ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಇಂದು ಆರೋಪಿ ಗಿರೀಶ್ ಸಾವಂತನನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಅಂಜಲಿ ಹತ್ಯೆ ನಡೆದ ನಗರದ ವೀರಾಪೂರ ಓಣಿಯಲ್ಲಿರುವ ಮನೆಗೆ ಆರೋಪಿಯನ್ನು ಕರೆತಂದ ಸಿಐಡಿ ಅಧಿಕಾರಿಗಳು ಘಟನಾ ಸ್ಥಳ ಹಾಗೂ ಸುತ್ತಲಿನ ಪ್ರದೇಶ ಪರಿಶೀಲಿಸಿದರು. ಆರೋಪಿ ಗಿರೀಶ್, ಅಂಜಲಿ ಮನೆಯತ್ತ ಬರುತ್ತಿದ್ದಂತೆ ಅಂಜಲಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಆಗ ಸಿಐಡಿ ಅಧಿಕಾರಿಗಳು ಕುಟುಂಬಸ್ಥರನ್ನು ಸಮಾಧಾನಪಡಿಸಿದರು.
ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು - Anjali murder case
![ETV Bharat Karnataka Team author img](https://etvbharatimages.akamaized.net/etvbharat/prod-images/authors/karnataka-1716535795.jpeg?imwidth=128)
Published : May 24, 2024, 3:47 PM IST
ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಇಂದು ಆರೋಪಿ ಗಿರೀಶ್ ಸಾವಂತನನ್ನು ಕರೆತಂದು ಸ್ಥಳ ಮಹಜರು ನಡೆಸಿದರು.
![ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು - Anjali murder case ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು](https://etvbharatimages.akamaized.net/etvbharat/prod-images/24-05-2024/1200-675-21548043-thumbnail-16x9-ck.jpg?imwidth=3840)
ಅಂಜಲಿ ಕೊಲೆಗೆ ಗಿರೀಶ್ ಸಾವಂತ ಬಳಸಿದ್ದ ಚಾಕು ಇದುವರೆಗೂ ಪೊಲೀಸರಿಗೆ ಮತ್ತು ಸಿಐಡಿ ಅಧಿಕಾರಿಗಳಿಗೆ ಪತ್ತೆಯಾಗಿಲ್ಲ. ಹೀಗಾಗಿ ಇಂದು ವೀರಾಪೂರ ಓಣಿಯ ಸುತ್ತಾಮುತ್ತ ಚಾಕು ಪತ್ತೆಗೆ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದರು. ಬಿಜೆಪಿ ಯುವ ಮುಖಂಡ ಅನೂಪ ಬಿಜವಾಡ ಮನೆಯಲ್ಲಿ ಸುಮಾರು ನಾಲ್ಕು ಗಂಟೆಯವರೆಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿ, ಮಾಹಿತಿ ಪಡೆದರು.
ಇದನ್ನೂ ಓದಿ: ಬಾತ್ರೂಮ್ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ! - Woman Murder Case
ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಇಂದು ಆರೋಪಿ ಗಿರೀಶ್ ಸಾವಂತನನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಅಂಜಲಿ ಹತ್ಯೆ ನಡೆದ ನಗರದ ವೀರಾಪೂರ ಓಣಿಯಲ್ಲಿರುವ ಮನೆಗೆ ಆರೋಪಿಯನ್ನು ಕರೆತಂದ ಸಿಐಡಿ ಅಧಿಕಾರಿಗಳು ಘಟನಾ ಸ್ಥಳ ಹಾಗೂ ಸುತ್ತಲಿನ ಪ್ರದೇಶ ಪರಿಶೀಲಿಸಿದರು. ಆರೋಪಿ ಗಿರೀಶ್, ಅಂಜಲಿ ಮನೆಯತ್ತ ಬರುತ್ತಿದ್ದಂತೆ ಅಂಜಲಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಆಗ ಸಿಐಡಿ ಅಧಿಕಾರಿಗಳು ಕುಟುಂಬಸ್ಥರನ್ನು ಸಮಾಧಾನಪಡಿಸಿದರು.
ಅಂಜಲಿ ಕೊಲೆಗೆ ಗಿರೀಶ್ ಸಾವಂತ ಬಳಸಿದ್ದ ಚಾಕು ಇದುವರೆಗೂ ಪೊಲೀಸರಿಗೆ ಮತ್ತು ಸಿಐಡಿ ಅಧಿಕಾರಿಗಳಿಗೆ ಪತ್ತೆಯಾಗಿಲ್ಲ. ಹೀಗಾಗಿ ಇಂದು ವೀರಾಪೂರ ಓಣಿಯ ಸುತ್ತಾಮುತ್ತ ಚಾಕು ಪತ್ತೆಗೆ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದರು. ಬಿಜೆಪಿ ಯುವ ಮುಖಂಡ ಅನೂಪ ಬಿಜವಾಡ ಮನೆಯಲ್ಲಿ ಸುಮಾರು ನಾಲ್ಕು ಗಂಟೆಯವರೆಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿ, ಮಾಹಿತಿ ಪಡೆದರು.
ಇದನ್ನೂ ಓದಿ: ಬಾತ್ರೂಮ್ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ! - Woman Murder Case