ETV Bharat / state

ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸೇರಿ 9 ಸದಸ್ಯರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆ - Join Congress from JDS

author img

By ETV Bharat Karnataka Team

Published : Apr 5, 2024, 9:34 AM IST

9 ಮಂದಿ ಚನ್ನಪಟ್ಟಣ ನಗರಸಭಾ ಸದಸ್ಯರು ಹಾಗೂ ಅಧ್ಯಕ್ಷ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆ
ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಪಕ್ಷಾಂತರ ಪರ್ವ ಮುಂದುವರೆದಿದ್ದು, ಜೆಡಿಎಸ್ ಪಕ್ಷದ 9 ಮಂದಿ ಚನ್ನಪಟ್ಟಣ ನಗರಸಭೆ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್​ಗೆ ಕಾಂಗ್ರೆಸ್​​ ಶಾಕ್​ ನೀಡಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ. ಸೇರಿದಂತೆ 9 ಮಂದಿ ಜೆಡಿಎಸ್​ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮತ್ತು ಎಂಎಲ್​ಸಿ ಪುಟ್ಟಣ್ಣ ಸಮ್ಮುಖದಲ್ಲಿ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರ ಜತೆಗೆ ಪಕ್ಷೇತರ ಸದಸ್ಯೆ ಉಮಾ ಅವರೂ ಕಾಂಗ್ರೆಸ್ ಸೇರಿದರು.

ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್​​ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್​ ಸೇರಿದ್ದು, ಅಲ್ಲದೇ ತಮ್ಮನ್ನು ಕಾಂಗ್ರೆಸ್​ ಸದಸ್ಯರು ಎಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್​ ಸದಸ್ಯರ ಜತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

ಸೇರ್ಪಡೆಗೊಂಡ ಸದಸ್ಯರು: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ., ರೇವಣ್ಣ ಎಂ.ಜೆ., ಎ. ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್​ ಸಿ.ಜೆ., ನಾಗೇಶ್​, ಸಯ್ಯದ್​​ ರಫೀಕ್​​ ಅಹ್ಮದ್​ ಕುನುಮೀರಿ, ಅಭಿದಾಬಾನು, ಭಾನುಪ್ರಿಯಾ.

ಇದನ್ನೂ ಓದಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆ - Sumalatha Ambareesh

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಪಕ್ಷಾಂತರ ಪರ್ವ ಮುಂದುವರೆದಿದ್ದು, ಜೆಡಿಎಸ್ ಪಕ್ಷದ 9 ಮಂದಿ ಚನ್ನಪಟ್ಟಣ ನಗರಸಭೆ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್​ಗೆ ಕಾಂಗ್ರೆಸ್​​ ಶಾಕ್​ ನೀಡಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ. ಸೇರಿದಂತೆ 9 ಮಂದಿ ಜೆಡಿಎಸ್​ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮತ್ತು ಎಂಎಲ್​ಸಿ ಪುಟ್ಟಣ್ಣ ಸಮ್ಮುಖದಲ್ಲಿ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರ ಜತೆಗೆ ಪಕ್ಷೇತರ ಸದಸ್ಯೆ ಉಮಾ ಅವರೂ ಕಾಂಗ್ರೆಸ್ ಸೇರಿದರು.

ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್​​ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್​ ಸೇರಿದ್ದು, ಅಲ್ಲದೇ ತಮ್ಮನ್ನು ಕಾಂಗ್ರೆಸ್​ ಸದಸ್ಯರು ಎಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್​ ಸದಸ್ಯರ ಜತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

ಸೇರ್ಪಡೆಗೊಂಡ ಸದಸ್ಯರು: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ., ರೇವಣ್ಣ ಎಂ.ಜೆ., ಎ. ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್​ ಸಿ.ಜೆ., ನಾಗೇಶ್​, ಸಯ್ಯದ್​​ ರಫೀಕ್​​ ಅಹ್ಮದ್​ ಕುನುಮೀರಿ, ಅಭಿದಾಬಾನು, ಭಾನುಪ್ರಿಯಾ.

ಇದನ್ನೂ ಓದಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆ - Sumalatha Ambareesh

ETV Bharat Logo

Copyright © 2024 Ushodaya Enterprises Pvt. Ltd., All Rights Reserved.