ETV Bharat / state

ಅಥಣಿಯಲ್ಲಿ ಅಪಹರಣ ಯತ್ನ: ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಬಾಲಕರನ್ನು ರಕ್ಷಿಸಿದ ಪೊಲೀಸರು

ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು, ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ.

Etv Bharat
Etv Bharat (Etv Bharat)
author img

By ETV Bharat Karnataka Team

Published : 4 hours ago

ಚಿಕ್ಕೋಡಿ: ಮನೆಗೆ ನುಗ್ಗಿ ಮಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಬಂಧಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ ರವಿಕಿರಣ ಕಮ್ಲಾಕರ್, ಬಿಹಾರದ ಮೂಲದ ಸದ್ಯ ಮುಂಬೈ ನಿವಾಸಿ ಶಾರುಖ್ ಶೇಖ್ ಮತ್ತು ಕೊಲ್ಹಾಪುರ ಜಿಲ್ಲೆಯ ಸಂಬಾ ಕಾಂಬಳೆ ಬಂಧಿತ ಆರೋಪಿಗಳು.

ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟ್ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ನುಗ್ಗಿ ಅವರ 4 ಮತ್ತು 3 ವರ್ಷದ ಮಕ್ಕಳನ್ನು ಅಪಹರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ವಿಷಯ ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಅಪಹರಣಕಾರರನ್ನು ಪೊಲೀಸರು ತಡೆಗಟ್ಟಿದ್ದರು. ಈ ವೇಳೆ, ಪೊಲೀಸರು ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗೆ ಓರ್ವ ರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಬಂಧಿತ ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಸಂಬಾ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದ್ದ, ಆತನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಸಿಬ್ಬಂದಿ
ಗಾಯಗೊಂಡ ಸಿಬ್ಬಂದಿ (ETV Bharat)

ಈ ಕಾರ್ಯಾಚರಣೆಯಲ್ಲಿ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಕೂಡ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಾರ್ವಜನಿಕರಿಂದ ಪ್ರಶಂಸೆ: ಅಥಣಿ ಪೊಲೀಸರ ತುರ್ತು ಕಾರ್ಯಾಚರಣೆಯಿಂದ ಇಬ್ಬರು ಮಕ್ಕಳು ಸುರಕ್ಷಿತವಾಗಿ ಮನೆ ಸೇರಿವೆ. ಪೊಲೀಸರ ಸಕಾಲಿಕ ಕರ್ತವ್ಯಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಿಟ್ಟಿಸಿರು ಬಿಟ್ಟ ಪೋಷಕರು: ಬಾಲಕರನ್ನು ಪೊಲೀಸರು ತಮ್ಮ ಮಡಿಗೆ ಒಪ್ಪಿಸಿದ್ದರಿಂದ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಗಾಯಗೊಂಡ ಸಿಬ್ಬಂದಿ
ಗಾಯಗೊಂಡ ಸಿಬ್ಬಂದಿ (ETV Bharat)

ಇದನ್ನೂ ಓದಿ: ಅಥಣಿ: ಕಾರಿನಲ್ಲಿ ಬಂದು ಇಬ್ಬರು ಮಕ್ಕಳನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು- ಸಿಸಿಟಿವಿಯಲ್ಲಿ ಕೃತ್ಯ ಸೆರೆ

"ನಮ್ಮ ಮನೆಯಲ್ಲಿ ಇವತ್ತು ಯಾರು ಇರಲಿಲ್ಲ, ನಮ್ಮ ತಾಯಿಯವರು ಒಬ್ಬರೇ ಇದ್ದರು, ನಾನು ಮತ್ತು ನನ್ನ ಹೆಂಡತಿ ಕೆಲಸದ ಮೇಲೆ ಹೊರಗಡೆ ಬಂದಿದ್ದೀವಿ. ನಾನು ಕೂಡ ಇವತ್ತು ಕೆಲಸ ಅಂಗವಾಗಿ ಬೆಳಗಾವಿಯಲ್ಲಿರೋದರಿಂದ ಈ ಘಟನೆ ಸಂಭವಿಸಿದೆ. ಯಾರೋ ಗೊತ್ತಿಲ್ಲ ನಮ್ಮ ಮನೆಗೆ ನುಗ್ಗಿ ನಮ್ಮ ಮಕ್ಕಳನ್ನು ಅಪಹರಿಸಿದ್ದಾರೆ, ಸದ್ಯಕ್ಕೆ ನಮಗೆ ಭಯ ಆಗುತ್ತಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ" ಎಂದು ವಿಜಯ್ ದೇಸಾಯಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಶಿವಮೊಗ್ಗ: ತಪಾಸಣೆಗೆ ತಡೆದ ಪೊಲೀಸ್ ಸಿಬ್ಬಂದಿಯನ್ನೇ ಹೊತ್ತೊಯ್ದ ಕಾರು-ವಿಡಿಯೋ

ಚಿಕ್ಕೋಡಿ: ಮನೆಗೆ ನುಗ್ಗಿ ಮಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಬಂಧಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ ರವಿಕಿರಣ ಕಮ್ಲಾಕರ್, ಬಿಹಾರದ ಮೂಲದ ಸದ್ಯ ಮುಂಬೈ ನಿವಾಸಿ ಶಾರುಖ್ ಶೇಖ್ ಮತ್ತು ಕೊಲ್ಹಾಪುರ ಜಿಲ್ಲೆಯ ಸಂಬಾ ಕಾಂಬಳೆ ಬಂಧಿತ ಆರೋಪಿಗಳು.

ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟ್ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ನುಗ್ಗಿ ಅವರ 4 ಮತ್ತು 3 ವರ್ಷದ ಮಕ್ಕಳನ್ನು ಅಪಹರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ವಿಷಯ ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಅಪಹರಣಕಾರರನ್ನು ಪೊಲೀಸರು ತಡೆಗಟ್ಟಿದ್ದರು. ಈ ವೇಳೆ, ಪೊಲೀಸರು ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗೆ ಓರ್ವ ರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಬಂಧಿತ ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಸಂಬಾ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದ್ದ, ಆತನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಸಿಬ್ಬಂದಿ
ಗಾಯಗೊಂಡ ಸಿಬ್ಬಂದಿ (ETV Bharat)

ಈ ಕಾರ್ಯಾಚರಣೆಯಲ್ಲಿ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಕೂಡ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಾರ್ವಜನಿಕರಿಂದ ಪ್ರಶಂಸೆ: ಅಥಣಿ ಪೊಲೀಸರ ತುರ್ತು ಕಾರ್ಯಾಚರಣೆಯಿಂದ ಇಬ್ಬರು ಮಕ್ಕಳು ಸುರಕ್ಷಿತವಾಗಿ ಮನೆ ಸೇರಿವೆ. ಪೊಲೀಸರ ಸಕಾಲಿಕ ಕರ್ತವ್ಯಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಿಟ್ಟಿಸಿರು ಬಿಟ್ಟ ಪೋಷಕರು: ಬಾಲಕರನ್ನು ಪೊಲೀಸರು ತಮ್ಮ ಮಡಿಗೆ ಒಪ್ಪಿಸಿದ್ದರಿಂದ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಗಾಯಗೊಂಡ ಸಿಬ್ಬಂದಿ
ಗಾಯಗೊಂಡ ಸಿಬ್ಬಂದಿ (ETV Bharat)

ಇದನ್ನೂ ಓದಿ: ಅಥಣಿ: ಕಾರಿನಲ್ಲಿ ಬಂದು ಇಬ್ಬರು ಮಕ್ಕಳನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು- ಸಿಸಿಟಿವಿಯಲ್ಲಿ ಕೃತ್ಯ ಸೆರೆ

"ನಮ್ಮ ಮನೆಯಲ್ಲಿ ಇವತ್ತು ಯಾರು ಇರಲಿಲ್ಲ, ನಮ್ಮ ತಾಯಿಯವರು ಒಬ್ಬರೇ ಇದ್ದರು, ನಾನು ಮತ್ತು ನನ್ನ ಹೆಂಡತಿ ಕೆಲಸದ ಮೇಲೆ ಹೊರಗಡೆ ಬಂದಿದ್ದೀವಿ. ನಾನು ಕೂಡ ಇವತ್ತು ಕೆಲಸ ಅಂಗವಾಗಿ ಬೆಳಗಾವಿಯಲ್ಲಿರೋದರಿಂದ ಈ ಘಟನೆ ಸಂಭವಿಸಿದೆ. ಯಾರೋ ಗೊತ್ತಿಲ್ಲ ನಮ್ಮ ಮನೆಗೆ ನುಗ್ಗಿ ನಮ್ಮ ಮಕ್ಕಳನ್ನು ಅಪಹರಿಸಿದ್ದಾರೆ, ಸದ್ಯಕ್ಕೆ ನಮಗೆ ಭಯ ಆಗುತ್ತಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ" ಎಂದು ವಿಜಯ್ ದೇಸಾಯಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಶಿವಮೊಗ್ಗ: ತಪಾಸಣೆಗೆ ತಡೆದ ಪೊಲೀಸ್ ಸಿಬ್ಬಂದಿಯನ್ನೇ ಹೊತ್ತೊಯ್ದ ಕಾರು-ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.