ETV Bharat / state

ಹಾಸನ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು - three children drown in lake

author img

By ETV Bharat Karnataka Team

Published : May 31, 2024, 8:10 PM IST

ಬೇಲೂರು ತಾಲೂಕಿನ ನರಸೀಪುರ ಗ್ರಾಮದ ಕೆರೆಯಲ್ಲಿ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Three children died after drowned in the lake at Hassan
ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು (ETV Bharat (ಸಂಗ್ರಹ ಚಿತ್ರ))

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟ‌ನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು. ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮೂರು ಮಕ್ಕಳಲ್ಲಿ ಒಬ್ಬ ಬಾಲಕಿ ಆಕಸ್ಮಿಕವಾಗಿ ಮುಳುಗಿದ್ದು, ಆಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಮಿಕ್ಕಿಬ್ಬರೂ ಮುಳುಗಿದ್ದಾರೆ. ಸ್ಥಳೀಯರು ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಕೃಷಿ ಹೊಂಡದಲ್ಲಿ ಬಿದ್ದವನ ರಕ್ಷಿಸಲು ಹೋಗಿ ಪತಿ ಸಾವು: ಮುಗಿಲು ಮುಟ್ಟಿದ ಗರ್ಭಿಣಿ ಪತ್ನಿಯ ಆಕ್ರಂದನ

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟ‌ನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು. ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮೂರು ಮಕ್ಕಳಲ್ಲಿ ಒಬ್ಬ ಬಾಲಕಿ ಆಕಸ್ಮಿಕವಾಗಿ ಮುಳುಗಿದ್ದು, ಆಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಮಿಕ್ಕಿಬ್ಬರೂ ಮುಳುಗಿದ್ದಾರೆ. ಸ್ಥಳೀಯರು ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಕೃಷಿ ಹೊಂಡದಲ್ಲಿ ಬಿದ್ದವನ ರಕ್ಷಿಸಲು ಹೋಗಿ ಪತಿ ಸಾವು: ಮುಗಿಲು ಮುಟ್ಟಿದ ಗರ್ಭಿಣಿ ಪತ್ನಿಯ ಆಕ್ರಂದನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.