ETV Bharat / state

ಪತ್ನಿ ಶೀಲ ಶಂಕಿಸಿ ಹತ್ಯೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ‌ ನ್ಯಾಯಾಲಯ - Life Imprisonment

author img

By ETV Bharat Karnataka Team

Published : Jul 1, 2024, 3:12 PM IST

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಅದೇಶಿಸಿದೆ.

COURT SENTENCED  MAN KILLED HIS WIFE  BENGALURU
ಪತ್ನಿ ಶೀಲ ಶಂಕಿಸಿ ಹತ್ಯೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ‌ ನ್ಯಾಯಾಲಯ (ETV Bharat)

ಬೆಂಗಳೂರು: ಪತ್ನಿ ಶೀಲ ಶಂಕಿಸಿ ಹತ್ಯೆಗೈದಿದ್ದ ಅಪರಾಧಿಗೆ 71ನೇ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊತ್ತನೂರು ಪೊಲೀಸ್ ಠಾಣೆ ಆರೋಪಿಯಾಗಿದ್ದ ಒಡಿಶಾ ಮೂಲದ ಪ್ರಹ್ಲಾದ್‌ ಓಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಿರುವ ನ್ಯಾಯಾಲಯವು ಹತ್ಯೆಯಾಗಿದ್ದ ಪತ್ನಿ 30 ವರ್ಷದ ಟಕೀನಾ ತಂದೆಗೆ ಕಾನೂನು ಸೇವಾಪ್ರಾಧಿಕಾರದಿಂದ ಐದು ಲಕ್ಷ ಪರಿಹಾರ ನೀಡುವಂತೆ ನ್ಯಾ.ಬಾಲಚಂದ್ರ ಭಟ್ ಅದೇಶ ಹೊರಡಿಸಿದ್ದಾರೆ.

ದಂಪತಿ ಒಡಿಶಾ ಮೂಲದರಾಗಿದ್ದು, ಬೆಂಗಳೂರಿನ ಕೊತ್ತನೂರಿನಲ್ಲಿ ವಾಸವಾಗಿದ್ದರು. ನಿರ್ಮಾಣ ಹಂತದ ಕಟ್ಟಡದವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಮೀಪದ ಶೆಡ್​ನಲ್ಲಿ ಇಬ್ಬರು ನೆಲೆಸಿದ್ದರು. ಪತ್ನಿ ಮೇಲೆ ಶೀಲ ಶಂಕಿಸಿ ಪತಿ ಜಗಳವಾಡುತ್ತಿದ್ದ. ಗಲಾಟೆ ವಿಕೋಪಕ್ಕೆ ಹೋಗಿ 2017 ಏಪ್ರಿಲ್ 26ರಂದು ಮನೆಯಲ್ಲಿದ್ದ ಕಬ್ಬಿಣದ ತವಾ ಹಾಗೂ ರಿಪೀಸ್ ಪಟ್ಟಿಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಬಳಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾರನೇ ದಿನ ಮಹಿಳೆ ಸಾವನ್ನಪ್ಪಿದ್ದಳು.

ಈ ಸಂಬಂಧ ಕೊಲೆ‌ ಪ್ರಕರಣ ದಾಖಲಿಸಿಕೊಂಡಿದ್ದ ಕೊತ್ತನೂರು ಪೊಲೀಸ್ ಠಾಣೆಯ ಅಂದಿನ ಇನ್​ಸ್ಪೆಕ್ಟರ್ ಹರಿಯಪ್ಪ ಅವರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದರು. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಸಾವಿರ ದಂಡ ವಿಧಿಸಿ ಆದೇಶಿಸಿದೆ. ಹತ್ಯೆಯಾದ ಮಹಿಳೆಯ ತಂದೆಗೆ ಐದು ಲಕ್ಷ ಪರಿಹಾರವನ್ನ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡುವಂತೆಯೂ‌ ಆದೇಶಿಸಿದೆ.

ಓದಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ವಕೀಲ ದೇವರಾಜೇಗೌಡಗೆ ಜಾಮೀನು - Sexual Assault Case

ಬೆಂಗಳೂರು: ಪತ್ನಿ ಶೀಲ ಶಂಕಿಸಿ ಹತ್ಯೆಗೈದಿದ್ದ ಅಪರಾಧಿಗೆ 71ನೇ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊತ್ತನೂರು ಪೊಲೀಸ್ ಠಾಣೆ ಆರೋಪಿಯಾಗಿದ್ದ ಒಡಿಶಾ ಮೂಲದ ಪ್ರಹ್ಲಾದ್‌ ಓಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಿರುವ ನ್ಯಾಯಾಲಯವು ಹತ್ಯೆಯಾಗಿದ್ದ ಪತ್ನಿ 30 ವರ್ಷದ ಟಕೀನಾ ತಂದೆಗೆ ಕಾನೂನು ಸೇವಾಪ್ರಾಧಿಕಾರದಿಂದ ಐದು ಲಕ್ಷ ಪರಿಹಾರ ನೀಡುವಂತೆ ನ್ಯಾ.ಬಾಲಚಂದ್ರ ಭಟ್ ಅದೇಶ ಹೊರಡಿಸಿದ್ದಾರೆ.

ದಂಪತಿ ಒಡಿಶಾ ಮೂಲದರಾಗಿದ್ದು, ಬೆಂಗಳೂರಿನ ಕೊತ್ತನೂರಿನಲ್ಲಿ ವಾಸವಾಗಿದ್ದರು. ನಿರ್ಮಾಣ ಹಂತದ ಕಟ್ಟಡದವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಮೀಪದ ಶೆಡ್​ನಲ್ಲಿ ಇಬ್ಬರು ನೆಲೆಸಿದ್ದರು. ಪತ್ನಿ ಮೇಲೆ ಶೀಲ ಶಂಕಿಸಿ ಪತಿ ಜಗಳವಾಡುತ್ತಿದ್ದ. ಗಲಾಟೆ ವಿಕೋಪಕ್ಕೆ ಹೋಗಿ 2017 ಏಪ್ರಿಲ್ 26ರಂದು ಮನೆಯಲ್ಲಿದ್ದ ಕಬ್ಬಿಣದ ತವಾ ಹಾಗೂ ರಿಪೀಸ್ ಪಟ್ಟಿಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಬಳಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾರನೇ ದಿನ ಮಹಿಳೆ ಸಾವನ್ನಪ್ಪಿದ್ದಳು.

ಈ ಸಂಬಂಧ ಕೊಲೆ‌ ಪ್ರಕರಣ ದಾಖಲಿಸಿಕೊಂಡಿದ್ದ ಕೊತ್ತನೂರು ಪೊಲೀಸ್ ಠಾಣೆಯ ಅಂದಿನ ಇನ್​ಸ್ಪೆಕ್ಟರ್ ಹರಿಯಪ್ಪ ಅವರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದರು. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಸಾವಿರ ದಂಡ ವಿಧಿಸಿ ಆದೇಶಿಸಿದೆ. ಹತ್ಯೆಯಾದ ಮಹಿಳೆಯ ತಂದೆಗೆ ಐದು ಲಕ್ಷ ಪರಿಹಾರವನ್ನ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡುವಂತೆಯೂ‌ ಆದೇಶಿಸಿದೆ.

ಓದಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ವಕೀಲ ದೇವರಾಜೇಗೌಡಗೆ ಜಾಮೀನು - Sexual Assault Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.