ETV Bharat / state

ಶಿರೂರು ಗುಡ್ಡ ಕುಸಿತದಲ್ಲಿ 10 ಮಂದಿ ನಾಪತ್ತೆ ಬಗ್ಗೆ ದೂರು ಬಂದಿದೆ: ಜಿಲ್ಲಾಧಿಕಾರಿ - Shiruru Hill collapse

author img

By ETV Bharat Karnataka Team

Published : Jul 18, 2024, 4:23 PM IST

Updated : Jul 18, 2024, 7:03 PM IST

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ 10 ಮಂದಿ ನಾಪತ್ತೆಯಾಗಿರುವ ದೂರು ಬಂದಿದೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ANKOLA LANDSLIDE
ಗುಡ್ಡ ಕುಸಿತದಿಂದ ಕೊಚ್ಚಿ ಹೋದ ಮನೆ (ETV Bharat)
ಶಿರೂರು ಗುಡ್ಡ ಕುಸಿತ (ETV Bharat)

ಕಾರವಾರ (ಉತ್ತರ ಕನ್ನಡ): ಅಂಕೋಲಾ ತಾಲೂಕಿನ ಶಿರೂರು ಬಳಿಯ ಮಣ್ಣು ಕುಸಿತ ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಪೈಕಿ 6 ಮೃತದೇಹಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸ್ಪಷ್ಟಪಡಿಸಿದ್ದಾರೆ.

ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಉಳುವರೆಯ ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಓರ್ವ ಕಟ್ಟಿಗೆ ಸಾಗಾಟ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು. ಈ ಪೈಕಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿದ್ದು, ಇನ್ನು ಓರ್ವರು ಪತ್ತೆಯಾಗಬೇಕಿದೆ. ಇಬ್ಬರು ಚಾಲಕರ ಮೃತದೇಹ ಪತ್ತೆಯಾಗಿದೆ. ಅದರಲ್ಲಿ ಓರ್ವನ ಮೃತದೇಹದ ಗುರುತು ಪತ್ತೆ ಹಚ್ಚಬೇಕಿದೆ. ಟ್ಯಾಂಕರ್ ಲಾರಿ ಚಾಲಕ ತಮಿಳುನಾಡು ಮೂಲದ ಚಿನ್ನನನ್ (56) ಮೃತಪಟ್ಟವರಾಗಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಪ್ರತಿ ವಿತರಿಸಲಾಗಿದೆ ಎಂದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿದು ಗಂಗಾವಳಿ ನದಿ ದಡದ 7 ಮನೆಗಳು ನೆಲಸಮ: ಶವವಾಗಿ ನದಿಯಲ್ಲಿ ತೇಲಿ ತವರಿಗೆ ಮರಳಿದ ಮಗಳು! - Shirur Hill Collapse

ಒಟ್ಟು ಮೂರು ಟ್ಯಾಂಕರ್​​ಗಳು ಹಾಗೂ ಒಂದು ಲಾರಿ ನಾಪತ್ತೆಯಾಗಿತ್ತು. ಈ ಪೈಕಿ ಒಂದು ಹೆಚ್​ಪಿ ಗ್ಯಾಸ್​​ ಟ್ಯಾಂಕರ್ ನೀರಲ್ಲಿ ಕೊಚ್ಚಿ ಹೋಗಿದೆ. ಒಂದು ಟಿಂಬರ್ ಲಾರಿ ನಾಪತ್ತೆಯಾಗಿದ್ದು, ಜಿಪಿಎಸ್ ಲೊಕೇಷನ್ ಶಿರೂರು ಗುಡ್ಡ ಕುಸಿತದ ಪ್ರದೇಶದಲ್ಲಿದೆ. ಇನ್ನೂ ಎರಡು ಭಾರತ್ ಪೆಟ್ರೋಲಿಯಂ ಟ್ಯಾಂಕರ್​​​ಗಳು ದಡದಲ್ಲಿದ್ದು ಸುರಕ್ಷಿತವಾಗಿವೆ ಎಂದು ತಿಳಿಸಿದರು.

ನದಿಯಲ್ಲಿರುವ ಗ್ಯಾಸ್ ಟ್ಯಾಂಕರ್ ​ಅನ್ನು ವಿಶೇಷ ತಂಡದಿಂದ ನಿಯಮದಂತೆ ಗಾಳಿಯಲ್ಲಿಯೇ ಬಿಟ್ಟು ಖಾಲಿ‌ ಮಾಡಲಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದ ಮನೆಗಳನ್ನು ಖಾಲಿ ಮಾಡಲಾಗಿದ್ದು, ಬೆಂಕಿ, ಮೊಬೈಲ್, ಟಾರ್ಚರ್ ಬಳಕೆ ಹಾಗೂ ವಾಹನ ಓಡಾಟ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೂಡ ನೀಡಲಾಗಿದೆ. ಸ್ಥಳದಲ್ಲಿ ವಿಶೇಷ ತಂಡದ ಅಧಿಕಾರಿಗಳ ಹೊರತು, ಬೇರೆ ಯಾರನ್ನೂ ಬಿಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ: ಬಾಲಕಿ ಅವಂತಿಕಾ, ಚಾಲಕನ ಶವ ಪತ್ತೆ; ಮೃತರ ಸಂಖ್ಯೆ 6ಕ್ಕೆ ಏರಿಕೆ - SHIRURU HILL TRAGEDY

ಶಿರೂರು ಗುಡ್ಡ ಕುಸಿತ (ETV Bharat)

ಕಾರವಾರ (ಉತ್ತರ ಕನ್ನಡ): ಅಂಕೋಲಾ ತಾಲೂಕಿನ ಶಿರೂರು ಬಳಿಯ ಮಣ್ಣು ಕುಸಿತ ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಪೈಕಿ 6 ಮೃತದೇಹಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸ್ಪಷ್ಟಪಡಿಸಿದ್ದಾರೆ.

ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಉಳುವರೆಯ ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಓರ್ವ ಕಟ್ಟಿಗೆ ಸಾಗಾಟ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು. ಈ ಪೈಕಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿದ್ದು, ಇನ್ನು ಓರ್ವರು ಪತ್ತೆಯಾಗಬೇಕಿದೆ. ಇಬ್ಬರು ಚಾಲಕರ ಮೃತದೇಹ ಪತ್ತೆಯಾಗಿದೆ. ಅದರಲ್ಲಿ ಓರ್ವನ ಮೃತದೇಹದ ಗುರುತು ಪತ್ತೆ ಹಚ್ಚಬೇಕಿದೆ. ಟ್ಯಾಂಕರ್ ಲಾರಿ ಚಾಲಕ ತಮಿಳುನಾಡು ಮೂಲದ ಚಿನ್ನನನ್ (56) ಮೃತಪಟ್ಟವರಾಗಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಪ್ರತಿ ವಿತರಿಸಲಾಗಿದೆ ಎಂದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿದು ಗಂಗಾವಳಿ ನದಿ ದಡದ 7 ಮನೆಗಳು ನೆಲಸಮ: ಶವವಾಗಿ ನದಿಯಲ್ಲಿ ತೇಲಿ ತವರಿಗೆ ಮರಳಿದ ಮಗಳು! - Shirur Hill Collapse

ಒಟ್ಟು ಮೂರು ಟ್ಯಾಂಕರ್​​ಗಳು ಹಾಗೂ ಒಂದು ಲಾರಿ ನಾಪತ್ತೆಯಾಗಿತ್ತು. ಈ ಪೈಕಿ ಒಂದು ಹೆಚ್​ಪಿ ಗ್ಯಾಸ್​​ ಟ್ಯಾಂಕರ್ ನೀರಲ್ಲಿ ಕೊಚ್ಚಿ ಹೋಗಿದೆ. ಒಂದು ಟಿಂಬರ್ ಲಾರಿ ನಾಪತ್ತೆಯಾಗಿದ್ದು, ಜಿಪಿಎಸ್ ಲೊಕೇಷನ್ ಶಿರೂರು ಗುಡ್ಡ ಕುಸಿತದ ಪ್ರದೇಶದಲ್ಲಿದೆ. ಇನ್ನೂ ಎರಡು ಭಾರತ್ ಪೆಟ್ರೋಲಿಯಂ ಟ್ಯಾಂಕರ್​​​ಗಳು ದಡದಲ್ಲಿದ್ದು ಸುರಕ್ಷಿತವಾಗಿವೆ ಎಂದು ತಿಳಿಸಿದರು.

ನದಿಯಲ್ಲಿರುವ ಗ್ಯಾಸ್ ಟ್ಯಾಂಕರ್ ​ಅನ್ನು ವಿಶೇಷ ತಂಡದಿಂದ ನಿಯಮದಂತೆ ಗಾಳಿಯಲ್ಲಿಯೇ ಬಿಟ್ಟು ಖಾಲಿ‌ ಮಾಡಲಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದ ಮನೆಗಳನ್ನು ಖಾಲಿ ಮಾಡಲಾಗಿದ್ದು, ಬೆಂಕಿ, ಮೊಬೈಲ್, ಟಾರ್ಚರ್ ಬಳಕೆ ಹಾಗೂ ವಾಹನ ಓಡಾಟ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೂಡ ನೀಡಲಾಗಿದೆ. ಸ್ಥಳದಲ್ಲಿ ವಿಶೇಷ ತಂಡದ ಅಧಿಕಾರಿಗಳ ಹೊರತು, ಬೇರೆ ಯಾರನ್ನೂ ಬಿಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ: ಬಾಲಕಿ ಅವಂತಿಕಾ, ಚಾಲಕನ ಶವ ಪತ್ತೆ; ಮೃತರ ಸಂಖ್ಯೆ 6ಕ್ಕೆ ಏರಿಕೆ - SHIRURU HILL TRAGEDY

Last Updated : Jul 18, 2024, 7:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.