ETV Bharat / state

'ಕಾವೇರಿ 5ನೇ ಹಂತ'ದ ಕುಡಿಯುವ ನೀರಿನ ಯೋಜನೆಗೆ ಇಂದು ಸಿಎಂ ಚಾಲನೆ, ಡಿಸಿಎಂ ಲೋಕಾರ್ಪಣೆ: ಇಲ್ಲಿದೆ ಹೈಲೈಟ್ಸ್​​

ಬೆಂಗಳೂರಿಗರ ಕನಸಿನ '' ಕಾವೇರಿ ಐದನೇ ಹಂತದ '' ಕುಡಿಯುವ ನೀರಿನ ಯೋಜನೆ ಇಂದು ಲೋಕಾರ್ಪಣೆಗೊಳ್ಳಲಿದೆ. ಈ ಮೂಲಕ ಪ್ರತಿ ತಿಂಗಳು ಬೆಂಗಳೂರಿಗೆ 2.4 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗಲಿದೆ.

author img

By ETV Bharat Karnataka Team

Published : 13 hours ago

'ಕಾವೇರಿ 5ನೇ ಹಂತ'ದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ.
'ಕಾವೇರಿ 5ನೇ ಹಂತ'ದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ. (ETV Bharat)

ಬೆಂಗಳೂರು: ಬೆಂಗಳೂರಿನ ಜನತೆ ದಶಕದಿಂದ ನಿರೀಕ್ಷಿಸುತ್ತಿದ್ಧ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಇಂದು ಲೋಕಾರ್ಪಣೆಗೊಳ್ಳಲಿದೆ. ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದ್ದು, ಇಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾವೇರಿ ನೀರು ಯೋಜನಾ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ.
ಕಾವೇರಿ ನೀರು ಯೋಜನಾ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ. (ETV Bharat)

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಪಾನ್​ನ ಜೈಕಾ ಸಂಸ್ಥೆಯ ಪ್ರತಿನಿಧಿಗಳು ನೀರು ಶುದ್ಧೀಕರಣ ಘಟಕದ ಬಟನ್ ಪ್ರೆಸ್​​ ಮಾಡುವುದರ ಮೂಲಕ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಜಲಮಂಡಳಿಯು ಕೈಗೆತ್ತಿಕೊಂಡಿರುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಅನುಷ್ಟಾನಗೊಳ್ಳುತ್ತಿರುವ ಯೋಜನೆ ಇದಾಗಿದೆ.

ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ.
ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ. (ETV Bharat)

ಯೋಜನೆ ಹೈಲೈಟ್ಸ್​​:

  • ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಈ ಯೋಜನೆ ಬಹಳ ಪ್ರಮುಖವಾಗಿದೆ. ಒಂದೂವರೆ ಕೋಟಿಗೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರು ನಗರಕ್ಕೆ 2,250 ಎಂ.ಎಲ್.ಡಿಯಷ್ಟು ಕುಡಿಯುವ ನೀರಿನ ಅಗತ್ಯವಿದೆ. ಪ್ರಸಕ್ತ ಕಾವೇರಿಯ ನಾಲ್ಕೂ ಹಂತಗಳ ಕುಡಿಯುವ ನೀರಿನ ಯೋಜನೆಯಿಂದ ಕೇವಲ 1,450 ಎಂ.ಎಲ್.ಡಿಯಷ್ಟು ನೀರು ಮಾತ್ರ ಲಭ್ಯವಿದೆ. ಕೊರತ ಇರುವ ನೀರನ್ನು ಪೂರೈಸುವ ಉದ್ದೇಶದಿಂದ ಈ ಯೋಜನೆ ಸರಕಾರ ಕೈಗೆತ್ತಿಕೊಂಡಿದೆ.
  • ಕಾವೇರಿ 5ನೇ ಹಂತದ ಯೋಜನೆಯನ್ನು 2014 ರಲ್ಲಿ ರೂಪಿಸಲಾಯಿತು. 4,336 ಕೋಟಿ ರೂಪಾಯಿ ವೆಚ್ಚದ ಈ ಬೃಹತ್ ಯೋಜನೆ, ದೇಶದ ಅತಿದೊಡ್ಡ ಕುಡಿಯುವ ನೀರಿನ ಯೋಜನೆಯಾಗಿದೆ. ಒಂದೇ ಹಂತದಲ್ಲಿ ಅಗಾಧ 775 ಎಂ.ಎಲ್.ಡಿಯಷ್ಟು ನೀರನ್ನು ಸರಬರಾಜು ಮಾಡುವ ಸಾಮರ್ಥ್ಯ ಈ ಯೋಜನೆ ಹೊಂದಿದೆ. ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಸರಬರಾಜು ಈ ಹೊಸ ಯೋಜನೆಯಿಂದ ಸಾಕಾರಗೊಳ್ಳಲಿದೆ.
  • ಅತ್ಯಾಧುನಿಕ ಪ್ರವಾಹ ನಿಯಂತ್ರಣ ವ್ಯವಸ್ಥೆಯನ್ನು ಯೋಜನೆಯಲ್ಲಿ ಅಳವಡಿಸಲಾಗಿದೆ. ಇದರಿಂದ ಯಾವುದೇ ಅಡಚಣೆಯಿಲ್ಲದೆ ನಿರಂತರವಾಗಿ ಕಾರ್ಯಾಚರಣೆ ಸಾಧ್ಯವಾಗಲಿದೆ. ಕಾವೇರಿ ಐದನೇ ಹಂತದ ಯೋಜನೆಯಲ್ಲಿ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ಮೂರು ಅತ್ಯಾಧುನಿಕ ತಂತ್ರಜ್ಞಾನದ ಸುಧಾರಿತ ಬೂಸ್ಟರ್​ ಪಂಪಿಂಗ್​ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಈ ಪಂಪಿಂಗ್​ ಕೇಂದ್ರಗಳ ಸಹಾಯದಿಂದ ಸುಮಾರು 110 ಕಿಲೋಮೀಟರ್ ದೂರದಿಂದ 500 ಹಾಗೂ 2,200 ಎಂಎಂನಷ್ಟು ವ್ಯಾಸದ ಬೃಹತ್​ ಉಕ್ಕಿನ ಪೈಪಿನ ಮೂಲಕ ಕಾವೇರಿ ನೀರನ್ನು 450 ಮೀಟರ್ ಎತ್ತರಕ್ಕೆ ಹರಿಸಿ (ಸುಮಾರು 50 ಅಂತಸ್ತಿನ ಕಟ್ಟಡದಷ್ಟು ಎತ್ತರ) ಬೆಂಗಳೂರು ನಗರಕ್ಕೆ ನೀರನ್ನು ಪೂರೈಸಲಾಗುತ್ತದೆ.
  • ಕಾವೇರಿ 5ನೇ ಹಂತದ ಯೋಜನೆಗೆ 1,45,000 ಮೆಗಾ ಟನ್​ ಸ್ಟೀಲ್ ಪ್ಲೇಟ್​ಗಳ ಬಳಕೆ ಮಾಡಲಾಗಿದೆ. 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಕಾಂಕ್ಷೆಯ ಯೋಜನೆ ಪೂರೈಸಲು 2.4 ಕೋಟಿ ಮಾನವ ಗಂಟೆಗಳ ಶ್ರಮ ಬಳಕೆಯಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನು ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
  • ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
  • ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ಕುಡಿಯುವ ನೀರು ಸರಬರಾಜು ಆಗಲಿದೆ.

ಇದನ್ನೂ ಓದಿ: 50 ವರ್ಷದಲ್ಲಿ 10ನೇ ಬಾರಿ ಭರ್ತಿಯಾದ ಮಲಪ್ರಭಾ ಡ್ಯಾಂ: ಬಾಗಿನ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬೆಂಗಳೂರಿನ ಜನತೆ ದಶಕದಿಂದ ನಿರೀಕ್ಷಿಸುತ್ತಿದ್ಧ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಇಂದು ಲೋಕಾರ್ಪಣೆಗೊಳ್ಳಲಿದೆ. ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದ್ದು, ಇಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾವೇರಿ ನೀರು ಯೋಜನಾ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ.
ಕಾವೇರಿ ನೀರು ಯೋಜನಾ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ. (ETV Bharat)

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಪಾನ್​ನ ಜೈಕಾ ಸಂಸ್ಥೆಯ ಪ್ರತಿನಿಧಿಗಳು ನೀರು ಶುದ್ಧೀಕರಣ ಘಟಕದ ಬಟನ್ ಪ್ರೆಸ್​​ ಮಾಡುವುದರ ಮೂಲಕ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಜಲಮಂಡಳಿಯು ಕೈಗೆತ್ತಿಕೊಂಡಿರುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಅನುಷ್ಟಾನಗೊಳ್ಳುತ್ತಿರುವ ಯೋಜನೆ ಇದಾಗಿದೆ.

ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ.
ಮಂಡ್ಯದಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕ. (ETV Bharat)

ಯೋಜನೆ ಹೈಲೈಟ್ಸ್​​:

  • ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಈ ಯೋಜನೆ ಬಹಳ ಪ್ರಮುಖವಾಗಿದೆ. ಒಂದೂವರೆ ಕೋಟಿಗೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರು ನಗರಕ್ಕೆ 2,250 ಎಂ.ಎಲ್.ಡಿಯಷ್ಟು ಕುಡಿಯುವ ನೀರಿನ ಅಗತ್ಯವಿದೆ. ಪ್ರಸಕ್ತ ಕಾವೇರಿಯ ನಾಲ್ಕೂ ಹಂತಗಳ ಕುಡಿಯುವ ನೀರಿನ ಯೋಜನೆಯಿಂದ ಕೇವಲ 1,450 ಎಂ.ಎಲ್.ಡಿಯಷ್ಟು ನೀರು ಮಾತ್ರ ಲಭ್ಯವಿದೆ. ಕೊರತ ಇರುವ ನೀರನ್ನು ಪೂರೈಸುವ ಉದ್ದೇಶದಿಂದ ಈ ಯೋಜನೆ ಸರಕಾರ ಕೈಗೆತ್ತಿಕೊಂಡಿದೆ.
  • ಕಾವೇರಿ 5ನೇ ಹಂತದ ಯೋಜನೆಯನ್ನು 2014 ರಲ್ಲಿ ರೂಪಿಸಲಾಯಿತು. 4,336 ಕೋಟಿ ರೂಪಾಯಿ ವೆಚ್ಚದ ಈ ಬೃಹತ್ ಯೋಜನೆ, ದೇಶದ ಅತಿದೊಡ್ಡ ಕುಡಿಯುವ ನೀರಿನ ಯೋಜನೆಯಾಗಿದೆ. ಒಂದೇ ಹಂತದಲ್ಲಿ ಅಗಾಧ 775 ಎಂ.ಎಲ್.ಡಿಯಷ್ಟು ನೀರನ್ನು ಸರಬರಾಜು ಮಾಡುವ ಸಾಮರ್ಥ್ಯ ಈ ಯೋಜನೆ ಹೊಂದಿದೆ. ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಸರಬರಾಜು ಈ ಹೊಸ ಯೋಜನೆಯಿಂದ ಸಾಕಾರಗೊಳ್ಳಲಿದೆ.
  • ಅತ್ಯಾಧುನಿಕ ಪ್ರವಾಹ ನಿಯಂತ್ರಣ ವ್ಯವಸ್ಥೆಯನ್ನು ಯೋಜನೆಯಲ್ಲಿ ಅಳವಡಿಸಲಾಗಿದೆ. ಇದರಿಂದ ಯಾವುದೇ ಅಡಚಣೆಯಿಲ್ಲದೆ ನಿರಂತರವಾಗಿ ಕಾರ್ಯಾಚರಣೆ ಸಾಧ್ಯವಾಗಲಿದೆ. ಕಾವೇರಿ ಐದನೇ ಹಂತದ ಯೋಜನೆಯಲ್ಲಿ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ಮೂರು ಅತ್ಯಾಧುನಿಕ ತಂತ್ರಜ್ಞಾನದ ಸುಧಾರಿತ ಬೂಸ್ಟರ್​ ಪಂಪಿಂಗ್​ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಈ ಪಂಪಿಂಗ್​ ಕೇಂದ್ರಗಳ ಸಹಾಯದಿಂದ ಸುಮಾರು 110 ಕಿಲೋಮೀಟರ್ ದೂರದಿಂದ 500 ಹಾಗೂ 2,200 ಎಂಎಂನಷ್ಟು ವ್ಯಾಸದ ಬೃಹತ್​ ಉಕ್ಕಿನ ಪೈಪಿನ ಮೂಲಕ ಕಾವೇರಿ ನೀರನ್ನು 450 ಮೀಟರ್ ಎತ್ತರಕ್ಕೆ ಹರಿಸಿ (ಸುಮಾರು 50 ಅಂತಸ್ತಿನ ಕಟ್ಟಡದಷ್ಟು ಎತ್ತರ) ಬೆಂಗಳೂರು ನಗರಕ್ಕೆ ನೀರನ್ನು ಪೂರೈಸಲಾಗುತ್ತದೆ.
  • ಕಾವೇರಿ 5ನೇ ಹಂತದ ಯೋಜನೆಗೆ 1,45,000 ಮೆಗಾ ಟನ್​ ಸ್ಟೀಲ್ ಪ್ಲೇಟ್​ಗಳ ಬಳಕೆ ಮಾಡಲಾಗಿದೆ. 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಕಾಂಕ್ಷೆಯ ಯೋಜನೆ ಪೂರೈಸಲು 2.4 ಕೋಟಿ ಮಾನವ ಗಂಟೆಗಳ ಶ್ರಮ ಬಳಕೆಯಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನು ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
  • ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
  • ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ಕುಡಿಯುವ ನೀರು ಸರಬರಾಜು ಆಗಲಿದೆ.

ಇದನ್ನೂ ಓದಿ: 50 ವರ್ಷದಲ್ಲಿ 10ನೇ ಬಾರಿ ಭರ್ತಿಯಾದ ಮಲಪ್ರಭಾ ಡ್ಯಾಂ: ಬಾಗಿನ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.