ETV Bharat / state

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ಧರೆ ಕುಸಿದು ಶಿರಸಿ - ಕುಮಟಾ ಹೆದ್ದಾರಿ ಬಂದ್​, ಸವಾರರು ಈ ಮಾರ್ಗ ಬಳಸಿ - Landslide in Uttara Kannada

author img

By ETV Bharat Karnataka Team

Published : Jul 17, 2024, 5:26 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ಅನಾಹುತಗಳು ಮುಂದುವರೆದಿದ್ದು, ಧರೆ ಕುಸಿತದಿಂದ ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.

landslide
ಧರೆ ಕುಸಿತ (ETV Bharat)
ಧರೆ ಕುಸಿದು ಶಿರಸಿ - ಕುಮಟಾ ಹೆದ್ದಾರಿ ಸಂಚಾರ ಬಂದ್ (ETV Bharat)

ಶಿರಸಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ, ಅಂಕೋಲಾದ ಶಿರೂರಿನಲ್ಲಿ ಮಂಗಳವಾರ ಗುಡ್ಡ ಕುಸಿತ ದುರಂತ ಸಂಭವಿಸಿದ್ದು, ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಕೂಡ ಧರೆ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಸಾಗಿದೆ.

ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯ ರಾಗಿಹೊಸಳ್ಳಿ ಬಳಿ ದೊಡ್ಡ ಪ್ರಮಾಣದಲ್ಲಿ ಧರೆ ಕುಸಿತವಾಗಿದ್ದರಿಂದ ವಾಹನ ಸಂಚಾರ ಸಂಪೂರ್ಣ ಬಂದ್​​ ಆಗಿದೆ.‌ ಈ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಸಾಗರಮಾಲಾ ಯೋಜನೆ ಅಡಿ ಆರ್.ಎನ್.ಎಸ್. ಕಂಪನಿಯಿಂದ ಕಾಮಗಾರಿ ಮಾಡಲಾಗುತ್ತಿದೆ. ಕೆಲವೆಡೆ ಗುಡ್ಡಗಳನ್ನು ಕಡಿದು ರಸ್ತೆ ಅಗಲೀಕರಣ ಮಾಡಿದ್ದು, ಪರಿಣಾಮ ಧರೆ ಕುಸಿತ ಸಂಭವಿಸಿದೆ. ಮುಖ್ಯವಾಗಿ ಜಿಲ್ಲೆಯ ಘಟ್ಟದ ಮೇಲಿನ‌ ಭಾಗವನ್ನು ಕರಾವಳಿಗೆ ಸೇರಿಸುವ ರಸ್ತೆ ಇದಾಗಿದ್ದು, ಈಗ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಸ್ಥಿತಿ ಎದುರಾಗಿದೆ.‌

ಈ ಹಿಂದೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದರೂ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿತ್ತು. ಆದರೆ, ಈ ಸಲ ಇನ್ನೂ ಒಂದು ದಿವಸ ಮಣ್ಣು ತೆರವುಗೊಳಿಸಲು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎರಡು ಜೆಸಿಬಿ ಬಳಸಿ ಮಣ್ಣು ತೆರವು ಮಾಡಲಾಗುತ್ತಿದ್ದು, ಅದನ್ನು ಟಿಪ್ಪರ್ ಮೂಲಕ ಸಾಗಿಸಿ ಸಮೀಪದಲ್ಲೇ ಡಂಪ್ ಮಾಡಲಾಗುತ್ತಿದೆ.

ರಸ್ತೆಯಲ್ಲಿ ಸಂಚಾರ ಮಾಡದಂತೆ ಶಿರಸಿ ಸಹಾಯಕ ಆಯುಕ್ತರು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಕಟಣೆ ನೀಡಿದ್ದಾರೆ. ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಕರಾವಳಿ ಭಾಗಕ್ಕೆ ತೆರಳಲು ಯಲ್ಲಾಪುರ - ಅಂಕೋಲಾ ರಸ್ತೆ ಅಥವಾ ಶಿರಸಿ - ಯಾಣ - ಕುಮಟಾ ರಸ್ತೆಯನ್ನು ಬಳಸಬಹುದಾಗಿದೆ.

ಇದನ್ನೂ ಓದಿ: "ಬದುಕು, ಜೀವ ಕಸಿದ ಗುಡ್ಡ ಕುಸಿತ": 2009 ರಿಂದ 2023 ರವರೆಗಿನ ದುರಂತಗಳ ಕಹಿ ನೆನಪು - Landslide incidence in Karnataka

ಧರೆ ಕುಸಿದು ಶಿರಸಿ - ಕುಮಟಾ ಹೆದ್ದಾರಿ ಸಂಚಾರ ಬಂದ್ (ETV Bharat)

ಶಿರಸಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ, ಅಂಕೋಲಾದ ಶಿರೂರಿನಲ್ಲಿ ಮಂಗಳವಾರ ಗುಡ್ಡ ಕುಸಿತ ದುರಂತ ಸಂಭವಿಸಿದ್ದು, ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಕೂಡ ಧರೆ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಸಾಗಿದೆ.

ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯ ರಾಗಿಹೊಸಳ್ಳಿ ಬಳಿ ದೊಡ್ಡ ಪ್ರಮಾಣದಲ್ಲಿ ಧರೆ ಕುಸಿತವಾಗಿದ್ದರಿಂದ ವಾಹನ ಸಂಚಾರ ಸಂಪೂರ್ಣ ಬಂದ್​​ ಆಗಿದೆ.‌ ಈ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಸಾಗರಮಾಲಾ ಯೋಜನೆ ಅಡಿ ಆರ್.ಎನ್.ಎಸ್. ಕಂಪನಿಯಿಂದ ಕಾಮಗಾರಿ ಮಾಡಲಾಗುತ್ತಿದೆ. ಕೆಲವೆಡೆ ಗುಡ್ಡಗಳನ್ನು ಕಡಿದು ರಸ್ತೆ ಅಗಲೀಕರಣ ಮಾಡಿದ್ದು, ಪರಿಣಾಮ ಧರೆ ಕುಸಿತ ಸಂಭವಿಸಿದೆ. ಮುಖ್ಯವಾಗಿ ಜಿಲ್ಲೆಯ ಘಟ್ಟದ ಮೇಲಿನ‌ ಭಾಗವನ್ನು ಕರಾವಳಿಗೆ ಸೇರಿಸುವ ರಸ್ತೆ ಇದಾಗಿದ್ದು, ಈಗ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಸ್ಥಿತಿ ಎದುರಾಗಿದೆ.‌

ಈ ಹಿಂದೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದರೂ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿತ್ತು. ಆದರೆ, ಈ ಸಲ ಇನ್ನೂ ಒಂದು ದಿವಸ ಮಣ್ಣು ತೆರವುಗೊಳಿಸಲು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎರಡು ಜೆಸಿಬಿ ಬಳಸಿ ಮಣ್ಣು ತೆರವು ಮಾಡಲಾಗುತ್ತಿದ್ದು, ಅದನ್ನು ಟಿಪ್ಪರ್ ಮೂಲಕ ಸಾಗಿಸಿ ಸಮೀಪದಲ್ಲೇ ಡಂಪ್ ಮಾಡಲಾಗುತ್ತಿದೆ.

ರಸ್ತೆಯಲ್ಲಿ ಸಂಚಾರ ಮಾಡದಂತೆ ಶಿರಸಿ ಸಹಾಯಕ ಆಯುಕ್ತರು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಕಟಣೆ ನೀಡಿದ್ದಾರೆ. ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಕರಾವಳಿ ಭಾಗಕ್ಕೆ ತೆರಳಲು ಯಲ್ಲಾಪುರ - ಅಂಕೋಲಾ ರಸ್ತೆ ಅಥವಾ ಶಿರಸಿ - ಯಾಣ - ಕುಮಟಾ ರಸ್ತೆಯನ್ನು ಬಳಸಬಹುದಾಗಿದೆ.

ಇದನ್ನೂ ಓದಿ: "ಬದುಕು, ಜೀವ ಕಸಿದ ಗುಡ್ಡ ಕುಸಿತ": 2009 ರಿಂದ 2023 ರವರೆಗಿನ ದುರಂತಗಳ ಕಹಿ ನೆನಪು - Landslide incidence in Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.