ETV Bharat / state

'ನಾನು ನಾಪತ್ತೆ ಆಗಿಲ್ಲ, ಯಾವುದೇ ನೋಟಿಸ್ ಬಂದಿಲ್ಲ': ಕಲಾಪಕ್ಕೆ ಬಂದ ಬಸನಗೌಡ ದದ್ದಲ್ - MLA Basanagowda Daddal

author img

By ETV Bharat Karnataka Team

Published : Jul 15, 2024, 12:54 PM IST

Updated : Jul 15, 2024, 12:59 PM IST

ರಾಯಚೂರು ಶಾಸಕ ಬಸನಗೌಡ ದದ್ದಲ್ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದು, ತಮ್ಮ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ್ದಾರೆ.

MLA basanagowda daddal
ಶಾಸಕ ಬಸನಗೌಡ ದದ್ದಲ್ (ETV Bharat)
ಶಾಸಕ ಬಸನಗೌಡ ದದ್ದಲ್ (ETV Bharat)

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ, ರಾಯಚೂರು ಕಾಂಗ್ರೆಸ್​ ಶಾಸಕ ಬಸನಗೌಡ ದದ್ದಲ್ ಅವರು ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಹಾಜರಾಗಿದ್ದು, ''ನಾನು ನಾಪತ್ತೆ ಆಗಿರಲಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬಸನಗೌಡ ದದ್ದಲ್, ಕಳೆದ ಕೆಲ ದಿನಗಳಿಂದ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂಬ ಮಾತುಗಳು ಕೇಳಿ ಬಂದಿತ್ತು. ವಿಧಾನಸಭೆ ಅಧಿವೇಶನಕ್ಕೆ ತೆರಳುತ್ತಿರುವಾಗ ಈ ಸಂಬಂಧ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ನಾನು ಎಲ್ಲೂ ಹೋಗಿಲ್ಲ. ಎರಡು ದಿನ ಊರಲ್ಲಿ ಇದ್ದೆ'' ಎಂದು ಸ್ಪಷ್ಟನೆ ನೀಡಿದ್ದಾರೆ.

''ನಾನು ಊರಿನಲ್ಲೇ ಇದ್ದೆ, ಎಲ್ಲಿಗೂ ಹೋಗಿಲ್ಲ. ನನಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಈಗ ವಿಧಾನಸಭೆ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ನಾನು ನಾಪತ್ತೆಯಾಗಿರಲಿಲ್ಲ. ಎರಡು ದಿನ ಊರಿಗೆ ಹೋಗಿದ್ದೆ'' ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಈಗಾಗಲೇ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧನ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿಗಮದ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್ ಅವರಿಗೂ ಇ.ಡಿ. ವಿಚಾರಣೆ ನಡೆಸಬಹುದು ಎಂಬ ಮಾತುಗಳು ಕೇಳಿ ಬಂದಿತ್ತು.

ಇತ್ತ, ಬಸನಗೌಡ ದದ್ದಲ್ ಕೆಲ ದಿನಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸುದ್ದಿಯಾಗಿತ್ತು. ಆದರೆ, ಇಂದು ದದ್ದಲ್ ಅವರು ಅಧಿವೇಶನಕ್ಕೆ ಹಾಜರಾಗಿ, ಅದೆಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ - BJP Leaders Protest

ಶಾಸಕ ಬಸನಗೌಡ ದದ್ದಲ್ (ETV Bharat)

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ, ರಾಯಚೂರು ಕಾಂಗ್ರೆಸ್​ ಶಾಸಕ ಬಸನಗೌಡ ದದ್ದಲ್ ಅವರು ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಹಾಜರಾಗಿದ್ದು, ''ನಾನು ನಾಪತ್ತೆ ಆಗಿರಲಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬಸನಗೌಡ ದದ್ದಲ್, ಕಳೆದ ಕೆಲ ದಿನಗಳಿಂದ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂಬ ಮಾತುಗಳು ಕೇಳಿ ಬಂದಿತ್ತು. ವಿಧಾನಸಭೆ ಅಧಿವೇಶನಕ್ಕೆ ತೆರಳುತ್ತಿರುವಾಗ ಈ ಸಂಬಂಧ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ನಾನು ಎಲ್ಲೂ ಹೋಗಿಲ್ಲ. ಎರಡು ದಿನ ಊರಲ್ಲಿ ಇದ್ದೆ'' ಎಂದು ಸ್ಪಷ್ಟನೆ ನೀಡಿದ್ದಾರೆ.

''ನಾನು ಊರಿನಲ್ಲೇ ಇದ್ದೆ, ಎಲ್ಲಿಗೂ ಹೋಗಿಲ್ಲ. ನನಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಈಗ ವಿಧಾನಸಭೆ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ನಾನು ನಾಪತ್ತೆಯಾಗಿರಲಿಲ್ಲ. ಎರಡು ದಿನ ಊರಿಗೆ ಹೋಗಿದ್ದೆ'' ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಈಗಾಗಲೇ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧನ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿಗಮದ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್ ಅವರಿಗೂ ಇ.ಡಿ. ವಿಚಾರಣೆ ನಡೆಸಬಹುದು ಎಂಬ ಮಾತುಗಳು ಕೇಳಿ ಬಂದಿತ್ತು.

ಇತ್ತ, ಬಸನಗೌಡ ದದ್ದಲ್ ಕೆಲ ದಿನಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸುದ್ದಿಯಾಗಿತ್ತು. ಆದರೆ, ಇಂದು ದದ್ದಲ್ ಅವರು ಅಧಿವೇಶನಕ್ಕೆ ಹಾಜರಾಗಿ, ಅದೆಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ - BJP Leaders Protest

Last Updated : Jul 15, 2024, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.