ETV Bharat / state

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - Gauri Lankesh Case

author img

By ETV Bharat Karnataka Team

Published : Jun 25, 2024, 11:01 PM IST

ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್​ ಕಾಯ್ದಿರಿಸಿದೆ.

high-court
ಹೈಕೋರ್ಟ್ (ETV Bharat)

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್ ದಿಗ್ವೇಕರ್, ಏಳನೇ ಆರೋಪಿ ಸುರೇಶ್ ಹೆಚ್. ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ. ಟಿ ನವೀನ್ ಕುಮಾರ್ ಸಲ್ಲಿಸಿದ್ದ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ಆಲಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಧರ್ಮದ ಹೆಸರಿನಲ್ಲಿ ಬುದ್ದಿಜೀವಿಗಳನ್ನು ಕೊಲ್ಲುತ್ತಾ ಹೋದರೆ ಕೊನೆ ಇರುವುದಿಲ್ಲ. ಆರೋಪಿಗಳು ಇನ್ನಷ್ಟು ಕೊಲೆ ಪ್ರಯತ್ನ ಮಾಡುತ್ತಿದ್ದರು. ಅಷ್ಟರಲ್ಲಿ ಸಿಕ್ಕಿಬಿದ್ದಿದ್ದಾರೆ.
11ನೇ ಆರೋಪಿ ಮೋಹನ್ ನಾಯಕ್​ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲ ಅರ್ಜಿದಾರರ ವಾದವಾಗಿತ್ತು.

ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್, ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್​ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್ ನಾಯಕ್ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ ಎಂದು ವಿವರಿಸಿದರು.

ಅಲ್ಲದೆ, ಅರ್ಜಿದಾರರು ಆರೋಪ ಮುಕ್ತ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಲ್ಪಟ್ಟಿವೆ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುದು ಜಾಮೀನಿಗೆ ಮಾನದಂಡವಾಗಬಾರದು ಎಂದರು.

ಆರೋಪಿ ಅಮಿತ್ ದಿಗ್ವೇಕರ್ ಪರ ವಕೀಲ, ಒಂದನೇ ಆರೋಪಿ ಅಮೋಲ್ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್​ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಆರೋಪಿ ನವೀನ್ ಕುಮಾರ್ ಪರ ವಕೀಲರು, 13ನೇ ಆರೋಪಿ ಸುಜಿತ್ ಜೊತೆ ನವೀನ್ ಕುಮಾರ್ ಪಾರ್ಕ್​ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮೊದಲಿಗೆ ನವೀನ್​ನನ್ನು ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್​ನನ್ನು ಬಂಧಿಸಲಾಗಿದೆ.

ಮೆಜೆಸ್ಟಿಕ್​ನಲ್ಲಿ ಜೀವಂತ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್​ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಸುರೇಶ್ ಪರ ವಕೀಲ ಮಧುಕರ್ ದೇಶಪಾಂಡೆ, ನಮ್ಮ ಕಕ್ಷಿದಾರರ ವಿರುದ್ಧ 15ನೇ ಆರೋಪಿ ವಿಕಾಸ್ ಪಾಟೀಲ್​ಗೆ ಗೌರಿ ಲಂಕೇಶ್ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪವಿದೆ. ಅಲ್ಲದೆ, ಸಾಕ್ಷ್ಯ ನಾಶ ಮಾಡಿದ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾದ ಸಾಕ್ಷ್ಯ ನುಡಿದಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಇದನ್ನೂ ಓದಿ : ಕೆಎಸ್‌ಎಟಿ ಸದಸ್ಯರ ನೇಮಕ ಕೋರಿ ಅರ್ಜಿ ಸಲ್ಲಿಕೆ: ಸರ್ಕಾರಕ್ಕೆ ನೋಟಿಸ್ ಜಾರಿ - KSAT

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್ ದಿಗ್ವೇಕರ್, ಏಳನೇ ಆರೋಪಿ ಸುರೇಶ್ ಹೆಚ್. ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ. ಟಿ ನವೀನ್ ಕುಮಾರ್ ಸಲ್ಲಿಸಿದ್ದ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ಆಲಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಧರ್ಮದ ಹೆಸರಿನಲ್ಲಿ ಬುದ್ದಿಜೀವಿಗಳನ್ನು ಕೊಲ್ಲುತ್ತಾ ಹೋದರೆ ಕೊನೆ ಇರುವುದಿಲ್ಲ. ಆರೋಪಿಗಳು ಇನ್ನಷ್ಟು ಕೊಲೆ ಪ್ರಯತ್ನ ಮಾಡುತ್ತಿದ್ದರು. ಅಷ್ಟರಲ್ಲಿ ಸಿಕ್ಕಿಬಿದ್ದಿದ್ದಾರೆ.
11ನೇ ಆರೋಪಿ ಮೋಹನ್ ನಾಯಕ್​ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲ ಅರ್ಜಿದಾರರ ವಾದವಾಗಿತ್ತು.

ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್, ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್​ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್ ನಾಯಕ್ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ ಎಂದು ವಿವರಿಸಿದರು.

ಅಲ್ಲದೆ, ಅರ್ಜಿದಾರರು ಆರೋಪ ಮುಕ್ತ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಲ್ಪಟ್ಟಿವೆ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುದು ಜಾಮೀನಿಗೆ ಮಾನದಂಡವಾಗಬಾರದು ಎಂದರು.

ಆರೋಪಿ ಅಮಿತ್ ದಿಗ್ವೇಕರ್ ಪರ ವಕೀಲ, ಒಂದನೇ ಆರೋಪಿ ಅಮೋಲ್ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್​ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಆರೋಪಿ ನವೀನ್ ಕುಮಾರ್ ಪರ ವಕೀಲರು, 13ನೇ ಆರೋಪಿ ಸುಜಿತ್ ಜೊತೆ ನವೀನ್ ಕುಮಾರ್ ಪಾರ್ಕ್​ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮೊದಲಿಗೆ ನವೀನ್​ನನ್ನು ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್​ನನ್ನು ಬಂಧಿಸಲಾಗಿದೆ.

ಮೆಜೆಸ್ಟಿಕ್​ನಲ್ಲಿ ಜೀವಂತ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್​ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಸುರೇಶ್ ಪರ ವಕೀಲ ಮಧುಕರ್ ದೇಶಪಾಂಡೆ, ನಮ್ಮ ಕಕ್ಷಿದಾರರ ವಿರುದ್ಧ 15ನೇ ಆರೋಪಿ ವಿಕಾಸ್ ಪಾಟೀಲ್​ಗೆ ಗೌರಿ ಲಂಕೇಶ್ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪವಿದೆ. ಅಲ್ಲದೆ, ಸಾಕ್ಷ್ಯ ನಾಶ ಮಾಡಿದ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾದ ಸಾಕ್ಷ್ಯ ನುಡಿದಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಇದನ್ನೂ ಓದಿ : ಕೆಎಸ್‌ಎಟಿ ಸದಸ್ಯರ ನೇಮಕ ಕೋರಿ ಅರ್ಜಿ ಸಲ್ಲಿಕೆ: ಸರ್ಕಾರಕ್ಕೆ ನೋಟಿಸ್ ಜಾರಿ - KSAT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.