ETV Bharat / state

ಆನೆ - ಮಾನವ ಸಂಘರ್ಷಕ್ಕೆ ರೈಲ್ವೆ ಬ್ಯಾರಿಕೇಡ್ ಪರಿಹಾರ: ಸಚಿವ ಈಶ್ವರ್ ಖಂಡ್ರೆ - Minister Ishwar Khandre

author img

By ETV Bharat Karnataka Team

Published : Sep 3, 2024, 11:01 PM IST

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಆನೆ ಹಾಗೂ ಮಾನವ ಸಂಘರ್ಷದ ಕುರಿತು ಮಾತನಾಡಿದ್ದಾರೆ. ಅಮೂಲ್ಯ ಜೀವ ಉಳಿಸಲು ರೈಲ್ವೆ ಬ್ಯಾರಿಕೇಡ್​ ಪರಿಹಾರವಾಗಿದೆ ಎಂದು ಹೇಳಿದ್ದಾರೆ.

ishwar-khandre
ಸಚಿವ ಈಶ್ವರ್ ಖಂಡ್ರೆ (ETV Bharat)

ಬೆಂಗಳೂರು : ಆನೆ ಮತ್ತು ಮಾನವ ಸಂಘರ್ಷದಿಂದ ರಾಜ್ಯದಲ್ಲಿ ಪ್ರತಿವರ್ಷ 50 ಸಾವು ಸಂಭವಿಸುತ್ತಿದ್ದು, ಅಮೂಲ್ಯ ಜೀವ, ಬೆಳೆ ಉಳಿಸಲು ರೈಲ್ವೆ ಬ್ಯಾರಿಕೇಡ್ ಪರಿಹಾರವಾಗಿದೆ. 324 ಕಿ. ಮೀ ತಡೆಗೋಡೆ ನಿರ್ಮಾಣಕ್ಕೆ 2 ವರ್ಷದಲ್ಲಿ 500 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಸುಮಾರು 333 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, 101 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟನೆ ನೀಡಿದ ಈಶ್ವರ್​ ಖಂಡ್ರೆ, 2015ರ ನಂತರದ ಒತ್ತುವರಿ ತೆರವು ಮಾಡಲಾಗುತ್ತಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಕಳೆದ ವರ್ಷದಿಂದ ಸುಮಾರು 2500 ಎಕರೆ ಒತ್ತುವರಿ ತೆರವು ಮಾಡಿಸಲಾಗಿದೆ ಎಂದು ತಿಳಿಸಿದರು.

ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಪುನರುಚ್ಚರಿಸಿದ ಅವರು, ತಾವು ಸಚಿವರಾದ ತರುವಾಯ ಹೊಸದಾಗಿ 11559 ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಅಥವಾ ಮೀಸಲು ಅರಣ್ಯ ಎಂದು ಘೋಷಿಸಿರುವುದಾಗಿ ತಿಳಿಸಿದರು.

5 ಕೋಟಿ 48 ಲಕ್ಷ ಗಿಡ ನೆಡಲಾಗಿದೆ : ಅರಣ್ಯ ಇಲಾಖೆಯ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲಾಗಿದ್ದು, ಡಿ.ಆರ್.ಎಫ್.ಓ ವರೆಗಿನ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಬಹು ದಿನಗಳಿಂದ ಬಡ್ತಿ ಸಿಗದೆ ಇದ್ದ ಸಿಬ್ಬಂದಿಗೆ ಬಡ್ತಿ ನೀಡಲಾಗಿದೆ. ಅರಣ್ಯ ಇಲಾಖೆಗೆ ಹೊಸ ಲಾಂಛನ ರೂಪಿಸಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು 5 ಕೋಟಿ ಗಿಡ ನೆಡುವ ಸಂಕಲ್ಪ ಮಾಡಿ, ಗುರಿ ಮೀರಿದ ಸಾಧನೆಯೊಂದಿಗೆ 5 ಕೋಟಿ 48 ಲಕ್ಷ ಗಿಡ ನೆಟ್ಟು ಜಿಯೋ ಟ್ಯಾಗ್ ಮಾಡಲಾಗಿದೆ. ಅದರ ವಿವರವನ್ನು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಲಾಗಿದೆ ಎಂದು ವಿವರ ನೀಡಿದರು.

ಬೆಟ್ಟಗುಡ್ಡವನ್ನು ಅರಣ್ಯ ಎಂದು ಪರಿಗಣಿಸಲಾಗುತ್ತದೆ: ಅರಣ್ಯದ ಒತ್ತುವರಿಯೂ ಅವ್ಯಾಹತವಾಗಿದೆ. ಚಿರತೆಗಳು, ನವಿಲುಗಳು ಮತ್ತು ಸರೀಸೃಪಗಳ ಆವಾಸಸ್ಥಾನವಾದ ಬೆಟ್ಟಗುಡ್ಡದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಹಲವು ಬೆಟ್ಟ ಗುಡ್ಡಗಳು ನಾಮಾವಶೇಷವಾಗಿವೆ. ಚಿರತೆಗಳು ನಾಡಿಗೆ ಬರುತ್ತವೆ ಎಂದು ಜನ ದೂರುತ್ತಾರೆ. ನವಿಲುಗಳು ತಮ್ಮ ಬೆಳೆ ನಾಶ ಮಾಡುತ್ತವೆ ಎನ್ನುತ್ತಾರೆ. ಬೆಟ್ಟಗುಡ್ಡಗಳಿದ್ದರೆ ಅಲ್ಲಿ ಅವು ಹಾವು ಇತ್ಯಾದಿ ತಿಂದು ಬದುಕುತ್ತವೆ. ಚಿರತೆಗಳು ಬೆಟ್ಟದ ಗುಹೆಗಳಲ್ಲಿ ವಾಸಿಸುತ್ತವೆ. ಹೀಗಾಗಿಯೇ ಮರ, ಗಿಡ ಇಲ್ಲದಿದ್ದರೂ ಬೆಟ್ಟಗುಡ್ಡವನ್ನು ಅರಣ್ಯ ಎಂದು ಪರಿಗಣಿಸಲಾಗುತ್ತದೆ ಎಂದು ವಿವರಿಸಿದರು.

ಅಕ್ರಮ ಒತ್ತುವರಿ ನಿಗ್ರಹ, ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣವೇ ಮುಂತಾದ ಹಲವು ಕ್ಲಿಷ್ಟಕರ ಕಾರ್ಯಾಚರಣೆ ಮೂಲಕ ಅರಣ್ಯವನ್ನು ಕಾಪಾಡುತ್ತಿದ್ದಾರೆ. ಇದರ ಜೊತೆಗೆ, ಅರಣ್ಯ ಅಭಿವೃದ್ಧಿ, ಅರಣ್ಯ ಸಂರಕ್ಷಣೆ, ಸಂಶೋಧನೆ, ಕಾರ್ಯಯೋಜನೆ, ತರಬೇತಿ ಮುಂತಾದ ಕ್ಷೇತ್ರಗಳಲ್ಲಿಯೂ ಅರಣ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ನಾವೀನ್ಯಪೂರ್ಣ ಪರಿಹಾರವನ್ನೂ ಒದಗಿಸುತ್ತಿರುವ ಅರಣ್ಯ ಸಿಬ್ಬಂದಿಯನ್ನು ಶ್ಲಾಘಿಸಿದ ಅವರು, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮೃತ ಅರಣ್ಯ ಸಿಬ್ಬಂದಿಗೆ ಪರಿಹಾರ ಮೊತ್ತ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರಣ್ಯದಲ್ಲಿ ಕರ್ತವ್ಯದಲ್ಲಿ ಮೃತ ಪಡುವ ಸಿಬ್ಬಂದಿಗೆ ಪರಿಹಾರ ನೀಡುವ ನಿರ್ಧಾರವನ್ನು 2017ರಲ್ಲಿ ಕೈಗೊಂಡರು. ಹಿಂದೆ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ನಂತರ 30 ಲಕ್ಷಕ್ಕೆ ಹೆಚ್ಚಿಸಲಾಯಿತು. ಈಗ ಮುಖ್ಯಮಂತ್ರಿಯವರು ಆ ಮೊತ್ತವನ್ನು 50 ಲಕ್ಷಕ್ಕೆ ಹೆಚ್ಚಳ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರತಿಜ್ಞಾವಿಧಿ ಬೋಧನೆ : ಇಂದು ಅರಣ್ಯ ಪಡೆಗೆ ಹೊಸದಾಗಿ ಸೇರ್ಪಡೆಯಾಗುತ್ತಿರುವ 267 ಅರಣ್ಯ ವೀಕ್ಷಕರಿಗೆ ಸ್ವತಃ ಮುಖ್ಯಮಂತ್ರಿಯವರೇ ನೇಮಕಾತಿ ಪತ್ರ ನೀಡುತ್ತಿರುವುದು ವಿಶೇಷವಾಗಿದೆ. ಈ ವೇಳೆ ಈಶ್ವರ್ ಖಂಡ್ರೆ ಅವರು, 'ಶ್ರದ್ಧೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತೇನೆ, ಅಕ್ರಮ ಮರ ಕಡಿತಲೆ, ಅರಣ್ಯ ಒತ್ತುವರಿ ಆಗದಂತೆ ಕಣ್ಗಾವಲು ಇಡುತ್ತೇನೆ' ಎಂದು ನೂತನ ಅರಣ್ಯ ವೀಕ್ಷಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್​ಎಸ್​ಎಲ್​ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲಾ ವೃತ್ತದಿಂದ ಆಯ್ಕೆಯಾಗಿದ್ದಾರೆ.

ಕೇವಲ 4 ತಿಂಗಳುಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಇಂದು ನೇಮಕಾತಿ ನೀಡಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಹುದ್ದೆ ಭರ್ತಿ ಮಾಡಿ ನೇಮಕಾತಿ ಪತ್ರ ನೀಡಲಾಗುವುದು. 540 ಗಸ್ತು ಅರಣ್ಯ ಪಾಲಕರ ನೇಮಕಾತಿ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಅಕ್ಟೋಬರ್​ನಲ್ಲಿ ಪರೀಕ್ಷೆ ನಡೆಸಿ ನವೆಂಬರ್ ಹೊತ್ತಿಗೆ ಗಸ್ತು ಅರಣ್ಯ ಪಾಲಕರ ಹುದ್ದೆಗೆ ನೇಮಕಗೊಂಡವರಿಗೂ ನೇಮಕಾತಿ ಪತ್ರ ನೀಡಲಾಗುವುದು. ಇದಲ್ಲದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕೂಡ 152 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಅರಣ್ಯ ವೀಕ್ಷಕರಾಗಿ ಆಯ್ಕೆಯಾಗಿರುವ ನಿಮ್ಮ ಮೇಲೆ ಜವಾಬ್ದಾರಿ ಇದೆ. ನೀವು ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾದ ಬಳಿಕ, ನಿಮ್ಮ ವಲಯದಲ್ಲಿ ಎಲ್ಲೇ ಒತ್ತುವರಿ ನಡೆದರೂ, ಅಕ್ರಮ ಕಡಿತಲೆ ನಡೆದರೂ ಅದರ ಮೇಲೆ ನಿಗಾ ಇಡಬೇಕು, ಕಳ್ಳಬೇಟೆಗೆ ಅವಕಾಶ ಇಲ್ಲದಂತೆ ಕಣ್ಗಾವಲು ಮಾಡಬೇಕು. ಸ್ಥಳೀಯ ಜನರೊಂದಿಗೆ ಸೌಹಾರ್ದತೆಯಿಂದ, ಸ್ನೇಹಪರವಾಗಿದ್ದು, ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅರಣ್ಯ ಸಂಪತ್ತನ್ನು ರಕ್ಷಿಸಲು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಮಾಡಿ, ನೀವೂ ಪ್ರಶಸ್ತಿಗೆ ಭಾಜನರಾಗಿ ಎಂದು ಕಿವಿ ಮಾತು ಹೇಳಿದರು.

ಮಾನವ-ವನ್ಯಜೀವಿ ಸಂಘರ್ಷ: ರಾಜ್ಯ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳಿಂದ ಆನೆ ದಾಳಿಯಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಆಗದಂತೆ ನಿಯಂತ್ರಿಸಲಾಗುತ್ತಿದೆ. ಆದಾಗ್ಯೂ ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 50 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ. ಈ ವರ್ಷ ಇಲ್ಲಿಯವರೆಗೆ 24 ಜನರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದರು.

ಅರಣ್ಯ ಒತ್ತುವರಿ ಕಟ್ಟುನಿಟ್ಟಾಗಿ ತಡೆಯಬೇಕು : ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಸಂಜೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದ ಸಿಎಂ, ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂದಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.

ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದು ಹೇಳಿದರು.

ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. "ಪ್ರಕೃತಿ ಮನುಷ್ಯನ‌ ಅಗತ್ಯತೆಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ" ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.

ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.

ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ನೀಡಿದರು.

ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಪದಕ ಪುರಸ್ಕತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಮೂಡಿಗೆರೆ ಆನೆ ಕಾರಿಡಾರ್​​ನಲ್ಲಿ ವಾಹನಗಳ ರ‍್ಯಾಲಿ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ - Vehicle Rally In Elephant Corridor

ಬೆಂಗಳೂರು : ಆನೆ ಮತ್ತು ಮಾನವ ಸಂಘರ್ಷದಿಂದ ರಾಜ್ಯದಲ್ಲಿ ಪ್ರತಿವರ್ಷ 50 ಸಾವು ಸಂಭವಿಸುತ್ತಿದ್ದು, ಅಮೂಲ್ಯ ಜೀವ, ಬೆಳೆ ಉಳಿಸಲು ರೈಲ್ವೆ ಬ್ಯಾರಿಕೇಡ್ ಪರಿಹಾರವಾಗಿದೆ. 324 ಕಿ. ಮೀ ತಡೆಗೋಡೆ ನಿರ್ಮಾಣಕ್ಕೆ 2 ವರ್ಷದಲ್ಲಿ 500 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಸುಮಾರು 333 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, 101 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟನೆ ನೀಡಿದ ಈಶ್ವರ್​ ಖಂಡ್ರೆ, 2015ರ ನಂತರದ ಒತ್ತುವರಿ ತೆರವು ಮಾಡಲಾಗುತ್ತಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಕಳೆದ ವರ್ಷದಿಂದ ಸುಮಾರು 2500 ಎಕರೆ ಒತ್ತುವರಿ ತೆರವು ಮಾಡಿಸಲಾಗಿದೆ ಎಂದು ತಿಳಿಸಿದರು.

ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಪುನರುಚ್ಚರಿಸಿದ ಅವರು, ತಾವು ಸಚಿವರಾದ ತರುವಾಯ ಹೊಸದಾಗಿ 11559 ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಅಥವಾ ಮೀಸಲು ಅರಣ್ಯ ಎಂದು ಘೋಷಿಸಿರುವುದಾಗಿ ತಿಳಿಸಿದರು.

5 ಕೋಟಿ 48 ಲಕ್ಷ ಗಿಡ ನೆಡಲಾಗಿದೆ : ಅರಣ್ಯ ಇಲಾಖೆಯ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲಾಗಿದ್ದು, ಡಿ.ಆರ್.ಎಫ್.ಓ ವರೆಗಿನ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಬಹು ದಿನಗಳಿಂದ ಬಡ್ತಿ ಸಿಗದೆ ಇದ್ದ ಸಿಬ್ಬಂದಿಗೆ ಬಡ್ತಿ ನೀಡಲಾಗಿದೆ. ಅರಣ್ಯ ಇಲಾಖೆಗೆ ಹೊಸ ಲಾಂಛನ ರೂಪಿಸಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು 5 ಕೋಟಿ ಗಿಡ ನೆಡುವ ಸಂಕಲ್ಪ ಮಾಡಿ, ಗುರಿ ಮೀರಿದ ಸಾಧನೆಯೊಂದಿಗೆ 5 ಕೋಟಿ 48 ಲಕ್ಷ ಗಿಡ ನೆಟ್ಟು ಜಿಯೋ ಟ್ಯಾಗ್ ಮಾಡಲಾಗಿದೆ. ಅದರ ವಿವರವನ್ನು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಲಾಗಿದೆ ಎಂದು ವಿವರ ನೀಡಿದರು.

ಬೆಟ್ಟಗುಡ್ಡವನ್ನು ಅರಣ್ಯ ಎಂದು ಪರಿಗಣಿಸಲಾಗುತ್ತದೆ: ಅರಣ್ಯದ ಒತ್ತುವರಿಯೂ ಅವ್ಯಾಹತವಾಗಿದೆ. ಚಿರತೆಗಳು, ನವಿಲುಗಳು ಮತ್ತು ಸರೀಸೃಪಗಳ ಆವಾಸಸ್ಥಾನವಾದ ಬೆಟ್ಟಗುಡ್ಡದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಹಲವು ಬೆಟ್ಟ ಗುಡ್ಡಗಳು ನಾಮಾವಶೇಷವಾಗಿವೆ. ಚಿರತೆಗಳು ನಾಡಿಗೆ ಬರುತ್ತವೆ ಎಂದು ಜನ ದೂರುತ್ತಾರೆ. ನವಿಲುಗಳು ತಮ್ಮ ಬೆಳೆ ನಾಶ ಮಾಡುತ್ತವೆ ಎನ್ನುತ್ತಾರೆ. ಬೆಟ್ಟಗುಡ್ಡಗಳಿದ್ದರೆ ಅಲ್ಲಿ ಅವು ಹಾವು ಇತ್ಯಾದಿ ತಿಂದು ಬದುಕುತ್ತವೆ. ಚಿರತೆಗಳು ಬೆಟ್ಟದ ಗುಹೆಗಳಲ್ಲಿ ವಾಸಿಸುತ್ತವೆ. ಹೀಗಾಗಿಯೇ ಮರ, ಗಿಡ ಇಲ್ಲದಿದ್ದರೂ ಬೆಟ್ಟಗುಡ್ಡವನ್ನು ಅರಣ್ಯ ಎಂದು ಪರಿಗಣಿಸಲಾಗುತ್ತದೆ ಎಂದು ವಿವರಿಸಿದರು.

ಅಕ್ರಮ ಒತ್ತುವರಿ ನಿಗ್ರಹ, ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣವೇ ಮುಂತಾದ ಹಲವು ಕ್ಲಿಷ್ಟಕರ ಕಾರ್ಯಾಚರಣೆ ಮೂಲಕ ಅರಣ್ಯವನ್ನು ಕಾಪಾಡುತ್ತಿದ್ದಾರೆ. ಇದರ ಜೊತೆಗೆ, ಅರಣ್ಯ ಅಭಿವೃದ್ಧಿ, ಅರಣ್ಯ ಸಂರಕ್ಷಣೆ, ಸಂಶೋಧನೆ, ಕಾರ್ಯಯೋಜನೆ, ತರಬೇತಿ ಮುಂತಾದ ಕ್ಷೇತ್ರಗಳಲ್ಲಿಯೂ ಅರಣ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ನಾವೀನ್ಯಪೂರ್ಣ ಪರಿಹಾರವನ್ನೂ ಒದಗಿಸುತ್ತಿರುವ ಅರಣ್ಯ ಸಿಬ್ಬಂದಿಯನ್ನು ಶ್ಲಾಘಿಸಿದ ಅವರು, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮೃತ ಅರಣ್ಯ ಸಿಬ್ಬಂದಿಗೆ ಪರಿಹಾರ ಮೊತ್ತ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರಣ್ಯದಲ್ಲಿ ಕರ್ತವ್ಯದಲ್ಲಿ ಮೃತ ಪಡುವ ಸಿಬ್ಬಂದಿಗೆ ಪರಿಹಾರ ನೀಡುವ ನಿರ್ಧಾರವನ್ನು 2017ರಲ್ಲಿ ಕೈಗೊಂಡರು. ಹಿಂದೆ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ನಂತರ 30 ಲಕ್ಷಕ್ಕೆ ಹೆಚ್ಚಿಸಲಾಯಿತು. ಈಗ ಮುಖ್ಯಮಂತ್ರಿಯವರು ಆ ಮೊತ್ತವನ್ನು 50 ಲಕ್ಷಕ್ಕೆ ಹೆಚ್ಚಳ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರತಿಜ್ಞಾವಿಧಿ ಬೋಧನೆ : ಇಂದು ಅರಣ್ಯ ಪಡೆಗೆ ಹೊಸದಾಗಿ ಸೇರ್ಪಡೆಯಾಗುತ್ತಿರುವ 267 ಅರಣ್ಯ ವೀಕ್ಷಕರಿಗೆ ಸ್ವತಃ ಮುಖ್ಯಮಂತ್ರಿಯವರೇ ನೇಮಕಾತಿ ಪತ್ರ ನೀಡುತ್ತಿರುವುದು ವಿಶೇಷವಾಗಿದೆ. ಈ ವೇಳೆ ಈಶ್ವರ್ ಖಂಡ್ರೆ ಅವರು, 'ಶ್ರದ್ಧೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತೇನೆ, ಅಕ್ರಮ ಮರ ಕಡಿತಲೆ, ಅರಣ್ಯ ಒತ್ತುವರಿ ಆಗದಂತೆ ಕಣ್ಗಾವಲು ಇಡುತ್ತೇನೆ' ಎಂದು ನೂತನ ಅರಣ್ಯ ವೀಕ್ಷಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್​ಎಸ್​ಎಲ್​ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲಾ ವೃತ್ತದಿಂದ ಆಯ್ಕೆಯಾಗಿದ್ದಾರೆ.

ಕೇವಲ 4 ತಿಂಗಳುಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಇಂದು ನೇಮಕಾತಿ ನೀಡಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಹುದ್ದೆ ಭರ್ತಿ ಮಾಡಿ ನೇಮಕಾತಿ ಪತ್ರ ನೀಡಲಾಗುವುದು. 540 ಗಸ್ತು ಅರಣ್ಯ ಪಾಲಕರ ನೇಮಕಾತಿ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಅಕ್ಟೋಬರ್​ನಲ್ಲಿ ಪರೀಕ್ಷೆ ನಡೆಸಿ ನವೆಂಬರ್ ಹೊತ್ತಿಗೆ ಗಸ್ತು ಅರಣ್ಯ ಪಾಲಕರ ಹುದ್ದೆಗೆ ನೇಮಕಗೊಂಡವರಿಗೂ ನೇಮಕಾತಿ ಪತ್ರ ನೀಡಲಾಗುವುದು. ಇದಲ್ಲದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕೂಡ 152 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಅರಣ್ಯ ವೀಕ್ಷಕರಾಗಿ ಆಯ್ಕೆಯಾಗಿರುವ ನಿಮ್ಮ ಮೇಲೆ ಜವಾಬ್ದಾರಿ ಇದೆ. ನೀವು ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾದ ಬಳಿಕ, ನಿಮ್ಮ ವಲಯದಲ್ಲಿ ಎಲ್ಲೇ ಒತ್ತುವರಿ ನಡೆದರೂ, ಅಕ್ರಮ ಕಡಿತಲೆ ನಡೆದರೂ ಅದರ ಮೇಲೆ ನಿಗಾ ಇಡಬೇಕು, ಕಳ್ಳಬೇಟೆಗೆ ಅವಕಾಶ ಇಲ್ಲದಂತೆ ಕಣ್ಗಾವಲು ಮಾಡಬೇಕು. ಸ್ಥಳೀಯ ಜನರೊಂದಿಗೆ ಸೌಹಾರ್ದತೆಯಿಂದ, ಸ್ನೇಹಪರವಾಗಿದ್ದು, ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅರಣ್ಯ ಸಂಪತ್ತನ್ನು ರಕ್ಷಿಸಲು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಮಾಡಿ, ನೀವೂ ಪ್ರಶಸ್ತಿಗೆ ಭಾಜನರಾಗಿ ಎಂದು ಕಿವಿ ಮಾತು ಹೇಳಿದರು.

ಮಾನವ-ವನ್ಯಜೀವಿ ಸಂಘರ್ಷ: ರಾಜ್ಯ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳಿಂದ ಆನೆ ದಾಳಿಯಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಆಗದಂತೆ ನಿಯಂತ್ರಿಸಲಾಗುತ್ತಿದೆ. ಆದಾಗ್ಯೂ ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 50 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ. ಈ ವರ್ಷ ಇಲ್ಲಿಯವರೆಗೆ 24 ಜನರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದರು.

ಅರಣ್ಯ ಒತ್ತುವರಿ ಕಟ್ಟುನಿಟ್ಟಾಗಿ ತಡೆಯಬೇಕು : ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಸಂಜೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದ ಸಿಎಂ, ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂದಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.

ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದು ಹೇಳಿದರು.

ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. "ಪ್ರಕೃತಿ ಮನುಷ್ಯನ‌ ಅಗತ್ಯತೆಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ" ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.

ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.

ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ನೀಡಿದರು.

ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಪದಕ ಪುರಸ್ಕತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಮೂಡಿಗೆರೆ ಆನೆ ಕಾರಿಡಾರ್​​ನಲ್ಲಿ ವಾಹನಗಳ ರ‍್ಯಾಲಿ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ - Vehicle Rally In Elephant Corridor

ETV Bharat Logo

Copyright © 2024 Ushodaya Enterprises Pvt. Ltd., All Rights Reserved.