ETV Bharat / state

ಅಂತಾರಾಷ್ಟ್ರೀಯ ಸಾವಯವ-ಸಿರಿಧಾನ್ಯ ಮೇಳ; 9 ದೇಶಗಳ ಪ್ರತಿನಿಧಿಗಳು, 8 ಹೊರರಾಜ್ಯದ ಕೃಷಿ ಸಚಿವರು ಭಾಗಿ - CEREAL FAIR 2025

ರಾಜ್ಯ ಕೃಷಿ ಇಲಾಖೆಯು ಪ್ರತಿವರ್ಷ ಸಿರಿಧಾನ್ಯ ಮೇಳವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಬೆಂಗಳೂರಿನಲ್ಲಿ ಮೂರು ದಿನ ಅಂತಾರಾಷ್ಟ್ರೀಯ ಸಾವಯವ-ಸಿರಿಧಾನ್ಯ ಮೇಳವನ್ನು ಹಮ್ಮಿಕೊಂಡಿದೆ. 25 ರಾಜ್ಯಗಳು ಸೇರಿದಂತೆ ಹಲವು ದೇಶಗಳು ಮೇಳದಲ್ಲಿ ಭಾಗಿಯಾಗಲಿವೆ.

MINISTER CHELUVARAYASWAMY
ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (ETV Bharat)
author img

By ETV Bharat Karnataka Team

Published : Jan 20, 2025, 7:55 PM IST

ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ, ಸಾವಯವ ಮತ್ತು ಸಿರಿಧಾನ್ಯ ಮೇಳ -2025ನ್ನು ಆಯೋಜಿಸಲಾಗಿದೆ.

ಖಾಸಗಿ ಹೋಟೆಲ್​ನಲ್ಲಿ ಇಂದು ಸಂಜೆ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು.

ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (ETV Bharat)

ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. 2017ರಲ್ಲಿ ಆಯೋಜಿಸಿದ್ದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ಈ ಮೇಳವು ರೈತರು, ರೈತ ಗುಂಪುಗಳು, ದೇಶೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಶೀ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರ್ಕಾರದ ಧ್ಯೇಯವಾಗಿದೆ. ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು 106 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದರು.

Agriculture Minister N Cheluvarayaswamy
ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (ETV Bharat)

ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಬೆಂಗಳೂರಿನ ಹೆಬ್ಬಾಳದಲ್ಲಿ "ಸಾವಯವ ಮತ್ತು ಸಿರಿಧಾನ್ಯ ಹಬ್" ಅನ್ನು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 23 ರಂದು ಶಂಕುಸ್ಥಾಪನೆ ನೆರವೇರಿಸುವರು ಎಂದು ಹೇಳಿದರು.

ಮೂರು ದಿನದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಹಾಗೂ 30ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ ಎಂದರು.

ಪ್ರಸ್ತುತ ರಾಜ್ಯದ ಒಟ್ಟು ಸಿರಿಧಾನ್ಯ ಪ್ರದೇಶ - 18.37 ಲಕ್ಷ ಹೆಕ್ಟೇರ್, ಪ್ರಮುಖ ಸಿರಿಧಾನ್ಯಗಳು - 18.06 ಲಕ್ಷ ಹೆಕ್ಟೇರ್ (ರಾಗಿ - 8.27 ಲಕ್ಷ ಹೆಕ್ಟೇರ್, ಜೋಳ - 8.11 ಲಕ್ಷ ಹೆಕ್ಟೇರ್ ಮತ್ತು ಸಜ್ಜೆ 1.68 ಲಕ್ಷ ಹೆಕ್ಟೇರ್) ಹಾಗೂ ಕಿರು/ಸಿರಿಧಾನ್ಯಗಳು - 0.31 ಲಕ್ಷ ಹೆಕ್ಟೇರ್ (ನವಣೆ, ಸಾಮೆ, ಕೊರಲೆ, ಹಾರಕ, ಬರಗು ಮತ್ತು ಊದಲು). ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಪೂರ್ವಭಾವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

ಮೇಳದಲ್ಲಿ 9 ದೇಶಗಳ ಪ್ರತಿನಿಧಿಗಳು : ಮೇಳದಲ್ಲಿ ಜರ್ಮನಿ, ಸ್ಪಿಟ್ಟರ್‌ಲ್ಯಾಂಡ್, ಸ್ಪೇನ್, ಆಸ್ಟ್ರೇಲಿಯಾ, ಕೀನ್ಯಾ, ತಾಂಜೇನಿಯ, ಇಟಲಿ, ಇಂಗ್ಲೆಂಡ್, ಪೆರು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದ ಸಚಿವರು, ಇಲಾಖೆಯ ಅಧಿಕಾರಿಗಳ ತಂಡ ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಮೇಳದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. 25 ರಾಜ್ಯಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದು, ಇನ್ನೂ 2-3 ರಾಜ್ಯಗಳು ಭಾಗವಹಿಸುವ ನಿರೀಕ್ಷೆಯಿರುತ್ತದೆ. ಅಲ್ಲದೇ, 8 ಹೊರ ರಾಜ್ಯಗಳ ಕೃಷಿ ಸಚಿವರು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದು, ಇನ್ನೂ ಒಂದಿಬ್ಬರು ಸಚಿವರು ಭಾಗವಹಿಸುವ ನಿರೀಕ್ಷೆಯಿರುತ್ತದೆ. ರಾಜ್ಯ, ಹೊರರಾಜ್ಯ ಹಾಗೂ ಅಂತಾರಾಷ್ಟ್ರೀಯ ಸಿರಿಧಾನ್ಯ/ಸಾವಯವ ಉತ್ಪನ್ನಗಳ ಸಂಸ್ಥೆಗಳು, ಇಲಾಖೆಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗವಹಿಸಲಿದ್ದು, ಹೊರರಾಜ್ಯಗಳ 17 ಇಲಾಖೆಗಳು ಮತ್ತು 7 ಸಂಸ್ಥೆಗಳು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿರಿಧಾನ್ಯ ಓಟ/ನಡಿಗೆ, ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿರುತ್ತದೆ. ಮೂರು ದಿನದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಈ ಕೆಳಗಿನ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.

ಸಿರಿಧಾನ್ಯಗಳ ಮಳಿಗೆ : 300ಕ್ಕೂ ಹೆಚ್ಚು ಹವಾನಿಯಂತ್ರಿತ ಸಾವಯವ ಮತ್ತು ಸಿರಿಧಾನ್ಯಗಳ ಮಳಿಗೆಗಳು.

ವಸ್ತುಪ್ರದರ್ಶನ : ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಥೆಗಳು, ಮಾರುಕಟ್ಟೆದಾರರು, ರಫ್ತುದಾರರು, ಚಿಲ್ಲರೆ ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರಗಳ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿವೆ.

ಅಂತಾರಾಷ್ಟ್ರೀಯ ಸಮ್ಮೇಳನ : ಸಮ್ಮೇಳನದಲ್ಲಿ 30ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ.

ಉತ್ಪಾದಕರು ಮತ್ತು ಮಾರುಕಟ್ಟೆದಾರರ ಸಭೆ(ಬಿ2ಬಿ) : ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೇಳದಲ್ಲಿ ಉತ್ಪಾದಕರ-ಮಾರುಕಟ್ಟೆದಾರರ ಸಮಾಲೋಚನಾ ಸಭೆಗಳನ್ನು ಏರ್ಪಡಿಸಲಾಗುತ್ತದೆ. ಬಿ2ಬಿ ಸಭೆಗೆ ಈಗಾಗಲೇ 141 Buyers and 125 sellers ನೋಂದಣಿ ಮಾಡಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಮಾರುಕಟ್ಟೆದಾರರು, FPO/ಒಕ್ಕೂಟಗಳು ಭಾಗವಹಿಸಲಿದ್ದಾರೆ.

ಕರ್ನಾಟಕ ಪೆವಿಲಿಯನ್ : ಕರ್ನಾಟಕದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ನವೋದ್ಯಮಿಗಳು (startups) ಸಿರಿಧಾನ್ಯ/ಸಾವಯವ ರೈತ ಗುಂಪುಗಳು, ರೈತ ಉತ್ಪಾದಕ ಗುಂಪುಗಳು(FPOs), ಪ್ರಾಂತೀಯ ಒಕ್ಕೂಟಗಳು, ಹಾಗೆಯೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸೇರಿದಂತೆ ಸುಮಾರು 115 ಮಳಿಗೆಗಳು ಇರುತ್ತವೆ. IIMR, CFTRI, NIFTEM, UASB ಮುಂತಾದ ಸಂಸ್ಥೆಗಳಿಂದ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಇನ್ನಿತರೆ ತಾಂತ್ರಿಕತೆಗಳ ಪ್ರಾತ್ಯಕ್ಷಿಕೆ ಇರುತ್ತದೆ.

ರೈತರ ಕಾರ್ಯಾಗಾರ : ರಾಜ್ಯದ ರೈತರಿಗಾಗಿ ಕನ್ನಡ ಭಾಷೆಯಲ್ಲಿ ಮೂರು ದಿನಗಳ ಕಾರ್ಯಗಾರವನ್ನು ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ. ಈ ಕಾರ್ಯಾಗಾರದಲ್ಲಿ ಸಾವಯವ, ನೈಸರ್ಗಿಕ, ದೇಸಿ ತಳಿಗಳು, ಸಿರಿಧಾನ್ಯಗಳ ಕುರಿತು ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ.

ಸಿರಿಧಾನ್ಯಗಳ ಊಟ, ಉಪಹಾರ : ಸಾವಯವ ಮತ್ತು ಸಿರಿಧಾನ್ಯ ಆಹಾರ ಮಳಿಗೆಗಳು (ಫುಡ್ ಕೋರ್ಟ್) - ಮೂರು ದಿನಗಳ ಈ ಮೇಳದ ಅವಧಿಯಲ್ಲಿ ವಿವಿಧ ಹೋಟೆಲ್/ರೆಸ್ಟೋರೆಂಟ್​ಗಳ ಮಳಿಗೆಗಳಲ್ಲಿ ವೈವಿಧ್ಯಮಯ ಮತ್ತು ರುಚಿಕರವಾದ ಸಾವಯವ ಹಾಗೂ ಸಿರಿಧಾನ್ಯಗಳ ಊಟ, ಉಪಹಾರಗಳನ್ನು ಸವಿಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು : ವಿವಿಧ ದೇಶಿ/ಗ್ರಾಮೀಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಪ್ರಸಕ್ತ ಸಾಲಿನ ಮೇಳದ ವೈಶಿಷ್ಟ್ಯವೇನು? ದೇಶಿ ತಳಿಗಳ ಪೆವಿಲಿಯನ್-ತಲೆಮಾರುಗಳಿಂದ ರೈತರು ತಾವು ಕಾಪಾಡಿಕೊಂಡು, ಪೋಷಿಸಿದ ದೇಶಿ ತಳಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಈ ದೇಶಿ ಪೆವಿಲಿಯನ್‌ನಲ್ಲಿ ರಾಜ್ಯದ ಆಯ್ದ 15 ಜಿಲ್ಲೆಗಳಿಂದ 30 ದೇಶಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರನ್ನು ಆಹ್ವಾನಿಸಲಾಗಿದೆ. ದೇಶಿ ಪೆವಿಲಿಯನ್‌ನಲ್ಲಿ ರೈತರು ಸಂರಕ್ಷಿಸಿರುವ ವಿವಿಧ ಬೆಳೆಗಳ ಬಿತ್ತನೆ ಬೀಜ/ತೆನೆಗಳನ್ನು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಣ್ಣಿನ ಲೋಕ : ಸಸ್ಯಗಳ ಬೆಳವಣಿಗೆಗೆ ಮಣ್ಣು ಪ್ರಮುಖ ಆಧಾರವಾಗಿರುವುದರಿಂದ, ರೈತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಮಣ್ಣಿನ ಮಹತ್ವ, ಗುಣಲಕ್ಷಣಗಳು, ವರ್ಗೀಕರಣ ಮತ್ತು ರಚನೆಯ ಕುರಿತು ಅರಿವು ಮೂಡಿಸುವುದು ಅತ್ಯಾವಶ್ಯಕವಾಗಿದೆ. ಈ ಉದ್ದೇಶದಿಂದ ಮಣ್ಣಿನ ಪೆಡಾನ್ ಪೆವಿಲಿಯನ್ ಅನ್ನು ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025ರಲ್ಲಿ ಪರಿಚಯಿಸಲಾಗಿದೆ. ಕರ್ನಾಟಕ ರಾಜ್ಯದ ವಿವಿಧ ಬಗೆಯ ಮಣ್ಣಿನ monolith ಗಳನ್ನು ಪ್ರದರ್ಶಿಸಲಾಗುತ್ತದೆ.

ಮಾಧ್ಯಮಗೋಷ್ಟಿಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಜೆ. ರವಿಶಂಕರ್, ಕೃಷಿ ಆಯುಕ್ತ ವೈ.ಎಸ್. ಪಾಟೀಲ, ಕೃಷಿ ನಿರ್ದೇಶಕ ಡಾ. ಜಿ.ಟಿ. ಪುತ್ರ ಉಪಸ್ಥಿತರಿದ್ದರು.

ಇದನ್ನೂ ಓದಿ:

ಸಿರಿಧಾನ್ಯ ಕೃಷಿಯ ಕೇಂದ್ರವಾಗಿ ದಕ್ಷಿಣ ಭಾರತ ಅಭಿವೃದ್ಧಿ: ಮಿಲೆಟ್​​​​​​​​​​ ಉತ್ಪಾದನೆಯ ಪ್ರಸ್ತುತ ಸ್ಥಿತಿ ಮತ್ತು ಸವಾಲುಗಳೇನು? - MILLET

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಹೆಚ್ಚೆಚ್ಚು ಬಳಸಿ: ಸಿಎಂ ಸಿದ್ದರಾಮಯ್ಯ - ORGANIC AND MILLET FAIR

ಮೈಸೂರಲ್ಲಿ ದೇಶದ ಮೊದಲ ಸಿರಿಧಾನ್ಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಇದು ರೈತರು, ಉದ್ಯಮಿಗಳಿಗೆ ಬಹುಪಯೋಗಿ - MILLETS PROCESSING UNIT

ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ, ಸಾವಯವ ಮತ್ತು ಸಿರಿಧಾನ್ಯ ಮೇಳ -2025ನ್ನು ಆಯೋಜಿಸಲಾಗಿದೆ.

ಖಾಸಗಿ ಹೋಟೆಲ್​ನಲ್ಲಿ ಇಂದು ಸಂಜೆ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು.

ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (ETV Bharat)

ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. 2017ರಲ್ಲಿ ಆಯೋಜಿಸಿದ್ದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ಈ ಮೇಳವು ರೈತರು, ರೈತ ಗುಂಪುಗಳು, ದೇಶೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಶೀ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರ್ಕಾರದ ಧ್ಯೇಯವಾಗಿದೆ. ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು 106 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದರು.

Agriculture Minister N Cheluvarayaswamy
ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (ETV Bharat)

ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಬೆಂಗಳೂರಿನ ಹೆಬ್ಬಾಳದಲ್ಲಿ "ಸಾವಯವ ಮತ್ತು ಸಿರಿಧಾನ್ಯ ಹಬ್" ಅನ್ನು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 23 ರಂದು ಶಂಕುಸ್ಥಾಪನೆ ನೆರವೇರಿಸುವರು ಎಂದು ಹೇಳಿದರು.

ಮೂರು ದಿನದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಹಾಗೂ 30ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ ಎಂದರು.

ಪ್ರಸ್ತುತ ರಾಜ್ಯದ ಒಟ್ಟು ಸಿರಿಧಾನ್ಯ ಪ್ರದೇಶ - 18.37 ಲಕ್ಷ ಹೆಕ್ಟೇರ್, ಪ್ರಮುಖ ಸಿರಿಧಾನ್ಯಗಳು - 18.06 ಲಕ್ಷ ಹೆಕ್ಟೇರ್ (ರಾಗಿ - 8.27 ಲಕ್ಷ ಹೆಕ್ಟೇರ್, ಜೋಳ - 8.11 ಲಕ್ಷ ಹೆಕ್ಟೇರ್ ಮತ್ತು ಸಜ್ಜೆ 1.68 ಲಕ್ಷ ಹೆಕ್ಟೇರ್) ಹಾಗೂ ಕಿರು/ಸಿರಿಧಾನ್ಯಗಳು - 0.31 ಲಕ್ಷ ಹೆಕ್ಟೇರ್ (ನವಣೆ, ಸಾಮೆ, ಕೊರಲೆ, ಹಾರಕ, ಬರಗು ಮತ್ತು ಊದಲು). ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಪೂರ್ವಭಾವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

ಮೇಳದಲ್ಲಿ 9 ದೇಶಗಳ ಪ್ರತಿನಿಧಿಗಳು : ಮೇಳದಲ್ಲಿ ಜರ್ಮನಿ, ಸ್ಪಿಟ್ಟರ್‌ಲ್ಯಾಂಡ್, ಸ್ಪೇನ್, ಆಸ್ಟ್ರೇಲಿಯಾ, ಕೀನ್ಯಾ, ತಾಂಜೇನಿಯ, ಇಟಲಿ, ಇಂಗ್ಲೆಂಡ್, ಪೆರು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದ ಸಚಿವರು, ಇಲಾಖೆಯ ಅಧಿಕಾರಿಗಳ ತಂಡ ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಮೇಳದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. 25 ರಾಜ್ಯಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದು, ಇನ್ನೂ 2-3 ರಾಜ್ಯಗಳು ಭಾಗವಹಿಸುವ ನಿರೀಕ್ಷೆಯಿರುತ್ತದೆ. ಅಲ್ಲದೇ, 8 ಹೊರ ರಾಜ್ಯಗಳ ಕೃಷಿ ಸಚಿವರು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದು, ಇನ್ನೂ ಒಂದಿಬ್ಬರು ಸಚಿವರು ಭಾಗವಹಿಸುವ ನಿರೀಕ್ಷೆಯಿರುತ್ತದೆ. ರಾಜ್ಯ, ಹೊರರಾಜ್ಯ ಹಾಗೂ ಅಂತಾರಾಷ್ಟ್ರೀಯ ಸಿರಿಧಾನ್ಯ/ಸಾವಯವ ಉತ್ಪನ್ನಗಳ ಸಂಸ್ಥೆಗಳು, ಇಲಾಖೆಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗವಹಿಸಲಿದ್ದು, ಹೊರರಾಜ್ಯಗಳ 17 ಇಲಾಖೆಗಳು ಮತ್ತು 7 ಸಂಸ್ಥೆಗಳು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿರಿಧಾನ್ಯ ಓಟ/ನಡಿಗೆ, ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿರುತ್ತದೆ. ಮೂರು ದಿನದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಈ ಕೆಳಗಿನ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.

ಸಿರಿಧಾನ್ಯಗಳ ಮಳಿಗೆ : 300ಕ್ಕೂ ಹೆಚ್ಚು ಹವಾನಿಯಂತ್ರಿತ ಸಾವಯವ ಮತ್ತು ಸಿರಿಧಾನ್ಯಗಳ ಮಳಿಗೆಗಳು.

ವಸ್ತುಪ್ರದರ್ಶನ : ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಥೆಗಳು, ಮಾರುಕಟ್ಟೆದಾರರು, ರಫ್ತುದಾರರು, ಚಿಲ್ಲರೆ ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರಗಳ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿವೆ.

ಅಂತಾರಾಷ್ಟ್ರೀಯ ಸಮ್ಮೇಳನ : ಸಮ್ಮೇಳನದಲ್ಲಿ 30ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ.

ಉತ್ಪಾದಕರು ಮತ್ತು ಮಾರುಕಟ್ಟೆದಾರರ ಸಭೆ(ಬಿ2ಬಿ) : ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೇಳದಲ್ಲಿ ಉತ್ಪಾದಕರ-ಮಾರುಕಟ್ಟೆದಾರರ ಸಮಾಲೋಚನಾ ಸಭೆಗಳನ್ನು ಏರ್ಪಡಿಸಲಾಗುತ್ತದೆ. ಬಿ2ಬಿ ಸಭೆಗೆ ಈಗಾಗಲೇ 141 Buyers and 125 sellers ನೋಂದಣಿ ಮಾಡಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಮಾರುಕಟ್ಟೆದಾರರು, FPO/ಒಕ್ಕೂಟಗಳು ಭಾಗವಹಿಸಲಿದ್ದಾರೆ.

ಕರ್ನಾಟಕ ಪೆವಿಲಿಯನ್ : ಕರ್ನಾಟಕದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ನವೋದ್ಯಮಿಗಳು (startups) ಸಿರಿಧಾನ್ಯ/ಸಾವಯವ ರೈತ ಗುಂಪುಗಳು, ರೈತ ಉತ್ಪಾದಕ ಗುಂಪುಗಳು(FPOs), ಪ್ರಾಂತೀಯ ಒಕ್ಕೂಟಗಳು, ಹಾಗೆಯೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸೇರಿದಂತೆ ಸುಮಾರು 115 ಮಳಿಗೆಗಳು ಇರುತ್ತವೆ. IIMR, CFTRI, NIFTEM, UASB ಮುಂತಾದ ಸಂಸ್ಥೆಗಳಿಂದ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಇನ್ನಿತರೆ ತಾಂತ್ರಿಕತೆಗಳ ಪ್ರಾತ್ಯಕ್ಷಿಕೆ ಇರುತ್ತದೆ.

ರೈತರ ಕಾರ್ಯಾಗಾರ : ರಾಜ್ಯದ ರೈತರಿಗಾಗಿ ಕನ್ನಡ ಭಾಷೆಯಲ್ಲಿ ಮೂರು ದಿನಗಳ ಕಾರ್ಯಗಾರವನ್ನು ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ. ಈ ಕಾರ್ಯಾಗಾರದಲ್ಲಿ ಸಾವಯವ, ನೈಸರ್ಗಿಕ, ದೇಸಿ ತಳಿಗಳು, ಸಿರಿಧಾನ್ಯಗಳ ಕುರಿತು ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ.

ಸಿರಿಧಾನ್ಯಗಳ ಊಟ, ಉಪಹಾರ : ಸಾವಯವ ಮತ್ತು ಸಿರಿಧಾನ್ಯ ಆಹಾರ ಮಳಿಗೆಗಳು (ಫುಡ್ ಕೋರ್ಟ್) - ಮೂರು ದಿನಗಳ ಈ ಮೇಳದ ಅವಧಿಯಲ್ಲಿ ವಿವಿಧ ಹೋಟೆಲ್/ರೆಸ್ಟೋರೆಂಟ್​ಗಳ ಮಳಿಗೆಗಳಲ್ಲಿ ವೈವಿಧ್ಯಮಯ ಮತ್ತು ರುಚಿಕರವಾದ ಸಾವಯವ ಹಾಗೂ ಸಿರಿಧಾನ್ಯಗಳ ಊಟ, ಉಪಹಾರಗಳನ್ನು ಸವಿಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು : ವಿವಿಧ ದೇಶಿ/ಗ್ರಾಮೀಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಪ್ರಸಕ್ತ ಸಾಲಿನ ಮೇಳದ ವೈಶಿಷ್ಟ್ಯವೇನು? ದೇಶಿ ತಳಿಗಳ ಪೆವಿಲಿಯನ್-ತಲೆಮಾರುಗಳಿಂದ ರೈತರು ತಾವು ಕಾಪಾಡಿಕೊಂಡು, ಪೋಷಿಸಿದ ದೇಶಿ ತಳಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಈ ದೇಶಿ ಪೆವಿಲಿಯನ್‌ನಲ್ಲಿ ರಾಜ್ಯದ ಆಯ್ದ 15 ಜಿಲ್ಲೆಗಳಿಂದ 30 ದೇಶಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರನ್ನು ಆಹ್ವಾನಿಸಲಾಗಿದೆ. ದೇಶಿ ಪೆವಿಲಿಯನ್‌ನಲ್ಲಿ ರೈತರು ಸಂರಕ್ಷಿಸಿರುವ ವಿವಿಧ ಬೆಳೆಗಳ ಬಿತ್ತನೆ ಬೀಜ/ತೆನೆಗಳನ್ನು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಣ್ಣಿನ ಲೋಕ : ಸಸ್ಯಗಳ ಬೆಳವಣಿಗೆಗೆ ಮಣ್ಣು ಪ್ರಮುಖ ಆಧಾರವಾಗಿರುವುದರಿಂದ, ರೈತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಮಣ್ಣಿನ ಮಹತ್ವ, ಗುಣಲಕ್ಷಣಗಳು, ವರ್ಗೀಕರಣ ಮತ್ತು ರಚನೆಯ ಕುರಿತು ಅರಿವು ಮೂಡಿಸುವುದು ಅತ್ಯಾವಶ್ಯಕವಾಗಿದೆ. ಈ ಉದ್ದೇಶದಿಂದ ಮಣ್ಣಿನ ಪೆಡಾನ್ ಪೆವಿಲಿಯನ್ ಅನ್ನು ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025ರಲ್ಲಿ ಪರಿಚಯಿಸಲಾಗಿದೆ. ಕರ್ನಾಟಕ ರಾಜ್ಯದ ವಿವಿಧ ಬಗೆಯ ಮಣ್ಣಿನ monolith ಗಳನ್ನು ಪ್ರದರ್ಶಿಸಲಾಗುತ್ತದೆ.

ಮಾಧ್ಯಮಗೋಷ್ಟಿಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಜೆ. ರವಿಶಂಕರ್, ಕೃಷಿ ಆಯುಕ್ತ ವೈ.ಎಸ್. ಪಾಟೀಲ, ಕೃಷಿ ನಿರ್ದೇಶಕ ಡಾ. ಜಿ.ಟಿ. ಪುತ್ರ ಉಪಸ್ಥಿತರಿದ್ದರು.

ಇದನ್ನೂ ಓದಿ:

ಸಿರಿಧಾನ್ಯ ಕೃಷಿಯ ಕೇಂದ್ರವಾಗಿ ದಕ್ಷಿಣ ಭಾರತ ಅಭಿವೃದ್ಧಿ: ಮಿಲೆಟ್​​​​​​​​​​ ಉತ್ಪಾದನೆಯ ಪ್ರಸ್ತುತ ಸ್ಥಿತಿ ಮತ್ತು ಸವಾಲುಗಳೇನು? - MILLET

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಹೆಚ್ಚೆಚ್ಚು ಬಳಸಿ: ಸಿಎಂ ಸಿದ್ದರಾಮಯ್ಯ - ORGANIC AND MILLET FAIR

ಮೈಸೂರಲ್ಲಿ ದೇಶದ ಮೊದಲ ಸಿರಿಧಾನ್ಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಇದು ರೈತರು, ಉದ್ಯಮಿಗಳಿಗೆ ಬಹುಪಯೋಗಿ - MILLETS PROCESSING UNIT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.