ETV Bharat / state

ಮಂಗಳೂರು: ಫುಟ್ಬಾಲ್ ಪಂದ್ಯಾಟ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ: ಅರೆಬೆತ್ತಲೆಗೊಳಿಸಿ ವಿದ್ಯಾರ್ಥಿ ಥಳಿಸಿದ ಇಬ್ಬರು ವಶಕ್ಕೆ - Riot between two colleges students

author img

By ETV Bharat Karnataka Team

Published : Aug 20, 2024, 1:53 PM IST

ಮೈದಾನದಲ್ಲಿ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ, ಒಂದು ಕಾಲೇಜಿನ ವಿದ್ಯಾರ್ಥಿಗಳನ್ನು ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳು ಅಪಹರಿಸಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

Riot between two colleges students over football match in Mangaluru
ಫುಟ್ಬಾಲ್ ಪಂದ್ಯಾಟ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ (ETV Bharat)

ಮಂಗಳೂರು: ಫುಟ್ಬಾಲ್ ಪಂದ್ಯಾಟ ವಿಚಾರದಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿ, ಒಂದು ಕಾಲೇಜಿನ ವಿದ್ಯಾರ್ಥಿಗಳು ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಈ ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, "ನಗರದಲ್ಲಿ ಎರಡು ಕಾಲೇಜುಗಳು ವಿದ್ಯಾರ್ಥಿಗಳ ನಡುವೆ ಗಲಾಟೆ ಹಾಗೂ ಅಪಹರಣ ಮಾಡಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಆ.14ರಂದು ನೆಹರು ಮೈದಾನದಲ್ಲಿ ಯೆನೆಪೋಯ ವಿದ್ಯಾರ್ಥಿಗಳ ತಂಡ ಮತ್ತು ಅಲೋಶಿಯಸ್ ವಿದ್ಯಾರ್ಥಿಗಳ ತಂಡದ ನಡುವೆ ಫುಟ್‌ಬಾಲ್ ಪಂದ್ಯ ನಡೆದಿತ್ತು. ಪಂದ್ಯದಲ್ಲಿ ಯೆನೆಪೋಯ ತಂಡ ಜಯ ಗಳಿಸಿತ್ತು. ಅಂದೇ ಮೈದಾನದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಪಂದ್ಯದ ವೇಳೆ ನಡೆದ ವಿವಾದ ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸುವವರೆಗಿನ ಅಪರಾಧಕ್ಕೆ ಕಾರಣವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ" ಎಂದು ತಿಳಿಸಿದರು.

"ಆ.19ರಂದು ಸುಮಾರು ಸಂಜೆ 6.15ಕ್ಕೆ, ಪಾಂಡೇಶ್ವರ ಫೋರಂ ಮಾಲ್ ಬಳಿ ಯೆನೆಪೋಯ ಕಾಲೇಜಿನ ದೂರುದಾರ 17 ವರ್ಷದ ವಿದ್ಯಾರ್ಥಿ ಸೇರಿ ನಾಲ್ವರನ್ನು 18-19 ವರ್ಷದ ಯುವಕರ ಗುಂಪೊಂದು ಕರೆದುಕೊಂಡು ಹೋಗಿದೆ. ಇವರನ್ನು ದಿಯಾನ್​, ತಸ್ಲಿಮ್​, ಸಲ್ಮಾನ್​ ಹಾಗೂ ಇನ್ನಿಬ್ಬರು 17 ವರ್ಷದ ಅಪ್ರಾಪ್ತರು ಎಂದು ಗುರುತಿಸಲಾಗಿದೆ. ಆರೋಪಿಗಳು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಕರೆದೊಯ್ದು ಕೈ ಮತ್ತು ಕಾಲಿನಿಂದ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ" ಎಂದರು.

"ನಂತರ ಸಂತ್ರಸ್ತರನ್ನು ಮಹಾಕಾಳಿ ಪಡ್ಡು ಮತ್ತು ಜಪ್ಪು ಮಹಾಕಾಳಿ ಪದ್ದು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರ ಮೇಲೆ ಮತ್ತಷ್ಟು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಸಂತ್ರಸ್ತರ ಮೇಲೆ ಹಲ್ಲೆ ನಡೆಸುವಾಗ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ನಂತರ ಸಂತ್ರಸ್ತರನ್ನು ಬಿಟ್ಟಿದ್ದಾರೆ. ಸಂತ್ರಸ್ತರಲ್ಲಿ ಒಬ್ಬನಾದ 17 ವರ್ಷದ ವಿದ್ಯಾರ್ಥಿ ದೂರು ನೀಡಿದ್ದಾನೆ" ಎಂದು ಹೇಳಿದರು.

ಗಾಯಗೊಂಡವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ದಿಯಾನ್ ಮತ್ತು ಸಲ್ಮಾನ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರವೇ ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಅಪ್ರಾಪ್ತರ ಬಳಸಿ ಬಡ್ಡಿ ವ್ಯವಹಾರ, ಓರ್ವನಿಗೆ ಚಾಕು ಇರಿತ: ಎಚ್ಚರಿಕೆ ನೀಡಿದ ಕಮಿಷನರ್ - Stabbing Case

ಮಂಗಳೂರು: ಫುಟ್ಬಾಲ್ ಪಂದ್ಯಾಟ ವಿಚಾರದಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿ, ಒಂದು ಕಾಲೇಜಿನ ವಿದ್ಯಾರ್ಥಿಗಳು ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಈ ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, "ನಗರದಲ್ಲಿ ಎರಡು ಕಾಲೇಜುಗಳು ವಿದ್ಯಾರ್ಥಿಗಳ ನಡುವೆ ಗಲಾಟೆ ಹಾಗೂ ಅಪಹರಣ ಮಾಡಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಆ.14ರಂದು ನೆಹರು ಮೈದಾನದಲ್ಲಿ ಯೆನೆಪೋಯ ವಿದ್ಯಾರ್ಥಿಗಳ ತಂಡ ಮತ್ತು ಅಲೋಶಿಯಸ್ ವಿದ್ಯಾರ್ಥಿಗಳ ತಂಡದ ನಡುವೆ ಫುಟ್‌ಬಾಲ್ ಪಂದ್ಯ ನಡೆದಿತ್ತು. ಪಂದ್ಯದಲ್ಲಿ ಯೆನೆಪೋಯ ತಂಡ ಜಯ ಗಳಿಸಿತ್ತು. ಅಂದೇ ಮೈದಾನದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಪಂದ್ಯದ ವೇಳೆ ನಡೆದ ವಿವಾದ ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸುವವರೆಗಿನ ಅಪರಾಧಕ್ಕೆ ಕಾರಣವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ" ಎಂದು ತಿಳಿಸಿದರು.

"ಆ.19ರಂದು ಸುಮಾರು ಸಂಜೆ 6.15ಕ್ಕೆ, ಪಾಂಡೇಶ್ವರ ಫೋರಂ ಮಾಲ್ ಬಳಿ ಯೆನೆಪೋಯ ಕಾಲೇಜಿನ ದೂರುದಾರ 17 ವರ್ಷದ ವಿದ್ಯಾರ್ಥಿ ಸೇರಿ ನಾಲ್ವರನ್ನು 18-19 ವರ್ಷದ ಯುವಕರ ಗುಂಪೊಂದು ಕರೆದುಕೊಂಡು ಹೋಗಿದೆ. ಇವರನ್ನು ದಿಯಾನ್​, ತಸ್ಲಿಮ್​, ಸಲ್ಮಾನ್​ ಹಾಗೂ ಇನ್ನಿಬ್ಬರು 17 ವರ್ಷದ ಅಪ್ರಾಪ್ತರು ಎಂದು ಗುರುತಿಸಲಾಗಿದೆ. ಆರೋಪಿಗಳು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಕರೆದೊಯ್ದು ಕೈ ಮತ್ತು ಕಾಲಿನಿಂದ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ" ಎಂದರು.

"ನಂತರ ಸಂತ್ರಸ್ತರನ್ನು ಮಹಾಕಾಳಿ ಪಡ್ಡು ಮತ್ತು ಜಪ್ಪು ಮಹಾಕಾಳಿ ಪದ್ದು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರ ಮೇಲೆ ಮತ್ತಷ್ಟು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಸಂತ್ರಸ್ತರ ಮೇಲೆ ಹಲ್ಲೆ ನಡೆಸುವಾಗ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ನಂತರ ಸಂತ್ರಸ್ತರನ್ನು ಬಿಟ್ಟಿದ್ದಾರೆ. ಸಂತ್ರಸ್ತರಲ್ಲಿ ಒಬ್ಬನಾದ 17 ವರ್ಷದ ವಿದ್ಯಾರ್ಥಿ ದೂರು ನೀಡಿದ್ದಾನೆ" ಎಂದು ಹೇಳಿದರು.

ಗಾಯಗೊಂಡವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ದಿಯಾನ್ ಮತ್ತು ಸಲ್ಮಾನ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರವೇ ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಅಪ್ರಾಪ್ತರ ಬಳಸಿ ಬಡ್ಡಿ ವ್ಯವಹಾರ, ಓರ್ವನಿಗೆ ಚಾಕು ಇರಿತ: ಎಚ್ಚರಿಕೆ ನೀಡಿದ ಕಮಿಷನರ್ - Stabbing Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.