ETV Bharat / state

ಹಾವೇರಿಯಲ್ಲಿ ಮುಂದುವರೆದ ಮಳೆ ; ಮೂರು ಮನೆಗಳ ಗೋಡೆ ಕುಸಿತ - RAIN IN KARNATAKA

author img

By ETV Bharat Karnataka Team

Published : Jul 17, 2024, 6:05 PM IST

ಹಾವೇರಿ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಿಂದಾಗಿ ಮೂರು ಮನೆಗಳ ಗೋಡೆಗಳು ಕುಸಿದಿವೆ.

WALL COLLAPSE
ಮನೆ ಗೋಡೆ ಕುಸಿದಿರುವುದು (ETV Bharat)
ಹಾವೇರಿ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಿಂದಾಗಿ ಮೂರು ಮನೆಗಳ ಗೋಡೆ ಕುಸಿತ (ETV Bharat)

ಹಾವೇರಿ : ರಾಜ್ಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ.‌ ಹಾವೇರಿ ಜಿಲ್ಲೆಯಲ್ಲಿ ನಿರಂತರ ಸಾಧಾರಣ ಮಳೆಯಾಗುತ್ತಿದೆ.‌ ನಿರಂತರ ಜಿಟಿಜಿಟಿ ಮಳೆಗೆ ಜಿಲ್ಲೆಯಲ್ಲಿ ಮೂರು ಮನೆಗಳ ಗೋಡೆಗಳು ಕುಸಿತಗೊಂಡಿವೆ. ಗಣೇಶ ಗ್ರಾಮ ಎಂದು ಕರೆಯುವ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ. ಗ್ರಾಮದ ಮಹಾದೇವಿ ತಳವಾರ ಎಂಬುವರಿಗೆ ಸೇರಿದ ಮನೆಯ ಗೋಡೆಯು ಬಿದ್ದಿದೆ.

ಗಣೇಶ ಚತುರ್ಥಿಗೆ ಎಂದು ಸಿದ್ದಪಡಿಸಿ ಇಡಲಾಗಿದ್ದ ಗಣಪತಿ ಮೂರ್ತಿಗಳು ಹಾಳಾಗಿವೆ. ಕಳೆದ ಮೂರು ತಿಂಗಳಿನಿಂದ ಗಣೇಶ ಹಬ್ಬಕ್ಕೆ ಮಾರಾಟ ಮಾಡಲು ಮೂರ್ತಿಗಳನ್ನ ಮಾಡಿದ್ದರು. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಗಣಪತಿ ಮೂರ್ತಿಗಳು ಹಾಳಾಗಿವೆ.

ಮನೆಯ ಐದು‌ ಜನ ಕುಟುಂಬದ ಸದಸ್ಯರು ಹಗಲು ರಾತ್ರಿ ಎನ್ನದೆ ಗಣಪತಿ ಮೂರ್ತಿಗಳನ್ನ‌ ಮಾಡಿದ್ದರು. ಈಗ ಮೂರ್ತಿ‌ಗಳು ಸಂಪೂರ್ಣ ಹಾಳಾಗಿದ್ದು, ಜಿಲ್ಲಾಡಳಿತ ಪರಿಹಾರ ಘೋಷಣೆ ‌ಮಾಡುವಂತೆ ಕುಟುಂಬ ಒತ್ತಾಯ ಮಾಡಿದೆ. ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದಲ್ಲಿ ಮಾರುತಿ ಮೂಲಂಗಿ ಎಂಬುವರ ಮನೆಯ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ.

ರಟ್ಟಿಹಳ್ಳಿ ತಾಲೂಕಿನ ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಯ ಗೋಡೆ ಕುಸಿತವಾಗಿದ್ದು, ಕುಟುಂಬ ಸದಸ್ಯರು ಅದೃಷ್ಟವಶಾತ್ ಪಾರಾಗಿದ್ದಾರೆ.‌ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮಲೆನಾಡಿನಲ್ಲಿ ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಹೊಳೆ, ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಸ್ನಾನ‌ಘಟ್ಟ ಮುಳುಗಡೆ - Ukkadagatri Temple Submerged

ಹಾವೇರಿ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಿಂದಾಗಿ ಮೂರು ಮನೆಗಳ ಗೋಡೆ ಕುಸಿತ (ETV Bharat)

ಹಾವೇರಿ : ರಾಜ್ಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ.‌ ಹಾವೇರಿ ಜಿಲ್ಲೆಯಲ್ಲಿ ನಿರಂತರ ಸಾಧಾರಣ ಮಳೆಯಾಗುತ್ತಿದೆ.‌ ನಿರಂತರ ಜಿಟಿಜಿಟಿ ಮಳೆಗೆ ಜಿಲ್ಲೆಯಲ್ಲಿ ಮೂರು ಮನೆಗಳ ಗೋಡೆಗಳು ಕುಸಿತಗೊಂಡಿವೆ. ಗಣೇಶ ಗ್ರಾಮ ಎಂದು ಕರೆಯುವ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ. ಗ್ರಾಮದ ಮಹಾದೇವಿ ತಳವಾರ ಎಂಬುವರಿಗೆ ಸೇರಿದ ಮನೆಯ ಗೋಡೆಯು ಬಿದ್ದಿದೆ.

ಗಣೇಶ ಚತುರ್ಥಿಗೆ ಎಂದು ಸಿದ್ದಪಡಿಸಿ ಇಡಲಾಗಿದ್ದ ಗಣಪತಿ ಮೂರ್ತಿಗಳು ಹಾಳಾಗಿವೆ. ಕಳೆದ ಮೂರು ತಿಂಗಳಿನಿಂದ ಗಣೇಶ ಹಬ್ಬಕ್ಕೆ ಮಾರಾಟ ಮಾಡಲು ಮೂರ್ತಿಗಳನ್ನ ಮಾಡಿದ್ದರು. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಗಣಪತಿ ಮೂರ್ತಿಗಳು ಹಾಳಾಗಿವೆ.

ಮನೆಯ ಐದು‌ ಜನ ಕುಟುಂಬದ ಸದಸ್ಯರು ಹಗಲು ರಾತ್ರಿ ಎನ್ನದೆ ಗಣಪತಿ ಮೂರ್ತಿಗಳನ್ನ‌ ಮಾಡಿದ್ದರು. ಈಗ ಮೂರ್ತಿ‌ಗಳು ಸಂಪೂರ್ಣ ಹಾಳಾಗಿದ್ದು, ಜಿಲ್ಲಾಡಳಿತ ಪರಿಹಾರ ಘೋಷಣೆ ‌ಮಾಡುವಂತೆ ಕುಟುಂಬ ಒತ್ತಾಯ ಮಾಡಿದೆ. ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದಲ್ಲಿ ಮಾರುತಿ ಮೂಲಂಗಿ ಎಂಬುವರ ಮನೆಯ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ.

ರಟ್ಟಿಹಳ್ಳಿ ತಾಲೂಕಿನ ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಯ ಗೋಡೆ ಕುಸಿತವಾಗಿದ್ದು, ಕುಟುಂಬ ಸದಸ್ಯರು ಅದೃಷ್ಟವಶಾತ್ ಪಾರಾಗಿದ್ದಾರೆ.‌ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮಲೆನಾಡಿನಲ್ಲಿ ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಹೊಳೆ, ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಸ್ನಾನ‌ಘಟ್ಟ ಮುಳುಗಡೆ - Ukkadagatri Temple Submerged

ETV Bharat Logo

Copyright © 2024 Ushodaya Enterprises Pvt. Ltd., All Rights Reserved.