ETV Bharat / state

ಹಾಸನ: ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ, ವೇದಿಕೆಯಿಂದ ಕೆಳಗಿಳಿದ ಗೃಹಮಂಡಳಿ ಅಧ್ಯಕ್ಷ

ಹಾಸನದಲ್ಲಿ ಗಣಪತಿ ನಿಮಜ್ಜನ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಆಗಮಿಸಿದ್ದ ಶಾಸಕ ಶಿವಲಿಂಗೇಗೌಡ ಭಾಷಣ ಮಾಡುತ್ತಿದ್ದಂತೆ ಘೋಷಣೆ ಕೂಗಿದ ಜನರು ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ್ದಾರೆ.

author img

By ETV Bharat Karnataka Team

Published : 2 hours ago

ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ ಕೂಗಿ ಕೆಳಗಿಳಿಯುವಂತೆ ಮಾಡಿದ ಜನತೆ
ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಘೋಷಣೆ ಕೂಗಿ ಕೆಳಗಿಳಿಯುವಂತೆ ಮಾಡಿದ ಜನತೆ (ETV Bharat)

ಹಾಸನ (ಅರಸೀಕೆರೆ): ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗೃಹಮಂಡಳಿ ಅಧ್ಯಕ್ಷ ಮತ್ತು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಗ್ರಾಮಸ್ಥರು ಘೇರಾವ್​ ಹಾಕಿ ಕಳ್ಳ, ಕಳ್ಳ, ಕಳ್ಳ ಎಂದು ನಿಂದಿಸುವ ಮೂಲಕ ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ ಘಟನೆ ನಡೆದಿದೆ.

ಅರಸೀಕೆರೆಯ ಕೆಂಕೆರೆ ಗ್ರಾಮದಲ್ಲಿ ಭಾನುವಾರ ರಾತ್ರಿ ಗಣಪತಿ ನಿಮಜ್ಜನ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಅವರ ವಿರುದ್ಧ ಘೋಷಣೆ ಕೂಗುವ ಮೂಲಕ ಶಾಸಕರನ್ನು ನಿಂದಿಸಿದ್ದು, ವೇದಿಕೆ ಮೇಲಿಂದ ಶಾಸಕ ತೆರಳುವಂತೆ ಅಪಮಾನ ಮಾಡಿದ್ದಾರೆ.

ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಜನರ ಘೋಷಣೆ (ETV Bharat)

ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಬಳಿಕ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದರು.

ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೇಶವಮೂರ್ತಿ, ಗ್ರಾಮಸ್ಥರು ಸಿಎಂ ಭೇಟಿಯಾಗಿ ಹೇಮಾವತಿ ನದಿಯಿಂದ ಕೆಂಕೆರೆ ಗ್ರಾಮದ ಕೆರೆ ತುಂಬಿಸುವ ಯೋಜನೆಗೆ ಅನುಮತಿ ಪಡೆದಿದ್ದರು. 22 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದರು. ಇದರಿಂದ ಕೆರಳಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಯೋಜನೆಯನ್ನು ರದ್ದು ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಶಾಸಕರ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಬಳಿಕ ಆರ್ಕೆಸ್ಟ್ರಾ ಕಾರ್ಯಕ್ರಮ ಅರ್ಧಕ್ಕೆ ನಿಂತಿತು.

ಮೊದಲು ಜೆಡಿಎಸ್​ನಲ್ಲಿದ್ದ ಕೆ.ಎಂ. ಶಿವಲಿಂಗೇಗೌಡ, ಕೆಂಕರೆ ಗ್ರಾಮಕ್ಕೆ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಯೋಜನೆಗೆ ಶ್ರಮಿಸಿದ್ದರು. ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ ಮೇಲೆ ಕೆಂಕೆರೆ ಗ್ರಾಮದವರು, ಚುನಾವಣೆಯಲ್ಲಿ ಶಿವಲಿಂಗೇಗೌಡರಿಗೆ ಮತಹಾಕದೇ ಜೆಡಿಎಸ್ ಬೆಂಬಲಿಸಿದ್ದರಿಂದ, ಕೆರಳಿದ ಶಾಸಕ ಸಿದ್ದರಾಮಯ್ಯನವರ ಬಳಿ ತೆರಳಿ ಯೋಜನೆಯನ್ನು ರದ್ದು ಪಡಿಸಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ಸಿಎಂ ತೆರಳುತ್ತಿದ್ದ ಮಾರ್ಗದಲ್ಲಿ ಪ್ರತಿಭಟನೆ: ಬಳ್ಳಾರಿಯಲ್ಲಿ ಭೂ ಸಂತ್ರಸ್ತ ಹೋರಾಟಗಾರರು ಪೊಲೀಸ್​​ ವಶಕ್ಕೆ

ಹಾಸನ (ಅರಸೀಕೆರೆ): ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗೃಹಮಂಡಳಿ ಅಧ್ಯಕ್ಷ ಮತ್ತು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಗ್ರಾಮಸ್ಥರು ಘೇರಾವ್​ ಹಾಕಿ ಕಳ್ಳ, ಕಳ್ಳ, ಕಳ್ಳ ಎಂದು ನಿಂದಿಸುವ ಮೂಲಕ ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ ಘಟನೆ ನಡೆದಿದೆ.

ಅರಸೀಕೆರೆಯ ಕೆಂಕೆರೆ ಗ್ರಾಮದಲ್ಲಿ ಭಾನುವಾರ ರಾತ್ರಿ ಗಣಪತಿ ನಿಮಜ್ಜನ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಅವರ ವಿರುದ್ಧ ಘೋಷಣೆ ಕೂಗುವ ಮೂಲಕ ಶಾಸಕರನ್ನು ನಿಂದಿಸಿದ್ದು, ವೇದಿಕೆ ಮೇಲಿಂದ ಶಾಸಕ ತೆರಳುವಂತೆ ಅಪಮಾನ ಮಾಡಿದ್ದಾರೆ.

ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಜನರ ಘೋಷಣೆ (ETV Bharat)

ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಬಳಿಕ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದರು.

ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೇಶವಮೂರ್ತಿ, ಗ್ರಾಮಸ್ಥರು ಸಿಎಂ ಭೇಟಿಯಾಗಿ ಹೇಮಾವತಿ ನದಿಯಿಂದ ಕೆಂಕೆರೆ ಗ್ರಾಮದ ಕೆರೆ ತುಂಬಿಸುವ ಯೋಜನೆಗೆ ಅನುಮತಿ ಪಡೆದಿದ್ದರು. 22 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದರು. ಇದರಿಂದ ಕೆರಳಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಯೋಜನೆಯನ್ನು ರದ್ದು ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಶಾಸಕರ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಬಳಿಕ ಆರ್ಕೆಸ್ಟ್ರಾ ಕಾರ್ಯಕ್ರಮ ಅರ್ಧಕ್ಕೆ ನಿಂತಿತು.

ಮೊದಲು ಜೆಡಿಎಸ್​ನಲ್ಲಿದ್ದ ಕೆ.ಎಂ. ಶಿವಲಿಂಗೇಗೌಡ, ಕೆಂಕರೆ ಗ್ರಾಮಕ್ಕೆ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಯೋಜನೆಗೆ ಶ್ರಮಿಸಿದ್ದರು. ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ ಮೇಲೆ ಕೆಂಕೆರೆ ಗ್ರಾಮದವರು, ಚುನಾವಣೆಯಲ್ಲಿ ಶಿವಲಿಂಗೇಗೌಡರಿಗೆ ಮತಹಾಕದೇ ಜೆಡಿಎಸ್ ಬೆಂಬಲಿಸಿದ್ದರಿಂದ, ಕೆರಳಿದ ಶಾಸಕ ಸಿದ್ದರಾಮಯ್ಯನವರ ಬಳಿ ತೆರಳಿ ಯೋಜನೆಯನ್ನು ರದ್ದು ಪಡಿಸಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ಸಿಎಂ ತೆರಳುತ್ತಿದ್ದ ಮಾರ್ಗದಲ್ಲಿ ಪ್ರತಿಭಟನೆ: ಬಳ್ಳಾರಿಯಲ್ಲಿ ಭೂ ಸಂತ್ರಸ್ತ ಹೋರಾಟಗಾರರು ಪೊಲೀಸ್​​ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.