ETV Bharat / state

ಇದು ಗಟ್ಟಿ ಜೀವ..!; ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ ಬದುಕುಳಿದಿದ್ದೇ ರೋಚಕ!

ಹುಬ್ಬಳ್ಳಿಯಲ್ಲಿ ನಿರಂತರ ಮಳೆಯಿಂದ ಹಳ್ಳ - ಕೊಳ್ಳಗಳು ಮಿತಿ ಮೀರಿ ಹರಿಯುತ್ತಿವೆ. ನದಿ ನೀರಿನಿಂದ ಸೇತುವೆಯೊಂದು ಮುಳುಗಿದ್ದರೂ ಅದರ ಮೇಲೆ ಕಾರು ಚಲಾಯಿಸಿದ ವ್ಯಕ್ತಿ ಕೊಚ್ಚಿಕೊಂಡು ಹೋಗುತ್ತಾನೆ. ಆದರೂ ಆತ ಬದುಕುಳಿದಿದ್ದಾನೆ ಹೇಗೇ ಗೊತ್ತಾ?

ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ ಬದುಕುಳಿದದ್ದೇ ರೋಚಕ!
ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ ಬದುಕುಳಿದದ್ದೇ ರೋಚಕ! (ETV Bharat)
author img

By ETV Bharat Karnataka Team

Published : 3 hours ago

ಹುಬ್ಬಳ್ಳಿ: ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ಹಳ್ಳದ ನೀರನ್ನು ಲೆಕ್ಕಿಸದೇ ಕಾರು ಚಲಾಯಿಸಿದ ವ್ಯಕ್ತಿಯೊಬ್ಬ ವಾಹನ ಸಮೇತ ಕೊಚ್ಚಿಕೊಂಡು ಹೋದರೂ ಬದುಕುಳಿದಿದ್ದಾರೆ.

ಕಾರನ್ನು ಬಿಟ್ಟು ತನ್ನನ್ನು ತಾನು ರಕ್ಷಿಸಿಕೊಂಡ ಚಾಲಕ: ಪುಡಕಲಕಟ್ಟಿ ಗ್ರಾಮದ ನಾಗರಾಜ ದೇವಣ್ಣವರ ಎಂಬುವವರೇ ಬದುಕಿ ಬಂದವರು. ಕಲಘಟಗಿ ತಾಲೂಕಿನ ಬೇಗೂರು ಬಿಸರಳ್ಳಿ ಹಾಗೂ ಹಿರೇಹೊನ್ನಿಹಳ್ಳಿ ಗ್ರಾಮ ಸಂಪರ್ಕಿಸುವ ಮಧ್ಯಭಾಗದಲ್ಲಿರುವ ಬೇಡ್ತಿ ಸೇತುವೆ ಅತಿ ಕೆಳಮಟ್ಟದಲ್ಲಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿ ರಸ್ತೆ ಮೇಲೂ ಹರಿಯುತ್ತಿದೆ.

ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ (ETV Bharat)

ನಾಗರಾಜ ದೇವಣ್ಣವರ ಬೇಗೂರು ಗ್ರಾಮದ ಸಂಬಂಧಿಕರ ಮನೆಗೆ ಹೋಗಿ, ಪುಡಕಲಕಟ್ಟಿಗೆ ಮರಳಿ ಬರುವಾಗ ಬೇಡ್ತಿ ಸೇತುವೆ ಮೇಲೆ ಹರಿಯುತ್ತಿರುವ ನೀರಿನ ಹರಿವನ್ನು ಲೆಕ್ಕಿಸದೇ ಕಾರು ಚಲಾಯಿಸಿಕೊಂಡು ಹೊರಟಿದ್ದಾರೆ. ಸೇತುವೆ ಮಧ್ಯಭಾಗಕ್ಕೆ ಬರುವಷ್ಟರಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕಾರು ಸಹಿತ ಕೊಚ್ಚಿಕೊಂಡು ಹೋಗಿದ್ದಾರೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲೂ ಸಮಯ ಪ್ರಜ್ಞೆ ಉಪಯೋಗಿಸಿದ ನಾಗರಾಜ ಅವರು ಕೂಡಲೇ ಕಾರಿನಿಂದ ಹೊರಜಿಗಿದು ಪಕ್ಕದಲ್ಲಿರುವ ಮರದ ಬೇರು ಹಿಡಿದುಕೊಂಡು, ಮರವನ್ನೇರಿ ಕೊಂಬೆ ಮೇಲೆ ಕುಳಿತು ಸಹಾಯಕ್ಕಾಗಿ ಕೂಗಿದ್ದಾರೆ.

ಅವರ ಆರ್ತನಾದ ಕೇಳಿದ ಬಸವರಾಜ ದೇಸೂರ ಎಂಬುವರು ರಾತ್ರಿ 11.30ರ ಸುಮಾರಿಗೆ ಸ್ಥಳಕ್ಕೆ ಧಾವಿಸಿ ವಿಷಯ ತಿಳಿದುಕೊಂಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕಲಘಟಗಿ ಅಗ್ನಿಶಾಮಕ ದಳದ ಸಿಬ್ಬಂದಿ 2 ಗಂಟೆ ಕಾರ್ಯಾಚರಣೆ ಕೈಗೊಂಡು ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಅಶೋಕ ವಡ್ಡರ, ಥಾವರು ರಾಠೋಡ್​​, ಉಮೇಶ ತೆಂಬದ, ಎಸ್. ಕಿರಣಕುಮಾರ, ಮಹಾಂತೇಶ ಜೋಡಿಗೇರ, ಸಾಯಿರಾಮ ಸಿಂಧೆ, ನಿಖಿಲ್ ಎನ್‌. ಇತರರು ಸ್ಥಳೀಯರ ನೆರವಿನಿಂದ ರಕ್ಷಿಸಿದವರು.

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮಾಲೀಕನ ಪುತ್ರನ ಬಂಧನ

ಹುಬ್ಬಳ್ಳಿ: ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ಹಳ್ಳದ ನೀರನ್ನು ಲೆಕ್ಕಿಸದೇ ಕಾರು ಚಲಾಯಿಸಿದ ವ್ಯಕ್ತಿಯೊಬ್ಬ ವಾಹನ ಸಮೇತ ಕೊಚ್ಚಿಕೊಂಡು ಹೋದರೂ ಬದುಕುಳಿದಿದ್ದಾರೆ.

ಕಾರನ್ನು ಬಿಟ್ಟು ತನ್ನನ್ನು ತಾನು ರಕ್ಷಿಸಿಕೊಂಡ ಚಾಲಕ: ಪುಡಕಲಕಟ್ಟಿ ಗ್ರಾಮದ ನಾಗರಾಜ ದೇವಣ್ಣವರ ಎಂಬುವವರೇ ಬದುಕಿ ಬಂದವರು. ಕಲಘಟಗಿ ತಾಲೂಕಿನ ಬೇಗೂರು ಬಿಸರಳ್ಳಿ ಹಾಗೂ ಹಿರೇಹೊನ್ನಿಹಳ್ಳಿ ಗ್ರಾಮ ಸಂಪರ್ಕಿಸುವ ಮಧ್ಯಭಾಗದಲ್ಲಿರುವ ಬೇಡ್ತಿ ಸೇತುವೆ ಅತಿ ಕೆಳಮಟ್ಟದಲ್ಲಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿ ರಸ್ತೆ ಮೇಲೂ ಹರಿಯುತ್ತಿದೆ.

ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ (ETV Bharat)

ನಾಗರಾಜ ದೇವಣ್ಣವರ ಬೇಗೂರು ಗ್ರಾಮದ ಸಂಬಂಧಿಕರ ಮನೆಗೆ ಹೋಗಿ, ಪುಡಕಲಕಟ್ಟಿಗೆ ಮರಳಿ ಬರುವಾಗ ಬೇಡ್ತಿ ಸೇತುವೆ ಮೇಲೆ ಹರಿಯುತ್ತಿರುವ ನೀರಿನ ಹರಿವನ್ನು ಲೆಕ್ಕಿಸದೇ ಕಾರು ಚಲಾಯಿಸಿಕೊಂಡು ಹೊರಟಿದ್ದಾರೆ. ಸೇತುವೆ ಮಧ್ಯಭಾಗಕ್ಕೆ ಬರುವಷ್ಟರಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕಾರು ಸಹಿತ ಕೊಚ್ಚಿಕೊಂಡು ಹೋಗಿದ್ದಾರೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲೂ ಸಮಯ ಪ್ರಜ್ಞೆ ಉಪಯೋಗಿಸಿದ ನಾಗರಾಜ ಅವರು ಕೂಡಲೇ ಕಾರಿನಿಂದ ಹೊರಜಿಗಿದು ಪಕ್ಕದಲ್ಲಿರುವ ಮರದ ಬೇರು ಹಿಡಿದುಕೊಂಡು, ಮರವನ್ನೇರಿ ಕೊಂಬೆ ಮೇಲೆ ಕುಳಿತು ಸಹಾಯಕ್ಕಾಗಿ ಕೂಗಿದ್ದಾರೆ.

ಅವರ ಆರ್ತನಾದ ಕೇಳಿದ ಬಸವರಾಜ ದೇಸೂರ ಎಂಬುವರು ರಾತ್ರಿ 11.30ರ ಸುಮಾರಿಗೆ ಸ್ಥಳಕ್ಕೆ ಧಾವಿಸಿ ವಿಷಯ ತಿಳಿದುಕೊಂಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕಲಘಟಗಿ ಅಗ್ನಿಶಾಮಕ ದಳದ ಸಿಬ್ಬಂದಿ 2 ಗಂಟೆ ಕಾರ್ಯಾಚರಣೆ ಕೈಗೊಂಡು ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಅಶೋಕ ವಡ್ಡರ, ಥಾವರು ರಾಠೋಡ್​​, ಉಮೇಶ ತೆಂಬದ, ಎಸ್. ಕಿರಣಕುಮಾರ, ಮಹಾಂತೇಶ ಜೋಡಿಗೇರ, ಸಾಯಿರಾಮ ಸಿಂಧೆ, ನಿಖಿಲ್ ಎನ್‌. ಇತರರು ಸ್ಥಳೀಯರ ನೆರವಿನಿಂದ ರಕ್ಷಿಸಿದವರು.

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮಾಲೀಕನ ಪುತ್ರನ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.