ETV Bharat / state

ನಾನು ಬದುಕಿರುವವರೆಗೂ ದರ್ಶನ್​ ನನ್ನ ಹಿರಿಯ ಮಗ: ಸುಮಲತಾ ಅಂಬರೀಶ್ - Sumalatha Ambareesh

author img

By ETV Bharat Karnataka Team

Published : Jul 4, 2024, 5:13 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಕುರಿತು ಸುಮಲತಾ ಅಂಬರೀಶ್​ ಸುದೀರ್ಘ ಪತ್ರ ಬರೆದು ಮೌನ ಮುರಿದಿದ್ದಾರೆ. ಈ ಪತ್ರದ ಸಾರಾಂಶ ಇಲ್ಲಿದೆ.

ನಟ ದರ್ಶನ್​ ಬಗ್ಗೆ ಸುಮಲತಾ ಅಂಬರೀಷ್​ ಸುದೀರ್ಘ ಪತ್ರ
ದರ್ಶನ್ ಅವರೊಂದಿಗೆ ಸುಮಲತಾ ಅಂಬರೀಶ್ (IANS)

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಕುರಿತು ನಟಿ, ರಾಜಕಾರಣಿ ಸುಮಲತಾ ಅಂಬರೀಶ್ ಸುದೀರ್ಘ ಪತ್ರ ಬರೆದು, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್​ ಬಗ್ಗೆ ಸುಮಲತಾ ಅಂಬರೀಶ್​ ಸುದೀರ್ಘ ಪತ್ರ
ಸುಮಲತಾ ಅಂಬರೀಶ್​ ಸುದೀರ್ಘ ಪತ್ರ (ETV Bharat)

ಪತ್ರದ ಸಾರಾಂಶ ಹೀಗಿದೆ:

ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ. ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ, ತಾಯಿಯಾಗಿ, ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನೂ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ, ನನ್ನ ಬಳಿ ಯಾವುದೇ ಸತ್ಯ ಅಥವಾ ಮಾಹಿತಿಯಿಲ್ಲದೆ ನಾನು ಅಸಡ್ಡೆ, ಅನಗತ್ಯ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ.

ಇಂದು ನಾನು ಕೆಲವು ಸಂಗತಿಗಳನ್ನು ಸ್ಪಷ್ಟಪಡಿಸಲು, ನನ್ನ ಆಲೋಚನೆಗಳು ಮತ್ತು ನೋವನ್ನು ಹಂಚಿಕೊಳ್ಳಲು ಈ ಪೋಸ್ಟ್ ಮಾಡುತ್ತಿದ್ದೇನೆ. ಏಕೆಂದರೆ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಹೆಚ್ಚಿನ ಊಹಾಪೋಹಗಳನ್ನು ಪ್ರೋತ್ಸಾಹಿಸಲು ಅಥವಾ ನನ್ನ ನಿಲುವಿನ ಬಗ್ಗೆ ಅಭಿಮಾನಿಗಳಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡಲು ನಾನು ಬಯಸುವುದಿಲ್ಲ.

ಮೊದಲಿಗೆ ತಮ್ಮ ಮಗ ಮತ್ತು ಪತಿಯನ್ನು ಹೃದಯವಿದ್ರಾವಕ ರೀತಿಯಲ್ಲಿ ಕಳೆದುಕೊಂಡಿರುವ ರೇಣುಕಾಸ್ವಾಮಿ ಅವರ ಹೆತ್ತವರು ಮತ್ತು ಪತ್ನಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಈ ದುರಂತವನ್ನು ಎದುರಿಸಲು ಮತ್ತು ಆ ನೋವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ಕಾನೂನು ವ್ಯವಸ್ಥೆಯಿಂದ ಅವರಿಗೆ ಸಿಗಬೇಕಾದ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್
ಪುತ್ರ ಅಭಿಷೇಕ್ ಅಂಬರೀಶ್, ಸುಮಲತಾ ಅಂಬರೀಶ್, ದರ್ಶನ್ (ETV Bharat)

ಈ ಘಟನೆ ನನ್ನ ಹೃದಯವನ್ನು ಛಿದ್ರಗೊಳಿಸಿತು. ನಾನು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಹಲವಾರು ದಿನಗಳವರೆಗೆ ಆಘಾತ ಮತ್ತು ನೋವಿನ ಸ್ಥಿತಿಯಲ್ಲಿದ್ದೆ. ನನ್ನ "ಮೌನ"ದ ಬಗ್ಗೆ ಕಾಮೆಂಟ್ ಮಾಡುತ್ತಿರುವ ಕೆಲವರು, ನನ್ನ ಮತ್ತು ದರ್ಶನ್, ಅವರ ಕುಟುಂಬ ಮತ್ತು ನಾವು ವರ್ಷಗಳಿಂದ ಹಂಚಿಕೊಂಡಿರುವ ಬಾಂಧವ್ಯದ ನಡುವಿನ ಅಗಾಧತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಸ್ಟಾರ್ ಮತ್ತು ಸೂಪರ್‌ಸ್ಪಾರ್ ಆಗುವ ಮೊದಲು ನಾನು ಅವರನ್ನು 25 ವರ್ಷಗಳಿಂದ ಬಲ್ಲೆ. ಯಾವುದೇ ಸ್ಟಾರ್‌ಡಂಗಿಂತ ಹೆಚ್ಚಾಗಿ, ಅವರು ನನ್ನ ಕುಟುಂಬದ ಸದಸ್ಯ ಮತ್ತು ಯಾವಾಗಲೂ ನನಗೆ ಮಗನಂತೆ. ಅವರು ಅಂಬರೀಶ್ ಅವರನ್ನು ಯಾವಾಗಲೂ ತಮ್ಮ ಅಪ್ಪಾಜಿ ಎಂದು ಪರಿಗಣಿಸಿದ್ದಾರೆ. ನನಗೆ ಅವರ ತಾಯಿಯ ಗೌರವ ಮತ್ತು ಸ್ಥಾನ ಮತ್ತು ಮಗನ ಪ್ರೀತಿಯನ್ನು ನೀಡಿದ್ದಾರೆ.

ಯಾವ ತಾಯಿಯೂ ತನ್ನ ಮಗುವನ್ನು ಈ ರೀತಿಯ ಪರಿಸ್ಥಿತಿಯಲ್ಲಿ ನೋಡುವುದನ್ನು ಸಹಿಸುವುದಿಲ್ಲ. ನಾನು ದರ್ಶನ್ ಅವರನ್ನು ಪ್ರೀತಿಸುವ ಹೃದಯ ಹೊಂದಿರುವ, ಅತ್ಯಂತ ಕಾಳಜಿಯುಳ್ಳ ಮತ್ತು ಉದಾರ ವ್ಯಕ್ತಿ ಎಂದು ತಿಳಿದಿದ್ದೇನೆ. ಪ್ರಾಣಿಗಳ ಬಗ್ಗೆ ಅವನ ಸಹಾನುಭೂತಿ ಮತ್ತು ಸಹಾಯ ಮಾಡುವ ಮನೋಭಾವ ಯಾವಾಗಲೂ ಅವನ ಸ್ವಭಾವದ ಭಾಗವಾಗಿದೆ. ಈ ಕೃತ್ಯವನ್ನು ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ದರ್ಶನ್ ಜೊತೆಗೆ ಅವನ ಪತ್ನಿ ವಿಜಯಲಕ್ಷ್ಮಿ ಮತ್ತು ಮುಗ್ಧ ಮಗನನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿಕೊಂಡಿರುವುದು ತುಂಬಾ ಅನ್ಯಾಯವಾಗಿದೆ. ಅಷ್ಟೇ ಅಲ್ಲದೆ ಇತರೆ ಆರೋಪಿಗಳ ಬಡ ಕುಟುಂಬಗಳು ಕೂಡ ಸಂಕಷ್ಟಕ್ಕೆ ಸಿಲುಕಿರುವುದು ನೋವಿನ ಸಂಗತಿ. ಸೋಷಿಯಲ್ ಮೀಡಿಯಾ ಬಳಕೆದಾರರು ಮತ್ತು ಸಾರ್ವಜನಿಕರು ಸಂತ್ರಸ್ತ ಅಥವಾ ಆರೋಪಿಯ ಕುಟುಂಬಗಳು, ಈಗಾಗಲೇ ಈ ಭಯಾನಕ ಪರಿಸ್ಥಿತಿಯನ್ನು ಎದುರಿಸುತ್ತಿರುವವರ ಮೇಲೆ ತಮ್ಮ ಕಾಮೆಂಟ್‌ಗಳು ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಪರಿಗಣಿಸಬೇಕು.

ತನಿಖೆ ನಡೆಯುತ್ತಿದೆ ಮತ್ತು ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಅಪಾರ ನಂಬಿಕೆಯಿದೆ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ಯಾವುದೂ ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ಇದು ಕಾನೂನಿಗೆ ಬಿಟ್ಟದ್ದು ಮತ್ತು ಈ ಕುರಿತು ಈಗಾಗಲೇ ನಿರ್ಣಯಿಸುವುದು ಮತ್ತು ಶಿಕ್ಷೆ ವಿಧಿಸುವುದು ಬೇರೆ ಯಾರೂ ಅಲ್ಲ. ಈ ವಿಚಾರದಲ್ಲಿ ಅವರ ನಿಲುವು, ಸತ್ಯಾಸತ್ಯತೆಗಳನ್ನು ಸ್ಪಷ್ಟಪಡಿಸುವ ಅವಕಾಶವಾದರೂ ಇರಲಿ.

ಈ ಪರಿಸ್ಥಿತಿಯಲ್ಲಿ, ನಾನು ನೆಮ್ಮದಿಯಿಂದ, ಈ ಸಮಸ್ಯೆಯಿಂದ ದೂರವಿರುವುದು ಅಸಾಧ್ಯ. ಇದು ನನ್ನದೇ ಕೌಟುಂಬಿಕ ಸಮಸ್ಯೆ. ಇದು ಅವರ ಜೀವನ ಮತ್ತು ಕುಟುಂಬದ ನೆಮ್ಮದಿ, ಭದ್ರತೆ, ಭವಿಷ್ಯಕ್ಕೆ ಸಂಬಂಧಪಟ್ಟಂತೆ ಅತ್ಯಂತ ಗಂಭೀರ ವಿಷಯ. ನಮಗೆಲ್ಲ ನೋವಾಗುತ್ತಿದೆ. ಚಿತ್ರರಂಗ ಅಸ್ತವ್ಯಸ್ತವಾಗಿದೆ. ಸಾವಿರ ಜನರ ಜೀವನೋಪಾಯ ಅವರ ಚಲನಚಿತ್ರ ನಿರ್ಮಾಣಗಳ ಮೇಲೆ ಅವಲಂಬಿತವಾಗಿದೆ. ಇದನ್ನು ಎದುರಿಸುವುದು ಯಾರಿಗೂ ಸುಲಭವಾಗಿರಲಿಲ್ಲ.

ಆಘಾತ ಮತ್ತು ಯಾತನೆಯ ಮನಸ್ಸಿನ ಸ್ಥಿತಿಯಿಂದ ಹೊರಬರಲು ಮತ್ತು ಹಲವು ಮೂಲಗಳಿಂದ ಬರುವ ಎಲ್ಲಾ ಗೊಂದಲಮಯ ಸುದ್ದಿಗಳನ್ನು ಅರ್ಥಮಾಡಿಕೊಳ್ಳಲು ನನ್ನನ್ನು ನಾನೇ ಸಮಾಧಾನಗೊಳಿಸಬೇಕಿತ್ತು. ಇದು ನಾನು ಸಾಂದರ್ಭಿಕವಾಗಿ ಪ್ರತಿಕ್ರಿಯಿಸಲು ಯಾವುದೋ ಸಿನಿಮಾ ಅಥವಾ ರಾಜಕೀಯ ಘಟನೆಯಲ್ಲ. ಈ ಬಗ್ಗೆ ಚರ್ಚಿಸಲು ಅಥವಾ ಅಂತಹ ಅಪರಾಧದಲ್ಲಿ ಆರೋಪಿಯಾಗಿ ದರ್ಶನ್ ನಿಂತಿರುವುದನ್ನು ನೋಡುವುದು ನನಗೆ ತುಂಬಾ ನೋವಿನ ಸಂಗತಿ ಎಂದು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಆರೋಪಿಯಾಗಿರುವುದು ಎಂದರೆ ಅವನು ಅಪರಾಧಿ ಎಂದು ಅರ್ಥವಲ್ಲ ಎಂಬುದನ್ನು ನೆನಪಿನಲ್ಲಿಡೋಣ. ಬೇರೆಯವರಂತೆ ಕಾನೂನಾತ್ಮಕವಾಗಿ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಕ್ಕು ಅವರಿಗೂ ಇದೆ.

ದರ್ಶನ್ ಯಾವಾಗಲೂ ನನ್ನನ್ನು ಮದ‌ರ್ ಇಂಡಿಯಾ ಎಂದು ಕರೆಯುತ್ತಾರೆ ಮತ್ತು ನಾನು ಬದುಕಿರುವವರೆಗೂ ಅವನು ನನ್ನ ಹಿರಿಯ ಮಗನಾಗಿರುತ್ತಾನೆ. ನಮ್ಮ ಬಂಧ ಒಂದೇ ಮತ್ತು ಯಾವುದೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರ ತಾಯಿಯಾಗಿ ನಾನು ಸತ್ಯ ಹೊರಬರಲಿ ಮತ್ತು ಎಲ್ಲರಿಗೂ ನ್ಯಾಯ ಸಿಗಲಿ ಎಂದು ದೇವರಲ್ಲಿ ನಿರಂತರವಾಗಿ ಪ್ರಾರ್ಥಿಸುತ್ತಿದ್ದೇನೆ. ಅವರು ತಮ್ಮನ್ನು ತಾವು ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ ಮತ್ತು ಚಿತ್ರೀಕರಣ, ಸಾಮಾನ್ಯ ಜೀವನವನ್ನು ಪುನರಾರಂಭಿಸುತ್ತಾರೆ ಎಂದು ನಾನು ಭರವಸೆ ಹೊಂದಿದ್ದೇನೆ.

ದರ್ಶನ್ ಅಭಿಮಾನಿಗಳಿಗೆ ಒಂದು ಹೃತ್ಪೂರ್ವಕ ವಿನಂತಿ. ದಯವಿಟ್ಟು ಶಾಂತವಾಗಿರಿ ಮತ್ತು ಈ ಕ್ಷಣದಲ್ಲಿ ಹೇಳಿಕೆಗಳನ್ನು ನೀಡಬೇಡಿ ಅಥವಾ ಯಾವುದೇ ನಕಾರಾತ್ಮಕತೆಗೆ ಪ್ರತಿಕ್ರಿಯಿಸಬೇಡಿ. ಅದು ಅವರ ಕುಟುಂಬ ಅಥವಾ ಹತ್ತಿರದವರ ಮೇಲೆ ಪರಿಣಾಮ ಬೀರಬಹುದು. ಇದು ಕೇವಲ ಕೆಟ್ಟ ಹಂತ, ಆದರೆ ಅವರಿಗೆ ನಮ್ಮೆಲ್ಲರ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ಎದೆಗುಂದಬೇಡಿ.

ನಮ್ಮಲ್ಲಿ ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ನಾವು ಅದನ್ನು ಗೌರವಿಸಬೇಕು ಮತ್ತು ತಾಳ್ಮೆಯಿಂದ ಕಾಯಬೇಕು. ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು. ನಮ್ಮ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ. ದೇವರಲ್ಲಿ ನಂಬಿಕೆಯಿರಲಿ. ಎಲ್ಲವೂ ಸರಿಯಾಗುತ್ತವೆ. ಸತ್ಯಮೇವ ಜಯತೇ.- ಶ್ರೀಮತಿ ಸುಮಲತಾ ಅಂಬರೀಶ್

ಇದನ್ನೂ ಓದಿ: ದರ್ಶನ್​ಗೆ ಸುಮಲತಾ ಅಂಬರೀಶ್ ಕೊಟ್ರು ಕೋಟಿ ಬೆಲೆ ಬಾಳುವ ಗಿಫ್ಟ್! - Actor Darshan

ನಟ ದರ್ಶನ್​ಗೆ ಜೈಲಿನಲ್ಲಿ ಯಾವುದೇ ವಿಶೇಷ ಸತ್ಕಾರ ಕೊಡುತ್ತಿಲ್ಲ : ಸಚಿವ ಜಿ. ಪರಮೇಶ್ವರ್ - Minister G Parameshwar

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಕುರಿತು ನಟಿ, ರಾಜಕಾರಣಿ ಸುಮಲತಾ ಅಂಬರೀಶ್ ಸುದೀರ್ಘ ಪತ್ರ ಬರೆದು, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್​ ಬಗ್ಗೆ ಸುಮಲತಾ ಅಂಬರೀಶ್​ ಸುದೀರ್ಘ ಪತ್ರ
ಸುಮಲತಾ ಅಂಬರೀಶ್​ ಸುದೀರ್ಘ ಪತ್ರ (ETV Bharat)

ಪತ್ರದ ಸಾರಾಂಶ ಹೀಗಿದೆ:

ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ. ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ, ತಾಯಿಯಾಗಿ, ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನೂ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ, ನನ್ನ ಬಳಿ ಯಾವುದೇ ಸತ್ಯ ಅಥವಾ ಮಾಹಿತಿಯಿಲ್ಲದೆ ನಾನು ಅಸಡ್ಡೆ, ಅನಗತ್ಯ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ.

ಇಂದು ನಾನು ಕೆಲವು ಸಂಗತಿಗಳನ್ನು ಸ್ಪಷ್ಟಪಡಿಸಲು, ನನ್ನ ಆಲೋಚನೆಗಳು ಮತ್ತು ನೋವನ್ನು ಹಂಚಿಕೊಳ್ಳಲು ಈ ಪೋಸ್ಟ್ ಮಾಡುತ್ತಿದ್ದೇನೆ. ಏಕೆಂದರೆ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಹೆಚ್ಚಿನ ಊಹಾಪೋಹಗಳನ್ನು ಪ್ರೋತ್ಸಾಹಿಸಲು ಅಥವಾ ನನ್ನ ನಿಲುವಿನ ಬಗ್ಗೆ ಅಭಿಮಾನಿಗಳಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡಲು ನಾನು ಬಯಸುವುದಿಲ್ಲ.

ಮೊದಲಿಗೆ ತಮ್ಮ ಮಗ ಮತ್ತು ಪತಿಯನ್ನು ಹೃದಯವಿದ್ರಾವಕ ರೀತಿಯಲ್ಲಿ ಕಳೆದುಕೊಂಡಿರುವ ರೇಣುಕಾಸ್ವಾಮಿ ಅವರ ಹೆತ್ತವರು ಮತ್ತು ಪತ್ನಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಈ ದುರಂತವನ್ನು ಎದುರಿಸಲು ಮತ್ತು ಆ ನೋವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ಕಾನೂನು ವ್ಯವಸ್ಥೆಯಿಂದ ಅವರಿಗೆ ಸಿಗಬೇಕಾದ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್
ಪುತ್ರ ಅಭಿಷೇಕ್ ಅಂಬರೀಶ್, ಸುಮಲತಾ ಅಂಬರೀಶ್, ದರ್ಶನ್ (ETV Bharat)

ಈ ಘಟನೆ ನನ್ನ ಹೃದಯವನ್ನು ಛಿದ್ರಗೊಳಿಸಿತು. ನಾನು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಹಲವಾರು ದಿನಗಳವರೆಗೆ ಆಘಾತ ಮತ್ತು ನೋವಿನ ಸ್ಥಿತಿಯಲ್ಲಿದ್ದೆ. ನನ್ನ "ಮೌನ"ದ ಬಗ್ಗೆ ಕಾಮೆಂಟ್ ಮಾಡುತ್ತಿರುವ ಕೆಲವರು, ನನ್ನ ಮತ್ತು ದರ್ಶನ್, ಅವರ ಕುಟುಂಬ ಮತ್ತು ನಾವು ವರ್ಷಗಳಿಂದ ಹಂಚಿಕೊಂಡಿರುವ ಬಾಂಧವ್ಯದ ನಡುವಿನ ಅಗಾಧತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಸ್ಟಾರ್ ಮತ್ತು ಸೂಪರ್‌ಸ್ಪಾರ್ ಆಗುವ ಮೊದಲು ನಾನು ಅವರನ್ನು 25 ವರ್ಷಗಳಿಂದ ಬಲ್ಲೆ. ಯಾವುದೇ ಸ್ಟಾರ್‌ಡಂಗಿಂತ ಹೆಚ್ಚಾಗಿ, ಅವರು ನನ್ನ ಕುಟುಂಬದ ಸದಸ್ಯ ಮತ್ತು ಯಾವಾಗಲೂ ನನಗೆ ಮಗನಂತೆ. ಅವರು ಅಂಬರೀಶ್ ಅವರನ್ನು ಯಾವಾಗಲೂ ತಮ್ಮ ಅಪ್ಪಾಜಿ ಎಂದು ಪರಿಗಣಿಸಿದ್ದಾರೆ. ನನಗೆ ಅವರ ತಾಯಿಯ ಗೌರವ ಮತ್ತು ಸ್ಥಾನ ಮತ್ತು ಮಗನ ಪ್ರೀತಿಯನ್ನು ನೀಡಿದ್ದಾರೆ.

ಯಾವ ತಾಯಿಯೂ ತನ್ನ ಮಗುವನ್ನು ಈ ರೀತಿಯ ಪರಿಸ್ಥಿತಿಯಲ್ಲಿ ನೋಡುವುದನ್ನು ಸಹಿಸುವುದಿಲ್ಲ. ನಾನು ದರ್ಶನ್ ಅವರನ್ನು ಪ್ರೀತಿಸುವ ಹೃದಯ ಹೊಂದಿರುವ, ಅತ್ಯಂತ ಕಾಳಜಿಯುಳ್ಳ ಮತ್ತು ಉದಾರ ವ್ಯಕ್ತಿ ಎಂದು ತಿಳಿದಿದ್ದೇನೆ. ಪ್ರಾಣಿಗಳ ಬಗ್ಗೆ ಅವನ ಸಹಾನುಭೂತಿ ಮತ್ತು ಸಹಾಯ ಮಾಡುವ ಮನೋಭಾವ ಯಾವಾಗಲೂ ಅವನ ಸ್ವಭಾವದ ಭಾಗವಾಗಿದೆ. ಈ ಕೃತ್ಯವನ್ನು ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ದರ್ಶನ್ ಜೊತೆಗೆ ಅವನ ಪತ್ನಿ ವಿಜಯಲಕ್ಷ್ಮಿ ಮತ್ತು ಮುಗ್ಧ ಮಗನನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿಕೊಂಡಿರುವುದು ತುಂಬಾ ಅನ್ಯಾಯವಾಗಿದೆ. ಅಷ್ಟೇ ಅಲ್ಲದೆ ಇತರೆ ಆರೋಪಿಗಳ ಬಡ ಕುಟುಂಬಗಳು ಕೂಡ ಸಂಕಷ್ಟಕ್ಕೆ ಸಿಲುಕಿರುವುದು ನೋವಿನ ಸಂಗತಿ. ಸೋಷಿಯಲ್ ಮೀಡಿಯಾ ಬಳಕೆದಾರರು ಮತ್ತು ಸಾರ್ವಜನಿಕರು ಸಂತ್ರಸ್ತ ಅಥವಾ ಆರೋಪಿಯ ಕುಟುಂಬಗಳು, ಈಗಾಗಲೇ ಈ ಭಯಾನಕ ಪರಿಸ್ಥಿತಿಯನ್ನು ಎದುರಿಸುತ್ತಿರುವವರ ಮೇಲೆ ತಮ್ಮ ಕಾಮೆಂಟ್‌ಗಳು ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಪರಿಗಣಿಸಬೇಕು.

ತನಿಖೆ ನಡೆಯುತ್ತಿದೆ ಮತ್ತು ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಅಪಾರ ನಂಬಿಕೆಯಿದೆ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ಯಾವುದೂ ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ಇದು ಕಾನೂನಿಗೆ ಬಿಟ್ಟದ್ದು ಮತ್ತು ಈ ಕುರಿತು ಈಗಾಗಲೇ ನಿರ್ಣಯಿಸುವುದು ಮತ್ತು ಶಿಕ್ಷೆ ವಿಧಿಸುವುದು ಬೇರೆ ಯಾರೂ ಅಲ್ಲ. ಈ ವಿಚಾರದಲ್ಲಿ ಅವರ ನಿಲುವು, ಸತ್ಯಾಸತ್ಯತೆಗಳನ್ನು ಸ್ಪಷ್ಟಪಡಿಸುವ ಅವಕಾಶವಾದರೂ ಇರಲಿ.

ಈ ಪರಿಸ್ಥಿತಿಯಲ್ಲಿ, ನಾನು ನೆಮ್ಮದಿಯಿಂದ, ಈ ಸಮಸ್ಯೆಯಿಂದ ದೂರವಿರುವುದು ಅಸಾಧ್ಯ. ಇದು ನನ್ನದೇ ಕೌಟುಂಬಿಕ ಸಮಸ್ಯೆ. ಇದು ಅವರ ಜೀವನ ಮತ್ತು ಕುಟುಂಬದ ನೆಮ್ಮದಿ, ಭದ್ರತೆ, ಭವಿಷ್ಯಕ್ಕೆ ಸಂಬಂಧಪಟ್ಟಂತೆ ಅತ್ಯಂತ ಗಂಭೀರ ವಿಷಯ. ನಮಗೆಲ್ಲ ನೋವಾಗುತ್ತಿದೆ. ಚಿತ್ರರಂಗ ಅಸ್ತವ್ಯಸ್ತವಾಗಿದೆ. ಸಾವಿರ ಜನರ ಜೀವನೋಪಾಯ ಅವರ ಚಲನಚಿತ್ರ ನಿರ್ಮಾಣಗಳ ಮೇಲೆ ಅವಲಂಬಿತವಾಗಿದೆ. ಇದನ್ನು ಎದುರಿಸುವುದು ಯಾರಿಗೂ ಸುಲಭವಾಗಿರಲಿಲ್ಲ.

ಆಘಾತ ಮತ್ತು ಯಾತನೆಯ ಮನಸ್ಸಿನ ಸ್ಥಿತಿಯಿಂದ ಹೊರಬರಲು ಮತ್ತು ಹಲವು ಮೂಲಗಳಿಂದ ಬರುವ ಎಲ್ಲಾ ಗೊಂದಲಮಯ ಸುದ್ದಿಗಳನ್ನು ಅರ್ಥಮಾಡಿಕೊಳ್ಳಲು ನನ್ನನ್ನು ನಾನೇ ಸಮಾಧಾನಗೊಳಿಸಬೇಕಿತ್ತು. ಇದು ನಾನು ಸಾಂದರ್ಭಿಕವಾಗಿ ಪ್ರತಿಕ್ರಿಯಿಸಲು ಯಾವುದೋ ಸಿನಿಮಾ ಅಥವಾ ರಾಜಕೀಯ ಘಟನೆಯಲ್ಲ. ಈ ಬಗ್ಗೆ ಚರ್ಚಿಸಲು ಅಥವಾ ಅಂತಹ ಅಪರಾಧದಲ್ಲಿ ಆರೋಪಿಯಾಗಿ ದರ್ಶನ್ ನಿಂತಿರುವುದನ್ನು ನೋಡುವುದು ನನಗೆ ತುಂಬಾ ನೋವಿನ ಸಂಗತಿ ಎಂದು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಆರೋಪಿಯಾಗಿರುವುದು ಎಂದರೆ ಅವನು ಅಪರಾಧಿ ಎಂದು ಅರ್ಥವಲ್ಲ ಎಂಬುದನ್ನು ನೆನಪಿನಲ್ಲಿಡೋಣ. ಬೇರೆಯವರಂತೆ ಕಾನೂನಾತ್ಮಕವಾಗಿ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಕ್ಕು ಅವರಿಗೂ ಇದೆ.

ದರ್ಶನ್ ಯಾವಾಗಲೂ ನನ್ನನ್ನು ಮದ‌ರ್ ಇಂಡಿಯಾ ಎಂದು ಕರೆಯುತ್ತಾರೆ ಮತ್ತು ನಾನು ಬದುಕಿರುವವರೆಗೂ ಅವನು ನನ್ನ ಹಿರಿಯ ಮಗನಾಗಿರುತ್ತಾನೆ. ನಮ್ಮ ಬಂಧ ಒಂದೇ ಮತ್ತು ಯಾವುದೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರ ತಾಯಿಯಾಗಿ ನಾನು ಸತ್ಯ ಹೊರಬರಲಿ ಮತ್ತು ಎಲ್ಲರಿಗೂ ನ್ಯಾಯ ಸಿಗಲಿ ಎಂದು ದೇವರಲ್ಲಿ ನಿರಂತರವಾಗಿ ಪ್ರಾರ್ಥಿಸುತ್ತಿದ್ದೇನೆ. ಅವರು ತಮ್ಮನ್ನು ತಾವು ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ ಮತ್ತು ಚಿತ್ರೀಕರಣ, ಸಾಮಾನ್ಯ ಜೀವನವನ್ನು ಪುನರಾರಂಭಿಸುತ್ತಾರೆ ಎಂದು ನಾನು ಭರವಸೆ ಹೊಂದಿದ್ದೇನೆ.

ದರ್ಶನ್ ಅಭಿಮಾನಿಗಳಿಗೆ ಒಂದು ಹೃತ್ಪೂರ್ವಕ ವಿನಂತಿ. ದಯವಿಟ್ಟು ಶಾಂತವಾಗಿರಿ ಮತ್ತು ಈ ಕ್ಷಣದಲ್ಲಿ ಹೇಳಿಕೆಗಳನ್ನು ನೀಡಬೇಡಿ ಅಥವಾ ಯಾವುದೇ ನಕಾರಾತ್ಮಕತೆಗೆ ಪ್ರತಿಕ್ರಿಯಿಸಬೇಡಿ. ಅದು ಅವರ ಕುಟುಂಬ ಅಥವಾ ಹತ್ತಿರದವರ ಮೇಲೆ ಪರಿಣಾಮ ಬೀರಬಹುದು. ಇದು ಕೇವಲ ಕೆಟ್ಟ ಹಂತ, ಆದರೆ ಅವರಿಗೆ ನಮ್ಮೆಲ್ಲರ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ಎದೆಗುಂದಬೇಡಿ.

ನಮ್ಮಲ್ಲಿ ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ನಾವು ಅದನ್ನು ಗೌರವಿಸಬೇಕು ಮತ್ತು ತಾಳ್ಮೆಯಿಂದ ಕಾಯಬೇಕು. ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು. ನಮ್ಮ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ. ದೇವರಲ್ಲಿ ನಂಬಿಕೆಯಿರಲಿ. ಎಲ್ಲವೂ ಸರಿಯಾಗುತ್ತವೆ. ಸತ್ಯಮೇವ ಜಯತೇ.- ಶ್ರೀಮತಿ ಸುಮಲತಾ ಅಂಬರೀಶ್

ಇದನ್ನೂ ಓದಿ: ದರ್ಶನ್​ಗೆ ಸುಮಲತಾ ಅಂಬರೀಶ್ ಕೊಟ್ರು ಕೋಟಿ ಬೆಲೆ ಬಾಳುವ ಗಿಫ್ಟ್! - Actor Darshan

ನಟ ದರ್ಶನ್​ಗೆ ಜೈಲಿನಲ್ಲಿ ಯಾವುದೇ ವಿಶೇಷ ಸತ್ಕಾರ ಕೊಡುತ್ತಿಲ್ಲ : ಸಚಿವ ಜಿ. ಪರಮೇಶ್ವರ್ - Minister G Parameshwar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.