ETV Bharat / state

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Prosecution against Siddaramaiah

author img

By ETV Bharat Karnataka Team

Published : Aug 31, 2024, 8:03 PM IST

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿರುವ ಪ್ರಕರಣ ಸಂಬಂಧ ಹೈಕೋರ್ಟ್​ನಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ ವಿವಾದ ಆಲಿಸಿದ ಬಳಿಕ ನ್ಯಾಯಪೀಠ, ವಿಚಾರಣೆಯಲ್ಲಿ ಸೋಮವಾರಕ್ಕೆ ಮುಂದೂಡಿತು.

ಸಿದ್ದರಾಮಯ್ಯ, ಹೈಕೋರ್ಟ್
ಸಿದ್ದರಾಮಯ್ಯ, ಹೈಕೋರ್ಟ್ (ETV Bharat)

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವೇಚನೆ ಬಳಸಿಯೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯಪಾಲರ ಪರ ವಕೀಲರು ಹೈಕೋರ್ಟ್​​​ನಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ರಾಜ್ಯಪಾಲರು ಮತ್ತು ದೂರುದಾರರ ಪರ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಕರಣದಲ್ಲಿ ರಾಜ್ಯಪಾಲರು ವಿವೇಚನೆ ಬಳಸಿಲ್ಲ, ಸಹಜ‌ ನ್ಯಾಯ ಪಾಲನೆ ಮಾಡಿಲ್ಲ ಎಂಬ ಅರ್ಜಿದಾರರ ಆಕ್ಷೇಪಗಳಿಗೆ ದಾಖಲೆಗಳ ಸಹಿತ ವಿವರಿಸಿದರು.

ಪ್ರಾಸಿಕ್ಯೂಷನ್ ಅನುಮತಿ ನೀಡುವಾಗ ರಾಜ್ಯಪಾಲರು ವಿವೇಚನೆ ಬಳಸಿಲ್ಲ, ಭ್ರಷ್ಟಾಚಾರ‌ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅಡಿ ಮಾನದಂಡ ಪಾಲನೆ ಮಾಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಆದರೆ, ಸೆಕ್ಷನ್ 17ಎ ಅಡಿಯಲ್ಲಿ ಮೇಲ್ನೋಟಕ್ಕೆ ಅಪರಾಧ ಅಂಶಗಳು ಕಂಡು ಬರುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗುತ್ತದೆ. ಈ ಹಂತದಲ್ಲಿ ಶೋಕಾಸ್ ನೋಟಿಸ್‌ ನೀಡಲೇಬೇಕೆಂಬ ನಿಯಮವಿಲ್ಲ. ಟಿ.ಜೆ.ಅಬ್ರಹಾಂ ಅರ್ಜಿ ಸಂಬಂಧ ಶೋಕಾಸ್ ನೋಟಿಸ್ ನೀಡಿ, ಉಳಿದ ಇಬ್ಬರ ಅರ್ಜಿದಾರರ ಅರ್ಜಿಗಳ ಸಂಬಂದ ಶೋಕಾಸ್ ನೋಟಿಸ್ ನೀಡಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳುತ್ತಿದ್ದಾರೆ‌‌‌. ಆದರೆ, ಮೂವರು ಒಂದೇ ರೀತಿಯ ಆರೋಪದಲ್ಲಿ ಅನುಮತಿ ಕೇಳಿದ್ದು, ಎಲ್ಲ ಪ್ರಕರಣಗಳಲ್ಲಿಯೂ ಅನುಮತಿ ಕೇಳಬೇಕು ಎಂಬ ನಿಯಮವಿಲ್ಲ ಎಂದು ಅವರು ವಿವರಿಸಿದರು.

ಅಲ್ಲದೆ, ಮೂರೂ ದೂರುಗಳಲ್ಲಿ ಒಂದೇ ಆರೋಪ ಇರುವುದರಿಂದ ರಾಜ್ಯಪಾಲರು ತುಲನಾತ್ಮಕ ಚಾರ್ಟ್ ಸಿದ್ಧಪಡಿಸಿದ್ದಾರೆ. ಹೀಗಾಗಿಯೇ ಉಳಿದಿಬ್ಬರ ದೂರಿನಲ್ಲಿ ಶೋಕಾಸ್ ನೋಟಿಸ್ ನೀಡುವ ಅಗತ್ಯವಿಲ್ಲ. ಅಲ್ಲದೆ, ಸಚಿವ ಸಂಪುಟದ ನಿರ್ಣಯ ಪರಿಗಣಿಸಿಲ್ಲ‌ ಎಂಬ ಬಗ್ಗೆಯೂ ರಾಜ್ಯಪಾಲರು ತಮ್ಮ ಆದೇಶದಲ್ಲಿ ವಿವರವಾಗಿ ಹೇಳಿದ್ದಾರೆ. ಸಂಪುಟ ಸಚಿವರನ್ನು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಿಯೋಜನೆ ಮಾಡಲಾಗುತ್ತದೆ. ಆ ಸಚಿವರು ಮುಖ್ಯಮಂತ್ರಿಗೆ ನಿಷ್ಠರಾಗಿರುತ್ತಾರೆ. ಮುಖ್ಯಮಂತ್ರಿ ವಿರುದ್ಧ ಆರೋಪ ಬಂದಾಗ, ಆ ಸಚಿವ ಸಂಪುಟದ ಸಚಿವರ ಸಲಹೆ ಹಾಗೂ ಶಿಫಾರಸ್ಸನ್ನು ರಾಜ್ಯಪಾಲರು ಒಪ್ಪಬೇಕಿಲ್ಲ ಹಾಗೂ‌ ಪರಿಗಣಿಸಬೇಕಿಲ್ಲ. ಆದರೂ ಸಚಿವ ಸಂಪುಟದ ಸಲಹೆಯನ್ನು‌ ರಾಜ್ಯಪಾಲರು ಪರಿಶೀಲಿಸಿ ಉತ್ತರಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸದಿದ್ದರೂ, ಅವರೇ ನೇಮಿಸಿದ ಉಪಮುಖ್ಯಮಂತ್ರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಂತಹ ಸಭೆಯ ನಿರ್ಣಯ‌ ಪಕ್ಷಪಾತದಿಂದ ಕೂಡಿರುವ ಸಾಧ್ಯತೆ ಇರಲಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ನಿರ್ಧಾರ ಕೈಗೊಳ್ಳಬಹುದು ಎಂದು ಮೆಹ್ತಾ ವಾದದಲ್ಲಿ ತಿಳಿಸಿದರು.

ಅತಿ ದೊಡ್ಡ ನಿರ್ಣಯ: ರಾಜ್ಯಪಾಲರಿಗೆ 91 ಪುಟಗಳ ಸಚಿವ ಸಂಪುಟದ ತೀರ್ಮಾನ ಸಲ್ಲಿಸಲಾಗಿದೆ. ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಅತಿದೊಡ್ಡ ಸಚಿವ ಸಂಪುಟದ ನಿರ್ಣಯ ತೆಗೆದುಕೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ವಾಸ್ತವಿಕ ಅಂಶಗಳನ್ನು ಪರಿಶೀಲಿಸಿ ರಾಜ್ಯ ಅಡ್ವೋಕೇಟ್ ಜನರಲ್‌ಗೆ (ಎಜಿ) ಕಳುಹಿಸಿದ್ದಾರೆ.‌ ಅದರ ಆಧಾರದ ಮೇಲೆ ಎಜಿ ಅಭಿಪ್ರಾಯ ನೀಡಿದ್ದಾರೆ. ಆ ಅಭಿಪ್ರಾಯವನ್ನು ಕ್ಯಾಬಿನೆಟ್ ಅಕ್ಷರಶಃ ಕಾಪಿ (ನಕಲು) ಮಾಡಿದೆ. ಎಜಿ ಅಭಿಪ್ರಾಯವನ್ನು ಅಲ್ಪ ವಿರಾಮ, ಪೂರ್ಣವಿರಾಮಗಳನ್ನೂ ಬಿಡದೇ ಯಥಾವತ್ತಾಗಿ ಅಂಗೀಕರಿಸಿದೆ. ಬೆಂಗಳೂರು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ಆದರೆ, ಎಜಿ ಅವರ ಅಭಿಪ್ರಾಯವನ್ನೇ ಸಂಪುಟದ ನಿರ್ಣಯದ ಹೆಸರಿನಲ್ಲಿ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜ್ಯ ಸಂಪುಟದ ಸಚಿವರಾಗಲಿ, ಮುಖ್ಯಮಂತ್ರಿಗಳಾಗಲಿ ತಮ್ಮ ವಿವೇಚನೆಯನ್ನೇ ಬಳಸಿಲ್ಲ ಎಂದು ಮೆಹ್ತಾ ವಿವರಿಸಿದರು.

ಸಾಂವಿಧಾನಿಕ ಹುದ್ದೆಗಳ ಕುರಿತು ಗೌರವ: ರಾಜ್ಯಪಾಲರ ಬಗ್ಗೆ ಫ್ರೆಂಡ್ಲಿ ಗವರ್ನರ್, ಕಾಮಿಕಲ್ ಎಂಬ ಶಬ್ದಗಳನ್ನು ಅರ್ಜಿದಾರರ ಪರ ವಕೀಲರು ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿಗಳ ಬಗ್ಗೆ ನಾವು ಅಂತಹ ಪದ ಬಳಸುವುದಿಲ್ಲ. ಸಾಂವಿಧಾನಿಕ ಹುದ್ದೆಗಳ ಬಗ್ಗೆ ಗೌರವ ಇರಬೇಕು. ಕೆಲವೊಮ್ಮೆ ದೂರುಗಳ ಬಗ್ಗೆ ತ್ವರಿತವಾಗಿ ಪ್ರತಿಕ್ರಿಯಿಸಬೇಕಿರುತ್ತದೆ. ಎಲ್ಲ ಅಂಶಗಳು ಕಡತದಲ್ಲಿ‌ರುವಾಗ ಅದನ್ನು ಆದೇಶದಲ್ಲಿ ಹೇಳಬೇಕೆಂದಿಲ್ಲ. ಅರ್ಜಿದಾರರು ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ತಾವು ಯಾವುದೇ ಶಿಫಾರಸು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಅವರು ಚಿಂತಿಸುತ್ತಿರುವುದೇಕೆ? ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿರುವುದೇಕೆ ಎಂದ ವಾದದಲ್ಲಿ ಪ್ರಶ್ನಿಸಿದರು.

ದೂರುದಾರ ಟಿ.ಜೆ.ಅಬ್ರಹಾಂ ಪರ ವಾದ ಮಂಡಿಸಿ ರಂಗನಾಥ ರೆಡ್ಡಿ, ಮುಡಾದಲ್ಲಿ ನಿವೇಶನ ಹಂಚಿಕೆ ನಡೆದ ಸಂದರ್ಭದಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಅಥವಾ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಿವೇಶನ ಹಂಚಿಕೆಯಾಗಿದ್ದರಿಂದ ಭೂಮಿ ಇವರ ಸ್ವಾಧೀನದಲ್ಲಿರಲಿಲ್ಲ. ಇಲ್ಲದಿರುವ ಜಮೀನಿಗೆ ಮುಖ್ಯಮಂತ್ರಿಗಳ ಪತ್ನಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪರಿಹಾರ ಪಡೆದುಕೊಂಡಿದ್ದಾರೆ. 2021 ರಲ್ಲಿ 50/50 ನಿವೇಶನ ಹಂಚಿಕೆಗೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪುತ್ರ ಹಾಗೂ ಸ್ಥಳೀಯ ಶಾಸಕರಾಗಿದ್ದ ಯತೀಂದ್ರ ಭಾಗಿಯಾಗಿದ್ದರು ಎಂದು ಪೀಠಕ್ಕೆ ತಿಳಿಸಿದರು.

ದೂರುದಾರರಲ್ಲಿ ಒಬ್ಬರಾದ ಸ್ನೆಹಮಹಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲರಾದ ಮಣೀಂದರ್ ಸಿಂಗ್, ''ಮುಡಾ ಅಭಿವೃದ್ಧಿಪಡಿಸಿದ ಭೂಮಿಯನ್ನು ಕಂದಾಯ ಭೂಮಿ ಎಂಬುದಾಗಿ‌ ತೋರಿಸಲಾಗಿದೆ. ಇದರಿಂದ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮೇಲ್ನೋಟಕ್ಕೆ‌ ತಿಳಿಯಲಿದೆ. ಪ್ರಕರಣ ಸಂಬಂಧ ರಂಜನೆ ಮಾಡಬೇಕು ಎಂಬುದು ನಮ್ಮ ಉದ್ದೇಶವಲ್ಲ. ಆದರೂ, ತನಿಖೆ ನಡೆಯಬೇಕು. ‌ಸತ್ಯಾಂಶ ಹೊರಬರಬೇಕು ಎನ್ನುವುದೇ ನಮ್ಮ ಉದ್ದೇಶ'' ಎಂದರು.

ಮತ್ತೊಬ್ಬ ದೂರುದಾರ ಪ್ರದೀಪ್​ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವೇ ಇಲ್ಲ ಎಂದು ಈವರೆಗೂ ಯಾರು ಹೇಳಿಲ್ಲ. ಕೆಲ ಸಂದರ್ಭಗಳಲ್ಲಿ ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡುವ ಅರ್ಹತೆ ಕಳೆದುಕೊಳ್ಳುತ್ತದೆ. ಸರ್ಕಾರ ತನಿಖೆಗೆಂದು ಆಯೋಗ ರಚಿಸಿದೆ. ಅದರ ಪ್ರಶ್ನಾವಳಿ ನೋಡಿ. ಸರ್ಕಾರಕ್ಕೆ ಮೇಲ್ನೋಟಕ್ಕೆ ಅಕ್ರಮಗಳ ಬಗ್ಗೆ ಕಂಡುಬಂದಿದೆ. ಹೀಗಾಗಿಯೇ ನಿವೇಶನ ಹಂಚಿಕೆಯ ಅಕ್ರಮದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಇದನ್ನೂ ಓದಿ: ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಏನಿದೆ? - congress Appeal Governor

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವೇಚನೆ ಬಳಸಿಯೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯಪಾಲರ ಪರ ವಕೀಲರು ಹೈಕೋರ್ಟ್​​​ನಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ರಾಜ್ಯಪಾಲರು ಮತ್ತು ದೂರುದಾರರ ಪರ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಕರಣದಲ್ಲಿ ರಾಜ್ಯಪಾಲರು ವಿವೇಚನೆ ಬಳಸಿಲ್ಲ, ಸಹಜ‌ ನ್ಯಾಯ ಪಾಲನೆ ಮಾಡಿಲ್ಲ ಎಂಬ ಅರ್ಜಿದಾರರ ಆಕ್ಷೇಪಗಳಿಗೆ ದಾಖಲೆಗಳ ಸಹಿತ ವಿವರಿಸಿದರು.

ಪ್ರಾಸಿಕ್ಯೂಷನ್ ಅನುಮತಿ ನೀಡುವಾಗ ರಾಜ್ಯಪಾಲರು ವಿವೇಚನೆ ಬಳಸಿಲ್ಲ, ಭ್ರಷ್ಟಾಚಾರ‌ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅಡಿ ಮಾನದಂಡ ಪಾಲನೆ ಮಾಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಆದರೆ, ಸೆಕ್ಷನ್ 17ಎ ಅಡಿಯಲ್ಲಿ ಮೇಲ್ನೋಟಕ್ಕೆ ಅಪರಾಧ ಅಂಶಗಳು ಕಂಡು ಬರುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗುತ್ತದೆ. ಈ ಹಂತದಲ್ಲಿ ಶೋಕಾಸ್ ನೋಟಿಸ್‌ ನೀಡಲೇಬೇಕೆಂಬ ನಿಯಮವಿಲ್ಲ. ಟಿ.ಜೆ.ಅಬ್ರಹಾಂ ಅರ್ಜಿ ಸಂಬಂಧ ಶೋಕಾಸ್ ನೋಟಿಸ್ ನೀಡಿ, ಉಳಿದ ಇಬ್ಬರ ಅರ್ಜಿದಾರರ ಅರ್ಜಿಗಳ ಸಂಬಂದ ಶೋಕಾಸ್ ನೋಟಿಸ್ ನೀಡಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳುತ್ತಿದ್ದಾರೆ‌‌‌. ಆದರೆ, ಮೂವರು ಒಂದೇ ರೀತಿಯ ಆರೋಪದಲ್ಲಿ ಅನುಮತಿ ಕೇಳಿದ್ದು, ಎಲ್ಲ ಪ್ರಕರಣಗಳಲ್ಲಿಯೂ ಅನುಮತಿ ಕೇಳಬೇಕು ಎಂಬ ನಿಯಮವಿಲ್ಲ ಎಂದು ಅವರು ವಿವರಿಸಿದರು.

ಅಲ್ಲದೆ, ಮೂರೂ ದೂರುಗಳಲ್ಲಿ ಒಂದೇ ಆರೋಪ ಇರುವುದರಿಂದ ರಾಜ್ಯಪಾಲರು ತುಲನಾತ್ಮಕ ಚಾರ್ಟ್ ಸಿದ್ಧಪಡಿಸಿದ್ದಾರೆ. ಹೀಗಾಗಿಯೇ ಉಳಿದಿಬ್ಬರ ದೂರಿನಲ್ಲಿ ಶೋಕಾಸ್ ನೋಟಿಸ್ ನೀಡುವ ಅಗತ್ಯವಿಲ್ಲ. ಅಲ್ಲದೆ, ಸಚಿವ ಸಂಪುಟದ ನಿರ್ಣಯ ಪರಿಗಣಿಸಿಲ್ಲ‌ ಎಂಬ ಬಗ್ಗೆಯೂ ರಾಜ್ಯಪಾಲರು ತಮ್ಮ ಆದೇಶದಲ್ಲಿ ವಿವರವಾಗಿ ಹೇಳಿದ್ದಾರೆ. ಸಂಪುಟ ಸಚಿವರನ್ನು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಿಯೋಜನೆ ಮಾಡಲಾಗುತ್ತದೆ. ಆ ಸಚಿವರು ಮುಖ್ಯಮಂತ್ರಿಗೆ ನಿಷ್ಠರಾಗಿರುತ್ತಾರೆ. ಮುಖ್ಯಮಂತ್ರಿ ವಿರುದ್ಧ ಆರೋಪ ಬಂದಾಗ, ಆ ಸಚಿವ ಸಂಪುಟದ ಸಚಿವರ ಸಲಹೆ ಹಾಗೂ ಶಿಫಾರಸ್ಸನ್ನು ರಾಜ್ಯಪಾಲರು ಒಪ್ಪಬೇಕಿಲ್ಲ ಹಾಗೂ‌ ಪರಿಗಣಿಸಬೇಕಿಲ್ಲ. ಆದರೂ ಸಚಿವ ಸಂಪುಟದ ಸಲಹೆಯನ್ನು‌ ರಾಜ್ಯಪಾಲರು ಪರಿಶೀಲಿಸಿ ಉತ್ತರಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸದಿದ್ದರೂ, ಅವರೇ ನೇಮಿಸಿದ ಉಪಮುಖ್ಯಮಂತ್ರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಂತಹ ಸಭೆಯ ನಿರ್ಣಯ‌ ಪಕ್ಷಪಾತದಿಂದ ಕೂಡಿರುವ ಸಾಧ್ಯತೆ ಇರಲಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ನಿರ್ಧಾರ ಕೈಗೊಳ್ಳಬಹುದು ಎಂದು ಮೆಹ್ತಾ ವಾದದಲ್ಲಿ ತಿಳಿಸಿದರು.

ಅತಿ ದೊಡ್ಡ ನಿರ್ಣಯ: ರಾಜ್ಯಪಾಲರಿಗೆ 91 ಪುಟಗಳ ಸಚಿವ ಸಂಪುಟದ ತೀರ್ಮಾನ ಸಲ್ಲಿಸಲಾಗಿದೆ. ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಅತಿದೊಡ್ಡ ಸಚಿವ ಸಂಪುಟದ ನಿರ್ಣಯ ತೆಗೆದುಕೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ವಾಸ್ತವಿಕ ಅಂಶಗಳನ್ನು ಪರಿಶೀಲಿಸಿ ರಾಜ್ಯ ಅಡ್ವೋಕೇಟ್ ಜನರಲ್‌ಗೆ (ಎಜಿ) ಕಳುಹಿಸಿದ್ದಾರೆ.‌ ಅದರ ಆಧಾರದ ಮೇಲೆ ಎಜಿ ಅಭಿಪ್ರಾಯ ನೀಡಿದ್ದಾರೆ. ಆ ಅಭಿಪ್ರಾಯವನ್ನು ಕ್ಯಾಬಿನೆಟ್ ಅಕ್ಷರಶಃ ಕಾಪಿ (ನಕಲು) ಮಾಡಿದೆ. ಎಜಿ ಅಭಿಪ್ರಾಯವನ್ನು ಅಲ್ಪ ವಿರಾಮ, ಪೂರ್ಣವಿರಾಮಗಳನ್ನೂ ಬಿಡದೇ ಯಥಾವತ್ತಾಗಿ ಅಂಗೀಕರಿಸಿದೆ. ಬೆಂಗಳೂರು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ಆದರೆ, ಎಜಿ ಅವರ ಅಭಿಪ್ರಾಯವನ್ನೇ ಸಂಪುಟದ ನಿರ್ಣಯದ ಹೆಸರಿನಲ್ಲಿ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜ್ಯ ಸಂಪುಟದ ಸಚಿವರಾಗಲಿ, ಮುಖ್ಯಮಂತ್ರಿಗಳಾಗಲಿ ತಮ್ಮ ವಿವೇಚನೆಯನ್ನೇ ಬಳಸಿಲ್ಲ ಎಂದು ಮೆಹ್ತಾ ವಿವರಿಸಿದರು.

ಸಾಂವಿಧಾನಿಕ ಹುದ್ದೆಗಳ ಕುರಿತು ಗೌರವ: ರಾಜ್ಯಪಾಲರ ಬಗ್ಗೆ ಫ್ರೆಂಡ್ಲಿ ಗವರ್ನರ್, ಕಾಮಿಕಲ್ ಎಂಬ ಶಬ್ದಗಳನ್ನು ಅರ್ಜಿದಾರರ ಪರ ವಕೀಲರು ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿಗಳ ಬಗ್ಗೆ ನಾವು ಅಂತಹ ಪದ ಬಳಸುವುದಿಲ್ಲ. ಸಾಂವಿಧಾನಿಕ ಹುದ್ದೆಗಳ ಬಗ್ಗೆ ಗೌರವ ಇರಬೇಕು. ಕೆಲವೊಮ್ಮೆ ದೂರುಗಳ ಬಗ್ಗೆ ತ್ವರಿತವಾಗಿ ಪ್ರತಿಕ್ರಿಯಿಸಬೇಕಿರುತ್ತದೆ. ಎಲ್ಲ ಅಂಶಗಳು ಕಡತದಲ್ಲಿ‌ರುವಾಗ ಅದನ್ನು ಆದೇಶದಲ್ಲಿ ಹೇಳಬೇಕೆಂದಿಲ್ಲ. ಅರ್ಜಿದಾರರು ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ತಾವು ಯಾವುದೇ ಶಿಫಾರಸು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಅವರು ಚಿಂತಿಸುತ್ತಿರುವುದೇಕೆ? ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿರುವುದೇಕೆ ಎಂದ ವಾದದಲ್ಲಿ ಪ್ರಶ್ನಿಸಿದರು.

ದೂರುದಾರ ಟಿ.ಜೆ.ಅಬ್ರಹಾಂ ಪರ ವಾದ ಮಂಡಿಸಿ ರಂಗನಾಥ ರೆಡ್ಡಿ, ಮುಡಾದಲ್ಲಿ ನಿವೇಶನ ಹಂಚಿಕೆ ನಡೆದ ಸಂದರ್ಭದಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಅಥವಾ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಿವೇಶನ ಹಂಚಿಕೆಯಾಗಿದ್ದರಿಂದ ಭೂಮಿ ಇವರ ಸ್ವಾಧೀನದಲ್ಲಿರಲಿಲ್ಲ. ಇಲ್ಲದಿರುವ ಜಮೀನಿಗೆ ಮುಖ್ಯಮಂತ್ರಿಗಳ ಪತ್ನಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪರಿಹಾರ ಪಡೆದುಕೊಂಡಿದ್ದಾರೆ. 2021 ರಲ್ಲಿ 50/50 ನಿವೇಶನ ಹಂಚಿಕೆಗೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪುತ್ರ ಹಾಗೂ ಸ್ಥಳೀಯ ಶಾಸಕರಾಗಿದ್ದ ಯತೀಂದ್ರ ಭಾಗಿಯಾಗಿದ್ದರು ಎಂದು ಪೀಠಕ್ಕೆ ತಿಳಿಸಿದರು.

ದೂರುದಾರರಲ್ಲಿ ಒಬ್ಬರಾದ ಸ್ನೆಹಮಹಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲರಾದ ಮಣೀಂದರ್ ಸಿಂಗ್, ''ಮುಡಾ ಅಭಿವೃದ್ಧಿಪಡಿಸಿದ ಭೂಮಿಯನ್ನು ಕಂದಾಯ ಭೂಮಿ ಎಂಬುದಾಗಿ‌ ತೋರಿಸಲಾಗಿದೆ. ಇದರಿಂದ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮೇಲ್ನೋಟಕ್ಕೆ‌ ತಿಳಿಯಲಿದೆ. ಪ್ರಕರಣ ಸಂಬಂಧ ರಂಜನೆ ಮಾಡಬೇಕು ಎಂಬುದು ನಮ್ಮ ಉದ್ದೇಶವಲ್ಲ. ಆದರೂ, ತನಿಖೆ ನಡೆಯಬೇಕು. ‌ಸತ್ಯಾಂಶ ಹೊರಬರಬೇಕು ಎನ್ನುವುದೇ ನಮ್ಮ ಉದ್ದೇಶ'' ಎಂದರು.

ಮತ್ತೊಬ್ಬ ದೂರುದಾರ ಪ್ರದೀಪ್​ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವೇ ಇಲ್ಲ ಎಂದು ಈವರೆಗೂ ಯಾರು ಹೇಳಿಲ್ಲ. ಕೆಲ ಸಂದರ್ಭಗಳಲ್ಲಿ ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡುವ ಅರ್ಹತೆ ಕಳೆದುಕೊಳ್ಳುತ್ತದೆ. ಸರ್ಕಾರ ತನಿಖೆಗೆಂದು ಆಯೋಗ ರಚಿಸಿದೆ. ಅದರ ಪ್ರಶ್ನಾವಳಿ ನೋಡಿ. ಸರ್ಕಾರಕ್ಕೆ ಮೇಲ್ನೋಟಕ್ಕೆ ಅಕ್ರಮಗಳ ಬಗ್ಗೆ ಕಂಡುಬಂದಿದೆ. ಹೀಗಾಗಿಯೇ ನಿವೇಶನ ಹಂಚಿಕೆಯ ಅಕ್ರಮದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಇದನ್ನೂ ಓದಿ: ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಏನಿದೆ? - congress Appeal Governor

ETV Bharat Logo

Copyright © 2024 Ushodaya Enterprises Pvt. Ltd., All Rights Reserved.