ETV Bharat / state

ಟೈಮರ್​ ಫಿಕ್ಸ್​ ಮಾಡಿ ಸ್ಫೋಟ: ಬಾಂಬ್ ಬ್ಲಾಸ್ಟ್​ ಬಗ್ಗೆ ಗಂಭೀರ ತನಿಖೆ; ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Mar 2, 2024, 11:30 AM IST

Updated : Mar 2, 2024, 3:15 PM IST

Bengaluru bomb blast case: ''ಬೆಂಗಳೂರು ಬಾಂಬ್ ಸ್ಫೋಟವಾಗಿರುವುದು ನಿಜ. ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ'' ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Etv Bharat
Etv Bharat
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ''ಬೆಂಗಳೂರಿನಲ್ಲಿ ಟೈಮರ್ ಫಿಕ್ಸ್ ಮಾಡಿ ಬಾಂಬ್ ಸ್ಫೋಟ ಮಾಡಿರುವುದು ನಿಜ. ಬಾಂಬ್ ಬ್ಲಾಸ್ಟ್​ನಲ್ಲಿ 9 ಜನರು ಗಾಯಗೊಂಡಿದ್ದಾರೆ. ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ನಿನ್ನೆಯೇ ಡಿಸಿಎಂ, ಗೃಹ ಸಚಿವರು ಭೇಟಿ ನೀಡಿದ್ದರು. ಈ ಕೃತ್ಯದಲ್ಲಿ ಸಂಘಟನೆಯ ಕೈವಾಡವಿದೆಯೋ, ಇಲ್ಲವೋ ಎಂಬುದು ತಿಳಿದಿಲ್ಲ. ಈ ಘಟನೆ ಕುರಿತು ಗಂಭೀರವಾಗಿ ತನಿಖೆ ನಡೆಯುತ್ತಿದೆ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ ಟಿ.ಕೆ. ಲೇಔಟ್ ಬಳಿ ಇರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮಾಸ್ಕ್, ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್​ನಲ್ಲಿ ಪ್ರಯಾಣಿಸಿಕೊಂಡು ರಾಮೇಶ್ವರ ಕೆಫೆಗೆ ಬಂದಿದ್ದಾನೆ. ಕೆಫೆಯಲ್ಲಿ ರವೆ ಇಡ್ಲಿ ತೆಗೆದುಕೊಂಡು ಒಂದೆಡೆ ಕುಳಿತುಕೊಂಡು ತಿಂದಿದ್ದಾನೆ. ಬಳಿಕ ಟೈಮರ್ ಅಳವಡಿಸಿ ಹೋಗಿದ್ದಾನೆ. ನಂತರ ಬಾಂಬ್​ ಬ್ಲಾಸ್ಟ್ ಆಗಿದೆ. ವ್ಯಕ್ತಿ ಸಂಚಾರ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾವೆ. ಆ ವ್ಯಕ್ತಿಯನ್ನು ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಈ ಪ್ರಕರಣದ ಕುರಿತು ಸೀರಿಯಸ್ ಆಗಿ ತನಿಖೆ ನಡೆಯುತ್ತಿದೆ. ನಿನ್ನೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಜೊತೆಗೆ ಬಾಂಬ್​ ಸ್ಫೋಟಗೊಂಡಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು (ಶನಿವಾರ) ನಾನು ಕೂಡ ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ತೆರಳುತ್ತೇನೆ'' ಎಂದರು.

ಮಂಗಳೂರು ಮತ್ತು ಬೆಂಗಳೂರು ಬ್ಲಾಸ್ಟ್​ಗೂ ಸಂಬಂಧವಿಲ್ಲ- ಸಿಎಂ: ಬಾಂಬ್ ಸ್ಫೋಟ ಪ್ರಕರಣದ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗೂ ಬೆಂಗಳೂರು ಬ್ಲಾಸ್ಟ್​ಗೆ ಯಾವುದೇ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನ ನಾನು ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು‌'' ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ''ಇನ್ನೂ ಕೂಡ ಯಾವುದೇ ವರದಿ ನನ್ನ ಕೈ ಸೇರಿಲ್ಲ. ಎಫ್​ಎಸ್​ಎಲ್ ರಿಪೋರ್ಟ್ ಈವರೆಗೂ ಬಂದಿಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ'' ಎಂದು ಬಿಜೆಪಿ ನಾಯಕರ ಟ್ವೀಟ್ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಸ್ಫೋಟ ಪ್ರಕರಣ: ಯಾವ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ; ಗೃಹ ಸಚಿವ ಪರಮೇಶ್ವರ್

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ''ಬೆಂಗಳೂರಿನಲ್ಲಿ ಟೈಮರ್ ಫಿಕ್ಸ್ ಮಾಡಿ ಬಾಂಬ್ ಸ್ಫೋಟ ಮಾಡಿರುವುದು ನಿಜ. ಬಾಂಬ್ ಬ್ಲಾಸ್ಟ್​ನಲ್ಲಿ 9 ಜನರು ಗಾಯಗೊಂಡಿದ್ದಾರೆ. ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ನಿನ್ನೆಯೇ ಡಿಸಿಎಂ, ಗೃಹ ಸಚಿವರು ಭೇಟಿ ನೀಡಿದ್ದರು. ಈ ಕೃತ್ಯದಲ್ಲಿ ಸಂಘಟನೆಯ ಕೈವಾಡವಿದೆಯೋ, ಇಲ್ಲವೋ ಎಂಬುದು ತಿಳಿದಿಲ್ಲ. ಈ ಘಟನೆ ಕುರಿತು ಗಂಭೀರವಾಗಿ ತನಿಖೆ ನಡೆಯುತ್ತಿದೆ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ ಟಿ.ಕೆ. ಲೇಔಟ್ ಬಳಿ ಇರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮಾಸ್ಕ್, ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್​ನಲ್ಲಿ ಪ್ರಯಾಣಿಸಿಕೊಂಡು ರಾಮೇಶ್ವರ ಕೆಫೆಗೆ ಬಂದಿದ್ದಾನೆ. ಕೆಫೆಯಲ್ಲಿ ರವೆ ಇಡ್ಲಿ ತೆಗೆದುಕೊಂಡು ಒಂದೆಡೆ ಕುಳಿತುಕೊಂಡು ತಿಂದಿದ್ದಾನೆ. ಬಳಿಕ ಟೈಮರ್ ಅಳವಡಿಸಿ ಹೋಗಿದ್ದಾನೆ. ನಂತರ ಬಾಂಬ್​ ಬ್ಲಾಸ್ಟ್ ಆಗಿದೆ. ವ್ಯಕ್ತಿ ಸಂಚಾರ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾವೆ. ಆ ವ್ಯಕ್ತಿಯನ್ನು ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಈ ಪ್ರಕರಣದ ಕುರಿತು ಸೀರಿಯಸ್ ಆಗಿ ತನಿಖೆ ನಡೆಯುತ್ತಿದೆ. ನಿನ್ನೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಜೊತೆಗೆ ಬಾಂಬ್​ ಸ್ಫೋಟಗೊಂಡಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು (ಶನಿವಾರ) ನಾನು ಕೂಡ ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ತೆರಳುತ್ತೇನೆ'' ಎಂದರು.

ಮಂಗಳೂರು ಮತ್ತು ಬೆಂಗಳೂರು ಬ್ಲಾಸ್ಟ್​ಗೂ ಸಂಬಂಧವಿಲ್ಲ- ಸಿಎಂ: ಬಾಂಬ್ ಸ್ಫೋಟ ಪ್ರಕರಣದ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗೂ ಬೆಂಗಳೂರು ಬ್ಲಾಸ್ಟ್​ಗೆ ಯಾವುದೇ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನ ನಾನು ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು‌'' ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ''ಇನ್ನೂ ಕೂಡ ಯಾವುದೇ ವರದಿ ನನ್ನ ಕೈ ಸೇರಿಲ್ಲ. ಎಫ್​ಎಸ್​ಎಲ್ ರಿಪೋರ್ಟ್ ಈವರೆಗೂ ಬಂದಿಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ'' ಎಂದು ಬಿಜೆಪಿ ನಾಯಕರ ಟ್ವೀಟ್ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಸ್ಫೋಟ ಪ್ರಕರಣ: ಯಾವ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ; ಗೃಹ ಸಚಿವ ಪರಮೇಶ್ವರ್

Last Updated : Mar 2, 2024, 3:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.