ETV Bharat / state

ಕೊನೆಗೂ ಬೆಂಗಳೂರು ವಿಮಾನ ಏರಿದ ಪ್ರಜ್ವಲ್: ಇಂದು ಮಧ್ಯರಾತ್ರಿ ಆಗಮಿಸುತ್ತಿದ್ದಂತೆ ಬಂಧಿಸಲಿರುವ ಎಸ್ಐಟಿ ಅಧಿಕಾರಿಗಳು - SIT waiting for Prajwal

author img

By ETV Bharat Karnataka Team

Published : May 30, 2024, 4:47 PM IST

Updated : May 30, 2024, 7:47 PM IST

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಇದ್ದು, ಅವರನ್ನು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲು ಎಸ್​ಐಟಿ ಅಧಿಕಾರಿಗಳ ತಂಡ ಕಾದು ಕುಳಿತಿದೆ.

SIT WAITING FOR PRAJWAL
ಎಸ್​ಐಟಿ ಅಧಿಕಾರಿಗಳ ಕಾರು (ETV Bharat)

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್​ಐಟಿ ಅಧಿಕಾರಿಗಳು (ETV Bharat)

ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್, ಲೈಂಗಿಕ ದೌರ್ಜನ್ಯ ಸೇರಿ ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬರುತ್ತಿದ್ದು, ಜರ್ಮನಿಯಿಂದ ಇಂದು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ಬೆಂಗಳೂರಿಗೆ ಬರುತ್ತಿರುವುದು ದೃಢವಾಗುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ಬಂಧಿಸಿ ವಿಚಾರಣೆ ನಡೆಸಲು ಸನ್ನದ್ಧರಾಗಿದ್ದಾರೆ. ಕೆಲ ದಿನಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮೊಕ್ಕಾಂ ಹೂಡಿರುವ ಎಸ್ಐಟಿ ಅಧಿಕಾರಿಗಳು, ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಅವರನ್ನು ಬಂಧಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಅರ್ಧ ಗಂಟೆ ತಡವಾದ ಹಿನ್ನೆಲೆ 4 ಗಂಟೆ ಸುಮಾರಿಗೆ ಜರ್ಮನಿಯ ಮ್ಯೂನಿಚ್​ನಿಂದ ಲೂಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್ ಹೊರಟಿರುವುದನ್ನು ಎಸ್ಐಟಿ ಖಚಿತಪಡಿಸಿಕೊಂಡಿದೆ. ಇಂದು ಮಧ್ಯರಾತ್ರಿ 1 ಗಂಟೆ ಸಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುವ ಸಾಧ್ಯತೆಯಿದೆ.

ಪ್ರಜ್ವಲ್ ಬಂದ ಬಳಿಕ ಎಸ್ಐಟಿ ಮಾಡೋದೇನು? ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ವಲ್‌ ಅವರನ್ನು ಬಂಧಿಸಿ ಸಿಐಡಿ ಕಚೇರಿಗೆ ಕರೆತರಲಾಗುತ್ತದೆ. ಶುಕ್ರವಾರ ಬೆಳಗ್ಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿರುವ ಅಧಿಕಾರಿಗಳು, ಮಧ್ಯಾಹ್ನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನ್ಯಾಯಾಲಯದಲ್ಲಿ ಪ್ರಜ್ವಲ್ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಹೊಳೆನರಸಿಪುರ ಹಾಗೂ ಸಿಐಡಿ ಸೈಬರ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿತ ಪ್ರಶ್ನೆಗಳನ್ನು ಸಹ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 34 ದಿನಗಳಿಂದ ವಿದೇಶದಲ್ಲಿದ್ದ ಪ್ರಜ್ವಲ್ ರೇವಣ್ಣ ಎರಡು ದಿನಗಳ ಹಿಂದೆಯಷ್ಟೇ ವಿಡಿಯೋ ಸಂದೇಶ ಕಳುಹಿಸಿದ್ದರು. ಮೇ 31ರಂದು ಬೆಂಗಳೂರಿಗೆ ಬರಲಿದ್ದು, ಬೆಳಗ್ಗೆ 10 ಗಂಟೆ ಎಸ್​ಐಟಿ ತನಿಖೆಗೆ ಹಾಜರಾಗುವುದಾಗಿ ಆ ವಿಡಿಯೋದಲ್ಲಿ ಅವರು ಹೇಳಿಕೊಂಡಿದ್ದರು. ಈಗಾಗಲೇ ಅವರ ವಿರುದ್ಧ ಬಂಧನ ವಾರಂಟ್​, ಲುಕ್ ಔಟ್ ನೋಟಿಸ್ ಸಹ ಜಾರಿ ಮಾಡಲಾಗಿದೆ. ಅಲ್ಲದೇ ಬ್ಲ್ಯೂ ಕಾರ್ನರ್ ನೋಟಿಸ್ ಸಹ ಜಾರಿಯಲ್ಲಿರುವುದರಿಂದ ಏರ್‌ಪೋರ್ಟ್​ನಲ್ಲೇ ಬಂಧನವಾಗಲಿದೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಬಂಧಿಸಲು ಎಸ್​ಐಟಿ ಸಜ್ಜಾಗಿದೆ; ಗೃಹ ಸಚಿವ ಜಿ ಪರಮೇಶ್ವರ್​ - PRAJWAL REVANNA CASE

ಪ್ರಜ್ವಲ್ ರೇವಣ್ಣ ಬರುತ್ತಾರೆ ಎನ್ನುವ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಎಸ್​ಐಟಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ದೇಶಕ್ಕೆ ಹೋಗಿ, ಸುಲಭವಾಗಿ ಅವರನ್ನು ಬಂಧಿಸಲು ಸಾಧ್ಯವಿಲ್ಲ. ಆ ರೀತಿ ಮಾಡಲು ಬರುವುದಿಲ್ಲ. ಹೊರ ದೇಶದಲ್ಲಿ ಬಂಧನ ಎಂಬುದು ನೆಲಮಂಗಲಕ್ಕೆ ಹೋಗಿ ಬಂಧನ ಮಾಡಿದಷ್ಟು ಸುಲಭವಲ್ಲ. ಕೇಂದ್ರ ಕೂಡ ಬೇರೆ ದೇಶದಲ್ಲಿ ಬಂಧಿಸುವ ಅಧಿಕಾರ ಹೊಂದಿಲ್ಲ. ಇದೇ ಕಾರಣಕ್ಕೆ ಇಂಟರ್​ಪೋಲ್​ ಇದೆ. ಅವರು ಬರುವುದಾಗಿ ಈಗಾಗಲೇ ವಿಡಿಯೋದಲ್ಲಿ ತಿಳಿಸಿದ್ದಾರೆ. ಅವರು ಬಂದರೆ ಎಲ್ಲ ಕಾನೂನು ಪ್ರಕ್ರಿಯೆ ಆರಂಭ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ; ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ ಕಾರ್ಯತಂತ್ರ - Prajwal Revanna

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್​ಐಟಿ ಅಧಿಕಾರಿಗಳು (ETV Bharat)

ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್, ಲೈಂಗಿಕ ದೌರ್ಜನ್ಯ ಸೇರಿ ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬರುತ್ತಿದ್ದು, ಜರ್ಮನಿಯಿಂದ ಇಂದು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ಬೆಂಗಳೂರಿಗೆ ಬರುತ್ತಿರುವುದು ದೃಢವಾಗುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ಬಂಧಿಸಿ ವಿಚಾರಣೆ ನಡೆಸಲು ಸನ್ನದ್ಧರಾಗಿದ್ದಾರೆ. ಕೆಲ ದಿನಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮೊಕ್ಕಾಂ ಹೂಡಿರುವ ಎಸ್ಐಟಿ ಅಧಿಕಾರಿಗಳು, ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಅವರನ್ನು ಬಂಧಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಅರ್ಧ ಗಂಟೆ ತಡವಾದ ಹಿನ್ನೆಲೆ 4 ಗಂಟೆ ಸುಮಾರಿಗೆ ಜರ್ಮನಿಯ ಮ್ಯೂನಿಚ್​ನಿಂದ ಲೂಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್ ಹೊರಟಿರುವುದನ್ನು ಎಸ್ಐಟಿ ಖಚಿತಪಡಿಸಿಕೊಂಡಿದೆ. ಇಂದು ಮಧ್ಯರಾತ್ರಿ 1 ಗಂಟೆ ಸಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುವ ಸಾಧ್ಯತೆಯಿದೆ.

ಪ್ರಜ್ವಲ್ ಬಂದ ಬಳಿಕ ಎಸ್ಐಟಿ ಮಾಡೋದೇನು? ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ವಲ್‌ ಅವರನ್ನು ಬಂಧಿಸಿ ಸಿಐಡಿ ಕಚೇರಿಗೆ ಕರೆತರಲಾಗುತ್ತದೆ. ಶುಕ್ರವಾರ ಬೆಳಗ್ಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿರುವ ಅಧಿಕಾರಿಗಳು, ಮಧ್ಯಾಹ್ನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನ್ಯಾಯಾಲಯದಲ್ಲಿ ಪ್ರಜ್ವಲ್ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಹೊಳೆನರಸಿಪುರ ಹಾಗೂ ಸಿಐಡಿ ಸೈಬರ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿತ ಪ್ರಶ್ನೆಗಳನ್ನು ಸಹ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 34 ದಿನಗಳಿಂದ ವಿದೇಶದಲ್ಲಿದ್ದ ಪ್ರಜ್ವಲ್ ರೇವಣ್ಣ ಎರಡು ದಿನಗಳ ಹಿಂದೆಯಷ್ಟೇ ವಿಡಿಯೋ ಸಂದೇಶ ಕಳುಹಿಸಿದ್ದರು. ಮೇ 31ರಂದು ಬೆಂಗಳೂರಿಗೆ ಬರಲಿದ್ದು, ಬೆಳಗ್ಗೆ 10 ಗಂಟೆ ಎಸ್​ಐಟಿ ತನಿಖೆಗೆ ಹಾಜರಾಗುವುದಾಗಿ ಆ ವಿಡಿಯೋದಲ್ಲಿ ಅವರು ಹೇಳಿಕೊಂಡಿದ್ದರು. ಈಗಾಗಲೇ ಅವರ ವಿರುದ್ಧ ಬಂಧನ ವಾರಂಟ್​, ಲುಕ್ ಔಟ್ ನೋಟಿಸ್ ಸಹ ಜಾರಿ ಮಾಡಲಾಗಿದೆ. ಅಲ್ಲದೇ ಬ್ಲ್ಯೂ ಕಾರ್ನರ್ ನೋಟಿಸ್ ಸಹ ಜಾರಿಯಲ್ಲಿರುವುದರಿಂದ ಏರ್‌ಪೋರ್ಟ್​ನಲ್ಲೇ ಬಂಧನವಾಗಲಿದೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಬಂಧಿಸಲು ಎಸ್​ಐಟಿ ಸಜ್ಜಾಗಿದೆ; ಗೃಹ ಸಚಿವ ಜಿ ಪರಮೇಶ್ವರ್​ - PRAJWAL REVANNA CASE

ಪ್ರಜ್ವಲ್ ರೇವಣ್ಣ ಬರುತ್ತಾರೆ ಎನ್ನುವ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಎಸ್​ಐಟಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ದೇಶಕ್ಕೆ ಹೋಗಿ, ಸುಲಭವಾಗಿ ಅವರನ್ನು ಬಂಧಿಸಲು ಸಾಧ್ಯವಿಲ್ಲ. ಆ ರೀತಿ ಮಾಡಲು ಬರುವುದಿಲ್ಲ. ಹೊರ ದೇಶದಲ್ಲಿ ಬಂಧನ ಎಂಬುದು ನೆಲಮಂಗಲಕ್ಕೆ ಹೋಗಿ ಬಂಧನ ಮಾಡಿದಷ್ಟು ಸುಲಭವಲ್ಲ. ಕೇಂದ್ರ ಕೂಡ ಬೇರೆ ದೇಶದಲ್ಲಿ ಬಂಧಿಸುವ ಅಧಿಕಾರ ಹೊಂದಿಲ್ಲ. ಇದೇ ಕಾರಣಕ್ಕೆ ಇಂಟರ್​ಪೋಲ್​ ಇದೆ. ಅವರು ಬರುವುದಾಗಿ ಈಗಾಗಲೇ ವಿಡಿಯೋದಲ್ಲಿ ತಿಳಿಸಿದ್ದಾರೆ. ಅವರು ಬಂದರೆ ಎಲ್ಲ ಕಾನೂನು ಪ್ರಕ್ರಿಯೆ ಆರಂಭ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ; ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ ಕಾರ್ಯತಂತ್ರ - Prajwal Revanna

Last Updated : May 30, 2024, 7:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.