ETV Bharat / state

ದಾವಣಗೆರೆ: ಕಿಟಕಿ ಸರಳು ಮುರಿದು ಎಸ್​ಬಿಐ ಬ್ಯಾಂಕ್​ಗೆ ಕನ್ನ, ನಗದು-ಚಿನ್ನಾಭರಣ ಕದ್ದೊಯ್ದ ಕಳ್ಳರು

ಎಸ್​ಬಿಐ ಬ್ಯಾಂಕ್​ನ ಕಿಟಕಿಯ ಸರಳು ಮುರಿದು ಹಣ ಮತ್ತು ಚಿನ್ನಾಭರಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.

BANK THEFT
ಎಸ್​ಬಿಐ ಬ್ಯಾಂಕ್​ಗೆ ಕನ್ನ (ETV Bharat)
author img

By ETV Bharat Karnataka Team

Published : 2 hours ago

ದಾವಣಗೆರೆ: ಕಳ್ಳರು ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ)ದ ಬ್ಯಾಂಕ್ ಕಿಟಕಿಯ ಸರಳು ಮುರಿದು ಜಿಲ್ಲೆಯ ನ್ಯಾಮತಿ ಪಟ್ಟಣದ ನೆಹರು ರಸ್ತೆಯಲ್ಲಿರುವ ಶಾಖೆಯಲ್ಲಿ ಹಣ ಚಿನ್ನಾಭರಣ ಕದ್ದೊಯ್ದಿರುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆಯೇ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಹಾಗು ಭಾನುವಾರ ಎರಡು ದಿನಗಳ ಕಾಲ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಎಸ್ ಬಿಐ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು ಇಡೀ ಬ್ಯಾಂಕ್ ತಡಕಾಡಿದ್ದಾರೆ. ಬಳಿಕ ಬ್ಯಾಂಕ್ ನ ಮೇನ್ ಲಾಕರ್​ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಅಲ್ಲದೆ ಚಿನ್ನಾಭರಣ ಮತ್ತು ನಗದು ಜೊತೆಗೆ ಕಳ್ಳರು ಸಿಸಿಟಿವಿ ಕ್ಯಾಮರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

THEFT IN SBI BANK
ಕಿಟಕಿ ಸರಳು ಮುರಿದು ಎಸ್​ಬಿಐ ಬ್ಯಾಂಕ್​ಗೆ ಕನ್ನ (ETV Bharat)

ಇಂದು ಬೆಳಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸ್ ಠಾಣೆಯ ಪಿಐ ಎನ್.ಎಸ್. ರವಿ ಅವರ ನೇತೃತ್ವದ ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಿದೆ.

THEFT IN SBI BANK
ಎಸ್​ಬಿಐ ಬ್ಯಾಂಕ್​ಗೆ ಕನ್ನ ಹಾಕಿದ ಕಳ್ಳರು (ETV Bharat)

ಪಿಐ ರವಿ ಎನ್ಎಸ್ ಅವರು ಹೇಳಿದ್ದೇನು; ಈಟಿವಿ ಭಾರತ ಜೊತೆ ದೂರವಾಣಿಯಲ್ಲಿ ಮಾತನಾಡಿದ ನ್ಯಾಮತಿ ಠಾಣೆಯ ಪಿಐ ರವಿ ಎನ್ಎಸ್ ಅವರು "ಬ್ಯಾಂಕಿನ ಕಿಟಕಿಯ ಸರಳು ಮುರಿದು ಕಳ್ಳರು ಬ್ಯಾಂಕ್ ಲೂಟಿ ಮಾಡಿದ್ದಾರೆ. ಈ ಘಟನೆ ಶುಕ್ರವಾರ ಇಲ್ಲ ಶನಿವಾರ ನಡೆದಿರಬಹುದು. ಈಗಾಗಲೇ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸುತ್ತಿದ್ದು, ಅವರು ಬಂದು ಹೋದ ಬಳಿಕ ಎಷ್ಟು ಹಣ, ಚಿನ್ನಾಭರಣ ಕಳ್ಳತನ ಆಗಿದೆ ಅನ್ನೋದು ಗೊತ್ತಾಗಲಿದೆ‌. ಎಷ್ಟು ಮೌಲ್ಯದ ಚಿನ್ನಾಭರಣ ಹಣ ಕಳ್ಳತನ ಆಗಿದೆ ಎಂದು ತಿಳಿದ ಬಳಿಕ ಎಫ್ಐಆರ್ ಮಾಡಲಾಗುವುದು" ಎಂದು ತಿಳಿಸಿದರು.

ಇದನ್ನೂ ಓದಿ: ಬ್ಯಾಂಕ್​ಗೆ ಹಣ ಬಿಡಿಸಲು ಹೋದ ಮಹಿಳೆ ಜಮೀನಿನಲ್ಲಿ ಶವವಾಗಿ ಪತ್ತೆ, ಪತಿಯೇ ಕೊಲೆಗೈದ ಶಂಕೆ

ದಾವಣಗೆರೆ: ಕಳ್ಳರು ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ)ದ ಬ್ಯಾಂಕ್ ಕಿಟಕಿಯ ಸರಳು ಮುರಿದು ಜಿಲ್ಲೆಯ ನ್ಯಾಮತಿ ಪಟ್ಟಣದ ನೆಹರು ರಸ್ತೆಯಲ್ಲಿರುವ ಶಾಖೆಯಲ್ಲಿ ಹಣ ಚಿನ್ನಾಭರಣ ಕದ್ದೊಯ್ದಿರುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆಯೇ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಹಾಗು ಭಾನುವಾರ ಎರಡು ದಿನಗಳ ಕಾಲ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಎಸ್ ಬಿಐ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು ಇಡೀ ಬ್ಯಾಂಕ್ ತಡಕಾಡಿದ್ದಾರೆ. ಬಳಿಕ ಬ್ಯಾಂಕ್ ನ ಮೇನ್ ಲಾಕರ್​ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಅಲ್ಲದೆ ಚಿನ್ನಾಭರಣ ಮತ್ತು ನಗದು ಜೊತೆಗೆ ಕಳ್ಳರು ಸಿಸಿಟಿವಿ ಕ್ಯಾಮರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

THEFT IN SBI BANK
ಕಿಟಕಿ ಸರಳು ಮುರಿದು ಎಸ್​ಬಿಐ ಬ್ಯಾಂಕ್​ಗೆ ಕನ್ನ (ETV Bharat)

ಇಂದು ಬೆಳಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸ್ ಠಾಣೆಯ ಪಿಐ ಎನ್.ಎಸ್. ರವಿ ಅವರ ನೇತೃತ್ವದ ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಿದೆ.

THEFT IN SBI BANK
ಎಸ್​ಬಿಐ ಬ್ಯಾಂಕ್​ಗೆ ಕನ್ನ ಹಾಕಿದ ಕಳ್ಳರು (ETV Bharat)

ಪಿಐ ರವಿ ಎನ್ಎಸ್ ಅವರು ಹೇಳಿದ್ದೇನು; ಈಟಿವಿ ಭಾರತ ಜೊತೆ ದೂರವಾಣಿಯಲ್ಲಿ ಮಾತನಾಡಿದ ನ್ಯಾಮತಿ ಠಾಣೆಯ ಪಿಐ ರವಿ ಎನ್ಎಸ್ ಅವರು "ಬ್ಯಾಂಕಿನ ಕಿಟಕಿಯ ಸರಳು ಮುರಿದು ಕಳ್ಳರು ಬ್ಯಾಂಕ್ ಲೂಟಿ ಮಾಡಿದ್ದಾರೆ. ಈ ಘಟನೆ ಶುಕ್ರವಾರ ಇಲ್ಲ ಶನಿವಾರ ನಡೆದಿರಬಹುದು. ಈಗಾಗಲೇ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸುತ್ತಿದ್ದು, ಅವರು ಬಂದು ಹೋದ ಬಳಿಕ ಎಷ್ಟು ಹಣ, ಚಿನ್ನಾಭರಣ ಕಳ್ಳತನ ಆಗಿದೆ ಅನ್ನೋದು ಗೊತ್ತಾಗಲಿದೆ‌. ಎಷ್ಟು ಮೌಲ್ಯದ ಚಿನ್ನಾಭರಣ ಹಣ ಕಳ್ಳತನ ಆಗಿದೆ ಎಂದು ತಿಳಿದ ಬಳಿಕ ಎಫ್ಐಆರ್ ಮಾಡಲಾಗುವುದು" ಎಂದು ತಿಳಿಸಿದರು.

ಇದನ್ನೂ ಓದಿ: ಬ್ಯಾಂಕ್​ಗೆ ಹಣ ಬಿಡಿಸಲು ಹೋದ ಮಹಿಳೆ ಜಮೀನಿನಲ್ಲಿ ಶವವಾಗಿ ಪತ್ತೆ, ಪತಿಯೇ ಕೊಲೆಗೈದ ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.