ETV Bharat / state

ನೆಲಮಂಗಲದಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ ಉದ್ಯಮಿ ಸೇರಿ ಒಂದೇ ಕುಟುಂಬದ 6 ಜನ ಸಾವು - CONTAINER OVERTURNS ON CAR

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಉದ್ಯಮಿ ಸೇರಿದಂತೆ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.

accident
ಅಪಘಾತ (ETV Bharat)
author img

By ETV Bharat Karnataka Team

Published : Dec 21, 2024, 1:37 PM IST

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿ. ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಂಟೇನರ್​ವೊಂದು ಡಿವೈಡರ್​ ಹಾರಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಉದ್ಯಮಿ ಚಂದ್ರಂ ಇಗಪ್ಪಗೋಳ (46), ಪತ್ನಿ ಧೋರಾಬಾಯಿ ಚಂದ್ರಮ್​ ಇಗಪ್ಪಗೋಳ (40), ಧೀಕ್ಷಾ ಚಂದ್ರಮ್​ ಇಗಪ್ಪಗೋಳ (10), ಗಣೇಶ್​ ಇಗಪ್ಪಗೋಳ (16), ಆರ್ಯ ಚಂದ್ರಮ್​ ಇಗಪ್ಪಗೋಳ (6) ಮತ್ತು ವಿಜಯಲಕ್ಷ್ಮಿ (36) ಮೃತಪಟ್ಟವರು. ಗೌರಬಾಯಿ ಮೃತ ದುರ್ದೈವಿಗಳು.

ನೆಲಮಂಗಲ ಬಳಿ ಭೀಕರ ಅಪಘಾತ (ETV Bharat)

ಭೀಕರ ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್​ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ ತಿಳಿಸಿದ್ದಾರೆ.

accident
ಅಪಘಾತ ನಡೆದ ಸ್ಥಳ (ETV Bharat)

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೃತದೇಹಗಳು ಕೂಡ ಛಿದ್ರವಾಗಿವೆ. KA 01 ND 1536 ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

accident
ಅಪಘಾತ ನಡೆದ ಸ್ಥಳ (ETV Bharat)

ಕಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟಿದ್ದ ಕುಟುಂಬ: ಬೆಂಗಳೂರಲ್ಲಿ ವಾಸವಾಗಿದ್ದ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಜೈಪುರ - ಅಜ್ಮೀರ್​ ಹೈವೇಯಲ್ಲಿ ಗ್ಯಾಸ್​ ಟ್ಯಾಂಕರ್​​ ​ಸ್ಫೋಟ : ಐದು ಮಂದಿ ಸಜೀವ ದಹನ, 37 ಜನರಿಗೆ ಗಾಯ

ಮೃತರು ವಿಜಯಪುರ -ಮಹಾರಾಷ್ಟ್ರ ಗಡಿ ಭಾಗದವರೆಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್ ಲೇಔಟ್​​ನಲ್ಲಿ ವಾಸವಾಗಿದ್ದ ಕುಟುಂಬಸ್ಥರು ಕ್ರಿಸ್ಮಸ್ ರಜೆ ಹಿನ್ನೆಲೆ ತಮ್ಮ ಸ್ವಗ್ರಾಮಕ್ಕೆ ವೋಲ್ವೋ ಕಾರಿನಲ್ಲಿ ತೆರಳುತ್ತಿದ್ದರು. ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣವೇ ಅವರನ್ನು ಕಾರಿನಿಂದ ತೆಗೆದು ಸಾಗಿಸಿದ್ದೇವೆ. ಕಂಟೇನರ್ ಚಾಲಕನಿಗೂ ತೀವ್ರ ಗಾಯಗಳಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಚಂದ್ರ ಯಗಪಗೋಳ ಅವರು ಬೆಂಗಳೂರಿನ ಸಾಫ್ಟ್​ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ರಾಷ್ಟ್ರೀಯ ಹೆದ್ದಾರಿ ಮಧ್ಯೆ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದೆವು. ಬಳಿಕ ಎಲ್ಲವನ್ನೂ ತೆರವುಗೊಳಿಸಿ, ಸಂಚಾರಕ್ಕೆ ಅನುಮತಿ ನೀಡಿದ್ದೇವೆ - ಸಿ.ಕೆ. ಬಾಬಾ, ಎಸ್​ಪಿ

ಇದನ್ನೂ ಓದಿ: ಕೋಲಾರ: 3 ಬೈಕ್​ಗಳಿಗೆ ಬೊಲೆರೋ ವಾಹನ ಡಿಕ್ಕಿ, ಐವರು ಸ್ಥಳದಲ್ಲೇ ಸಾವು

ಮೃತ ಚಂದ್ರಮ್​ ಯೆಗಪಗೋಳ್ ಹಾಗೂ ಧೋರಾಬಾಯಿ 2018ರಲ್ಲಿ ಹೆಚ್ಎಸ್ಆರ್ ಲೇಔಟ್‌ನ 6ನೇ ಹಂತದಲ್ಲಿ ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿ ಆರಂಭಿಸಿದ್ದರು. ಕಂಪನಿಯಲ್ಲಿ ಸುಮಾರು 150ಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿ. ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಂಟೇನರ್​ವೊಂದು ಡಿವೈಡರ್​ ಹಾರಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಉದ್ಯಮಿ ಚಂದ್ರಂ ಇಗಪ್ಪಗೋಳ (46), ಪತ್ನಿ ಧೋರಾಬಾಯಿ ಚಂದ್ರಮ್​ ಇಗಪ್ಪಗೋಳ (40), ಧೀಕ್ಷಾ ಚಂದ್ರಮ್​ ಇಗಪ್ಪಗೋಳ (10), ಗಣೇಶ್​ ಇಗಪ್ಪಗೋಳ (16), ಆರ್ಯ ಚಂದ್ರಮ್​ ಇಗಪ್ಪಗೋಳ (6) ಮತ್ತು ವಿಜಯಲಕ್ಷ್ಮಿ (36) ಮೃತಪಟ್ಟವರು. ಗೌರಬಾಯಿ ಮೃತ ದುರ್ದೈವಿಗಳು.

ನೆಲಮಂಗಲ ಬಳಿ ಭೀಕರ ಅಪಘಾತ (ETV Bharat)

ಭೀಕರ ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್​ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ ತಿಳಿಸಿದ್ದಾರೆ.

accident
ಅಪಘಾತ ನಡೆದ ಸ್ಥಳ (ETV Bharat)

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೃತದೇಹಗಳು ಕೂಡ ಛಿದ್ರವಾಗಿವೆ. KA 01 ND 1536 ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

accident
ಅಪಘಾತ ನಡೆದ ಸ್ಥಳ (ETV Bharat)

ಕಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟಿದ್ದ ಕುಟುಂಬ: ಬೆಂಗಳೂರಲ್ಲಿ ವಾಸವಾಗಿದ್ದ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಜೈಪುರ - ಅಜ್ಮೀರ್​ ಹೈವೇಯಲ್ಲಿ ಗ್ಯಾಸ್​ ಟ್ಯಾಂಕರ್​​ ​ಸ್ಫೋಟ : ಐದು ಮಂದಿ ಸಜೀವ ದಹನ, 37 ಜನರಿಗೆ ಗಾಯ

ಮೃತರು ವಿಜಯಪುರ -ಮಹಾರಾಷ್ಟ್ರ ಗಡಿ ಭಾಗದವರೆಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್ ಲೇಔಟ್​​ನಲ್ಲಿ ವಾಸವಾಗಿದ್ದ ಕುಟುಂಬಸ್ಥರು ಕ್ರಿಸ್ಮಸ್ ರಜೆ ಹಿನ್ನೆಲೆ ತಮ್ಮ ಸ್ವಗ್ರಾಮಕ್ಕೆ ವೋಲ್ವೋ ಕಾರಿನಲ್ಲಿ ತೆರಳುತ್ತಿದ್ದರು. ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣವೇ ಅವರನ್ನು ಕಾರಿನಿಂದ ತೆಗೆದು ಸಾಗಿಸಿದ್ದೇವೆ. ಕಂಟೇನರ್ ಚಾಲಕನಿಗೂ ತೀವ್ರ ಗಾಯಗಳಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಚಂದ್ರ ಯಗಪಗೋಳ ಅವರು ಬೆಂಗಳೂರಿನ ಸಾಫ್ಟ್​ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ರಾಷ್ಟ್ರೀಯ ಹೆದ್ದಾರಿ ಮಧ್ಯೆ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದೆವು. ಬಳಿಕ ಎಲ್ಲವನ್ನೂ ತೆರವುಗೊಳಿಸಿ, ಸಂಚಾರಕ್ಕೆ ಅನುಮತಿ ನೀಡಿದ್ದೇವೆ - ಸಿ.ಕೆ. ಬಾಬಾ, ಎಸ್​ಪಿ

ಇದನ್ನೂ ಓದಿ: ಕೋಲಾರ: 3 ಬೈಕ್​ಗಳಿಗೆ ಬೊಲೆರೋ ವಾಹನ ಡಿಕ್ಕಿ, ಐವರು ಸ್ಥಳದಲ್ಲೇ ಸಾವು

ಮೃತ ಚಂದ್ರಮ್​ ಯೆಗಪಗೋಳ್ ಹಾಗೂ ಧೋರಾಬಾಯಿ 2018ರಲ್ಲಿ ಹೆಚ್ಎಸ್ಆರ್ ಲೇಔಟ್‌ನ 6ನೇ ಹಂತದಲ್ಲಿ ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿ ಆರಂಭಿಸಿದ್ದರು. ಕಂಪನಿಯಲ್ಲಿ ಸುಮಾರು 150ಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.