ETV Bharat / state

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ - Ayesha Khaan

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

author img

By ETV Bharat Karnataka Team

Published : Jul 10, 2024, 8:52 PM IST

Senior journalist Ayesha Khaan Appointed As Chairman Of Karnataka Media Academy
ಹಿರಿಯ ಪತ್ರಕರ್ತೆ ಆಯೇಷಾ ಖಾನಂ (Social Network)

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.

Senior journalist Ayesha Khaan Appointed As Chairman Of Karnataka Media Academy
ಹಿರಿಯ ಪತ್ರಕರ್ತೆ ಆಯೇಷಾ ಖಾನಂ (Social Network)

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.

Senior journalist Ayesha Khaan Appointed As Chairman Of Karnataka Media Academy
ಹಿರಿಯ ಪತ್ರಕರ್ತೆ ಆಯೇಷಾ ಖಾನಂ (Social Network)

ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ತಕ್ಕಂತೆ ಆದ್ಯತೆ ನೀಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ. ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ‌ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲು.

ಇದನ್ನೂ ಓದಿ: ಸಬ್​​ಇನ್ಸ್​ಪೆಕ್ಟರ್​ ಆಗಿ ಆಯ್ಕೆಯಾದ ತೃತೀಯಲಿಂಗಿ: ದೇಶದಲ್ಲೇ ಇದು ಮೊದಲು - Manvi Madhu

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.

Senior journalist Ayesha Khaan Appointed As Chairman Of Karnataka Media Academy
ಹಿರಿಯ ಪತ್ರಕರ್ತೆ ಆಯೇಷಾ ಖಾನಂ (Social Network)

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.

Senior journalist Ayesha Khaan Appointed As Chairman Of Karnataka Media Academy
ಹಿರಿಯ ಪತ್ರಕರ್ತೆ ಆಯೇಷಾ ಖಾನಂ (Social Network)

ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ತಕ್ಕಂತೆ ಆದ್ಯತೆ ನೀಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ. ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ‌ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲು.

ಇದನ್ನೂ ಓದಿ: ಸಬ್​​ಇನ್ಸ್​ಪೆಕ್ಟರ್​ ಆಗಿ ಆಯ್ಕೆಯಾದ ತೃತೀಯಲಿಂಗಿ: ದೇಶದಲ್ಲೇ ಇದು ಮೊದಲು - Manvi Madhu

ETV Bharat Logo

Copyright © 2024 Ushodaya Enterprises Pvt. Ltd., All Rights Reserved.