಿ, ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ.‌ ಎಲ್ಲರ ಸಲಹೆ ಏನೆಂದರೆ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಅವರು ಹೆಚ್ಚಿನ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ನಮ್ಮ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಅವರು ಎಲ್ಲರ ಜೊತೆಯಲ್ಲಿ ವಿಶ್ವಾಸದಿಂದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಪಕ್ಷದ ನಾಯಕರುಗಳ ಸಲಹೆಗಳು ಪಡೆದು ವಿಶ್ವಾಸದ ಮೂಲಕ ಪಕ್ಷ ಸಂಘಟನೆ ಬಗ್ಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರು ಸೇರಿದಂತೆ ಹಲವರು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಂಪೂರ್ಣವಾಗಿ ಜವಾಬ್ದಾರಿ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆ ನಂತರ, ಶಾಸಕಾಂಗ ಪಕ್ಷದ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ‌. ಹೊಸ ಶಾಸಕಾಂಗ ಪಕ್ಷದ ಸ್ಥಾನದ ಆಯ್ಕೆ ಮಾಡಲು ಸರ್ವಾನುಮತದಿಂದ ಜವಾಬ್ದಾರಿ ಕೊಟ್ಟಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಬಗ್ಗೆ ಪದಾಧಿಕಾರಿಗಳು, ಪಕ್ಷದ ಸಾರ್ವತ್ರಿಕ ಚುನಾವಣೆ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡುವ ದೃಷ್ಟಿಯಿಂದ ಮುಂದಿನ ಎರಡ್ಮೂರು ತಿಂಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಬಗ್ಗೆ ತೀರ್ಮಾನ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ವಿಧಾನಸಭೆ ಕ್ಷೇತ್ರಗಳಿಗೆ ಉಸ್ತುವಾರಿ ಕೊಡೋದು, ಕೋರ್ ಕಮಿಟಿ ಸದಸ್ಯರಿಗೂ ಉಸ್ತುವಾರಿ ನೀಡಿ ಆ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಲು
ಕೇಡರ್ ಬೇಸ್ ಪಕ್ಷದ ರೀತಿಯಲ್ಲಿ ಪರಿವರ್ತನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಂತರ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬೆಳವಣಿಗೆಯ ಸಂದರ್ಭದಲ್ಲಿ ಕಾಂಗ್ರೆಸ್​ನ ಪ್ರಮುಖ ನಾಯಕರು ಅತ್ಯಂತ ಲಘುವಾಗಿ ಮಾತಾಡಿದರು. ಆದರೆ, ನಮ್ಮ ಪಕ್ಷದ ಕಾರ್ಯಕರ್ತರ ಪ್ರಾಮಾಣಿಕ ಪ್ರಯತ್ನ ದಿಂದ ಅತ್ಯಂತ ನಿಷ್ಟೆಯಿಂದ ಎರಡು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಗೆ ಶ್ರಮ ಪಟ್ಟಿದ್ದಾರೆ. ಇವತ್ತಿನ ಸಭೆಯಲ್ಲಿ ಅವರಿಗೆ ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಹಾಗೂ ಮೈತ್ರಿಗೆ ಸಹಕಾರ ಕೊಟ್ಟ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಚನ್ನಪಟ್ಠಣ ಉಪ ಚುನಾವಣೆಗೆ ಅಭ್ಯರ್ಥಿ ಕುರಿತು ಕಾರ್ಯಕರ್ತರ ಜೊತೆ ಚರ್ಚೆ: ಸಿ.ಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ಕ್ಷೇತ್ರದ ಉಪ ಚುನಾವಣೆ ಇದೆ. ಚನ್ನಪಟ್ಟಣದಲ್ಲಿ ನಾನೇ ಶಾಸಕ ಇದ್ದೆ, ಜೆಡಿಎಸ್ ಕ್ಷೇತ್ರ ಅದು. ನನ್ನ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಳ್ಳಬೇಕು. ಆಮೇಲೆ ಮುಂದುವರಿಬೇಕು. ನಾನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಕ್ಕೆ ಆಗಲ್ಲ. ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಾನು ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಬಿಜೆಪಿ ಹೈಕಮಾಂಡ್, ರಾಜ್ಯದ ನಾಯಕರು ನನ್ನ ಜೊತೆ ಇನ್ನೂ ಚರ್ಚೆ ಮಾಡಿಲ್ಲ. ನನ್ನ ಚನ್ನಪಟ್ಟಣದ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಂಡೇ ನಿರ್ಧಾರ ಮಾಡಲಾಗುವುದು ಎಂದರು.

ಮತದಾರರ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ.‌ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಬಹಳ ಹೆಸರು ಬರುತ್ತಿದೆ. ನಿಖಿಲ್ ಹೆಸರು ಬಂತು ನಿಖಿಲ್ ಬೈಪಾಸ್ ಆಗಿದ್ದಾರೆ. ಈಗ ಅನಸೂಯಾ ಮಂಜುನಾಥ್ ಅವರ ಹೆಸರು ಬರುತ್ತಿದೆ. ಚುನಾವಣೆ ಘೋಷಣೆ ಬಳಿಕ ಇನ್ನು ಯಾವ ಹೆಸರುಗಳು ಕೇಳಿ ಬರುತ್ತವೆಯೋ ನೋಡೋಣ. ಇನ್ನೂ ಸಮಯ ಇದೆ ಚರ್ಚೆ ಮಾಡೋಣ ಬಿಡಿ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಆಯ್ಕೆ ಚುನಾವಣೆ ನಡೆಯಬೇಕು. ಸದಸ್ಯ ನೋಂದಣಿ ಆಗಬೇಕು. ಬೈಲಾ ಪ್ರಕಾರ ಚುನಾವಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ: ಶಿಗ್ಗಾಂವ ಉಪಚುನಾವಣೆ: ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ತೀವ್ರ ಪೈಪೋಟಿ, ಸಚಿವರ ಸಭೆಯಲ್ಲಿ ಬೆಂಬಲಿಗರ ತಿಕ್ಕಾಟ - Shigaon by election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.