ETV Bharat / state

ಕೆಎಸ್​ಆರ್​ಟಿಸಿ ಮುಡಿಗೇರಿದ ಆರು ಜಾಗತಿಕ ಪ್ರಶಸ್ತಿ ಗರಿ: 8 ತಿಂಗಳಲ್ಲಿ ಅರ್ಧಶತಕಕ್ಕೂ ಹೆಚ್ಚು ಪ್ರಶಸ್ತಿಗಳು

author img

By ETV Bharat Karnataka Team

Published : Feb 18, 2024, 12:38 PM IST

ಕೆಎಸ್​ಆರ್​ಟಿಸಿಗೆ ಆರು ಜಾಗತಿಕ ಪ್ರಶಸ್ತಿಗಳು ಮುಡಿಗೇರಿವೆ. ಕಳೆದ 8 ತಿಂಗಳಲ್ಲಿ ಅರ್ಧಶತಕಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಕೆಎಸ್​ಆರ್​ಟಿಸಿ ತನ್ನದಾಗಿಸಿಕೊಂಡಿದೆ.

ಕೆಎಸ್​ಆರ್​ಟಿಸಿ  ಆರು ಜಾಗತಿಕ ಪ್ರಶಸ್ತಿ  KSRTC  Six global awards
ಕೆಎಸ್​ಆರ್​ಟಿಸಿ ಮುಡಿಗೇರಿದ ಆರು ಜಾಗತಿಕ ಪ್ರಶಸ್ತಿ ಗರಿ: 8 ತಿಂಗಳಲ್ಲಿ ಅರ್ಧಶತಕಕ್ಕೂ ಹೆಚ್ಚು ಪ್ರಶಸ್ತಿಗಳು

ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿರುವ ಕೆಎಸ್ಆರ್​ಟಿಸಿ ಪ್ರಶಸ್ತಿಗಳ ಬೇಟೆ ಮುಂದುವರೆಸಿದೆ. ಇದೀಗ ಐದು ಜಾಗತಿಕ ಪ್ರಶಸ್ತಿಗಳೊಂದಿಗೆ ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್.ಲತಾ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದ್ದು, ಈ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗೆ ಎಂಟು ತಿಂಗಳಲ್ಲೇ ಪ್ರಶಸ್ತಿಗಳ ಅರ್ಧ ಶತಕವನ್ನು ದಾಟಿದೆ.

ಹೊಸ ಉಪಕ್ರಮಗಳು, ನೂತನ ಮಾದರಿಯ ಬಸ್​ಗಳನ್ನು ರಸ್ತೆಗಿಳಿಸಿ ಪ್ರಯೋಗದ ಮೂಲಕವೇ ಉತ್ತಮ ಸಾರಿಗೆ ಸೇವೆಗೆ ಬೇಕಾದ ಮಾದರಿಯ ಬಸ್​ಗಳ ಸಂಚಾರದ ಮೂಲಕ ದೇಶದ ಗಮನ ಸೆಳೆದಿರುವ ಕೆಎಸ್​ಆರ್​ಟಿಸಿಗೆ ಇದೀಗ ಮತ್ತೆ 6 ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವರ್ಲ್ಡ್ ಮ್ಯಾನ್ಯುಫ್ಯಾಕ್ಚರಿಂಗದ ಕಾಂಗ್ರೆಸ್ (World Manufacturing Congress) ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ ( World Marketing Congress)ನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ.

ಮುಂಬೈನ ಹೋಟೆಲ್ ತಾಜ್ ಲ್ಯಾಂಡ್ಸ್ ಎಂಡ್​ನಲ್ಲಿ ಶನಿವಾರ ಆಯೋಜಿಸಲಾಗಿದ್ದ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್​​ ನಿನಾ ಇ ಉಡರ್ಡ್ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ಮಿಸ್.ನಿನಾ ಇ ಉಡರ್ಡ್ ಹಾಗೂ ದುಬೈನ ಓಝೋನ್ ಗ್ರೂಪ್ ಸಂಸ್ಥಾಪಕ ಡಾ.ಓವಿಲಿಯಾ ಫೆರ್ನಾಂಡಿಸ್ ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೆಎಸ್​ಆರ್​ಟಿಸಿ ನಿಗಮ ಮಂಡಳಿಯ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರ ಹೆಚ್ ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ ಸಿ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್. ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿಗಳು ವಿವರ:

  • ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ - ಇ.ವಿ.ಪವರ್ ಪ್ಲಸ್​
  • ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ - ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ
  • ವರ್ಷದ ವ್ಯವಹಾರಿಕ ನಾಯಕತ್ವ ಪ್ರಶಸ್ತಿ - ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆ
  • ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ - ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸಂಸ್ಥೆ
  • ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ - ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮ
  • ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ
    ಕೆಎಸ್​ಆರ್​ಟಿಸಿ  ಆರು ಜಾಗತಿಕ ಪ್ರಶಸ್ತಿ  KSRTC  Six global awards
    ಕೆಎಸ್​ಆರ್​ಟಿಸಿ ಮುಡಿಗೇರಿದ ಆರು ಜಾಗತಿಕ ಪ್ರಶಸ್ತಿ ಗರಿ: 8 ತಿಂಗಳಲ್ಲಿ ಅರ್ಧಶತಕಕ್ಕೂ ಹೆಚ್ಚು ಪ್ರಶಸ್ತಿಗಳು

ಈ ಆರು ಪ್ರಶಸ್ತಿಗಳ ಗರಿಮೆಯೊಂದಿಗೆ ನಿಗಮವು ಕಳೆದ 8 ತಿಂಗಳುಗಳಲ್ಲಿ 51 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಂತಾಗಿದೆ. ಸಾರಿಗೆ ನಿಗಮಕ್ಕೆ ಪ್ರಶಸ್ತಿ ಲಭಿಸಿದ್ದಕ್ಕೆ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿನಂದಿಸಿದ್ದಾರೆ.

ಕೆಎಸ್​ಆರ್​ಟಿಸಿಗೆ ಸ್ಕ್ವಾಚ್ ಸಂಸ್ಥೆಯಿಂದ ಎರಡು ರಾಷ್ಟ್ರೀಯ ಪ್ರಶಸ್ತಿ: ಕೆಎಸ್ಆರ್​ಟಿಸಿಗೆ ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ ಸ್ಕ್ವಾಚ್​ನಿಂದ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ. ಇತ್ತೀಚೆಗೆ ಸ್ಕ್ವಾಚ್​ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಕ್ವಾಚ್​ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ನಿಗಮಕ್ಕೆ ಸ್ಕ್ವಾಚ್​ 2 ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ್ದರು. ಕೆಎಸ್ಆರ್​ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ. ಪ್ರಕಾಶ್ ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದರು.

ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕ್ವಾಚ್​ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕ್ವಾಚ್​ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: 9 ಕಾರಿಡಾರ್‌ಗಳಲ್ಲಿ ಪ್ರತ್ಯೇಕ ಬಸ್ ಲೇನ್ ನಿರ್ಮಾಣಕ್ಕೆ ಮುಂದಾದ ಪಾಲಿಕೆ

ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿರುವ ಕೆಎಸ್ಆರ್​ಟಿಸಿ ಪ್ರಶಸ್ತಿಗಳ ಬೇಟೆ ಮುಂದುವರೆಸಿದೆ. ಇದೀಗ ಐದು ಜಾಗತಿಕ ಪ್ರಶಸ್ತಿಗಳೊಂದಿಗೆ ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್.ಲತಾ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದ್ದು, ಈ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗೆ ಎಂಟು ತಿಂಗಳಲ್ಲೇ ಪ್ರಶಸ್ತಿಗಳ ಅರ್ಧ ಶತಕವನ್ನು ದಾಟಿದೆ.

ಹೊಸ ಉಪಕ್ರಮಗಳು, ನೂತನ ಮಾದರಿಯ ಬಸ್​ಗಳನ್ನು ರಸ್ತೆಗಿಳಿಸಿ ಪ್ರಯೋಗದ ಮೂಲಕವೇ ಉತ್ತಮ ಸಾರಿಗೆ ಸೇವೆಗೆ ಬೇಕಾದ ಮಾದರಿಯ ಬಸ್​ಗಳ ಸಂಚಾರದ ಮೂಲಕ ದೇಶದ ಗಮನ ಸೆಳೆದಿರುವ ಕೆಎಸ್​ಆರ್​ಟಿಸಿಗೆ ಇದೀಗ ಮತ್ತೆ 6 ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವರ್ಲ್ಡ್ ಮ್ಯಾನ್ಯುಫ್ಯಾಕ್ಚರಿಂಗದ ಕಾಂಗ್ರೆಸ್ (World Manufacturing Congress) ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ ( World Marketing Congress)ನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ.

ಮುಂಬೈನ ಹೋಟೆಲ್ ತಾಜ್ ಲ್ಯಾಂಡ್ಸ್ ಎಂಡ್​ನಲ್ಲಿ ಶನಿವಾರ ಆಯೋಜಿಸಲಾಗಿದ್ದ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್​​ ನಿನಾ ಇ ಉಡರ್ಡ್ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ಮಿಸ್.ನಿನಾ ಇ ಉಡರ್ಡ್ ಹಾಗೂ ದುಬೈನ ಓಝೋನ್ ಗ್ರೂಪ್ ಸಂಸ್ಥಾಪಕ ಡಾ.ಓವಿಲಿಯಾ ಫೆರ್ನಾಂಡಿಸ್ ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೆಎಸ್​ಆರ್​ಟಿಸಿ ನಿಗಮ ಮಂಡಳಿಯ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರ ಹೆಚ್ ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ ಸಿ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್. ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿಗಳು ವಿವರ:

  • ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ - ಇ.ವಿ.ಪವರ್ ಪ್ಲಸ್​
  • ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ - ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ
  • ವರ್ಷದ ವ್ಯವಹಾರಿಕ ನಾಯಕತ್ವ ಪ್ರಶಸ್ತಿ - ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆ
  • ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ - ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸಂಸ್ಥೆ
  • ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ - ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮ
  • ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ
    ಕೆಎಸ್​ಆರ್​ಟಿಸಿ  ಆರು ಜಾಗತಿಕ ಪ್ರಶಸ್ತಿ  KSRTC  Six global awards
    ಕೆಎಸ್​ಆರ್​ಟಿಸಿ ಮುಡಿಗೇರಿದ ಆರು ಜಾಗತಿಕ ಪ್ರಶಸ್ತಿ ಗರಿ: 8 ತಿಂಗಳಲ್ಲಿ ಅರ್ಧಶತಕಕ್ಕೂ ಹೆಚ್ಚು ಪ್ರಶಸ್ತಿಗಳು

ಈ ಆರು ಪ್ರಶಸ್ತಿಗಳ ಗರಿಮೆಯೊಂದಿಗೆ ನಿಗಮವು ಕಳೆದ 8 ತಿಂಗಳುಗಳಲ್ಲಿ 51 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಂತಾಗಿದೆ. ಸಾರಿಗೆ ನಿಗಮಕ್ಕೆ ಪ್ರಶಸ್ತಿ ಲಭಿಸಿದ್ದಕ್ಕೆ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿನಂದಿಸಿದ್ದಾರೆ.

ಕೆಎಸ್​ಆರ್​ಟಿಸಿಗೆ ಸ್ಕ್ವಾಚ್ ಸಂಸ್ಥೆಯಿಂದ ಎರಡು ರಾಷ್ಟ್ರೀಯ ಪ್ರಶಸ್ತಿ: ಕೆಎಸ್ಆರ್​ಟಿಸಿಗೆ ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ ಸ್ಕ್ವಾಚ್​ನಿಂದ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ. ಇತ್ತೀಚೆಗೆ ಸ್ಕ್ವಾಚ್​ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಕ್ವಾಚ್​ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ನಿಗಮಕ್ಕೆ ಸ್ಕ್ವಾಚ್​ 2 ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ್ದರು. ಕೆಎಸ್ಆರ್​ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ. ಪ್ರಕಾಶ್ ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದರು.

ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕ್ವಾಚ್​ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕ್ವಾಚ್​ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: 9 ಕಾರಿಡಾರ್‌ಗಳಲ್ಲಿ ಪ್ರತ್ಯೇಕ ಬಸ್ ಲೇನ್ ನಿರ್ಮಾಣಕ್ಕೆ ಮುಂದಾದ ಪಾಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.