ETV Bharat / state

ಕರ್ನಾಟಕ ಇತರ ರಾಜ್ಯಗಳಿಗೆ ಎಟಿಎಂ ಆಗಿದೆ: ರಾಜ್ಯ ಸರ್ಕಾರದ ವಿರುದ್ಧ ಮೋದಿ ಗಂಭೀರ ಆರೋಪ - PM MODI

author img

By ETV Bharat Karnataka Team

Published : Apr 14, 2024, 8:04 PM IST

ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಮೋದಿ ಗಂಭೀರ ಆರೋಪ
ರಾಜ್ಯ ಸರ್ಕಾರದ ವಿರುದ್ದ ಮೋದಿ ಗಂಭೀರ ಆರೋಪ

ಮೈಸೂರು: ಲೋಕಸಭೆ ಚುನಾವಣೆ ಗೆಲ್ಲಲು ಕರ್ನಾಟಕದಿಂದ 100 ಕೋಟಿ ಹಣ ಸಂಗ್ರಹಿಸಿ ದೇಶದ ಇತರ ಕಡೆ ಸಾಗಣೆ ಮಾಡಿ ಕರ್ನಾಟಕ ಇತರ ರಾಜ್ಯಗಳಿಗೆ ಎಟಿಎಂ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ವಿಜಯಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇಶದ ಇತರ ರಾಜ್ಯಗಳಿಗೆ ಕರ್ನಾಟಕ ಎಟಿಎಂ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲಲು ಕರ್ನಾಟಕದಿಂದ ಸಂಗ್ರಹ ಮಾಡಿರುವ 100 ಕೋಟಿ ಅಕ್ರಮ ಹಣವನ್ನು ದೇಶದ ಇತರ ಕಡೆಗೆ ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರಿದರು.

ಮುಂದುವರೆದು ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಭಾರತ ತಂತ್ರಜ್ಞಾನಕ್ಕಾಗಿ ಇತರ ದೇಶಗಳ ಕಡೆಗೆ ನೋಡಬೇಕಿತ್ತು. ಆದರೆ ನಾವೀಗ ಯಶಸ್ವಿಯಾಗಿ ಚಂದ್ರಯಾನ ಮುಗಿಸಿದ್ದೇವೆ, ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸಿದ್ದೇವೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಉಳಿವಿಗೆ ಆದ್ಯತೆ ನೀಡಿದ್ದೇವೆ. ಕನ್ನಡ ಭಾಷೆ ಎಲ್ಲಾ ಕಡೆ ಪಸರಿಸುವಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಡುತ್ತೇವೆ, ಜೊತೆಗೆ ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಲಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು. ಭಾರತೀಯರ 500 ವರ್ಷಗಳ ಕನಸಾದ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ನೀವು ನೀಡುವ ಒಂದೊಂದು ಮತವು ಮೋದಿ ಶಕ್ತಿಯನ್ನ ಹೆಚ್ಚಿಸಲಿದೆ. ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಮತ್ತಷ್ಟು ಬಲ ಹೆಚ್ಚಿಸಲಿದೆ ಎಂದರು. ರಾಜ್ಯಕ್ಕೆ ಸುತ್ತೂರು ಮಠದ ಪರಂಪರೆ, ರಾಷ್ಟ್ರ ಕವಿ ಕುವೆಂಪು, ಫೀಲ್ಡ್​​ ಮಾರ್ಷಲ್ ಕಾರಿಯಪ್ಪ ಹಾಗೂ ಮೈಸೂರು ರಾಜರ ಕೊಡುಗೆಗಳನ್ನು ಪ್ರಧಾನಿ ಸ್ಮರಿಸಿದರು.

ದೇಶವನ್ನ ದುರ್ಬಲಗೊಳಿಸುವುದೇ ಕಾಂಗ್ರೆಸ್ ಅಜೆಂಡಾ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ತುಕಡೆ ತುಕಡೆ ಗ್ಯಾಂಗ್ ಆಗಿದೆ. ದೇಶವನ್ನು ದುರ್ಬಳಗೊಳಿಸುವುದೇ ಕಾಂಗ್ರೆಸ್ ಅಜೆಂಡಾ ಆಗಿದೆ. ದೇಶ ವಿಭಜನೆ ಕುರಿತು ಮಾತನಾಡಿದವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ವಂದೇ ಮಾತರಂ ವಿರೋಧಿಸಿದವರು ಇದೀಗ ಭಾರತ್ ಮಾತಾಕಿ ಜೈ ಎನ್ನುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್ ಪತನಕ್ಕೆ ನಾಂದಿ ಆಗಲಿದೆ ಎಂದು ಮೋದಿ ಹರಿಹಾಯ್ದರು.

ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದೆ. ಕರ್ನಾಟಕ ರಾಜ್ಯದಲ್ಲಿ ತೃಷ್ಟೀಕರಣ ರಾಜಕೀಯ ನಡೆಯುತ್ತಿದೆ. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನ ಕಾಂಗ್ರೆಸ್ ತಿರಸ್ಕರಿಸಿದೆ. ದೇಶಕ್ಕೆ ಅಪಮಾನ ಮಾಡುವುದರ ಜೊತೆಗೆ ಹಿಂದೂ ಧರ್ಮವನ್ನು ನಾಶ ಮಾಡಲು ಹುನ್ನಾರ ಮಾಡಿದೆ. ದೇಶದಲ್ಲಿ ಮೋದಿ ಇರುವವರೆಗೂ, ಇದು ಸಾಧ್ಯವಿಲ್ಲ. ಇದೇ ಮೋದಿ ಗ್ಯಾರಂಟಿ ಎಂದು ಗುಡುಗಿದರು.

ಇದಕ್ಕೂ ಮೊದಲು ನೆರೆದಿದ್ದ ಜನರಿಗೆ ಕನ್ನಡದಲ್ಲೇ ನಮಸ್ಕಾರ ತಿಳಿಸಿದ ಪ್ರಧಾನಿ ಚಾಮುಂಡೇಶ್ವರಿ, ಭುವನೇಶ್ವರಿ, ಕಾವೇರಿ ತಾಯಿಗೆ ನಮಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಲೋಕಸಭಾ ಚುನಾವಣೆವರೆಗೆ ಮಾತ್ರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ - MLA Basanagouda Patil Yatnal

ಮೈಸೂರು: ಲೋಕಸಭೆ ಚುನಾವಣೆ ಗೆಲ್ಲಲು ಕರ್ನಾಟಕದಿಂದ 100 ಕೋಟಿ ಹಣ ಸಂಗ್ರಹಿಸಿ ದೇಶದ ಇತರ ಕಡೆ ಸಾಗಣೆ ಮಾಡಿ ಕರ್ನಾಟಕ ಇತರ ರಾಜ್ಯಗಳಿಗೆ ಎಟಿಎಂ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ವಿಜಯಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇಶದ ಇತರ ರಾಜ್ಯಗಳಿಗೆ ಕರ್ನಾಟಕ ಎಟಿಎಂ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲಲು ಕರ್ನಾಟಕದಿಂದ ಸಂಗ್ರಹ ಮಾಡಿರುವ 100 ಕೋಟಿ ಅಕ್ರಮ ಹಣವನ್ನು ದೇಶದ ಇತರ ಕಡೆಗೆ ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರಿದರು.

ಮುಂದುವರೆದು ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಭಾರತ ತಂತ್ರಜ್ಞಾನಕ್ಕಾಗಿ ಇತರ ದೇಶಗಳ ಕಡೆಗೆ ನೋಡಬೇಕಿತ್ತು. ಆದರೆ ನಾವೀಗ ಯಶಸ್ವಿಯಾಗಿ ಚಂದ್ರಯಾನ ಮುಗಿಸಿದ್ದೇವೆ, ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸಿದ್ದೇವೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಉಳಿವಿಗೆ ಆದ್ಯತೆ ನೀಡಿದ್ದೇವೆ. ಕನ್ನಡ ಭಾಷೆ ಎಲ್ಲಾ ಕಡೆ ಪಸರಿಸುವಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಡುತ್ತೇವೆ, ಜೊತೆಗೆ ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಲಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು. ಭಾರತೀಯರ 500 ವರ್ಷಗಳ ಕನಸಾದ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ನೀವು ನೀಡುವ ಒಂದೊಂದು ಮತವು ಮೋದಿ ಶಕ್ತಿಯನ್ನ ಹೆಚ್ಚಿಸಲಿದೆ. ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಮತ್ತಷ್ಟು ಬಲ ಹೆಚ್ಚಿಸಲಿದೆ ಎಂದರು. ರಾಜ್ಯಕ್ಕೆ ಸುತ್ತೂರು ಮಠದ ಪರಂಪರೆ, ರಾಷ್ಟ್ರ ಕವಿ ಕುವೆಂಪು, ಫೀಲ್ಡ್​​ ಮಾರ್ಷಲ್ ಕಾರಿಯಪ್ಪ ಹಾಗೂ ಮೈಸೂರು ರಾಜರ ಕೊಡುಗೆಗಳನ್ನು ಪ್ರಧಾನಿ ಸ್ಮರಿಸಿದರು.

ದೇಶವನ್ನ ದುರ್ಬಲಗೊಳಿಸುವುದೇ ಕಾಂಗ್ರೆಸ್ ಅಜೆಂಡಾ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ತುಕಡೆ ತುಕಡೆ ಗ್ಯಾಂಗ್ ಆಗಿದೆ. ದೇಶವನ್ನು ದುರ್ಬಳಗೊಳಿಸುವುದೇ ಕಾಂಗ್ರೆಸ್ ಅಜೆಂಡಾ ಆಗಿದೆ. ದೇಶ ವಿಭಜನೆ ಕುರಿತು ಮಾತನಾಡಿದವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ವಂದೇ ಮಾತರಂ ವಿರೋಧಿಸಿದವರು ಇದೀಗ ಭಾರತ್ ಮಾತಾಕಿ ಜೈ ಎನ್ನುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್ ಪತನಕ್ಕೆ ನಾಂದಿ ಆಗಲಿದೆ ಎಂದು ಮೋದಿ ಹರಿಹಾಯ್ದರು.

ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದೆ. ಕರ್ನಾಟಕ ರಾಜ್ಯದಲ್ಲಿ ತೃಷ್ಟೀಕರಣ ರಾಜಕೀಯ ನಡೆಯುತ್ತಿದೆ. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನ ಕಾಂಗ್ರೆಸ್ ತಿರಸ್ಕರಿಸಿದೆ. ದೇಶಕ್ಕೆ ಅಪಮಾನ ಮಾಡುವುದರ ಜೊತೆಗೆ ಹಿಂದೂ ಧರ್ಮವನ್ನು ನಾಶ ಮಾಡಲು ಹುನ್ನಾರ ಮಾಡಿದೆ. ದೇಶದಲ್ಲಿ ಮೋದಿ ಇರುವವರೆಗೂ, ಇದು ಸಾಧ್ಯವಿಲ್ಲ. ಇದೇ ಮೋದಿ ಗ್ಯಾರಂಟಿ ಎಂದು ಗುಡುಗಿದರು.

ಇದಕ್ಕೂ ಮೊದಲು ನೆರೆದಿದ್ದ ಜನರಿಗೆ ಕನ್ನಡದಲ್ಲೇ ನಮಸ್ಕಾರ ತಿಳಿಸಿದ ಪ್ರಧಾನಿ ಚಾಮುಂಡೇಶ್ವರಿ, ಭುವನೇಶ್ವರಿ, ಕಾವೇರಿ ತಾಯಿಗೆ ನಮಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಲೋಕಸಭಾ ಚುನಾವಣೆವರೆಗೆ ಮಾತ್ರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ - MLA Basanagouda Patil Yatnal

ETV Bharat Logo

Copyright © 2024 Ushodaya Enterprises Pvt. Ltd., All Rights Reserved.