ETV Bharat / state

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿ ಕರೆತಂದು ಕೃತ್ಯದ ಮರುಸೃಷ್ಟಿ - Rameshwaram Cafe bomb blast case

author img

By ETV Bharat Karnataka Team

Published : Aug 5, 2024, 9:05 AM IST

Updated : Aug 5, 2024, 10:06 AM IST

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ.

ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಅಧಿಕಾರಿಗಳಿಂದ ಮಹಜರು
ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಅಧಿಕಾರಿಗಳಿಂದ ಮಹಜರು (ETV Bharat)
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿ ಕರೆತಂದು ಕೃತ್ಯದ ಮರುಸೃಷ್ಟಿ (ETV Bharat)

ಬೆಂಗಳೂರು: ಬಾಂಬ್​ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಕೃತ್ಯ ಮರುಸೃಷ್ಟಿಸಿ ಮಹಜರು: ಪ್ರಮುಖ ಆರೋಪಿಯಾಗಿರುವ ಮುಸಾವಿರ್ ಹುಸೇನ್ ಶಾಜಿಬ್, ಘಟನೆಯ ದಿನ ಕ್ಯಾಪ್ ಧರಿಸಿ ಕೆಫೆಗೆ ಹೇಗೆ ಬಂದ? ಎಷ್ಟು ನಿಮಿಷಗಳ ಕಾಲ ಕೆಫೆಯಲ್ಲಿ ಕುಳಿತಿದ್ದ? ಕುಳಿತಿದ್ದಷ್ಟು ಕಾಲ ಏನೇನು ಆರ್ಡರ್ ಮಾಡಿದ್ದ? ನಂತರ ಸ್ಫೋಟಕಗಳಿದ್ದ ಬ್ಯಾಗ್ ಹೇಗೆ ಇರಿಸಿ ವಾಪಸ್ ತೆರಳಿದ ಎಂಬ ಘಟನಾವಳಿಗಳನ್ನ ಆತನಿಂದಲೇ ಮರುಸೃಷ್ಟಿಸಿ ಮಹಜರು ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಫೆ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.

ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್​ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್​​ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನು ಏಪ್ರಿಲ್ 12 ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ ತಿರುಚುವ ಯತ್ನ ನಡೆದಿತ್ತು: ಆರ್​. ಅಶೋಕ್ ಆರೋಪ - Rameshwar Cafe Blast

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿ ಕರೆತಂದು ಕೃತ್ಯದ ಮರುಸೃಷ್ಟಿ (ETV Bharat)

ಬೆಂಗಳೂರು: ಬಾಂಬ್​ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಕೃತ್ಯ ಮರುಸೃಷ್ಟಿಸಿ ಮಹಜರು: ಪ್ರಮುಖ ಆರೋಪಿಯಾಗಿರುವ ಮುಸಾವಿರ್ ಹುಸೇನ್ ಶಾಜಿಬ್, ಘಟನೆಯ ದಿನ ಕ್ಯಾಪ್ ಧರಿಸಿ ಕೆಫೆಗೆ ಹೇಗೆ ಬಂದ? ಎಷ್ಟು ನಿಮಿಷಗಳ ಕಾಲ ಕೆಫೆಯಲ್ಲಿ ಕುಳಿತಿದ್ದ? ಕುಳಿತಿದ್ದಷ್ಟು ಕಾಲ ಏನೇನು ಆರ್ಡರ್ ಮಾಡಿದ್ದ? ನಂತರ ಸ್ಫೋಟಕಗಳಿದ್ದ ಬ್ಯಾಗ್ ಹೇಗೆ ಇರಿಸಿ ವಾಪಸ್ ತೆರಳಿದ ಎಂಬ ಘಟನಾವಳಿಗಳನ್ನ ಆತನಿಂದಲೇ ಮರುಸೃಷ್ಟಿಸಿ ಮಹಜರು ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಫೆ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.

ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್​ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್​​ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನು ಏಪ್ರಿಲ್ 12 ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ ತಿರುಚುವ ಯತ್ನ ನಡೆದಿತ್ತು: ಆರ್​. ಅಶೋಕ್ ಆರೋಪ - Rameshwar Cafe Blast

Last Updated : Aug 5, 2024, 10:06 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.