ETV Bharat / state

ನಾಳೆ ವಿಜಯಪುರದಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ ಪ್ರಚಾರ - Rahul Gandhi

author img

By ETV Bharat Karnataka Team

Published : Apr 25, 2024, 6:56 PM IST

Updated : Apr 25, 2024, 10:56 PM IST

ರಾಹುಲ್​ ಗಾಂಧಿ ಏ.26ರಂದು ವಿಜಯಪುರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಬಿಎಲ್‌ಡಿಇ ನ್ಯೂ ಕ್ಯಾಂಪಸ್‌ನಲ್ಲಿ ಸಿದ್ಧತೆ ಭರದಿಂದ ಸಾಗಿದೆ.

Big platform preparation for congress program
ಕಾಂಗ್ರೆಸ್​ ಕಾರ್ಯಕ್ರಮದ ಬೃಹತ್ ವೇದಿಕೆ ಸಿದ್ಧತೆ
ಸಚಿವ ಎಂ.ಬಿ.ಪಾಟೀಲ ಮಾತನಾಡಿದರು.

ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್​ ಗಾಂಧಿ ನಾಳೆ ವಿಜಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಹಿನ್ನೆಲೆಯಲ್ಲಿ ಇಲ್ಲಿನ ಬಿಎಲ್‌ಡಿಇ ನ್ಯೂ ಕ್ಯಾಂಪಸ್‌ನಲ್ಲಿ ಬೃಹತ್ ವೇದಿಕೆಯ ಸಿದ್ಧತೆ ಭರದಿಂದ ಸಾಗಿದೆ. ಬೃಹತ್ ವೇದಿಕೆಯಲ್ಲಿ ರಾಹುಲ್​ ಗಾಂಧಿ ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕ್ಯಾಂಪಸ್​ಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ವೀಕ್ಷಿಸಿದ ಸಚಿವರು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ರಾಹುಲ್​ ಗಾಂಧಿ ವಿಜಯಪುರಕ್ಕೆ ಆಗಮಿಸಿ ಕಾಂಗ್ರೆಸ್ ಪ್ರಚಾರ ಕಾಯಕ್ರಮದಲ್ಲಿ ಭಾಗವಹಿಸುವರು. ಸಿಎಂ‌ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡಾ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುವುದು ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಮಾಜಿ ಶಾಸಕರು, ಕಾಂಗ್ರೆಸ್ಸಿನ ಎಲ್ಲ ಮುಖಂಡರು ಹಾಜರಿರುವರು. ವಿಜಯಪುರ ಜಿಲ್ಲೆಯ ವಿವಿಧ ಊರುಗಳಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಬೃಹತ್ ವೇದಿಕೆಯೆದುರು ಆಸನದ ವ್ಯವಸ್ಥೆ ಮಾಡಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.

2018ರ ಚುನಾವಣೆ ಸಂದರ್ಭದಲ್ಲಿ ಒಂದೇ ದಿನ ಸೋನಿಯಾ ಗಾಂಧಿ ಮತ್ತು ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ನಡೆದಿದ್ದವು.

ಇದನ್ನೂಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಈಗ ಕೌನ್​ ಬನೇಗಾ ಪ್ರಧಾನಮಂತ್ರಿ ಎಂಬಂತಾಗಿದೆ: ಅಣ್ಣಾಮಲೈ - Annamalai

ಸಚಿವ ಎಂ.ಬಿ.ಪಾಟೀಲ ಮಾತನಾಡಿದರು.

ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್​ ಗಾಂಧಿ ನಾಳೆ ವಿಜಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಹಿನ್ನೆಲೆಯಲ್ಲಿ ಇಲ್ಲಿನ ಬಿಎಲ್‌ಡಿಇ ನ್ಯೂ ಕ್ಯಾಂಪಸ್‌ನಲ್ಲಿ ಬೃಹತ್ ವೇದಿಕೆಯ ಸಿದ್ಧತೆ ಭರದಿಂದ ಸಾಗಿದೆ. ಬೃಹತ್ ವೇದಿಕೆಯಲ್ಲಿ ರಾಹುಲ್​ ಗಾಂಧಿ ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕ್ಯಾಂಪಸ್​ಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ವೀಕ್ಷಿಸಿದ ಸಚಿವರು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ರಾಹುಲ್​ ಗಾಂಧಿ ವಿಜಯಪುರಕ್ಕೆ ಆಗಮಿಸಿ ಕಾಂಗ್ರೆಸ್ ಪ್ರಚಾರ ಕಾಯಕ್ರಮದಲ್ಲಿ ಭಾಗವಹಿಸುವರು. ಸಿಎಂ‌ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡಾ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುವುದು ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಮಾಜಿ ಶಾಸಕರು, ಕಾಂಗ್ರೆಸ್ಸಿನ ಎಲ್ಲ ಮುಖಂಡರು ಹಾಜರಿರುವರು. ವಿಜಯಪುರ ಜಿಲ್ಲೆಯ ವಿವಿಧ ಊರುಗಳಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಬೃಹತ್ ವೇದಿಕೆಯೆದುರು ಆಸನದ ವ್ಯವಸ್ಥೆ ಮಾಡಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.

2018ರ ಚುನಾವಣೆ ಸಂದರ್ಭದಲ್ಲಿ ಒಂದೇ ದಿನ ಸೋನಿಯಾ ಗಾಂಧಿ ಮತ್ತು ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ನಡೆದಿದ್ದವು.

ಇದನ್ನೂಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಈಗ ಕೌನ್​ ಬನೇಗಾ ಪ್ರಧಾನಮಂತ್ರಿ ಎಂಬಂತಾಗಿದೆ: ಅಣ್ಣಾಮಲೈ - Annamalai

Last Updated : Apr 25, 2024, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.