ETV Bharat / state

ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು - Rowdy Sheeter Shot In Leg

ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌ವೋರ್ವನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ.

author img

By ETV Bharat Karnataka Team

Published : 2 hours ago

ರೌಡಿಶೀಟರ್ ಕಾಲಿಗೆ ಗುಂಡೇಟು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿಶೀಟರ್ (ETV Bharat)

ಶಿವಮೊಗ್ಗ: ಬಂಧಿಸಲು ಹೋದಾಗ ಹಲ್ಲೆಗೆ ಯತ್ನಿಸಿದ ರೌಡಿಶೀಟರ್​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಗರುಡ ಲೇಔಟ್​ನಲ್ಲಿ ಇಂದು ನಡೆದಿದೆ. ಹಬಿಬ್​ವುಲ್ಲಾ ಅಲಿಯಾಸ್​ ಅಮ್ಮು ಎಂಬ ರೌಡಿಶೀಟರ್ ಕಾಲಿಗೆ ಗುಂಡೇಟು ಬಿದ್ದಿದೆ.

ಪ್ರಕರಣವೊಂದರ ಆರೋಪಿಯಾಗಿರುವ ಹಬಿಬ್​ವುಲ್ಲಾ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗರುಡ ಲೇಔಟ್​ನಲ್ಲಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್​ ​ಇನ್ಸ್​ಪೆಕ್ಟರ್ ಗುರುರಾಜ್ ಕರ್ಕಿ ನೇತೃತ್ವದಲ್ಲಿ ಸಿಬ್ಬಂದಿ ಬೆಳಗ್ಗೆ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ​ಇನ್ಸ್​ಪೆಕ್ಟರ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಇದನ್ನು ಲೆಕ್ಕಿಸದೆ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು ಬಂಧಿಸಿ, ಮಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿ, "ಹಬಿಬ್​ವುಲ್ಲಾ ಓರ್ವ ರೌಡಿಶೀಟರ್. ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣಗಳಿವೆ. ವ್ಯಕ್ತಿಯೊಬ್ಬನ ಬೆನ್ನಿಗೆ ಚಾಕು ಇರಿದ ಪ್ರಕರಣದಲ್ಲಿ ಈತನ ವಿರುದ್ಧ ಸೆಪ್ಟೆಂಬರ್ 13ರಂದು ತುಂಗಾನಗರ ಠಾಣೆಯಲ್ಲಿ ಸೆಕ್ಷನ್​ 307ರ ಅಡಿ ಪ್ರಕರಣ ದಾಖಲಾಗಿತ್ತು" ಎಂದು ತಿಳಿಸಿದರು.

"ಹಬಿಬ್​ವುಲ್ಲಾನ ಪತ್ತೆಗಾಗಿ ತುಂಗಾನಗರ ಪೊಲೀಸ್ ಠಾಣೆಯ ಸಿಪಿಐ ಗುರುರಾಜ್​ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಗರುಡ ಲೇಔಟ್​ನಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಸಿಬ್ಬಂದಿ ಪ್ರಾಣ ರಕ್ಷಣೆಗೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನು ಲೆಕ್ಕಿಸದಿದ್ದಾಗ ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಹಬಿಬ್​ವುಲ್ಲಾ 2020ರಲ್ಲಿ ಜೈಲಿಗೆ ಹೋಗಿ ಜುಲೈನಲ್ಲಿ ಬಿಡುಗಡೆಯಾಗಿ ಮತ್ತೆ ಕೊಲೆ ಯತ್ನ ನಡೆಸಿದ್ದ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: 'ಗಾಯ್ ಪಾರ್ದಿ ಗ್ಯಾಂಗ್'ನ ಡಕಾಯಿತನ​ ಮೇಲೆ ಫೈರಿಂಗ್​ - firing on accused

ಶಿವಮೊಗ್ಗ: ಬಂಧಿಸಲು ಹೋದಾಗ ಹಲ್ಲೆಗೆ ಯತ್ನಿಸಿದ ರೌಡಿಶೀಟರ್​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಗರುಡ ಲೇಔಟ್​ನಲ್ಲಿ ಇಂದು ನಡೆದಿದೆ. ಹಬಿಬ್​ವುಲ್ಲಾ ಅಲಿಯಾಸ್​ ಅಮ್ಮು ಎಂಬ ರೌಡಿಶೀಟರ್ ಕಾಲಿಗೆ ಗುಂಡೇಟು ಬಿದ್ದಿದೆ.

ಪ್ರಕರಣವೊಂದರ ಆರೋಪಿಯಾಗಿರುವ ಹಬಿಬ್​ವುಲ್ಲಾ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗರುಡ ಲೇಔಟ್​ನಲ್ಲಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್​ ​ಇನ್ಸ್​ಪೆಕ್ಟರ್ ಗುರುರಾಜ್ ಕರ್ಕಿ ನೇತೃತ್ವದಲ್ಲಿ ಸಿಬ್ಬಂದಿ ಬೆಳಗ್ಗೆ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ​ಇನ್ಸ್​ಪೆಕ್ಟರ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಇದನ್ನು ಲೆಕ್ಕಿಸದೆ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು ಬಂಧಿಸಿ, ಮಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿ, "ಹಬಿಬ್​ವುಲ್ಲಾ ಓರ್ವ ರೌಡಿಶೀಟರ್. ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣಗಳಿವೆ. ವ್ಯಕ್ತಿಯೊಬ್ಬನ ಬೆನ್ನಿಗೆ ಚಾಕು ಇರಿದ ಪ್ರಕರಣದಲ್ಲಿ ಈತನ ವಿರುದ್ಧ ಸೆಪ್ಟೆಂಬರ್ 13ರಂದು ತುಂಗಾನಗರ ಠಾಣೆಯಲ್ಲಿ ಸೆಕ್ಷನ್​ 307ರ ಅಡಿ ಪ್ರಕರಣ ದಾಖಲಾಗಿತ್ತು" ಎಂದು ತಿಳಿಸಿದರು.

"ಹಬಿಬ್​ವುಲ್ಲಾನ ಪತ್ತೆಗಾಗಿ ತುಂಗಾನಗರ ಪೊಲೀಸ್ ಠಾಣೆಯ ಸಿಪಿಐ ಗುರುರಾಜ್​ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಗರುಡ ಲೇಔಟ್​ನಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಸಿಬ್ಬಂದಿ ಪ್ರಾಣ ರಕ್ಷಣೆಗೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನು ಲೆಕ್ಕಿಸದಿದ್ದಾಗ ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಹಬಿಬ್​ವುಲ್ಲಾ 2020ರಲ್ಲಿ ಜೈಲಿಗೆ ಹೋಗಿ ಜುಲೈನಲ್ಲಿ ಬಿಡುಗಡೆಯಾಗಿ ಮತ್ತೆ ಕೊಲೆ ಯತ್ನ ನಡೆಸಿದ್ದ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: 'ಗಾಯ್ ಪಾರ್ದಿ ಗ್ಯಾಂಗ್'ನ ಡಕಾಯಿತನ​ ಮೇಲೆ ಫೈರಿಂಗ್​ - firing on accused

ETV Bharat Logo

Copyright © 2024 Ushodaya Enterprises Pvt. Ltd., All Rights Reserved.