ETV Bharat / state

ಬಿಬಿಎಂಪಿಗೆ ₹1,000 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ: ಬಜೆಟ್‌ನಲ್ಲಿ ಬ್ರ್ಯಾಂಡ್‌ ಬೆಂಗಳೂರಿಗೇನು?

author img

By ETV Bharat Karnataka Team

Published : Feb 16, 2024, 4:39 PM IST

ಬಿಬಿಎಂಪಿಗೆ ಒಂದು ಸಾವಿರ ಕೋಟಿ ರೂ ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ ನೀಡಿರುವ ಸಿದ್ದರಾಮಯ್ಯ ಸರ್ಕಾರ, ನಗರಕ್ಕೆ ಭರಪೂರ ಕೊಡುಗೆಗಳನ್ನೂ ಬಜೆಟ್‌ನಲ್ಲಿ ನೀಡಿದೆ. ಅವುಗಳನ್ನು ವಿವರವಾಗಿ ನೋಡೋಣ.

Siddaramaiah government  thousand crore additional tax  tax collection to the BBMP  ತೆರಿಗೆ ಸಂಗ್ರಹ ಗುರಿ  ಸಿಲಿಕಾನ್ ಸಿಟಿಗೆ ಭರಪೂರ ಕೊಡುಗೆ
Siddaramaiah government thousand crore additional tax tax collection to the BBMP ತೆರಿಗೆ ಸಂಗ್ರಹ ಗುರಿ ಸಿಲಿಕಾನ್ ಸಿಟಿಗೆ ಭರಪೂರ ಕೊಡುಗೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕಳೆದ ವರ್ಷಕ್ಕಿಂತ 1,000 ಕೋಟಿ ಹೆಚ್ಚು ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರ ಗುರಿ ನೀಡಲಾಗಿದ್ದು, ಜನರ ಮೇಲೆ ಹೆಚ್ಚುವರಿ ತೆರಿಗೆ ಭಾರ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ 6,000 ಕೋಟಿ ರೂಪಾಯಿ ಸಂಗ್ರಹಕ್ಕೆ ಬಜೆಟ್ ಮೂಲಕ ಸರ್ಕಾರ ಸೂಚಿಸಿದೆ. ಇದೇ ವೇಳೆ ಸಿಲಿಕಾನ್ ಸಿಟಿಗೆ ಭರಪೂರ ಕೊಡುಗೆಗಳೂ ಸಿಕ್ಕಿವೆ.

ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತಿನ ಮೂಲಕ 2,000 ಕೋಟಿ ರೂಪಾಯಿ ಸಂಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮುಂದಿನ ಬಾರಿ ಸಂಗ್ರಹಿಸಲಾಗುವ ಹೆಚ್ಚುವರಿ ತೆರಿಗೆಯಲ್ಲಿ, ಪಾಲಿಕೆ ವ್ಯಾಪ್ತಿಯಲ್ಲಿ 147 ಕಿಮೀ ವ್ಯಾಪ್ತಿಯ ವೈಟ್ ಟ್ಯಾಪಿಂಗ್ ರಸ್ತೆಗಳು ಅಭಿವೃದ್ದಿಗೊಳ್ಳಲಿದೆ. ಸಂಚಾರ ಸಮಸ್ಯೆ ಬಗೆಹರಿಸಲು1700 ಕೋಟಿ ರೂಪಾಯಿ ವೆಚ್ಚದ ವೈಟ್ ಟ್ಯಾಪಿಂಗ್ ಡಿಸೆಂಬರ್ 2025ಕ್ಕೆ ಪೂರ್ಣಗೊಳ್ಳಲಿದೆ. ರಸ್ತೆ ಅಗಲೀಕರಣ, ಟನ್ನೆಲ್ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡಲಾಗಿದೆ. ನಗರದ ಪ್ರಥಮ ಟನ್ನೆಲ್ ರೋಡ್ ಹೆಬ್ಬಾಳ ಜಂಕ್ಷನ್ ಮುಂದಿನ ವರ್ಷ ಪೂರ್ಣಗೊಳ್ಳಲಿದೆ.

ಎಲ್ಲ ಹವಾಮಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ 100 ಕಿಮೀ ರಸ್ತೆಗಳು ಪೂರ್ಣಗೊಳ್ಳಲಿದೆ. ಇನ್ನೂ 100 ಕಿಮೀ ರಸ್ತೆಗಳು ಮುಂದಿನ ಸಾಲಿನಲ್ಲಿ ಪೂರ್ಣಗೊಳ್ಳಲಿದೆ. ಸಂಚಾರ-ಬ್ರ್ಯಾಂಡ್ ಬೆಂಗಳೂರಿನ ಅಡಿಯಲ್ಲಿ ತಜ್ಞರ ಸಮಿತಿಯಿಂದ ವರದಿ ಪಡೆದು ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕೂಡ ನೀಡುವ ಭರವಸೆ ನೀಡಲಾಗಿದೆ. ಪಿಪಿಪಿ ಮಾಡೆಲ್ ಮೂಲಕ 27,000 ಕೋಟಿ ರೂಪಾಯಿ ವೆಚ್ಚದಲ್ಲಿ 73 ಕಿಮೀ ಪೆರಿಫೆರಲ್ ರಿಂಗ್ ರೋಡ್-ಬೆಂಗಳೂರು ಬುಸಿನಸ್ ಕಾರಿಡಾರ್ ನಿರ್ಮಾಣವಾಗಲಿದೆ. ವಿಶ್ವದರ್ಜೆಯ ಪ್ರವಾಸೋದ್ಯಮ ಕೇಂದ್ರವನ್ನಾಗಿ 250 ಮೀ ಎತ್ತರದ ಸ್ಕೈ ಡೆಕ್ ನಿರ್ಮಾಣಮಾಡಲು ಹೆಸರಾಂತ ವಾಸ್ತುಶಿಲ್ಪಿಗಳನ್ನು ಬಳಕೆ ಮಾಡಲಾಗುತ್ತಿದೆ. 20 ಲಕ್ಷ ನಿವೇಶನ, ಮನೆ, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್​​ಗಳನ್ನು ಡಿಜಿಟೈಸಷನ್‌ಗೊಳಿಸಲು ಬಜೆಟ್​ನಲ್ಲಿ ಸೂಚಿಸಲಾಗಿದೆ.

ಅರ್ಬನ್ ಡೆವಲಪ್ಮೆಂಟ್ ಮೂಲಕ ಬಿ.ಬಿ.ಎಂ.ಪಿ, ಬಿ.ಎಂ.ಆರ್.ಸಿ.ಎಲ್, ಬಿ.ಡಬ್ಲ್ಯೂ.ಎಸ್.ಎಸ್.ಬಿ, ಬಿಡಿಎ ಸಂಸ್ಥೆಗಳಿಗಾಗಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿ ವಿದ್ಯುತ್ ಬಿಲ್ ತಗ್ಗಿಸುವ ಪ್ಲಾನ್ ಮಾಡಲಾಗಿದೆ. ನಮ್ಮ ಮೆಟ್ರೋ, ಸಬ್ ಅರ್ಬನ್ ರೈಲು, ಬಿ.ಎಂ.ಟಿ.ಸಿ ಸಂಸ್ಥೆಗಳನ್ನು ಸಂಯೋಜಿಸಿ ಮಾಡೆಲ್ ಪಬ್ಲಿಕ್ ಟ್ರಾಸ್ಪೋರ್ಟ್ ವ್ಯವಸ್ಥೆಯನ್ನು ತರಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ.

74 ಕಿ.ಮೀ ಉದ್ದದ 8 ಲಕ್ಷಕ್ಕೂ ಹೆಚ್ಚಿನ ಜನರು ಬಳಸುವ ನಮ್ಮ ಮೆಟ್ರೋ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದೆ. 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿ 44 ಕಿ.ಮೀ ಮಾರ್ಗವನ್ನು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ನಮ್ಮ ಮೆಟ್ರೋ ಹಂತ-2 ಮತ್ತು 2ಎ ಯೋಜನೆಯಡಿಯಲ್ಲಿನ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವನ್ನು 2026ರ ಜೂನ್‌ ವೇಳೆಗೆ ಪೂರ್ಣಗೊಳಿಸಲಾಗುತ್ತಿದೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ನಮ್ಮ ಮೆಟ್ರೋ ಹಂತ-3 ರ ಅಡಿಯಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮೆಟ್ರೋ ಹಂತ-3 ರ ಯೋಜನೆಯಲ್ಲಿ ಸರ್ಜಾಪುರದ ಅಗರದಿಂದ- ಕೋರಮಂಗಲ ಡೈರಿ ವೃತ್ತ ಮತ್ತು ಮೇಖ್ರಿ ವೃತ್ತದಿಂದ- ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆಲ್ಲ ಡಿ.ಪಿ.ಆರ್. ಕರಡು ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್​ನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಯಲ್ಲಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2 ಸಿವಿಲ್‌ ಕಾಮಗಾರಿಗೆ ವೇಗ ನೀಡಲಾಗುತ್ತಿದೆ. ಕಾರಿಡಾರ್‌-4 ರ ಅಡಿಯಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ.

ಬಜೆಟ್​ನಲ್ಲಿ 42 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್​ಗಳ ಸೇರ್ಪಡೆಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ನಗರ ಸಾರಿಗೆ ಬಸ್‌ಗಳಲ್ಲಿ ವಾಹನ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತಿದೆ. ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್​ಗಳನ್ನು ಸಿಲಿಕಾನ್ ಸಿಟಿಯ 28 ಜಂಕ್ಷನ್‌ಗಳಲ್ಲಿ ಅಳವಡಿಕೆ. ಇದರಿಂದ ಟ್ರಾಫಿಕ್‌ ಸಿಗ್ನಲ್​ನಲ್ಲಿ ವಾಹನಗಳ ದಟ್ಟಣೆ ಶೇ.30ರಷ್ಟು ಕಡಿಮೆಯಾಗಲಿದೆ.

ಇದನ್ನೂ ಓದಿ: ಉಪ್ಪು ಹುಳಿ ಖಾರ ಇಲ್ಲದ ಜನ ವಿರೋಧಿ ಬಜೆಟ್: ಸಿಎಂ ನಿಲುವು ಖಂಡಿಸಿ ಬಿಜೆಪಿ ಸಭಾತ್ಯಾಗ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕಳೆದ ವರ್ಷಕ್ಕಿಂತ 1,000 ಕೋಟಿ ಹೆಚ್ಚು ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರ ಗುರಿ ನೀಡಲಾಗಿದ್ದು, ಜನರ ಮೇಲೆ ಹೆಚ್ಚುವರಿ ತೆರಿಗೆ ಭಾರ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ 6,000 ಕೋಟಿ ರೂಪಾಯಿ ಸಂಗ್ರಹಕ್ಕೆ ಬಜೆಟ್ ಮೂಲಕ ಸರ್ಕಾರ ಸೂಚಿಸಿದೆ. ಇದೇ ವೇಳೆ ಸಿಲಿಕಾನ್ ಸಿಟಿಗೆ ಭರಪೂರ ಕೊಡುಗೆಗಳೂ ಸಿಕ್ಕಿವೆ.

ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತಿನ ಮೂಲಕ 2,000 ಕೋಟಿ ರೂಪಾಯಿ ಸಂಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮುಂದಿನ ಬಾರಿ ಸಂಗ್ರಹಿಸಲಾಗುವ ಹೆಚ್ಚುವರಿ ತೆರಿಗೆಯಲ್ಲಿ, ಪಾಲಿಕೆ ವ್ಯಾಪ್ತಿಯಲ್ಲಿ 147 ಕಿಮೀ ವ್ಯಾಪ್ತಿಯ ವೈಟ್ ಟ್ಯಾಪಿಂಗ್ ರಸ್ತೆಗಳು ಅಭಿವೃದ್ದಿಗೊಳ್ಳಲಿದೆ. ಸಂಚಾರ ಸಮಸ್ಯೆ ಬಗೆಹರಿಸಲು1700 ಕೋಟಿ ರೂಪಾಯಿ ವೆಚ್ಚದ ವೈಟ್ ಟ್ಯಾಪಿಂಗ್ ಡಿಸೆಂಬರ್ 2025ಕ್ಕೆ ಪೂರ್ಣಗೊಳ್ಳಲಿದೆ. ರಸ್ತೆ ಅಗಲೀಕರಣ, ಟನ್ನೆಲ್ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡಲಾಗಿದೆ. ನಗರದ ಪ್ರಥಮ ಟನ್ನೆಲ್ ರೋಡ್ ಹೆಬ್ಬಾಳ ಜಂಕ್ಷನ್ ಮುಂದಿನ ವರ್ಷ ಪೂರ್ಣಗೊಳ್ಳಲಿದೆ.

ಎಲ್ಲ ಹವಾಮಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ 100 ಕಿಮೀ ರಸ್ತೆಗಳು ಪೂರ್ಣಗೊಳ್ಳಲಿದೆ. ಇನ್ನೂ 100 ಕಿಮೀ ರಸ್ತೆಗಳು ಮುಂದಿನ ಸಾಲಿನಲ್ಲಿ ಪೂರ್ಣಗೊಳ್ಳಲಿದೆ. ಸಂಚಾರ-ಬ್ರ್ಯಾಂಡ್ ಬೆಂಗಳೂರಿನ ಅಡಿಯಲ್ಲಿ ತಜ್ಞರ ಸಮಿತಿಯಿಂದ ವರದಿ ಪಡೆದು ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕೂಡ ನೀಡುವ ಭರವಸೆ ನೀಡಲಾಗಿದೆ. ಪಿಪಿಪಿ ಮಾಡೆಲ್ ಮೂಲಕ 27,000 ಕೋಟಿ ರೂಪಾಯಿ ವೆಚ್ಚದಲ್ಲಿ 73 ಕಿಮೀ ಪೆರಿಫೆರಲ್ ರಿಂಗ್ ರೋಡ್-ಬೆಂಗಳೂರು ಬುಸಿನಸ್ ಕಾರಿಡಾರ್ ನಿರ್ಮಾಣವಾಗಲಿದೆ. ವಿಶ್ವದರ್ಜೆಯ ಪ್ರವಾಸೋದ್ಯಮ ಕೇಂದ್ರವನ್ನಾಗಿ 250 ಮೀ ಎತ್ತರದ ಸ್ಕೈ ಡೆಕ್ ನಿರ್ಮಾಣಮಾಡಲು ಹೆಸರಾಂತ ವಾಸ್ತುಶಿಲ್ಪಿಗಳನ್ನು ಬಳಕೆ ಮಾಡಲಾಗುತ್ತಿದೆ. 20 ಲಕ್ಷ ನಿವೇಶನ, ಮನೆ, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್​​ಗಳನ್ನು ಡಿಜಿಟೈಸಷನ್‌ಗೊಳಿಸಲು ಬಜೆಟ್​ನಲ್ಲಿ ಸೂಚಿಸಲಾಗಿದೆ.

ಅರ್ಬನ್ ಡೆವಲಪ್ಮೆಂಟ್ ಮೂಲಕ ಬಿ.ಬಿ.ಎಂ.ಪಿ, ಬಿ.ಎಂ.ಆರ್.ಸಿ.ಎಲ್, ಬಿ.ಡಬ್ಲ್ಯೂ.ಎಸ್.ಎಸ್.ಬಿ, ಬಿಡಿಎ ಸಂಸ್ಥೆಗಳಿಗಾಗಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿ ವಿದ್ಯುತ್ ಬಿಲ್ ತಗ್ಗಿಸುವ ಪ್ಲಾನ್ ಮಾಡಲಾಗಿದೆ. ನಮ್ಮ ಮೆಟ್ರೋ, ಸಬ್ ಅರ್ಬನ್ ರೈಲು, ಬಿ.ಎಂ.ಟಿ.ಸಿ ಸಂಸ್ಥೆಗಳನ್ನು ಸಂಯೋಜಿಸಿ ಮಾಡೆಲ್ ಪಬ್ಲಿಕ್ ಟ್ರಾಸ್ಪೋರ್ಟ್ ವ್ಯವಸ್ಥೆಯನ್ನು ತರಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ.

74 ಕಿ.ಮೀ ಉದ್ದದ 8 ಲಕ್ಷಕ್ಕೂ ಹೆಚ್ಚಿನ ಜನರು ಬಳಸುವ ನಮ್ಮ ಮೆಟ್ರೋ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದೆ. 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿ 44 ಕಿ.ಮೀ ಮಾರ್ಗವನ್ನು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ನಮ್ಮ ಮೆಟ್ರೋ ಹಂತ-2 ಮತ್ತು 2ಎ ಯೋಜನೆಯಡಿಯಲ್ಲಿನ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವನ್ನು 2026ರ ಜೂನ್‌ ವೇಳೆಗೆ ಪೂರ್ಣಗೊಳಿಸಲಾಗುತ್ತಿದೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ನಮ್ಮ ಮೆಟ್ರೋ ಹಂತ-3 ರ ಅಡಿಯಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮೆಟ್ರೋ ಹಂತ-3 ರ ಯೋಜನೆಯಲ್ಲಿ ಸರ್ಜಾಪುರದ ಅಗರದಿಂದ- ಕೋರಮಂಗಲ ಡೈರಿ ವೃತ್ತ ಮತ್ತು ಮೇಖ್ರಿ ವೃತ್ತದಿಂದ- ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆಲ್ಲ ಡಿ.ಪಿ.ಆರ್. ಕರಡು ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್​ನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಯಲ್ಲಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2 ಸಿವಿಲ್‌ ಕಾಮಗಾರಿಗೆ ವೇಗ ನೀಡಲಾಗುತ್ತಿದೆ. ಕಾರಿಡಾರ್‌-4 ರ ಅಡಿಯಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ.

ಬಜೆಟ್​ನಲ್ಲಿ 42 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್​ಗಳ ಸೇರ್ಪಡೆಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ನಗರ ಸಾರಿಗೆ ಬಸ್‌ಗಳಲ್ಲಿ ವಾಹನ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತಿದೆ. ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್​ಗಳನ್ನು ಸಿಲಿಕಾನ್ ಸಿಟಿಯ 28 ಜಂಕ್ಷನ್‌ಗಳಲ್ಲಿ ಅಳವಡಿಕೆ. ಇದರಿಂದ ಟ್ರಾಫಿಕ್‌ ಸಿಗ್ನಲ್​ನಲ್ಲಿ ವಾಹನಗಳ ದಟ್ಟಣೆ ಶೇ.30ರಷ್ಟು ಕಡಿಮೆಯಾಗಲಿದೆ.

ಇದನ್ನೂ ಓದಿ: ಉಪ್ಪು ಹುಳಿ ಖಾರ ಇಲ್ಲದ ಜನ ವಿರೋಧಿ ಬಜೆಟ್: ಸಿಎಂ ನಿಲುವು ಖಂಡಿಸಿ ಬಿಜೆಪಿ ಸಭಾತ್ಯಾಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.