ETV Bharat / state

ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ಸಿಎಂ ವಾಸ್ತವ್ಯ: ಚುನಾವಣೆ ಬಗ್ಗೆ ಆಪ್ತರೊಂದಿಗೆ ಸಮಾಲೋಚನೆ - CM siddaramaiah

author img

By ETV Bharat Karnataka Team

Published : Mar 26, 2024, 5:04 PM IST

ಭಾನುವಾರದಿಂದ ರೆಸಾರ್ಟ್​ನಲ್ಲೇ ವಾಸ್ತವ್ಯ ಹೂಡಿರುವ ಸಿಎಂ ಸಿದ್ದರಾಮಯ್ಯ ಲೋಕಸಮರದಲ್ಲಿ ಗೆಲುವಿನ ಪತಾಕೆ ಹಾರಿಸಲು ಕಾರ್ಯತಂತ್ರ ರೂಪಿಸುವ ಬಗ್ಗೆ ಆಪ್ತ ನಾಯಕರೊಂದಿಗೆ ಸಮಾಲೋಚನೆ ಮುಂದುವರಿಸಿದ್ದಾರೆ.

CM's stay at Kabini backwater resort: Consultation with close persons about elections
ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ಸಿಎಂ ವಾಸ್ತವ್ಯ ಮುಂದುವರಿಕೆ

ಮೈಸೂರು: ಹೆಚ್.ಡಿ. ಕೋಟೆ ಬಳಿಯ ಕಬಿನಿ ಹಿನ್ನೀರಿನ ಸಮೀಪದಲ್ಲಿರುವ ಆರೆಂಜ್ ಕೌಂಟಿ ಖಾಸಗಿ ರೆಸಾರ್ಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದಿನವಿಡೀ ವಿಶ್ರಾಂತಿ ಪಡೆದಿದ್ದು, ಕೆಲವು ಆಪ್ತ ನಾಯಕರೊಂದಿಗೆ ಚುನಾವಣೆ ಗೆಲ್ಲುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ರೆಸಾರ್ಟ್​ನಲ್ಲಿ ಕಳೆದ ಭಾನುವಾರದಿಂದ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೊಠಡಿಯಿಂದ ಹೊರಗೆ ಬಾರದೇ ಯಾವುದೇ ಸಫಾರಿ, ಬೋಟಿಂಗ್​ಗೆ ತೆರಳದೆ ರೆಸಾರ್ಟ್​ನಲ್ಲೇ ಸಂಪೂರ್ಣ ವಿಶ್ರಾಂತಿ ಪಡೆದಿದ್ದಾರೆ. ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರು ರೆಸಾರ್ಟ್​ಗೆ ಬರದಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ಸಿಎಂ ಆಪ್ತ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ವೆಂಕಟೇಶ್, ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಹಾಗೂ ಹೆಚ್.ಡಿ. ಕೋಟೆ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಮಾತ್ರ ಸಿಎಂ ಜೊತೆ ರೆಸಾರ್ಟ್​ನಲ್ಲಿದ್ದು, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ರೆಸಾರ್ಟ್​ನಲ್ಲಿ ತಿಂಡಿ ಮುಗಿಸಿ ಮೈಸೂರಿಗೆ ಆಗಮಿಸಲಿರುವ ಸಿಎಂ 11 ಗಂಟೆಗೆ ಮೈಸೂರಿನ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಮುಖಂಡರು, ಕಾಂಗ್ರೆಸ್​ಗೆ ಸೇರ್ಪೆಡೆಯಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ರಾಜ್ಯಾದ್ಯಂತ ಪ್ರವಾಸಕ್ಕೆ ಸಿಎಂ ಪ್ಲಾನ್: ರಾಜ್ಯದಲ್ಲಿ 2 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಈ ಸಂಬಂಧ ರೆಸಾರ್ಟ್​ನಿಂದ ಕೆಲವು ಉತ್ತರ ಕರ್ನಾಟಕದ ಮುಖಂಡರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಸಿಎಂ ಅಧಿಕಾರಿಗಳಿಗೆ ರೆಸಾರ್ಟ್​ನಿಂದಲೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯವಾಗಿ ಹಳೇ ಮೈಸೂರು ಭಾಗದ ಮೈಸೂರು-ಕೊಡಗು, ಚಾಮರಾಜನಗರ, ಹಾಸನ, ಮಂಡ್ಯ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿಎಂ ಮೊದಲ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಕ್ಷೇತ್ರಗಳಲ್ಲಿ ಗೆಲ್ಲಲು ಚುನಾವಣಾ ತಂತ್ರ ರೂಪಿಸುತ್ತಿದ್ದು, ಇದಕ್ಕಾಗಿ ಕೆಲವು ನಾಯಕರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿದೆ.

ಇದನ್ನೂ ಓದಿ: ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ಸಿಎಂ ಮೂರು ದಿನ ವಾಸ್ತವ್ಯ: ಚುನಾವಣೆ ಗೆಲ್ಲಲು ಕಾರ್ಯತಂತ್ರ - CM Siddaramaiah

ಮೈಸೂರು: ಹೆಚ್.ಡಿ. ಕೋಟೆ ಬಳಿಯ ಕಬಿನಿ ಹಿನ್ನೀರಿನ ಸಮೀಪದಲ್ಲಿರುವ ಆರೆಂಜ್ ಕೌಂಟಿ ಖಾಸಗಿ ರೆಸಾರ್ಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದಿನವಿಡೀ ವಿಶ್ರಾಂತಿ ಪಡೆದಿದ್ದು, ಕೆಲವು ಆಪ್ತ ನಾಯಕರೊಂದಿಗೆ ಚುನಾವಣೆ ಗೆಲ್ಲುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ರೆಸಾರ್ಟ್​ನಲ್ಲಿ ಕಳೆದ ಭಾನುವಾರದಿಂದ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೊಠಡಿಯಿಂದ ಹೊರಗೆ ಬಾರದೇ ಯಾವುದೇ ಸಫಾರಿ, ಬೋಟಿಂಗ್​ಗೆ ತೆರಳದೆ ರೆಸಾರ್ಟ್​ನಲ್ಲೇ ಸಂಪೂರ್ಣ ವಿಶ್ರಾಂತಿ ಪಡೆದಿದ್ದಾರೆ. ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರು ರೆಸಾರ್ಟ್​ಗೆ ಬರದಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ಸಿಎಂ ಆಪ್ತ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ವೆಂಕಟೇಶ್, ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಹಾಗೂ ಹೆಚ್.ಡಿ. ಕೋಟೆ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಮಾತ್ರ ಸಿಎಂ ಜೊತೆ ರೆಸಾರ್ಟ್​ನಲ್ಲಿದ್ದು, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ರೆಸಾರ್ಟ್​ನಲ್ಲಿ ತಿಂಡಿ ಮುಗಿಸಿ ಮೈಸೂರಿಗೆ ಆಗಮಿಸಲಿರುವ ಸಿಎಂ 11 ಗಂಟೆಗೆ ಮೈಸೂರಿನ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಮುಖಂಡರು, ಕಾಂಗ್ರೆಸ್​ಗೆ ಸೇರ್ಪೆಡೆಯಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ರಾಜ್ಯಾದ್ಯಂತ ಪ್ರವಾಸಕ್ಕೆ ಸಿಎಂ ಪ್ಲಾನ್: ರಾಜ್ಯದಲ್ಲಿ 2 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಈ ಸಂಬಂಧ ರೆಸಾರ್ಟ್​ನಿಂದ ಕೆಲವು ಉತ್ತರ ಕರ್ನಾಟಕದ ಮುಖಂಡರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಸಿಎಂ ಅಧಿಕಾರಿಗಳಿಗೆ ರೆಸಾರ್ಟ್​ನಿಂದಲೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯವಾಗಿ ಹಳೇ ಮೈಸೂರು ಭಾಗದ ಮೈಸೂರು-ಕೊಡಗು, ಚಾಮರಾಜನಗರ, ಹಾಸನ, ಮಂಡ್ಯ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿಎಂ ಮೊದಲ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಕ್ಷೇತ್ರಗಳಲ್ಲಿ ಗೆಲ್ಲಲು ಚುನಾವಣಾ ತಂತ್ರ ರೂಪಿಸುತ್ತಿದ್ದು, ಇದಕ್ಕಾಗಿ ಕೆಲವು ನಾಯಕರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿದೆ.

ಇದನ್ನೂ ಓದಿ: ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ಸಿಎಂ ಮೂರು ದಿನ ವಾಸ್ತವ್ಯ: ಚುನಾವಣೆ ಗೆಲ್ಲಲು ಕಾರ್ಯತಂತ್ರ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.