ETV Bharat / state

PSI ಸಾವು ಪ್ರಕರಣ ಸಿಐಡಿ ತನಿಖೆಗೆ ನೀಡಿದ್ದೇವೆ, ಅವರ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ತೀರ್ಮಾನ: ಸಚಿವ ಜಿ.ಪರಮೇಶ್ವರ್ - PSI death case to CID

author img

By ETV Bharat Karnataka Team

Published : Aug 5, 2024, 12:02 PM IST

ಯಾದಗಿರಿ ಪಿಎಸ್​ಐ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದೇವೆ. ಅವರು ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಜಿ. ಪರಮೇಶ್ವರ್ ತಿಳಿಸಿದರು.

G Parameshwar  PSI death cas  CID investigation  Bengaluru
PSI ಸಾವು ಪ್ರಕರಣ ಸಿಐಡಿ ತನಿಖೆಗೆ ನೀಡಿದ್ದೇವೆ, ಅವರ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ತೀರ್ಮಾನ: ಸಚಿವ ಜಿ.ಪರಮೇಶ್ವರ್ (ETV Bharat)

ಬೆಂಗಳೂರು: ''ಯಾದಗಿರಿ PSI ಸಾವು ಪ್ರಕರಣವನ್ನು CIDಗೆ ನೀಡಲಾಗಿದೆ. ಪಿಎಸ್​ಐ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ ಕೊಡಬೇಕು ಅಂತ ನಾವು ತೀರ್ಮಾನ ಮಾಡಿದ್ದೇವೆ'' ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಯಾದಗಿರಿ ಪಿಎಸ್​ಐ ಸಾವು ಪ್ರಕರಣ ಸಂಬಂಧ ಮಾತನಾಡಿದ ಅವರು, ''ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ಮೃತ ಪೊಲೀಸ್ ಹೆಂಡತಿಗೆ ಸರ್ಕಾರದಿಂದ ಉದ್ಯೋಗ ಕೊಡ್ತೀವಿ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಅಂತ ಗೊತ್ತಾಗುತ್ತದೆ. ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡಲು ಸಿಎಂ ಮತ್ತು ನಾನು ಚರ್ಚೆ ಮಾಡಿದ್ದೇವೆ'' ಎಂದರು.

ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ''ಈಗಾಗಲೇ CID ತನಿಖೆಗೆ ಕೊಡಲಾಗಿದೆ. ತನಿಖೆ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ತೀವಿ'' ಎಂದು ಸ್ಪಷ್ಟಪಡಿಸಿದರು.

ಸುರ್ಜೇವಾಲ, ವೇಣುಗೋಪಾಲ್ ಸಭೆ ವಿಚಾರವಾಗಿ ಮಾತನಾಡಿ, ''ಸಿಎಂ ಬಗ್ಗೆ ಅನಾವಶ್ಯಕ ಆಪಾದನೆಗಳನ್ನು ಮಾಡಿ ವಿರೋಧ ಪಕ್ಷದವರು ಪಾದಯಾತ್ರೆ ಮಾಡಿ ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಕೊಡಬೇಕು ಅಂತ ಹೇಳಿದ್ದಾರೆ. ಪ್ರತಿಯೊಬ್ಬ ಸಚಿವರು ಅದರ ಬಗ್ಗೆ ಮಾತಾಡಬೇಕು ಅಂತ ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಮಾಡ್ತಿದ್ದೇವೆ. ನಾವು ಕೂಡಾ ಅವರು ಎಲ್ಲೆಲ್ಲಿ ಪಾದಯಾತ್ರೆ ಮಾಡ್ತಿದ್ದಾರೆ ಅಲ್ಲಿಗೆ ಹಿಂದಿನ ದಿನ ನಾವು ಹೋಗಿ ಅನೇಕ ಪ್ರಶ್ನೆಗಳನ್ನು ಹಾಕ್ತಿದ್ದೇವೆ. ನಿಮ್ಮ ಕಾಲದಲ್ಲಿ ಏನಾಗಿತ್ತು ಅಂತ ಪ್ರಶ್ನೆ ಕೇಳ್ತಿದ್ದೇವೆ'' ಎಂದರು.

''ಮುಡಾ ಬಗ್ಗೆ ಏನು ಸತ್ಯಾಂಶ ಅನ್ನೋದರ ಬಗ್ಗೆ ನಾವೂ ಕೂಡಾ ತಿಳಿಯುತ್ತಿದ್ದೇವೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟರೆ ಕಾನೂ‌ನು ಹೋರಾಟ ಮಾಡ್ತೀವಿ. ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಒಪ್ಪುತ್ತಾರೆ ಅಂತ ನಮಗೆ ರಾಜ್ಯಪಾಲರ ಮೇಲೆ ವಿಶ್ವಾಸ ಇದೆ. ನೋಟಿಸ್ ವಾಪಸ್ ಪಡೆಯಬೇಕು ಮತ್ತು ಪ್ರಾಸಿಕ್ಯೂಷನ್​ಗೆ ಅಬ್ರಾಹಂ ಕೇಳಿರೋ ಮನವಿ ತಿರಸ್ಕರಿಸುವಂತೆ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಸತ್ಯಾಂಶ ಇಲ್ಲ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿ ಕಳಿಸಿದಾಗ, ಅದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆ ಅಂತ ನಾನು ಅಂದುಕೊಳ್ಳೊಲ್ಲ'' ಎಂದು ತಿಳಿಸಿದರು.

''ರಾಜ್ಯಪಾಲರಿಗೆ ಅಧಿಕಾರ ಇರಬಹುದು. ಆದರೆ, ಕ್ಯಾಬಿನೆಟ್ ಸಲಹೆಯನ್ನು ಅವರು ಅಷ್ಟು ಸುಲಭವಾಗಿ ರಿಜೆಕ್ಟ್ ಮಾಡುವುದಿಲ್ಲ ಅಂತ ಅಂದುಕೊಳ್ತೀನಿ. ಇದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ರೆ ನಾವು ಕೂಡಾ ಕಾನೂನು ಹೋರಾಟವನ್ನು ಮಾಡ್ತೀವಿ'' ಎಂದರು.

ಸಂಪುಟ ಪುನಾರಚನೆ ಇಲ್ಲ: ''ಸದ್ಯ ಸಚಿವರ ಬದಲಾವಣೆ, ಸಂಪುಟ ಪುನರ್ ರಚನೆ ಚರ್ಚೆ ಇಲ್ಲ. ಅದರ ಬಗ್ಗೆ ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಏನು ಮಾತನಾಡಿಲ್ಲ. ಒಟ್ಟಾಗಿ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆ ಹೆಸರು ತೆಗೆದುಕೊಂಡು ಬನ್ನಿ ಅಂತ ಹೇಳಿದ್ದಾರೆ ಅಷ್ಟೇ. ಕ್ಯಾಬಿನೆಟ್ ಪುನರ್ ರಚನೆ, ಖಾತೆ ಬದಲಾವಣೆ ಯಾವುದೂ ಚರ್ಚೆ ನಮ್ಮ ಬಳಿ ಮಾಡಿಲ್ಲ. ಆ ಪ್ರಸ್ತಾಪವೇ ಸಭೆಯಲ್ಲಿ ಬಂದಿಲ್ಲ. ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ ಅಂತ ಹೇಳಿದ್ದಾರೆ ಅಷ್ಟೆ'' ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಪಿಎಸ್​ಐ ಪರಶುರಾಮ್​ ಸಾವು: ಯಾದಗಿರಿ ಶಾಸಕ, ಪುತ್ರನ ವಿರುದ್ಧ ದೂರು - PSI Death Case

ಬೆಂಗಳೂರು: ''ಯಾದಗಿರಿ PSI ಸಾವು ಪ್ರಕರಣವನ್ನು CIDಗೆ ನೀಡಲಾಗಿದೆ. ಪಿಎಸ್​ಐ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ ಕೊಡಬೇಕು ಅಂತ ನಾವು ತೀರ್ಮಾನ ಮಾಡಿದ್ದೇವೆ'' ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಯಾದಗಿರಿ ಪಿಎಸ್​ಐ ಸಾವು ಪ್ರಕರಣ ಸಂಬಂಧ ಮಾತನಾಡಿದ ಅವರು, ''ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ಮೃತ ಪೊಲೀಸ್ ಹೆಂಡತಿಗೆ ಸರ್ಕಾರದಿಂದ ಉದ್ಯೋಗ ಕೊಡ್ತೀವಿ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಅಂತ ಗೊತ್ತಾಗುತ್ತದೆ. ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡಲು ಸಿಎಂ ಮತ್ತು ನಾನು ಚರ್ಚೆ ಮಾಡಿದ್ದೇವೆ'' ಎಂದರು.

ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ''ಈಗಾಗಲೇ CID ತನಿಖೆಗೆ ಕೊಡಲಾಗಿದೆ. ತನಿಖೆ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ತೀವಿ'' ಎಂದು ಸ್ಪಷ್ಟಪಡಿಸಿದರು.

ಸುರ್ಜೇವಾಲ, ವೇಣುಗೋಪಾಲ್ ಸಭೆ ವಿಚಾರವಾಗಿ ಮಾತನಾಡಿ, ''ಸಿಎಂ ಬಗ್ಗೆ ಅನಾವಶ್ಯಕ ಆಪಾದನೆಗಳನ್ನು ಮಾಡಿ ವಿರೋಧ ಪಕ್ಷದವರು ಪಾದಯಾತ್ರೆ ಮಾಡಿ ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಕೊಡಬೇಕು ಅಂತ ಹೇಳಿದ್ದಾರೆ. ಪ್ರತಿಯೊಬ್ಬ ಸಚಿವರು ಅದರ ಬಗ್ಗೆ ಮಾತಾಡಬೇಕು ಅಂತ ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಮಾಡ್ತಿದ್ದೇವೆ. ನಾವು ಕೂಡಾ ಅವರು ಎಲ್ಲೆಲ್ಲಿ ಪಾದಯಾತ್ರೆ ಮಾಡ್ತಿದ್ದಾರೆ ಅಲ್ಲಿಗೆ ಹಿಂದಿನ ದಿನ ನಾವು ಹೋಗಿ ಅನೇಕ ಪ್ರಶ್ನೆಗಳನ್ನು ಹಾಕ್ತಿದ್ದೇವೆ. ನಿಮ್ಮ ಕಾಲದಲ್ಲಿ ಏನಾಗಿತ್ತು ಅಂತ ಪ್ರಶ್ನೆ ಕೇಳ್ತಿದ್ದೇವೆ'' ಎಂದರು.

''ಮುಡಾ ಬಗ್ಗೆ ಏನು ಸತ್ಯಾಂಶ ಅನ್ನೋದರ ಬಗ್ಗೆ ನಾವೂ ಕೂಡಾ ತಿಳಿಯುತ್ತಿದ್ದೇವೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟರೆ ಕಾನೂ‌ನು ಹೋರಾಟ ಮಾಡ್ತೀವಿ. ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಒಪ್ಪುತ್ತಾರೆ ಅಂತ ನಮಗೆ ರಾಜ್ಯಪಾಲರ ಮೇಲೆ ವಿಶ್ವಾಸ ಇದೆ. ನೋಟಿಸ್ ವಾಪಸ್ ಪಡೆಯಬೇಕು ಮತ್ತು ಪ್ರಾಸಿಕ್ಯೂಷನ್​ಗೆ ಅಬ್ರಾಹಂ ಕೇಳಿರೋ ಮನವಿ ತಿರಸ್ಕರಿಸುವಂತೆ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಸತ್ಯಾಂಶ ಇಲ್ಲ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿ ಕಳಿಸಿದಾಗ, ಅದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆ ಅಂತ ನಾನು ಅಂದುಕೊಳ್ಳೊಲ್ಲ'' ಎಂದು ತಿಳಿಸಿದರು.

''ರಾಜ್ಯಪಾಲರಿಗೆ ಅಧಿಕಾರ ಇರಬಹುದು. ಆದರೆ, ಕ್ಯಾಬಿನೆಟ್ ಸಲಹೆಯನ್ನು ಅವರು ಅಷ್ಟು ಸುಲಭವಾಗಿ ರಿಜೆಕ್ಟ್ ಮಾಡುವುದಿಲ್ಲ ಅಂತ ಅಂದುಕೊಳ್ತೀನಿ. ಇದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ರೆ ನಾವು ಕೂಡಾ ಕಾನೂನು ಹೋರಾಟವನ್ನು ಮಾಡ್ತೀವಿ'' ಎಂದರು.

ಸಂಪುಟ ಪುನಾರಚನೆ ಇಲ್ಲ: ''ಸದ್ಯ ಸಚಿವರ ಬದಲಾವಣೆ, ಸಂಪುಟ ಪುನರ್ ರಚನೆ ಚರ್ಚೆ ಇಲ್ಲ. ಅದರ ಬಗ್ಗೆ ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಏನು ಮಾತನಾಡಿಲ್ಲ. ಒಟ್ಟಾಗಿ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆ ಹೆಸರು ತೆಗೆದುಕೊಂಡು ಬನ್ನಿ ಅಂತ ಹೇಳಿದ್ದಾರೆ ಅಷ್ಟೇ. ಕ್ಯಾಬಿನೆಟ್ ಪುನರ್ ರಚನೆ, ಖಾತೆ ಬದಲಾವಣೆ ಯಾವುದೂ ಚರ್ಚೆ ನಮ್ಮ ಬಳಿ ಮಾಡಿಲ್ಲ. ಆ ಪ್ರಸ್ತಾಪವೇ ಸಭೆಯಲ್ಲಿ ಬಂದಿಲ್ಲ. ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ ಅಂತ ಹೇಳಿದ್ದಾರೆ ಅಷ್ಟೆ'' ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಪಿಎಸ್​ಐ ಪರಶುರಾಮ್​ ಸಾವು: ಯಾದಗಿರಿ ಶಾಸಕ, ಪುತ್ರನ ವಿರುದ್ಧ ದೂರು - PSI Death Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.