ETV Bharat / state

ಸತ್ಸಂಗದಲ್ಲಿ ಸಾವು-ನೋವು: ಖೇದ ವ್ಯಕ್ತಪಡಿಸಿದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ - Srishaila Swamji

author img

By ETV Bharat Karnataka Team

Published : Jul 4, 2024, 6:33 PM IST

ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಉತ್ತರ ಪ್ರದೇಶದ ಹತ್ರಾಸ್‌ ಎಂಬಲ್ಲಿ ಸತ್ಸಂಗದಲ್ಲಿ ನಡೆದ ಸಾವುನೋವುಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

sri-channa-siddharama-panditaradhya-swamiji
ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ (ETV Bharat)

ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಪ್ರತಿಕ್ರಿಯೆ (ETV Bharat)

ರಾಯಚೂರು: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಿಂದಾಗಿ ಸಾವು-ನೋವುಗಳು ಉಂಟಾಗಿರುವುದಕ್ಕೆ ಖೇದ ವ್ಯಕ್ತಪಡಿಸುತ್ತೇವೆ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.

ದೇವದುರ್ಗ ತಾಲೂಕಿನ ಗಬ್ಬೂರಿನ ಬೂದಿ ಬಸವ‌ ಮಠದಲ್ಲಿ ಇಂದು ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಕ್ರಮಗಳಿಗೆ ಜನರು ಭಕ್ತಿಯಿಂದ ಆಗಮಿಸುತ್ತಾರೆ. ಹತ್ರಾಸ್‌ನ ಸತ್ಸಂಗದಲ್ಲಿ ನೂರಾರು ಜನ ಮರಣ ಹೊಂದಿದ್ದಾರೆ. ಅವರ ಭಾವನೆಗಳಿಗೆ ಗೌರವ ಕೊಡುವಂಥದ್ದು, ಭಕ್ತರ ಸುರಕ್ಷತೆಯ ವ್ಯವಸ್ಥೆ ಮಾಡುವುದು ಕಾರ್ಯಕ್ರಮದ ಆಯೋಜಕರ ಜವಾಬ್ದಾರಿ. ರಕ್ಷಣೆಯ ಕೊರತೆಯಿಂದ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇವೆ. ಇಂಥ ದುರ್ಘಟನೆ ಮರುಕಳಿಸದಂತೆ ಧಾರ್ಮಿಕ ಸಂಘ ಸಂಸ್ಥೆಗಳು ಜವಾಬ್ದಾರಿವಹಿಸಬೇಕು ಎಂದರು.

ರಾಜ್ಯದಲ್ಲಿ ಸರಣಿ ಕೊಲೆಗಳು, ಕ್ರೂರವಾದ ಕಗ್ಗೊಲೆಗಳ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಹಳಷ್ಟು ಆಘಾತಕಾರಿ ಬೆಳವಣಿಗೆಗಳು ನಡೆದಿವೆ. ಕಾನೂನಿನಡಿ ಕಠಿಣ ಕ್ರಮ ತೆಗೆದುಕೊಳ್ಳದೇ ಇರುವುದೇ ಇದಕ್ಕೆ ಕಾರಣ. ಎಷ್ಟೇ ಪ್ರತಿಷ್ಠಿತ ವ್ಯಕ್ತಿಯಾದರೂ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಕಠಿಣ ಶಿಕ್ಷಣ ನೀಡಬೇಕು. ಬಹಳಷ್ಟು ಪ್ರಚಾರದಲ್ಲಿರುವ ವ್ಯಕ್ತಿಗಳು ಇಂಥ ದುಷ್ಕೃತ್ಯಕ್ಕೆ ಕೈ ಹಾಕಿರುವುದು ಬೇಸರ ತರಿಸುತ್ತಿದೆ ಎಂದು ಹೇಳಿದರು.

ನಟ ದರ್ಶನ್ ಪರ-ವಿರೋಧ ಹೇಳಿಕೆಗಳ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಮಾನಿ ಬಳಗ ಇರುತ್ತದೆ. ಅವರ ಹಿತ, ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೇಳಿಕೆ ಕೊಡ್ತಿರ್ತಾರೆ. ಆದರೆ ಕಾನೂನು ಯಾವುದನ್ನೂ ಲೆಕ್ಕಿಸದೇ ನಿಷ್ಪಕ್ಷಪಾತವಾಗಿ ನಿರ್ಣಯ ಮಾಡಬೇಕು. ಅಪರಾಧ ನಿಜವಾಗಿದ್ದರೆ ಅಪರಾಧಿಗಳ ಪರ ಬೆಂಬಲಕ್ಕೆ ನಿಲ್ಲುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.

ಸಿಎಂ, ಡಿಸಿಎಂ ಸ್ಥಾನದ ಬೇಡಿಕೆಗಳ ಕುರಿತು ಮಾತನಾಡಿ, ಈಗಾಗಲೇ ನಮ್ಮ ಸ್ಪಷ್ಟ ಅಭಿಪ್ರಾಯ ಹೇಳಿದ್ದೇವೆ. ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಗಾಗಿ, ಪಕ್ಷಗಳು ಸ್ಥಾನಮಾನ ನೀಡುವ ಸಂದರ್ಭದಲ್ಲಿ ಈ ಸಮುದಾಯವನ್ನು ಕಡೆಗಣಿಸಬಾರದು ಎಂದರು.

ಸದ್ಯ ಆಡಳಿತ ಪಕ್ಷದಲ್ಲಿ ಶಾಮನೂರು ಶಿವಶಂಕ್ರಪ್ಪ, ಎಸ್.ಎಸ್.ಮಲ್ಲಿಕಾರ್ಜುನ ಇದ್ದಾರೆ. ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಶರಣಬಸಪ್ಪ ದರ್ಶನಾಪುರ ಇದ್ದಾರೆ. ಸಾಕಷ್ಟು ಮಂದಿ ಸಮಾಜದ ಹಿರಿಯರಿದ್ದಾರೆ. ಅವರನ್ನು ಪರಿಗಣಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಸಿಎಂ ಸ್ಥಾನ ನೀಡಬೇಕು: ಶ್ರೀಶೈಲ ಜಗದ್ಗುರುಗಳ ಆಗ್ರಹ - Srishaila Swamiji Demand

ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಪ್ರತಿಕ್ರಿಯೆ (ETV Bharat)

ರಾಯಚೂರು: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಿಂದಾಗಿ ಸಾವು-ನೋವುಗಳು ಉಂಟಾಗಿರುವುದಕ್ಕೆ ಖೇದ ವ್ಯಕ್ತಪಡಿಸುತ್ತೇವೆ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.

ದೇವದುರ್ಗ ತಾಲೂಕಿನ ಗಬ್ಬೂರಿನ ಬೂದಿ ಬಸವ‌ ಮಠದಲ್ಲಿ ಇಂದು ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಕ್ರಮಗಳಿಗೆ ಜನರು ಭಕ್ತಿಯಿಂದ ಆಗಮಿಸುತ್ತಾರೆ. ಹತ್ರಾಸ್‌ನ ಸತ್ಸಂಗದಲ್ಲಿ ನೂರಾರು ಜನ ಮರಣ ಹೊಂದಿದ್ದಾರೆ. ಅವರ ಭಾವನೆಗಳಿಗೆ ಗೌರವ ಕೊಡುವಂಥದ್ದು, ಭಕ್ತರ ಸುರಕ್ಷತೆಯ ವ್ಯವಸ್ಥೆ ಮಾಡುವುದು ಕಾರ್ಯಕ್ರಮದ ಆಯೋಜಕರ ಜವಾಬ್ದಾರಿ. ರಕ್ಷಣೆಯ ಕೊರತೆಯಿಂದ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇವೆ. ಇಂಥ ದುರ್ಘಟನೆ ಮರುಕಳಿಸದಂತೆ ಧಾರ್ಮಿಕ ಸಂಘ ಸಂಸ್ಥೆಗಳು ಜವಾಬ್ದಾರಿವಹಿಸಬೇಕು ಎಂದರು.

ರಾಜ್ಯದಲ್ಲಿ ಸರಣಿ ಕೊಲೆಗಳು, ಕ್ರೂರವಾದ ಕಗ್ಗೊಲೆಗಳ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಹಳಷ್ಟು ಆಘಾತಕಾರಿ ಬೆಳವಣಿಗೆಗಳು ನಡೆದಿವೆ. ಕಾನೂನಿನಡಿ ಕಠಿಣ ಕ್ರಮ ತೆಗೆದುಕೊಳ್ಳದೇ ಇರುವುದೇ ಇದಕ್ಕೆ ಕಾರಣ. ಎಷ್ಟೇ ಪ್ರತಿಷ್ಠಿತ ವ್ಯಕ್ತಿಯಾದರೂ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಕಠಿಣ ಶಿಕ್ಷಣ ನೀಡಬೇಕು. ಬಹಳಷ್ಟು ಪ್ರಚಾರದಲ್ಲಿರುವ ವ್ಯಕ್ತಿಗಳು ಇಂಥ ದುಷ್ಕೃತ್ಯಕ್ಕೆ ಕೈ ಹಾಕಿರುವುದು ಬೇಸರ ತರಿಸುತ್ತಿದೆ ಎಂದು ಹೇಳಿದರು.

ನಟ ದರ್ಶನ್ ಪರ-ವಿರೋಧ ಹೇಳಿಕೆಗಳ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಮಾನಿ ಬಳಗ ಇರುತ್ತದೆ. ಅವರ ಹಿತ, ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೇಳಿಕೆ ಕೊಡ್ತಿರ್ತಾರೆ. ಆದರೆ ಕಾನೂನು ಯಾವುದನ್ನೂ ಲೆಕ್ಕಿಸದೇ ನಿಷ್ಪಕ್ಷಪಾತವಾಗಿ ನಿರ್ಣಯ ಮಾಡಬೇಕು. ಅಪರಾಧ ನಿಜವಾಗಿದ್ದರೆ ಅಪರಾಧಿಗಳ ಪರ ಬೆಂಬಲಕ್ಕೆ ನಿಲ್ಲುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.

ಸಿಎಂ, ಡಿಸಿಎಂ ಸ್ಥಾನದ ಬೇಡಿಕೆಗಳ ಕುರಿತು ಮಾತನಾಡಿ, ಈಗಾಗಲೇ ನಮ್ಮ ಸ್ಪಷ್ಟ ಅಭಿಪ್ರಾಯ ಹೇಳಿದ್ದೇವೆ. ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಗಾಗಿ, ಪಕ್ಷಗಳು ಸ್ಥಾನಮಾನ ನೀಡುವ ಸಂದರ್ಭದಲ್ಲಿ ಈ ಸಮುದಾಯವನ್ನು ಕಡೆಗಣಿಸಬಾರದು ಎಂದರು.

ಸದ್ಯ ಆಡಳಿತ ಪಕ್ಷದಲ್ಲಿ ಶಾಮನೂರು ಶಿವಶಂಕ್ರಪ್ಪ, ಎಸ್.ಎಸ್.ಮಲ್ಲಿಕಾರ್ಜುನ ಇದ್ದಾರೆ. ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಶರಣಬಸಪ್ಪ ದರ್ಶನಾಪುರ ಇದ್ದಾರೆ. ಸಾಕಷ್ಟು ಮಂದಿ ಸಮಾಜದ ಹಿರಿಯರಿದ್ದಾರೆ. ಅವರನ್ನು ಪರಿಗಣಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಸಿಎಂ ಸ್ಥಾನ ನೀಡಬೇಕು: ಶ್ರೀಶೈಲ ಜಗದ್ಗುರುಗಳ ಆಗ್ರಹ - Srishaila Swamiji Demand

ETV Bharat Logo

Copyright © 2024 Ushodaya Enterprises Pvt. Ltd., All Rights Reserved.