ETV Bharat / state

ಮಾಲ್ಡೀವ್ಸ್​​ ಅಧ್ಯಕ್ಷರ ಭೇಟಿ 2 ದೇಶಗಳ ಜನರ ನಡುವಣ ಸಂಬಂಧ ಬಲಪಡಿಸಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಭಾರತದಲ್ಲಿ 5 ದಿನ ಪ್ರವಾಸದಲ್ಲಿ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದು ರಾಜ್ಯಪಾಲರು, ಮುಖ್ಯಮಂತ್ರಿಗಳು ಪ್ರೀತಿಯಿಂದ ಬರ ಮಾಡಿಕೊಂಡಿದ್ದಾರೆ.

author img

By ETV Bharat Karnataka Team

Published : 3 hours ago

ಕರ್ನಾಟಕದ ರಾಜಭವನದಲ್ಲಿ ಮಾಲ್ಡೀವ್ಸ್​ ಅಧ್ಯಕ್ಷ, ಪ್ರಥಮ ಮಹಿಳೆ ಸಾಜಿದಾ , ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್.
ಕರ್ನಾಟಕದ ರಾಜಭವನದಲ್ಲಿ ಮಾಲ್ಡೀವ್ಸ್​ ಅಧ್ಯಕ್ಷ, ಪ್ರಥಮ ಮಹಿಳೆ ಸಾಜಿದಾ , ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್. (ETV Bharat)

ಬೆಂಗಳೂರು: ಭಾರತದ ಪ್ರವಾಸದಲ್ಲಿರುವ ಗೌರವಾನ್ವಿತ ಮಾಲ್ಡೀವ್ಸ್​ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್​ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಕರ್ನಾಟಕದ ರಾಜಭವನಕ್ಕೆ ಸೌಹಾರ್ದಯುತ ಭೇಟಿ ನೀಡಿದರು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊಹಮ್ಮದ್ ಮುಯಿಝು ಮತ್ತು ಸಾಜಿದಾ ಮೊಹಮ್ಮದ್ ಅವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಅತಿಥಿಗಳಿಗೆ ಸ್ವಾಗತ ಕೋರಿ ಮಾತನಾಡಿದ ರಾಜ್ಯಪಾಲರು, "ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯವರೊಂದಿಗಿನ ಮಾಲ್ಡೀವ್ಸ್​​ ಅಧ್ಯಕ್ಷರ ಉತ್ತೇಜಕ ಸಭೆಗಳು ಮತ್ತು ಸೌಜನ್ಯದ ಭೇಟಿ ದ್ವಿಪಕ್ಷೀಯ ಸಂಬಂಧಗಳ ಕುರಿತು ನಮ್ಮ ಎರಡು ದೇಶಗಳ ಜನರ ನಡುವಿನ ಸೌಹಾರ್ದ ಸಂಬಂಧವನ್ನು ಮತ್ತಷ್ಟು ಬಲಪಡಿಸಿದೆ".

ಮಾಲ್ಡೀವ್ಸ್​ ಅಧ್ಯಕ್ಷರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ.
ಮಾಲ್ಡೀವ್ಸ್​ ಅಧ್ಯಕ್ಷರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ. (ETV Bharat)

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಪಾಲುದಾರ: "ಮಾಲ್ಡೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಪಾಲುದಾರ ಮತ್ತು ನಿಕಟ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿದೆ. ಭಾರತವು ಶತಮಾನಗಳ-ಹಳೆಯ ಸಾಂಸ್ಕೃತಿಕ, ಆರ್ಥಿಕ, ವ್ಯಾಪಾರ ಮತ್ತು ಜನರ ಸಂಬಂಧಗಳನ್ನು ಹೊಂದಿದೆ. ಭಾರತದ 'ನೆರೆಹೊರೆ ಮೊದಲು' ಮತ್ತು 'ಸಾಗರ್ ವಿಷನ್' ನೀತಿಯಲ್ಲಿ ಮಾಲ್ಡೀವ್ಸ್​​ ಪ್ರಮುಖ ಸ್ಥಾನವನ್ನು ಹೊಂದಿದೆ. ಕರೆನ್ಸಿ ಸ್ವಾಪ್​ ಸೌಲಭ್ಯದ ಸಹಿಯು ಮಾಲ್ಡೀವ್ಸ್​​ನೊಂದಿಗಿನ ನಮ್ಮ ಸ್ನೇಹ ಸಂಬಂಧಗಳಿಗೆ ಸರ್ಕಾರದ ಬಲವಾದ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಇತ್ತೀಚಿನ ದಿನಗಳಲ್ಲಿ, ವಾಯು ಸಂಪರ್ಕ ಮತ್ತು ವೀಸಾ ಸೌಲಭ್ಯಗಳ ವಿಸ್ತರಣೆಯು ನಮ್ಮನ್ನು ಪರಸ್ಪರ ಹತ್ತಿರಕ್ಕೆ ತಂದಿದೆ. ರುಪೇ ಕಾರ್ಡ್​ ಅನ್ನು ಮಾಲ್ಡೀವ್ಸ್​​ನಲ್ಲಿ ಪ್ರಾರಂಭಿಸಲಾಗಿದೆ ಎಂಬುದನ್ನು ತಿಳಿದು ಸಂತೋಷವಾಗಿದೆ".

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ. (ETV Bharat)

ಬೆಂಗಳೂರಿನಲ್ಲಿ ಮಾಲ್ಡೀವ್ಸ್​ ದೂತಾವಾಸ - ಚರ್ಚೆ: "ಮಾಲ್ಡೀವ್ಸ್ ಅಡ್ಡುವಿನಲ್ಲಿ ಭಾರತೀಯ ದೂತಾವಾಸ ಮತ್ತು ಬೆಂಗಳೂರಿನಲ್ಲಿ ಮಾಲ್ಡೀವ್ಸ್​ ದೂತಾವಾಸವನ್ನು ತೆರೆಯುವ ಬಗ್ಗೆ ಚರ್ಚೆಗಳು ನಡೆದಿವೆ. ಈ ವಿಷಯ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ. ಇದು ಭಾರತೀಯರಿಗೆ ಮಾಲ್ಡೀವ್ಸ್​​ಗೆ ಭೇಟಿ ನೀಡಲು ಮತ್ತು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ನಿಮ್ಮ ಭೇಟಿಯ ಸಮಯದಲ್ಲಿ ಪ್ರಾಜೆಕ್ಟ್​​ಗಳ ಉದ್ಘಾಟನೆ ಮತ್ತು ಹಲವಾರು ತಿಳಿವಳಿಕಾ ಒಪ್ಪಂದಗಳು, ಶ್ರೇಷ್ಠತೆ, ನಮ್ಮ ಬಲವಾದ ಅಭಿವೃದ್ಧಿ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ - ಇದು ನಮ್ಮ ಆಧಾರವಾಗಿದೆ. ಇದು ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಆಧಾರವಾಗಿದೆ. ಘನತೆವೆತ್ತ ಅಧ್ಯಕ್ಷರು, ಅಭಿವೃದ್ಧಿ, ಸಹಕಾರ, ವ್ಯಾಪಾರ ಮತ್ತು ವಾಣಿಜ್ಯ, ಭಾರತ-ಮಾಲ್ಡೀವ್ಸ್​​ ಸಂಬಂಧಗಳು ಮತ್ತಷ್ಟು ಶಕ್ತಿ ಒದಗಿಸಲಿದೆ" ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಮುಂದುವರೆದ ರಾಜ್ಯಪಾಲರು, "ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಒಂದು ವ್ಯಾಪಾರ ನಿಯೋಗ ಬಂದಿರುವುದು ಸಂತೋಷಕರ. ಬೆಂಗಳೂರು ಭಾರತದ ಐಟಿ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ವ್ಯಾಪಾರ ಸಮುದಾಯದೊಂದಿಗಿನ ನಿಮ್ಮ ಸಂವಹನವು ನಮ್ಮ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುತ್ತದೆ ಎಂಬ ನಂಬಿಕೆ ಇದೆ. ಭಾರತಕ್ಕೆ ಭೇಟಿ ನೀಡಿದ್ದಕ್ಕಾಗಿ ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ನಿಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಾಲ್ಡೀವ್ಸ್​​ ಜನರ ಪ್ರಗತಿ ಮತ್ತು ಸಮೃದ್ಧಿಗೆ ನಾವು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ" ಎಂದು ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , "ಮಾಲ್ಡೀವ್ಸ್​​ ಅಧ್ಯಕ್ಷರು ಮತ್ತು ಪ್ರಥಮ ಮಹಿಳೆ ನೇತೃತ್ವದ ಮಾಲ್ಡೀವ್ಸ್​​​ ನಿಯೋಗ ಬೆಂಗಳೂರಿಗೆ ಭೇಟಿ ನೀಡಿರುವುದು ಹಾಗೂ ಸಾಜಿದಾ ಅವರು ಬೆಂಗಳೂರಿನಲ್ಲಿ ವಿದ್ಯಾರ್ಥಿಯಾಗಿದ್ದರು ಎಂಬುದು ತಿಳಿದು ಸಂತೋಷವಾಗಿದೆ. ಮಾಲ್ಡೀವ್ಸ್ ಸರ್ಕಾರವು ಬೆಂಗಳೂರಿನ ಪ್ರಮುಖ ಐಟಿ ಉದ್ಯಮದೊಂದಿಗೆ ಸಹಭಾಗಿತ್ವವನ್ನು ಹೊಂದಲು ಆಸಕ್ತಿ ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತೇವೆ ಮತ್ತು ಸ್ಟಾರ್ಟ್-ಅಪ್‍ಗಳು, ಕೃತಕ ಬುದ್ಧಿಮತ್ತೆ, ಜಾಗತಿಕ ಸಾಮಥ್ರ್ಯ ನಿರ್ಮಾಣ ಕೇಂದ್ರಗಳು ಮತ್ತು ಇನ್ನೋವೇಶನ್ ಹಬ್‍ಗಾಗಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇವೆ".

"ಮಾಲ್ಡೀವ್ಸ್​​ನಲ್ಲಿ ಐಟಿ ಉದ್ಯಮದ ಬೆಳವಣಿಗೆಯನ್ನು ಸುಲಭಗೊಳಿಸಲು ಹರ್ಷಿಸುತ್ತೇವೆ. ಮಾಲ್ಡೀವ್ಸ್​ಗೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ತಲುಪಲು ನಮ್ಮ ಕರಕುಶಲ ಮತ್ತು ಕೈಮಗ್ಗಗಳ ಮಾರುಕಟ್ಟೆಯನ್ನು ಉತ್ತೇಜಿಸಲು ಮಾಲ್ಡೀವ್ಸ್‍ನೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಲು ಇಚ್ಚಿಸುತ್ತೇವೆ. ಕರ್ನಾಟಕವು ತನ್ನ ಪ್ರಕೃತಿಯ ವೈವಿಧ್ಯತೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿದೆ. ನಮ್ಮ ಕವಿ ಕುವೆಂಪು ಅವರು ಕರ್ನಾಟಕವನ್ನು 'ಸರ್ವ ಜನಾಂಗದ ಶಾಂತಿಯ ತೋಟ' ಎಂದು ಕರೆದಿದ್ದಾರೆ".

"ನಮ್ಮ ಪ್ರವಾಸೋದ್ಯಮ ಅಡಿಬರಹ - "ಒಂದು ರಾಜ್ಯ, ಹಲವು ಪ್ರಪಂಚಗಳು". ಸುಮಾರು 300 ಕಿ.ಮೀ. ಕರಾವಳಿಯ ಹೊರತಾಗಿ, ನಾವು ವಿಶ್ವದ ಎರಡನೇ ಅತಿ ದೊಡ್ಡ ಶೋಲಾ ಅರಣ್ಯವನ್ನು ಹೊಂದಿರುವ ಹುಲಿ ಮತ್ತು ಪಕ್ಷಿಧಾಮಗಳನ್ನು ಹೊಂದಿದ್ದೇವೆ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲು ಮಾಲ್ಡೀವ್ಸ್​​ನೊಂದಿಗೆ ಪಾಲುದಾರಿಕೆಯನ್ನು ಎದರು ನೋಡುತ್ತಿದ್ದೇವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಪ್ರಧಾನಿಗೆ ಧನ್ಯವಾದ ಸಲ್ಲಿಸಿದ ಮೊಹಮ್ಮದ್​ ಮುಯಿಝು: ನಂತರ ಮಾಲ್ಡೀವ್ಸ್​​​​ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮಾತನಾಡಿ, "ಭಾರತಕ್ಕೆ ಭೇಟಿ ನೀಡಲು ಆಹ್ವಾನ ನೀಡಿದಂತಹ ರಾಷ್ಟ್ರಪತಿ, ಪ್ರಧಾನಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ, ಬೆಂಗಳೂರಿನಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಆತಿಥ್ಯ ನೀಡಿದ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೂ ಧನ್ಯಾವಾದಗಳನ್ನು ಸಲ್ಲಿಸುತ್ತೇನೆ. ಭಾರತದಲ್ಲಿ ಬಹಳ ಹೆಸರು ಮಾಡಿರುವ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ಬೆಂಗಳೂರಿಗೆ ಭೇಟಿ ನೀಡಿರುವುದು ಬಹಳ ಖುಷಿಯಾಗಿದೆ. ಕರ್ನಾಟಕದಲ್ಲಿ ಮಾಲ್ಡೀವ್ಸ್​​ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸಹಕಾರ ನೀಡಲಾಗುವುದು" ಎಂದು ಹೇಳಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ.ಜಿ. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಾಲ್ಡೀವ್ಸ್​ನಲ್ಲಿ ರುಪೇ, ವಿಮಾನ ನಿಲ್ದಾಣದ ರನ್​ವೇಗೆ ಜಂಟಿ ಚಾಲನೆ ನೀಡಿದ ಮೋದಿ- ಮುಯಿಝು

ಬೆಂಗಳೂರು: ಭಾರತದ ಪ್ರವಾಸದಲ್ಲಿರುವ ಗೌರವಾನ್ವಿತ ಮಾಲ್ಡೀವ್ಸ್​ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್​ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಕರ್ನಾಟಕದ ರಾಜಭವನಕ್ಕೆ ಸೌಹಾರ್ದಯುತ ಭೇಟಿ ನೀಡಿದರು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊಹಮ್ಮದ್ ಮುಯಿಝು ಮತ್ತು ಸಾಜಿದಾ ಮೊಹಮ್ಮದ್ ಅವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಅತಿಥಿಗಳಿಗೆ ಸ್ವಾಗತ ಕೋರಿ ಮಾತನಾಡಿದ ರಾಜ್ಯಪಾಲರು, "ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯವರೊಂದಿಗಿನ ಮಾಲ್ಡೀವ್ಸ್​​ ಅಧ್ಯಕ್ಷರ ಉತ್ತೇಜಕ ಸಭೆಗಳು ಮತ್ತು ಸೌಜನ್ಯದ ಭೇಟಿ ದ್ವಿಪಕ್ಷೀಯ ಸಂಬಂಧಗಳ ಕುರಿತು ನಮ್ಮ ಎರಡು ದೇಶಗಳ ಜನರ ನಡುವಿನ ಸೌಹಾರ್ದ ಸಂಬಂಧವನ್ನು ಮತ್ತಷ್ಟು ಬಲಪಡಿಸಿದೆ".

ಮಾಲ್ಡೀವ್ಸ್​ ಅಧ್ಯಕ್ಷರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ.
ಮಾಲ್ಡೀವ್ಸ್​ ಅಧ್ಯಕ್ಷರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ. (ETV Bharat)

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಪಾಲುದಾರ: "ಮಾಲ್ಡೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಪಾಲುದಾರ ಮತ್ತು ನಿಕಟ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿದೆ. ಭಾರತವು ಶತಮಾನಗಳ-ಹಳೆಯ ಸಾಂಸ್ಕೃತಿಕ, ಆರ್ಥಿಕ, ವ್ಯಾಪಾರ ಮತ್ತು ಜನರ ಸಂಬಂಧಗಳನ್ನು ಹೊಂದಿದೆ. ಭಾರತದ 'ನೆರೆಹೊರೆ ಮೊದಲು' ಮತ್ತು 'ಸಾಗರ್ ವಿಷನ್' ನೀತಿಯಲ್ಲಿ ಮಾಲ್ಡೀವ್ಸ್​​ ಪ್ರಮುಖ ಸ್ಥಾನವನ್ನು ಹೊಂದಿದೆ. ಕರೆನ್ಸಿ ಸ್ವಾಪ್​ ಸೌಲಭ್ಯದ ಸಹಿಯು ಮಾಲ್ಡೀವ್ಸ್​​ನೊಂದಿಗಿನ ನಮ್ಮ ಸ್ನೇಹ ಸಂಬಂಧಗಳಿಗೆ ಸರ್ಕಾರದ ಬಲವಾದ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಇತ್ತೀಚಿನ ದಿನಗಳಲ್ಲಿ, ವಾಯು ಸಂಪರ್ಕ ಮತ್ತು ವೀಸಾ ಸೌಲಭ್ಯಗಳ ವಿಸ್ತರಣೆಯು ನಮ್ಮನ್ನು ಪರಸ್ಪರ ಹತ್ತಿರಕ್ಕೆ ತಂದಿದೆ. ರುಪೇ ಕಾರ್ಡ್​ ಅನ್ನು ಮಾಲ್ಡೀವ್ಸ್​​ನಲ್ಲಿ ಪ್ರಾರಂಭಿಸಲಾಗಿದೆ ಎಂಬುದನ್ನು ತಿಳಿದು ಸಂತೋಷವಾಗಿದೆ".

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ. (ETV Bharat)

ಬೆಂಗಳೂರಿನಲ್ಲಿ ಮಾಲ್ಡೀವ್ಸ್​ ದೂತಾವಾಸ - ಚರ್ಚೆ: "ಮಾಲ್ಡೀವ್ಸ್ ಅಡ್ಡುವಿನಲ್ಲಿ ಭಾರತೀಯ ದೂತಾವಾಸ ಮತ್ತು ಬೆಂಗಳೂರಿನಲ್ಲಿ ಮಾಲ್ಡೀವ್ಸ್​ ದೂತಾವಾಸವನ್ನು ತೆರೆಯುವ ಬಗ್ಗೆ ಚರ್ಚೆಗಳು ನಡೆದಿವೆ. ಈ ವಿಷಯ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ. ಇದು ಭಾರತೀಯರಿಗೆ ಮಾಲ್ಡೀವ್ಸ್​​ಗೆ ಭೇಟಿ ನೀಡಲು ಮತ್ತು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ನಿಮ್ಮ ಭೇಟಿಯ ಸಮಯದಲ್ಲಿ ಪ್ರಾಜೆಕ್ಟ್​​ಗಳ ಉದ್ಘಾಟನೆ ಮತ್ತು ಹಲವಾರು ತಿಳಿವಳಿಕಾ ಒಪ್ಪಂದಗಳು, ಶ್ರೇಷ್ಠತೆ, ನಮ್ಮ ಬಲವಾದ ಅಭಿವೃದ್ಧಿ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ - ಇದು ನಮ್ಮ ಆಧಾರವಾಗಿದೆ. ಇದು ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಆಧಾರವಾಗಿದೆ. ಘನತೆವೆತ್ತ ಅಧ್ಯಕ್ಷರು, ಅಭಿವೃದ್ಧಿ, ಸಹಕಾರ, ವ್ಯಾಪಾರ ಮತ್ತು ವಾಣಿಜ್ಯ, ಭಾರತ-ಮಾಲ್ಡೀವ್ಸ್​​ ಸಂಬಂಧಗಳು ಮತ್ತಷ್ಟು ಶಕ್ತಿ ಒದಗಿಸಲಿದೆ" ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಮುಂದುವರೆದ ರಾಜ್ಯಪಾಲರು, "ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಒಂದು ವ್ಯಾಪಾರ ನಿಯೋಗ ಬಂದಿರುವುದು ಸಂತೋಷಕರ. ಬೆಂಗಳೂರು ಭಾರತದ ಐಟಿ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ವ್ಯಾಪಾರ ಸಮುದಾಯದೊಂದಿಗಿನ ನಿಮ್ಮ ಸಂವಹನವು ನಮ್ಮ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುತ್ತದೆ ಎಂಬ ನಂಬಿಕೆ ಇದೆ. ಭಾರತಕ್ಕೆ ಭೇಟಿ ನೀಡಿದ್ದಕ್ಕಾಗಿ ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ನಿಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಾಲ್ಡೀವ್ಸ್​​ ಜನರ ಪ್ರಗತಿ ಮತ್ತು ಸಮೃದ್ಧಿಗೆ ನಾವು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ" ಎಂದು ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , "ಮಾಲ್ಡೀವ್ಸ್​​ ಅಧ್ಯಕ್ಷರು ಮತ್ತು ಪ್ರಥಮ ಮಹಿಳೆ ನೇತೃತ್ವದ ಮಾಲ್ಡೀವ್ಸ್​​​ ನಿಯೋಗ ಬೆಂಗಳೂರಿಗೆ ಭೇಟಿ ನೀಡಿರುವುದು ಹಾಗೂ ಸಾಜಿದಾ ಅವರು ಬೆಂಗಳೂರಿನಲ್ಲಿ ವಿದ್ಯಾರ್ಥಿಯಾಗಿದ್ದರು ಎಂಬುದು ತಿಳಿದು ಸಂತೋಷವಾಗಿದೆ. ಮಾಲ್ಡೀವ್ಸ್ ಸರ್ಕಾರವು ಬೆಂಗಳೂರಿನ ಪ್ರಮುಖ ಐಟಿ ಉದ್ಯಮದೊಂದಿಗೆ ಸಹಭಾಗಿತ್ವವನ್ನು ಹೊಂದಲು ಆಸಕ್ತಿ ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತೇವೆ ಮತ್ತು ಸ್ಟಾರ್ಟ್-ಅಪ್‍ಗಳು, ಕೃತಕ ಬುದ್ಧಿಮತ್ತೆ, ಜಾಗತಿಕ ಸಾಮಥ್ರ್ಯ ನಿರ್ಮಾಣ ಕೇಂದ್ರಗಳು ಮತ್ತು ಇನ್ನೋವೇಶನ್ ಹಬ್‍ಗಾಗಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇವೆ".

"ಮಾಲ್ಡೀವ್ಸ್​​ನಲ್ಲಿ ಐಟಿ ಉದ್ಯಮದ ಬೆಳವಣಿಗೆಯನ್ನು ಸುಲಭಗೊಳಿಸಲು ಹರ್ಷಿಸುತ್ತೇವೆ. ಮಾಲ್ಡೀವ್ಸ್​ಗೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ತಲುಪಲು ನಮ್ಮ ಕರಕುಶಲ ಮತ್ತು ಕೈಮಗ್ಗಗಳ ಮಾರುಕಟ್ಟೆಯನ್ನು ಉತ್ತೇಜಿಸಲು ಮಾಲ್ಡೀವ್ಸ್‍ನೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಲು ಇಚ್ಚಿಸುತ್ತೇವೆ. ಕರ್ನಾಟಕವು ತನ್ನ ಪ್ರಕೃತಿಯ ವೈವಿಧ್ಯತೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿದೆ. ನಮ್ಮ ಕವಿ ಕುವೆಂಪು ಅವರು ಕರ್ನಾಟಕವನ್ನು 'ಸರ್ವ ಜನಾಂಗದ ಶಾಂತಿಯ ತೋಟ' ಎಂದು ಕರೆದಿದ್ದಾರೆ".

"ನಮ್ಮ ಪ್ರವಾಸೋದ್ಯಮ ಅಡಿಬರಹ - "ಒಂದು ರಾಜ್ಯ, ಹಲವು ಪ್ರಪಂಚಗಳು". ಸುಮಾರು 300 ಕಿ.ಮೀ. ಕರಾವಳಿಯ ಹೊರತಾಗಿ, ನಾವು ವಿಶ್ವದ ಎರಡನೇ ಅತಿ ದೊಡ್ಡ ಶೋಲಾ ಅರಣ್ಯವನ್ನು ಹೊಂದಿರುವ ಹುಲಿ ಮತ್ತು ಪಕ್ಷಿಧಾಮಗಳನ್ನು ಹೊಂದಿದ್ದೇವೆ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲು ಮಾಲ್ಡೀವ್ಸ್​​ನೊಂದಿಗೆ ಪಾಲುದಾರಿಕೆಯನ್ನು ಎದರು ನೋಡುತ್ತಿದ್ದೇವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಪ್ರಧಾನಿಗೆ ಧನ್ಯವಾದ ಸಲ್ಲಿಸಿದ ಮೊಹಮ್ಮದ್​ ಮುಯಿಝು: ನಂತರ ಮಾಲ್ಡೀವ್ಸ್​​​​ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮಾತನಾಡಿ, "ಭಾರತಕ್ಕೆ ಭೇಟಿ ನೀಡಲು ಆಹ್ವಾನ ನೀಡಿದಂತಹ ರಾಷ್ಟ್ರಪತಿ, ಪ್ರಧಾನಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ, ಬೆಂಗಳೂರಿನಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಆತಿಥ್ಯ ನೀಡಿದ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೂ ಧನ್ಯಾವಾದಗಳನ್ನು ಸಲ್ಲಿಸುತ್ತೇನೆ. ಭಾರತದಲ್ಲಿ ಬಹಳ ಹೆಸರು ಮಾಡಿರುವ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ಬೆಂಗಳೂರಿಗೆ ಭೇಟಿ ನೀಡಿರುವುದು ಬಹಳ ಖುಷಿಯಾಗಿದೆ. ಕರ್ನಾಟಕದಲ್ಲಿ ಮಾಲ್ಡೀವ್ಸ್​​ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸಹಕಾರ ನೀಡಲಾಗುವುದು" ಎಂದು ಹೇಳಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ.ಜಿ. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಾಲ್ಡೀವ್ಸ್​ನಲ್ಲಿ ರುಪೇ, ವಿಮಾನ ನಿಲ್ದಾಣದ ರನ್​ವೇಗೆ ಜಂಟಿ ಚಾಲನೆ ನೀಡಿದ ಮೋದಿ- ಮುಯಿಝು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.