ETV Bharat / state

ಲೈಂಗಿಕ ಕಿರುಕುಳ ಆರೋಪದಲ್ಲಿ ದೂರು ನೀಡಿದರೂ ಕ್ರಮಕ್ಕೆ ಮುಂದಾಗದ ಪೊಲೀಸ್ ಇಲಾಖೆ: ಹೈಕೋರ್ಟ್ ಅಸಮಾಧಾನ - SEXUAL HARRASMENT CASE

author img

By ETV Bharat Karnataka Team

Published : Aug 21, 2024, 2:32 PM IST

ಲೈಂಗಿಕ ಕಿರುಕುಳ ಆರೋಪದಲ್ಲಿ ದೂರು ನೀಡಿದರೂ ಕ್ರಮಕ್ಕೆ ಮುಂದಾಗದ ಪೊಲೀಸ್ ಇಲಾಖೆ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

POLICE DEPARTMENT  SEXUAL HARASSMENT  RAPE CASE  BENGALURU
ಹೈಕೋರ್ಟ್ ಅಸಮಾಧಾನ (ETV Bharat)

ಬೆಂಗಳೂರು : ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಯುವತಿಯೊಬ್ಬರು ಆರು ವರ್ಷಗಳ ಹಿಂದೆ ದೂರು ನೀಡಿದ್ದರೂ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದೆ ಬರುವುದನ್ನು ಎದುರಿಸಲು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿದ್ಧವಾಗಿರುವಂತೆ ಎಚ್ಚರಿಕೆ ನೀಡಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ 2013ರ ಸೆಕ್ಷನ್​ಗಳ ಅನ್ವಯ ಓಲಾದ ಮಾತೃಸಂಸ್ಥೆ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ಆಂತರಿಕ ದೂರು ಸಮಿತಿಗೆ 2018ರ ಸೆಪ್ಟೆಂಬರ್ 30ರಂದು ಸಂತ್ರಸ್ತೆ ದೂರು ನೀಡಿದ್ದರು. ಈ ದೂರಿನ ತನಿಖೆ ನಡೆಸಲು ನಿರ್ದೇಶಿಸುವಂತೆ ಕೋರಿ 22 ವರ್ಷದ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಅಗ್ರಿಗೇಟರ್‌ ನಿಯಮಗಳ ಅನುಪಾಲನೆ ಜವಾಬ್ದಾರಿ ಹೊತ್ತಿರುವ ಸಾರಿಗೆ ಪ್ರಾಧಿಕಾರದ ಅಧಿಕಾರಿಯ ಮಾಹಿತಿಯನ್ನು ಒಳಗೊಂಡು, ಪ್ರಕರಣ ಆರಂಭವಾದಾಗಿನಿಂದ ಇಲ್ಲಿಯವರೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತ ಪ್ರಮಾಣಪತ್ರ ಸಲ್ಲಿಸುವಂತೆ ಕಳೆದ ವಿಚಾರಣೆಯಲ್ಲಿ ಸರ್ಕಾರಕ್ಕೆ ನ್ಯಾಯಾಲಯವು ಆದೇಶಿಸಿತ್ತು. ಆದರೆ, ಈವರೆಗೂ ವಿಚಾರಣೆಯ ಸಂದರ್ಭದಲ್ಲಿ ಪ್ರಕರಣ‌ ಸಂಬಂಧ ಯಾವುದೇ ಮಾಹಿತಿ ಇಲ್ಲವಾದುದರಿಂದ ಸರ್ಕಾರದ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು.

ಯುವತಿಯ ಮೇಲೆ ಓಲಾ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯನ್ನು ನಿಯಮದ ಪ್ರಕಾರ ಓಲಾ ಸಂಸ್ಥೆಯು ಸರ್ಕಾರದ ಗಮನಕ್ಕೆ ತಂದಿಲ್ಲ ಎಂದು ನೀವು ಸುಮ್ಮನೇ ಕುಳಿತಿದ್ದೀರಾ?, ನೀವು ಏನು ಮಾಡಿದ್ದೀರಿ?, ಈ ಪ್ರಶ್ನೆ ಕೇಳುತ್ತಿದ್ದೇವೆ ಎಂದರೆ ನಾವು ಉತ್ತಮ ಉತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದರ್ಥ. ಇದು ಕಣ್ಣೊರೆಸುವ ತಂತ್ರ ಬೇಡ ಎಂದು ಪೀಠ ಹೇಳಿತು. ಈ ವೇಳೆ ಸರ್ಕಾರದ ಪರ ವಕೀಲರು ಅಗ್ರಿಗೇಟರ್ ನಿಯಮಗಳು ಬಂದ ಮೇಲೆ ಏನೆಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದೇವೆ. ಈ ಸುರಕ್ಷತಾ ಕ್ರಮಕೈಗೊಂಡಿದ್ದೇವೆ ಎಂಬುದನ್ನು ಪೀಠಕ್ಕೆ ತಿಳಿಸುತ್ತಿದ್ದೇವೆ ಎಂದು ವಿವರಿಸಿದರು.

ಇದರಿಂದ ಮತ್ತೆ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಓಲಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡುವುದಕ್ಕೆ ಮುನ್ನ ಏನಾಗಿದೆ ಎಂಬ ಮಾಹಿತಿಯೇ ಇಲ್ಲ. ಆಂತರಿಕವಾಗಿ ಏನು ಮಾಡಿದ್ದೀರಿ?, ನಿಮ್ಮ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆಯೇ?, ನೀವೇನು ಮಾಡಿದ್ದೀರಿ ಎಂಬುದು ತಿಳಿಯುವುದಕ್ಕಾಗಿ ನಿಮಗೆ ಅಫಿಡವಿಟ್‌ ಸಲ್ಲಿಸಿ ಎಂದು ಸೂಚಿಸಲಾಗಿತ್ತು.

ನೀವು ಯಾವ ಕ್ರಮಕೈಗೊಂಡಿದ್ದೀರಿ ಎಂಬುದರಲ್ಲಿ ನಮಗೆ ಆಸಕ್ತಿ ಇಲ್ಲ. ಆಂತರಿಕವಾಗಿ ಯಾರನ್ನು ಹೊಣೆಗಾರರನ್ನಾಗಿ ಮಾಡಿದ್ದೀರಿ ಎಂಬುದನ್ನು ತಿಳಿಯುವುದು ನಮ್ಮ ಉದ್ದೇಶವಾಗಿತ್ತು. ನಿಮ್ಮ ಪ್ರಮಾಣಪತ್ರ ನೋಡಿ ಆತ್ಮಸಾಕ್ಷಿಯನ್ನು ಸಮಾಧಾನಪಡಿಸಿಕೊಳ್ಳಿ. ಅಧಿಕೃತ ಮನವಿ (ಮೆಮೊರಂಡಂ) ಬರುವವರೆಗೆ ನೀವು ಕಾಯತ್ತಿದ್ದೀರಾ. ಹಾಲಿ ಅರ್ಜಿಯು ಅರ್ಧ ದಶಕದಿಂದ ಬಾಕಿ ಇದೆ ಎಂದು ಪೀಠ ನುಡಿಯಿತು.

ಆಗ ಸರ್ಕಾರದ ವಕೀಲರು, ಸ್ವಲ್ಪ ಸಮಯ ಕೊಡಬೇಕು ಎಂದು ಮನವಿ ಮಾಡಿದರು. ಈ ಕೋರಿಕೆಯನ್ನು ಸಾರಾಸಗಟವಾಗಿ ನಿರಾಕರಿಸಿದ ಪೀಠವು, “ನಾವು ಮತ್ತೆ ಸಮಯ ನೀಡುವುದಿಲ್ಲ. ಈಗಾಗಲೇ ನಿಮಗೆ ನಾಲ್ಕು ವಾರ ಸಮಯ ನೀಡಿದ್ದೇವೆ. ಅಧಿಕಾರಿಗಳ ಹೆಸರು ಕೊಡಿ” ಎಂದು ಆದೇಶಿಸಿತು. ಈ ಪ್ರಕರಣದಲ್ಲಿ ನೀವು ಆಕ್ಷೇಪಣೆ ಸಲ್ಲಿಸಿದ್ದೀರಾ?, ಅದರ ಅಗತ್ಯವಿಲ್ಲ ಬಿಡಿ. ನಿಮ್ಮ ಅಧಿಕಾರಿಗಳಿಗೆ ನ್ಯಾಯಾಲಯಕ್ಕೆ ಯಾವುದೇ ಸಹಾಯ ಮಾಡಬೇಡಿ ಎಂದು ಹೇಳಿ. ಆಮೇಲೆ ಏನಾಗುತ್ತದೆ ಎಂಬುದಕ್ಕೆ ಅಧಿಕಾರಿಗಳಿಗೆ ಸಿದ್ಧವಾಗಿರಲು ಹೇಳಿ ಎಂದು ಖಡಕ್‌ ಎಚ್ಚರಿಕೆ ನೀಡಿ ಆದೇಶ ಕಾಯ್ದಿರಿಸಿತು.

ಓದಿ: ಸಿಎಸ್‌ಬಿ ರಚನೆಗೆ ಕೋರಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - High Court

ಬೆಂಗಳೂರು : ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಯುವತಿಯೊಬ್ಬರು ಆರು ವರ್ಷಗಳ ಹಿಂದೆ ದೂರು ನೀಡಿದ್ದರೂ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದೆ ಬರುವುದನ್ನು ಎದುರಿಸಲು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿದ್ಧವಾಗಿರುವಂತೆ ಎಚ್ಚರಿಕೆ ನೀಡಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ 2013ರ ಸೆಕ್ಷನ್​ಗಳ ಅನ್ವಯ ಓಲಾದ ಮಾತೃಸಂಸ್ಥೆ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ಆಂತರಿಕ ದೂರು ಸಮಿತಿಗೆ 2018ರ ಸೆಪ್ಟೆಂಬರ್ 30ರಂದು ಸಂತ್ರಸ್ತೆ ದೂರು ನೀಡಿದ್ದರು. ಈ ದೂರಿನ ತನಿಖೆ ನಡೆಸಲು ನಿರ್ದೇಶಿಸುವಂತೆ ಕೋರಿ 22 ವರ್ಷದ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಅಗ್ರಿಗೇಟರ್‌ ನಿಯಮಗಳ ಅನುಪಾಲನೆ ಜವಾಬ್ದಾರಿ ಹೊತ್ತಿರುವ ಸಾರಿಗೆ ಪ್ರಾಧಿಕಾರದ ಅಧಿಕಾರಿಯ ಮಾಹಿತಿಯನ್ನು ಒಳಗೊಂಡು, ಪ್ರಕರಣ ಆರಂಭವಾದಾಗಿನಿಂದ ಇಲ್ಲಿಯವರೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತ ಪ್ರಮಾಣಪತ್ರ ಸಲ್ಲಿಸುವಂತೆ ಕಳೆದ ವಿಚಾರಣೆಯಲ್ಲಿ ಸರ್ಕಾರಕ್ಕೆ ನ್ಯಾಯಾಲಯವು ಆದೇಶಿಸಿತ್ತು. ಆದರೆ, ಈವರೆಗೂ ವಿಚಾರಣೆಯ ಸಂದರ್ಭದಲ್ಲಿ ಪ್ರಕರಣ‌ ಸಂಬಂಧ ಯಾವುದೇ ಮಾಹಿತಿ ಇಲ್ಲವಾದುದರಿಂದ ಸರ್ಕಾರದ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು.

ಯುವತಿಯ ಮೇಲೆ ಓಲಾ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯನ್ನು ನಿಯಮದ ಪ್ರಕಾರ ಓಲಾ ಸಂಸ್ಥೆಯು ಸರ್ಕಾರದ ಗಮನಕ್ಕೆ ತಂದಿಲ್ಲ ಎಂದು ನೀವು ಸುಮ್ಮನೇ ಕುಳಿತಿದ್ದೀರಾ?, ನೀವು ಏನು ಮಾಡಿದ್ದೀರಿ?, ಈ ಪ್ರಶ್ನೆ ಕೇಳುತ್ತಿದ್ದೇವೆ ಎಂದರೆ ನಾವು ಉತ್ತಮ ಉತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದರ್ಥ. ಇದು ಕಣ್ಣೊರೆಸುವ ತಂತ್ರ ಬೇಡ ಎಂದು ಪೀಠ ಹೇಳಿತು. ಈ ವೇಳೆ ಸರ್ಕಾರದ ಪರ ವಕೀಲರು ಅಗ್ರಿಗೇಟರ್ ನಿಯಮಗಳು ಬಂದ ಮೇಲೆ ಏನೆಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದೇವೆ. ಈ ಸುರಕ್ಷತಾ ಕ್ರಮಕೈಗೊಂಡಿದ್ದೇವೆ ಎಂಬುದನ್ನು ಪೀಠಕ್ಕೆ ತಿಳಿಸುತ್ತಿದ್ದೇವೆ ಎಂದು ವಿವರಿಸಿದರು.

ಇದರಿಂದ ಮತ್ತೆ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಓಲಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡುವುದಕ್ಕೆ ಮುನ್ನ ಏನಾಗಿದೆ ಎಂಬ ಮಾಹಿತಿಯೇ ಇಲ್ಲ. ಆಂತರಿಕವಾಗಿ ಏನು ಮಾಡಿದ್ದೀರಿ?, ನಿಮ್ಮ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆಯೇ?, ನೀವೇನು ಮಾಡಿದ್ದೀರಿ ಎಂಬುದು ತಿಳಿಯುವುದಕ್ಕಾಗಿ ನಿಮಗೆ ಅಫಿಡವಿಟ್‌ ಸಲ್ಲಿಸಿ ಎಂದು ಸೂಚಿಸಲಾಗಿತ್ತು.

ನೀವು ಯಾವ ಕ್ರಮಕೈಗೊಂಡಿದ್ದೀರಿ ಎಂಬುದರಲ್ಲಿ ನಮಗೆ ಆಸಕ್ತಿ ಇಲ್ಲ. ಆಂತರಿಕವಾಗಿ ಯಾರನ್ನು ಹೊಣೆಗಾರರನ್ನಾಗಿ ಮಾಡಿದ್ದೀರಿ ಎಂಬುದನ್ನು ತಿಳಿಯುವುದು ನಮ್ಮ ಉದ್ದೇಶವಾಗಿತ್ತು. ನಿಮ್ಮ ಪ್ರಮಾಣಪತ್ರ ನೋಡಿ ಆತ್ಮಸಾಕ್ಷಿಯನ್ನು ಸಮಾಧಾನಪಡಿಸಿಕೊಳ್ಳಿ. ಅಧಿಕೃತ ಮನವಿ (ಮೆಮೊರಂಡಂ) ಬರುವವರೆಗೆ ನೀವು ಕಾಯತ್ತಿದ್ದೀರಾ. ಹಾಲಿ ಅರ್ಜಿಯು ಅರ್ಧ ದಶಕದಿಂದ ಬಾಕಿ ಇದೆ ಎಂದು ಪೀಠ ನುಡಿಯಿತು.

ಆಗ ಸರ್ಕಾರದ ವಕೀಲರು, ಸ್ವಲ್ಪ ಸಮಯ ಕೊಡಬೇಕು ಎಂದು ಮನವಿ ಮಾಡಿದರು. ಈ ಕೋರಿಕೆಯನ್ನು ಸಾರಾಸಗಟವಾಗಿ ನಿರಾಕರಿಸಿದ ಪೀಠವು, “ನಾವು ಮತ್ತೆ ಸಮಯ ನೀಡುವುದಿಲ್ಲ. ಈಗಾಗಲೇ ನಿಮಗೆ ನಾಲ್ಕು ವಾರ ಸಮಯ ನೀಡಿದ್ದೇವೆ. ಅಧಿಕಾರಿಗಳ ಹೆಸರು ಕೊಡಿ” ಎಂದು ಆದೇಶಿಸಿತು. ಈ ಪ್ರಕರಣದಲ್ಲಿ ನೀವು ಆಕ್ಷೇಪಣೆ ಸಲ್ಲಿಸಿದ್ದೀರಾ?, ಅದರ ಅಗತ್ಯವಿಲ್ಲ ಬಿಡಿ. ನಿಮ್ಮ ಅಧಿಕಾರಿಗಳಿಗೆ ನ್ಯಾಯಾಲಯಕ್ಕೆ ಯಾವುದೇ ಸಹಾಯ ಮಾಡಬೇಡಿ ಎಂದು ಹೇಳಿ. ಆಮೇಲೆ ಏನಾಗುತ್ತದೆ ಎಂಬುದಕ್ಕೆ ಅಧಿಕಾರಿಗಳಿಗೆ ಸಿದ್ಧವಾಗಿರಲು ಹೇಳಿ ಎಂದು ಖಡಕ್‌ ಎಚ್ಚರಿಕೆ ನೀಡಿ ಆದೇಶ ಕಾಯ್ದಿರಿಸಿತು.

ಓದಿ: ಸಿಎಸ್‌ಬಿ ರಚನೆಗೆ ಕೋರಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.