ETV Bharat / state

ರೈತರಿಗೆ ಕೀಟ, ರೋಗಬಾಧೆ ಕುರಿತು ಸಲಹೆ ನೀಡಲು ಇ ಸ್ಯಾಪ್ ತಂತ್ರಾಂಶ : ಸಚಿವ ಚಲುವರಾಯಸ್ವಾಮಿ - N Chaluvarayaswamy

author img

By ETV Bharat Karnataka Team

Published : Jun 13, 2024, 7:44 PM IST

ಬಿತ್ತನೆ ಬೀಜ ಹಾಗೂ ರಸ ಗೊಬ್ಬರದ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿದ್ದಾರೆ.

n-chaluvarayaswamy
ಎನ್ ಚಲುವರಾಯಸ್ವಾಮಿ (ETV Bharat)

ಬೆಂಗಳೂರು : ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

2024-25ರ ಆಯವ್ಯಯದಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು, ಇದು ಸಮರ್ಪಕವಾಗಿ ತಲುಪಬೇಕು. ಇದು ರಾಜ್ಯ ಸರ್ಕಾರದ ಆಶಯ. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಸಚಿವರು ಹೇಳಿದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ, ಅಭಿಪ್ರಾಯ ತಿಳಿಸಿ ಎಂದರು. ಪ್ರತ್ಯೇಕ ಆಹಾರ ಸಂಸ್ಕರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ಧಪಡಿಸಿ ಎಂದರು.

ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು. ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಚಲುವರಾಯಸ್ವಾಮಿ ಸೂಚಿಸಿದರು.

ಇ ಸ್ಯಾಪ್​ ಮೂಲಕ ರೈತರಿಗೆ ಸಲಹೆ; ಬೆಂಗಳೂರಿನಲ್ಲಿ ಆರ್. ಕೆ ಶಾಲಾ ಕೃಷಿ ಕ್ಷೇತ್ರವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ, ಸಲಹೆ ನೀಡಲು ಇ ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು. ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ತಿಳಿಸಿದರು.

ಮಿಷಿನ್ ಲರ್ನಿಂಗ್​ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಬೆಳೆ ಉತ್ಪಾದಕತೆ ಮುನ್ಸೂಚನೆಗೆ ದತ್ತಾಂಶ ಅಭಿವೃದ್ಧಿ ಪಡಿಸಿ.‌‌ ರೈತ ಉತ್ಪಾದಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಆ್ಯಕ್ಸಿಲೇಟರ್ ಪ್ಲಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಪ್​ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದು ಸಚಿವರು ಹೇಳಿದರು‌‌‌. ಇಲಾಖೆಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣಗೊಳಿಸಿ, ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಕೊರತೆ ಇಲ್ಲ : ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ‌ ಮಾರ್ಗದರ್ಶನ ನೀಡಬೇಕು. ಅನಗತ್ಯ ಗೊಂದಲ ಸೃಷ್ಟಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಸಚಿವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಅವರು ಮಾತನಾಡಿ, ಹಣಕಾಸು ಇಲಾಖೆ ಅನುಮೋದನೆಯೊಂದಿಗೆ ಶೀಘ್ರವಾಗಿ ಬಾಕಿ ಉಳಿದ ಘೋಷಣೆಗಳನ್ನು ಸರ್ಕಾರಿ ಆದೇಶದಲ್ಲಿ ಹೊರಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ ಆಯುಕ್ತ ವೈ. ಎಸ್ ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ. ಟಿ ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹೆಚ್​ಡಿಕೆ ರಾಜ್ಯಕ್ಕೆ ಆಗಮಿಸುವ ವೇಳೆ ಸಂಭ್ರಮಿಸಲಿದ್ದಾರೆ : ನಾಳೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸುವ ವೇಳೆ ಸಂಭ್ರಮಾಚರಣೆ ಮಾಡಲಿದ್ದಾರೆ. ಅವರು ಗೆದ್ದಿದ್ದಾರೆ, ಸಂಭ್ರಮಾಚರಣೆ‌ ಮಾಡ್ತಾರೆ. ಮಾಡಬೇಡಿ ಅಂತಾ ನಾವು ಹೇಳೋಕೆ ಆಗುತ್ತಾ ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜನ ತುಂಬಾ ನಿರೀಕ್ಷೆ ಇಟ್ಟು ವೋಟ್ ಹಾಕಿದ್ದಾರೆ. ನಮಗೆ 9, ಅವರಿಗೆ 19 ಸೀಟ್ ಕೊಟ್ಟಿದ್ದಾರೆ. ರಾಜ್ಯದ ಜನ ಹೆಚ್ಚು ವೋಟ್ ಬಿಜೆಪಿಗೆ ಕೊಟ್ಟಿದ್ದಾರೆ. ಕಳೆದ ಬಾರಿ ಬರಗಾಲಕ್ಕೂ ಕೂಡ ಹಣ ಕೊಟ್ಟಿಲ್ಲ. ಆದರೂ ಕೂಡ ಜನ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಕೊಟ್ಟಿದ್ದಾರೆ ಎಂದರು.

ಹೆಚ್. ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಅದರಲ್ಲೂ ಸಹ ಬೃಹತ್ ಕೈಗಾರಿಕೆ ಖಾತೆ ಕೊಟ್ಟಿದ್ದಾರೆ. ಯುವಕರಿಗೆ ಒಳ್ಳೆ ಉದ್ಯೋಗ ಅವಕಾಶ ಸಿಗುವಂತಾಗಬೇಕು. ನಿನ್ನೆ ಮಂಡ್ಯದಲ್ಲಿ ಚರ್ಚೆ ನಡೀತಾ ಇತ್ತು. 10 ಸಾವಿರ ಮಂಡ್ಯದ ಯುವಕರಿಗೆ ಉದ್ಯೋಗವಕಾಶ ಕೊಡ್ತೀನಿ ಎಂಬ ಮಾತು ಕೇಳಿಬಂತು. ಉದ್ಯೋಗ ಕೊಟ್ಟರೆ ಒಳ್ಳೆಯದು ಎಂದರು.

ನಟ ದರ್ಶನ್​ಗೆ ಬಿರಿಯಾನಿ, ಸಿಗರೇಟ್ ಕೊಟ್ಟ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ನಮ್ಮ‌ ಇಲಾಖೆ ಆ ತರಹ ಇಲ್ಲ. ಈಗ ಪ್ರಜ್ವಲ್ ರೇವಣ್ಣ, ಹೆಚ್​ಡಿ ರೇವಣ್ಣ ಅವರ ತನಿಖೆ ಆಗ್ತಾ ಇದೆ. ಎಲ್ಲಾದರೂ ಇಂತದ್ದನ್ನು ಕೊಟ್ಟಿದ್ದು ನೋಡಿದ್ದೀರಾ?. ದರ್ಶನ್ ಅವರ ತನಿಖೆ‌ ಕೂಡ ನಡೀತಾ ಇದೆ. ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಪೊಲೀಸ್ ಇಲಾಖೆ ಒಂದು ಹಂತ ಅಷ್ಟೇ. ಅಂತಿಮವಾಗಿ ಕೋರ್ಟ್ ಶಿಕ್ಷೆ ಕೊಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : 1,791 ಕೋಟಿ ಬೆಳೆ ವಿಮೆ ಪರಿಹಾರ ನೀಡಲು ಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಸೂಚನೆ - Crop Insurance Compensation

ಬೆಂಗಳೂರು : ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

2024-25ರ ಆಯವ್ಯಯದಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು, ಇದು ಸಮರ್ಪಕವಾಗಿ ತಲುಪಬೇಕು. ಇದು ರಾಜ್ಯ ಸರ್ಕಾರದ ಆಶಯ. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಸಚಿವರು ಹೇಳಿದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ, ಅಭಿಪ್ರಾಯ ತಿಳಿಸಿ ಎಂದರು. ಪ್ರತ್ಯೇಕ ಆಹಾರ ಸಂಸ್ಕರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ಧಪಡಿಸಿ ಎಂದರು.

ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು. ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಚಲುವರಾಯಸ್ವಾಮಿ ಸೂಚಿಸಿದರು.

ಇ ಸ್ಯಾಪ್​ ಮೂಲಕ ರೈತರಿಗೆ ಸಲಹೆ; ಬೆಂಗಳೂರಿನಲ್ಲಿ ಆರ್. ಕೆ ಶಾಲಾ ಕೃಷಿ ಕ್ಷೇತ್ರವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ, ಸಲಹೆ ನೀಡಲು ಇ ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು. ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ತಿಳಿಸಿದರು.

ಮಿಷಿನ್ ಲರ್ನಿಂಗ್​ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಬೆಳೆ ಉತ್ಪಾದಕತೆ ಮುನ್ಸೂಚನೆಗೆ ದತ್ತಾಂಶ ಅಭಿವೃದ್ಧಿ ಪಡಿಸಿ.‌‌ ರೈತ ಉತ್ಪಾದಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಆ್ಯಕ್ಸಿಲೇಟರ್ ಪ್ಲಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಪ್​ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದು ಸಚಿವರು ಹೇಳಿದರು‌‌‌. ಇಲಾಖೆಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣಗೊಳಿಸಿ, ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಕೊರತೆ ಇಲ್ಲ : ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ‌ ಮಾರ್ಗದರ್ಶನ ನೀಡಬೇಕು. ಅನಗತ್ಯ ಗೊಂದಲ ಸೃಷ್ಟಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಸಚಿವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಅವರು ಮಾತನಾಡಿ, ಹಣಕಾಸು ಇಲಾಖೆ ಅನುಮೋದನೆಯೊಂದಿಗೆ ಶೀಘ್ರವಾಗಿ ಬಾಕಿ ಉಳಿದ ಘೋಷಣೆಗಳನ್ನು ಸರ್ಕಾರಿ ಆದೇಶದಲ್ಲಿ ಹೊರಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ ಆಯುಕ್ತ ವೈ. ಎಸ್ ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ. ಟಿ ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹೆಚ್​ಡಿಕೆ ರಾಜ್ಯಕ್ಕೆ ಆಗಮಿಸುವ ವೇಳೆ ಸಂಭ್ರಮಿಸಲಿದ್ದಾರೆ : ನಾಳೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸುವ ವೇಳೆ ಸಂಭ್ರಮಾಚರಣೆ ಮಾಡಲಿದ್ದಾರೆ. ಅವರು ಗೆದ್ದಿದ್ದಾರೆ, ಸಂಭ್ರಮಾಚರಣೆ‌ ಮಾಡ್ತಾರೆ. ಮಾಡಬೇಡಿ ಅಂತಾ ನಾವು ಹೇಳೋಕೆ ಆಗುತ್ತಾ ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜನ ತುಂಬಾ ನಿರೀಕ್ಷೆ ಇಟ್ಟು ವೋಟ್ ಹಾಕಿದ್ದಾರೆ. ನಮಗೆ 9, ಅವರಿಗೆ 19 ಸೀಟ್ ಕೊಟ್ಟಿದ್ದಾರೆ. ರಾಜ್ಯದ ಜನ ಹೆಚ್ಚು ವೋಟ್ ಬಿಜೆಪಿಗೆ ಕೊಟ್ಟಿದ್ದಾರೆ. ಕಳೆದ ಬಾರಿ ಬರಗಾಲಕ್ಕೂ ಕೂಡ ಹಣ ಕೊಟ್ಟಿಲ್ಲ. ಆದರೂ ಕೂಡ ಜನ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಕೊಟ್ಟಿದ್ದಾರೆ ಎಂದರು.

ಹೆಚ್. ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಅದರಲ್ಲೂ ಸಹ ಬೃಹತ್ ಕೈಗಾರಿಕೆ ಖಾತೆ ಕೊಟ್ಟಿದ್ದಾರೆ. ಯುವಕರಿಗೆ ಒಳ್ಳೆ ಉದ್ಯೋಗ ಅವಕಾಶ ಸಿಗುವಂತಾಗಬೇಕು. ನಿನ್ನೆ ಮಂಡ್ಯದಲ್ಲಿ ಚರ್ಚೆ ನಡೀತಾ ಇತ್ತು. 10 ಸಾವಿರ ಮಂಡ್ಯದ ಯುವಕರಿಗೆ ಉದ್ಯೋಗವಕಾಶ ಕೊಡ್ತೀನಿ ಎಂಬ ಮಾತು ಕೇಳಿಬಂತು. ಉದ್ಯೋಗ ಕೊಟ್ಟರೆ ಒಳ್ಳೆಯದು ಎಂದರು.

ನಟ ದರ್ಶನ್​ಗೆ ಬಿರಿಯಾನಿ, ಸಿಗರೇಟ್ ಕೊಟ್ಟ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ನಮ್ಮ‌ ಇಲಾಖೆ ಆ ತರಹ ಇಲ್ಲ. ಈಗ ಪ್ರಜ್ವಲ್ ರೇವಣ್ಣ, ಹೆಚ್​ಡಿ ರೇವಣ್ಣ ಅವರ ತನಿಖೆ ಆಗ್ತಾ ಇದೆ. ಎಲ್ಲಾದರೂ ಇಂತದ್ದನ್ನು ಕೊಟ್ಟಿದ್ದು ನೋಡಿದ್ದೀರಾ?. ದರ್ಶನ್ ಅವರ ತನಿಖೆ‌ ಕೂಡ ನಡೀತಾ ಇದೆ. ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಪೊಲೀಸ್ ಇಲಾಖೆ ಒಂದು ಹಂತ ಅಷ್ಟೇ. ಅಂತಿಮವಾಗಿ ಕೋರ್ಟ್ ಶಿಕ್ಷೆ ಕೊಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : 1,791 ಕೋಟಿ ಬೆಳೆ ವಿಮೆ ಪರಿಹಾರ ನೀಡಲು ಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಸೂಚನೆ - Crop Insurance Compensation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.