ETV Bharat / state

ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ: ಅಂಬಾರಿ ಹೊತ್ತು ಸಾಗುತ್ತಿರುವ ಸಾಗರ ಆನೆ

ಶಿವಮೊಗ್ಗ ದಸರಾ ಮೆರವಣಿಗೆ ನಡೆಯಿತು. ಚಾಮುಂಡೇಶ್ವರಿ ಮೂರ್ತಿ ಇರುವ ಅಂಬಾರಿ ಹೊತ್ತು ಸಾಗರ ಆನೆ ಗಾಂಭೀರ್ಯದಿಂದ ಹೆಜ್ಜೆ ಹಾಕಿದನು.

author img

By ETV Bharat Karnataka Team

Published : 2 hours ago

ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ
ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ (ETV Bharat)

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ದಸರಾದ ವಿಜಯದಶಮಿಯ ಮೆರವಣಿಗೆ ಆರಂಭವಾಗಿದೆ. ನಗರದ ಶಿವಪ್ಪನಾಯಕ ಅರಮನೆಯ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಕೋಟೆ ಆಂಜನೇಯ ದೇವಾಲಯದ ಬಳಿ ಚಾಮುಂಡೇಶ್ವರಿ ತಾಯಿಗೆ ಪುಷ್ಪ ನಮನವನ್ನು ಸಚಿವ ಮಧು ಬಂಗಾರಪ್ಪ ದಂಪತಿ ಸಲ್ಲಿಸಿದರು.

ನಾಡ ಅಧಿದೇವತೆ ಚಾಮುಂಡೇಶ್ವರಿ ಮೂರ್ತಿ ಇರುವ ಅಂಬಾರಿ ಹೊತ್ತು ಸಾಗರ ಆನೆ ಗಂಭೀರವಾಗಿ ಹೆಜ್ಜೆ ಹಾಕಿದನು. ಸಾಗರ ಆನೆಗೆ ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ಸಾಥ್​ ನೀಡಿದವು. ಇದರ ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಕೀಲು ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)
ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)

ನಗರದ ವಿವಿಧ ದೇವತೆಗಳು ಮೆರವಣಿಗೆಯಲ್ಲಿ ಸಾಗಿದವು. ನಗರದ ಅಲ್ಲಮಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ತಹಶೀಲ್ದಾರ್ ಗಿರೀಶ್ ಬನ್ನಿ ಮುಡಿಯಲಿದ್ದಾರೆ. ಮೆರಮಣಿಗೆಯಲ್ಲಿ ಶಾಸಕ ಚನ್ನಬಸಪ್ಪ, ಆಯುಕ್ತರಾದ ಕವಿತಾ ಯೋಗಪ್ಪನವರ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)

ಇದನ್ನೂ ಓದಿ: ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ; 5ನೇ ಬಾರಿಗೆ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ದಸರಾದ ವಿಜಯದಶಮಿಯ ಮೆರವಣಿಗೆ ಆರಂಭವಾಗಿದೆ. ನಗರದ ಶಿವಪ್ಪನಾಯಕ ಅರಮನೆಯ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಕೋಟೆ ಆಂಜನೇಯ ದೇವಾಲಯದ ಬಳಿ ಚಾಮುಂಡೇಶ್ವರಿ ತಾಯಿಗೆ ಪುಷ್ಪ ನಮನವನ್ನು ಸಚಿವ ಮಧು ಬಂಗಾರಪ್ಪ ದಂಪತಿ ಸಲ್ಲಿಸಿದರು.

ನಾಡ ಅಧಿದೇವತೆ ಚಾಮುಂಡೇಶ್ವರಿ ಮೂರ್ತಿ ಇರುವ ಅಂಬಾರಿ ಹೊತ್ತು ಸಾಗರ ಆನೆ ಗಂಭೀರವಾಗಿ ಹೆಜ್ಜೆ ಹಾಕಿದನು. ಸಾಗರ ಆನೆಗೆ ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ಸಾಥ್​ ನೀಡಿದವು. ಇದರ ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಕೀಲು ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)
ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)

ನಗರದ ವಿವಿಧ ದೇವತೆಗಳು ಮೆರವಣಿಗೆಯಲ್ಲಿ ಸಾಗಿದವು. ನಗರದ ಅಲ್ಲಮಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ತಹಶೀಲ್ದಾರ್ ಗಿರೀಶ್ ಬನ್ನಿ ಮುಡಿಯಲಿದ್ದಾರೆ. ಮೆರಮಣಿಗೆಯಲ್ಲಿ ಶಾಸಕ ಚನ್ನಬಸಪ್ಪ, ಆಯುಕ್ತರಾದ ಕವಿತಾ ಯೋಗಪ್ಪನವರ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ಶಿವಮೊಗ್ಗ ದಸರಾ ಮೆರವಣಿಗೆ
ಶಿವಮೊಗ್ಗ ದಸರಾ ಮೆರವಣಿಗೆ (ETV Bharat)

ಇದನ್ನೂ ಓದಿ: ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ; 5ನೇ ಬಾರಿಗೆ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.