ETV Bharat / state

ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ಕೇರಳ ಮೂಲದ ಮೂವರ ದುರ್ಮರಣ - Bike Lorry Accident

author img

By ETV Bharat Karnataka Team

Published : Sep 17, 2024, 5:20 PM IST

Updated : Sep 17, 2024, 8:01 PM IST

ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕೇರಳ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ.

three-died-in-bike-lorry-accident-in-gundlupete
ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ಕೇರಳ ಮೂಲದ ಮೂವರ ದುರ್ಮರಣ (ETV Bharat)

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕೇರಳ ಮೂಲದ ಮೂವರು ಮೃತಪಟ್ಟ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದರು ಎಂದು ಹೇಳಲಾಗುತ್ತಿದೆ.

ಒಂದೇ ಬೈಕ್​ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಜೊತೆಗೆ ಬೈಕ್ ಸಮೇತ ಅಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು 300 ಮೀಟರ್​ನಷ್ಟು ದೂರಕ್ಕೆ ಲಾರಿ ಎಳೆದುಕೊಂಡು ಬಂದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೆಲ್ನೋಟಕ್ಕೆ ಪತಿ, ಪತ್ನಿ ಹಾಗೂ ಮಗ ಇರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೈದು ಪರಾರಿ ಯತ್ನ, ರೌಡಿಶೀಟರ್‌ಗೆ ಗುಂಡೇಟು - Rowdy Sheeter Shot

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕೇರಳ ಮೂಲದ ಮೂವರು ಮೃತಪಟ್ಟ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದರು ಎಂದು ಹೇಳಲಾಗುತ್ತಿದೆ.

ಒಂದೇ ಬೈಕ್​ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಜೊತೆಗೆ ಬೈಕ್ ಸಮೇತ ಅಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು 300 ಮೀಟರ್​ನಷ್ಟು ದೂರಕ್ಕೆ ಲಾರಿ ಎಳೆದುಕೊಂಡು ಬಂದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೆಲ್ನೋಟಕ್ಕೆ ಪತಿ, ಪತ್ನಿ ಹಾಗೂ ಮಗ ಇರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೈದು ಪರಾರಿ ಯತ್ನ, ರೌಡಿಶೀಟರ್‌ಗೆ ಗುಂಡೇಟು - Rowdy Sheeter Shot

Last Updated : Sep 17, 2024, 8:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.