ETV Bharat / state

ಸರ್ವೀಸ್ ರಸ್ತೆ ಬಂದ್: ಬೆಂ-ಮೈ ಎಕ್ಸ್​ಪ್ರೆಸ್​​ವೇಯಲ್ಲಿ ಟೋಲ್ ತಪ್ಪಿಸಿಕೊಳ್ಳುವವರಿಗೆ ಶಾಕ್​ - BENGALURU MYSURU EXPRESSWAY

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಸಿ ಮುಟ್ಟಿಸಿದೆ. ಪ್ರಾಧಿಕಾರದ ಕ್ರಮಕ್ಕೆ ವಾಹನ ಸವಾರರು ಗರಂ ಆಗಿದ್ದಾರೆ.

BENGALURU MYSURU EXPRESSWAY
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ (ETV Bharat)
author img

By ETV Bharat Karnataka Team

Published : Feb 9, 2025, 9:26 AM IST

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೊಡ್ಡ ಶಾಕ್ ನೀಡಿದೆ. ಟೋಲ್ ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ.

ಈ ಮೂಲಕ ಟೋಲ್ ಕಟ್ಟಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್‌ಗಳಿಂದ ತಪ್ಪಿಸಿಕೊಳ್ಳಲು ಅನ್ಯ ಮಾರ್ಗಗಳನ್ನು ಬಳಸುವುದು, ಬಳಿಕ ಹೆದ್ದಾರಿಗೆ ಎಂಟ್ರಿ ಕೊಡುವ ವಾಹನ ಚಾಲಕರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹದ್ದಿನ ಕಣ್ಣಿಟ್ಟಿದೆ. ಅದರಲ್ಲೂ ಬೆಂ-ಮೈ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಟೋಲ್ ತಪ್ಪಿಸಿಕೊಂಡು ಓಡಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ ಎನ್ನುವ ದೂರುಗಳು ಹೆಚ್ಚಾಗಿ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ಅದರಲ್ಲೂ, ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿ ಬಳಿ ಸರ್ವಿಸ್ ರಸ್ತೆ ಪ್ರವೇಶಿಸುವ ಮೂಲಕ ಟೋಲ್ ಗೇಟ್‌ನಿಂದ ತಪ್ಪಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳ್ಳದಾರಿಯನ್ನು ಬಂದ್ ಮಾಡಲಾಗಿದೆ. ಬಹಳ ದಿನಗಳಿಂದಲೂ ಈ ಕಳ್ಳಾಟ ನಡೆಯುತ್ತಿದ್ದು, ಕೊನೆಗೂ ಬ್ರೇಕ್ ಹಾಕಲಾಗಿದೆ.

ಸರ್ವೀಸ್ ರಸ್ತೆ ಎಲ್ಲೆಲ್ಲಿ ಬಂದ್?​: ಬಿಡದಿಯ ಶೇಷಗಿರಿಹಳ್ಳಿ ಬಳಿ ಸರ್ವೀಸ್ ರಸ್ತೆಯನ್ನು ಮುಚ್ಚಲಾಗಿದೆ. ಇದರಿಂದ 5 ಕಿ.ಮೀ.ಗೂ ಹಿಂದಿನಿಂದಲೇ ಮೈಸೂರಿನಿಂದ ಬರುವವರು ಹಾಗೂ ನೇರವಾಗಿ ಎಕ್ಸ್​​ಪ್ರೇಸ್​ವೇಯಲ್ಲಿ ಸಾಗಬೇಕಿದೆ. ಬಿಡದಿಯ ಮೂಲಕವೇ ಮುಂದೆ ಸಂಚರಿಸಬೇಕಿದೆ. ಹಾಗೆಯೇ, ಶ್ರೀರಂಗಪಟ್ಟಣ ಬಳಿಯ ಟೋಲ್ ಗೇಟ್​ ಸಮೀಪವೂ ಕೂಡ ಸರ್ವೀಸ್ ರಸ್ತೆ ಸಂಚಾರ ಬಂದ್​ ಮಾಡಲಾಗಿದೆ.

ಇದನ್ನೂ ಓದಿ: ಏರೋ ಇಂಡಿಯಾದಲ್ಲಿ ಧ್ರುವ್ -330 ಸುಧಾರಿತ ಲಘು ಹೆಲಿಕಾಪ್ಟರ್​​ ಸಾರಂಗ್ ತಂಡ ಭಾಗಿ ಬಹುತೇಕ ಅನುಮಾನ

''ಎಕ್ಸ್‌ಪ್ರೆಸ್​ವೇಯಲ್ಲೇ ಸಂಚರಿಸುತ್ತಿದ್ದ ಕೆಲ ವಾಹನ ಸವಾರರು ಶ್ರೀರಂಗಪಟ್ಟಣ ಹಾಗೂ ಬಿಡದಿ ಬಳಿ ಶೇಷಗಿರಿಹಳ್ಳಿ ಬಳಿ ಇರುವ ಟೋಲ್ ಗೇಟ್‌ನಲ್ಲಿ ಶುಲ್ಕ ಪಾವತಿಸುತ್ತಿರಲಿಲ್ಲ. ಎರಡೂ ಟೋಲ್‌ ತಪ್ಪಿಸಿಕೊಂಡು ಬಳಿಕ ಸರ್ವೀಸ್ ರಸ್ತೆ ಮೂಲಕ ರಾಜಧಾನಿ ಬೆಂಗಳೂರು ಹಾಗೂ ಮೈಸೂರು ತಲುಪುತ್ತಿದ್ದರು. ಇದು ಪ್ರಾಧಿಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಆ ಮಾರ್ಗದಲ್ಲಿ ಸರ್ವೀಸ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ರಸ್ತೆಯನ್ನು ಬಂದ್ ಮಾಡಿ, ಅಡ್ಡದಾರಿಗೆ ಕಡಿವಾಣ ಹಾಕಲಾಗಿದೆ'' ಎಂದು ಪ್ರಾಧಿಕಾರದ ಅಧಿಕಾರಿಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಾಧಿಕಾರದ ದಿಢೀರ್ ನಿರ್ಧಾರಕ್ಕೆ ವಾಹನ ಸವಾರರು ಕೂಡ ಗರಂ ಆಗಿದ್ದು, ರಸ್ತೆ ಬಂದ್ ಮಾಡಿದ ಕಾರಣ ಕೆಲ ವಾಹನ ಸವಾರರಿಗೆ ತೊಂದರೆಯಾಗಿ ಟ್ರಾಫಿಕ್ ಜಾಮ್ ಆಗುತ್ತಿದೆ. ಯಾವುದೇ ಮುನ್ಸೂಚನೆ ನೀಡದೆ, ಏಕಾಏಕಿ ಈ ರೀತಿ ರಸ್ತೆ ಬಂದ್ ಮಾಡಿರುವ ಕ್ರಮ ಸರಿಯಲ್ಲ. ಈಗ ಪಕ್ಕದ ರಾಮನಗರದಿಂದ ಬೆಂಗಳೂರಿಗೆ ಹೋಗುವವರು ಕೂಡ ದುಬಾರಿ ಟೋಲ್ ಕಟ್ಟಬೇಕೇ? ಎಂದು ಹೆದ್ದಾರಿ ಪ್ರಾಧಿಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ನಮ್ಮ ಮೆಟ್ರೋ ದರ ಏರಿಕೆ: ಎಷ್ಟು ಕಿಲೋಮೀಟರ್‌ಗೆ ಎಷ್ಟು ಟಿಕೆಟ್?

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೊಡ್ಡ ಶಾಕ್ ನೀಡಿದೆ. ಟೋಲ್ ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ.

ಈ ಮೂಲಕ ಟೋಲ್ ಕಟ್ಟಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್‌ಗಳಿಂದ ತಪ್ಪಿಸಿಕೊಳ್ಳಲು ಅನ್ಯ ಮಾರ್ಗಗಳನ್ನು ಬಳಸುವುದು, ಬಳಿಕ ಹೆದ್ದಾರಿಗೆ ಎಂಟ್ರಿ ಕೊಡುವ ವಾಹನ ಚಾಲಕರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹದ್ದಿನ ಕಣ್ಣಿಟ್ಟಿದೆ. ಅದರಲ್ಲೂ ಬೆಂ-ಮೈ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಟೋಲ್ ತಪ್ಪಿಸಿಕೊಂಡು ಓಡಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ ಎನ್ನುವ ದೂರುಗಳು ಹೆಚ್ಚಾಗಿ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ಅದರಲ್ಲೂ, ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿ ಬಳಿ ಸರ್ವಿಸ್ ರಸ್ತೆ ಪ್ರವೇಶಿಸುವ ಮೂಲಕ ಟೋಲ್ ಗೇಟ್‌ನಿಂದ ತಪ್ಪಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳ್ಳದಾರಿಯನ್ನು ಬಂದ್ ಮಾಡಲಾಗಿದೆ. ಬಹಳ ದಿನಗಳಿಂದಲೂ ಈ ಕಳ್ಳಾಟ ನಡೆಯುತ್ತಿದ್ದು, ಕೊನೆಗೂ ಬ್ರೇಕ್ ಹಾಕಲಾಗಿದೆ.

ಸರ್ವೀಸ್ ರಸ್ತೆ ಎಲ್ಲೆಲ್ಲಿ ಬಂದ್?​: ಬಿಡದಿಯ ಶೇಷಗಿರಿಹಳ್ಳಿ ಬಳಿ ಸರ್ವೀಸ್ ರಸ್ತೆಯನ್ನು ಮುಚ್ಚಲಾಗಿದೆ. ಇದರಿಂದ 5 ಕಿ.ಮೀ.ಗೂ ಹಿಂದಿನಿಂದಲೇ ಮೈಸೂರಿನಿಂದ ಬರುವವರು ಹಾಗೂ ನೇರವಾಗಿ ಎಕ್ಸ್​​ಪ್ರೇಸ್​ವೇಯಲ್ಲಿ ಸಾಗಬೇಕಿದೆ. ಬಿಡದಿಯ ಮೂಲಕವೇ ಮುಂದೆ ಸಂಚರಿಸಬೇಕಿದೆ. ಹಾಗೆಯೇ, ಶ್ರೀರಂಗಪಟ್ಟಣ ಬಳಿಯ ಟೋಲ್ ಗೇಟ್​ ಸಮೀಪವೂ ಕೂಡ ಸರ್ವೀಸ್ ರಸ್ತೆ ಸಂಚಾರ ಬಂದ್​ ಮಾಡಲಾಗಿದೆ.

ಇದನ್ನೂ ಓದಿ: ಏರೋ ಇಂಡಿಯಾದಲ್ಲಿ ಧ್ರುವ್ -330 ಸುಧಾರಿತ ಲಘು ಹೆಲಿಕಾಪ್ಟರ್​​ ಸಾರಂಗ್ ತಂಡ ಭಾಗಿ ಬಹುತೇಕ ಅನುಮಾನ

''ಎಕ್ಸ್‌ಪ್ರೆಸ್​ವೇಯಲ್ಲೇ ಸಂಚರಿಸುತ್ತಿದ್ದ ಕೆಲ ವಾಹನ ಸವಾರರು ಶ್ರೀರಂಗಪಟ್ಟಣ ಹಾಗೂ ಬಿಡದಿ ಬಳಿ ಶೇಷಗಿರಿಹಳ್ಳಿ ಬಳಿ ಇರುವ ಟೋಲ್ ಗೇಟ್‌ನಲ್ಲಿ ಶುಲ್ಕ ಪಾವತಿಸುತ್ತಿರಲಿಲ್ಲ. ಎರಡೂ ಟೋಲ್‌ ತಪ್ಪಿಸಿಕೊಂಡು ಬಳಿಕ ಸರ್ವೀಸ್ ರಸ್ತೆ ಮೂಲಕ ರಾಜಧಾನಿ ಬೆಂಗಳೂರು ಹಾಗೂ ಮೈಸೂರು ತಲುಪುತ್ತಿದ್ದರು. ಇದು ಪ್ರಾಧಿಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಆ ಮಾರ್ಗದಲ್ಲಿ ಸರ್ವೀಸ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ರಸ್ತೆಯನ್ನು ಬಂದ್ ಮಾಡಿ, ಅಡ್ಡದಾರಿಗೆ ಕಡಿವಾಣ ಹಾಕಲಾಗಿದೆ'' ಎಂದು ಪ್ರಾಧಿಕಾರದ ಅಧಿಕಾರಿಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಾಧಿಕಾರದ ದಿಢೀರ್ ನಿರ್ಧಾರಕ್ಕೆ ವಾಹನ ಸವಾರರು ಕೂಡ ಗರಂ ಆಗಿದ್ದು, ರಸ್ತೆ ಬಂದ್ ಮಾಡಿದ ಕಾರಣ ಕೆಲ ವಾಹನ ಸವಾರರಿಗೆ ತೊಂದರೆಯಾಗಿ ಟ್ರಾಫಿಕ್ ಜಾಮ್ ಆಗುತ್ತಿದೆ. ಯಾವುದೇ ಮುನ್ಸೂಚನೆ ನೀಡದೆ, ಏಕಾಏಕಿ ಈ ರೀತಿ ರಸ್ತೆ ಬಂದ್ ಮಾಡಿರುವ ಕ್ರಮ ಸರಿಯಲ್ಲ. ಈಗ ಪಕ್ಕದ ರಾಮನಗರದಿಂದ ಬೆಂಗಳೂರಿಗೆ ಹೋಗುವವರು ಕೂಡ ದುಬಾರಿ ಟೋಲ್ ಕಟ್ಟಬೇಕೇ? ಎಂದು ಹೆದ್ದಾರಿ ಪ್ರಾಧಿಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ನಮ್ಮ ಮೆಟ್ರೋ ದರ ಏರಿಕೆ: ಎಷ್ಟು ಕಿಲೋಮೀಟರ್‌ಗೆ ಎಷ್ಟು ಟಿಕೆಟ್?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.